ಕೊಪ್ಪಳ: ರಾಜ್ಯದಲ್ಲೇ ಬೆಚ್ಚಿ ಬೀಳಿಸಿದ್ದಂತ ಕೊಪ್ಪಳದ ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಪ್ರಕರಣದ ತೀರ್ಪನ್ನು ಕೋರ್ಟ್ ಪ್ರಕಟಿಸಿದೆ. ವಿದ್ಯಾರ್ಥಿ ಯಲ್ಲಾಲಿಂಗಾ ಕೊಲೆ ಪ್ರಕರಣದಲ್ಲಿ ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶಿಸಿದೆ.
ಕೊಪ್ಪಳದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಪ್ರಕರಣದ ಅಂತಿಮ ತೀರ್ಪನ್ನು ಇಂದು ಪ್ರಕಟಿಸಲಾಗಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದೆ.
ಅಂದಹಾಗೇ ಹತ್ತು ವರ್ಷಗಳ ಹಿಂದೆ ಜನವರಿ.11, 2015ರಂದು ಕೊಪ್ಪಳದ ಕನಕಗಿರಿ ತಾಲ್ಲೂಕಿನ ಕನಕಾಪುರ ಗ್ರಾಮದ ವಿದ್ಯಾರ್ಥಿಯಾಗಿದ್ದಂತ ಯಲ್ಲಾಲಿಂಗ ಕೊಲೆಯಾಗಿದ್ದನು. ಕೊಪ್ಪಳದ ಕನಕಾಪೂರದ ವಿದ್ಯಾರ್ಥಿ ಯಲ್ಲಾಲಿಂಗನನ್ನು ಕೊಪ್ಪಳ ರೈಲ್ವೆ ನಿಲ್ದಾಣದಲ್ಲಿ ಕೊಲೆ ಪ್ರಕರಣ ಕರ್ನಾಟಕದಲ್ಲಿ ಅಲ್ಲದೇ ಇಡೀ ದೇಶದಲ್ಲೇ ಬಹುದೊಡ್ಡ ಸದ್ದು ಮಾಡಲಾಗಿತ್ತು. ಈ ಕೊಲೆ ಪ್ರಕರಣದಲ್ಲಿ ಸಾಕ್ಷಾಧಾರಗಳ ಕೊರತೆಯಿಂದ ಕೋರ್ಟ್ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ.