Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ತಾವೇ ಹೆಚ್ಚಿಸಿದ್ದ GST ಕಡಿತಗೊಳಿಸಿ ಕೇಂದ್ರಸರ್ಕಾರ ಬೆನ್ನು ತಟ್ಟಿಕೊಳ್ಳುತ್ತಿದೆ: ಸಿಎಂ ಸಿದ್ಧರಾಮಯ್ಯ ವ್ಯಂಗ್ಯ

03/10/2025 3:23 PM

ಕುಷ್ಕಿಗೆ ಎಕರೆಗೆ 25,000, ನೀರಾವರಿ ಜಮೀನಿಗೆ ಎಕರೆಗೆ 50,000 ಪರಿಹಾರ ನೀಡಿ: ಆರ್.ಅಶೋಕ್ ಆಗ್ರಹ

03/10/2025 3:19 PM

BREAKING : ತಿರುಪತಿಗೆ ಬಾಂಬ್ ಬೆದರಿಕೆ, ISI ಮತ್ತು LTTE ಉಗ್ರರಿಂದ ಪಿತೂರಿ ಆರೋಪ |Bomb Threat

03/10/2025 3:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕುಷ್ಕಿಗೆ ಎಕರೆಗೆ 25,000, ನೀರಾವರಿ ಜಮೀನಿಗೆ ಎಕರೆಗೆ 50,000 ಪರಿಹಾರ ನೀಡಿ: ಆರ್.ಅಶೋಕ್ ಆಗ್ರಹ
KARNATAKA

ಕುಷ್ಕಿಗೆ ಎಕರೆಗೆ 25,000, ನೀರಾವರಿ ಜಮೀನಿಗೆ ಎಕರೆಗೆ 50,000 ಪರಿಹಾರ ನೀಡಿ: ಆರ್.ಅಶೋಕ್ ಆಗ್ರಹ

By kannadanewsnow0903/10/2025 3:19 PM

ಬೆಳಗಾವಿ : ಮಳೆ ಹಾನಿ ಪ್ರದೇಶಗಳಿಗೆ ಸಚಿವರು, ಅಧಿಕಾರಿಗಳು ಭೇಟಿ ನೀಡುತ್ತಿಲ್ಲ. ಎಲ್ಲರೂ ಜಾತಿ ಸಮೀಕ್ಷೆಯಲ್ಲಿ ಹಾಗೂ ಸಿಎಂ ಬದಲಾವಣೆಯ ಕ್ರಾಂತಿಯಲ್ಲಿ ನಿರತರಾಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ಉತ್ತರ ಕರ್ನಾಟಕದಲ್ಲಿ ವಿವಿಧೆಡೆ ಮಳೆ ಹಾನಿ ಪರಿಶೀಲನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಷ್ಕಿಗೆ ಎಕರೆಗೆ 25,000 ರೂ. ನೀರಾವರಿ ಜಮೀನಿಗೆ ಎಕರೆಗೆ 50,000 ರೂ. ಪರಿಹಾರ ನೀಡಬೇಕು. ಎನ್‌ಡಿಆರ್‌ಎಫ್‌ ನಿಯಮದ ಪ್ರಕಾರ ನೀಡಿದರೂ. ರೈತರು ಖರ್ಚು ಮಾಡಿದಷ್ಟಾದರೂ ನೀಡಲಿ. ಸರ್ಕಾರವೇ ಕಳಪೆ ಬೀಜ ನೀಡಿದೆ ಎಂದು ರೈತರು ಹೇಳಿದ್ದಾರೆ. ನಾನೂ ಸೇರಿದಂತೆ ಬಿಜೆಪಿ ನಾಯಕರು ಪ್ರವಾಹವಾದ ಕಡೆಗಳಲ್ಲಿ ಪ್ರವಾಸ ಮಾಡಿದ್ದೇವೆ. ಆದರೆ ಸರ್ಕಾರದ ವತಿಯಿಂದ ಯಾರೂ ಪ್ರವಾಸ ಮಾಡಿಲ್ಲ. ಬಿಜೆಪಿ ಅವಧಿಯಲ್ಲಿ ಹಾನಿಯಾದಾಗ, ದುಪ್ಪಟ್ಟು ಪರಿಹಾರ ನೀಡಲಾಗಿತ್ತು. ಬೆಳೆ ಪರಿಹಾರ ಹಾಗೂ ಮನೆ ಹಾನಿ ಪರಿಹಾರವನ್ನು ಡಬಲ್‌ ಮಾಡಲಾಗಿತ್ತು. ಮನೆ ಬಾಗಿಲಿಗೆ ನೀರು ಬಂದರೂ 24 ಗಂಟೆಯೊಳಗೆ ಪರಿಹಾರ ನೀಡಲಾಗಿತ್ತು. ಜೊತೆಗೆ ಪ್ರತಿ ಮನೆಗೆ ಆಹಾರ ಕಿಟ್‌ಗಳನ್ನು ನೀಡಲಾಗಿತ್ತು. ಕೇಂದ್ರ ಸರ್ಕಾರಕ್ಕೆ ಕಾಯದೆ ರಾಜ್ಯ ಸರ್ಕಾರದಿಂದಲೇ ಪರಿಹಾರ ವಿತರಣೆ ಮಾಡಲಾಗಿತ್ತು. ಆದರೆ ಸಿಎಂ ಸಿದ್ದರಾಮಯ್ಯ ಇನ್ನೂ ಮಳೆ ಹಾನಿ ಸಮೀಕ್ಷೆಗೆ ಕಾಯುತ್ತಿದ್ದಾರೆ ಎಂದರು.

ಸರ್ಕಾರವೀಗ ಜಾತಿ ಸಮೀಕ್ಷೆಯಲ್ಲಿ ನಿರತವಾಗಿದೆ. ಅಧಿಕಾರಿಗಳು ಅದರಲ್ಲೇ ಇದ್ದಾರೆ. ಹಾಗಾಗಿ ಯಾರೂ ಪ್ರವಾಹ ಹಾನಿ ಪ್ರದೇಶಗಳಿಗೆ ಭೇಟಿ ನೀಡುತ್ತಿಲ್ಲ. ಬೆಳೆ ಹಾನಿಯಾದ ಕೂಡಲೇ ನವದೆಹಲಿಗೆ ಹೋಗಿ ಕೇಂದ್ರ ಸಚಿವರನ್ನು ಭೇಟಿ ಮಾಡುತ್ತಿದ್ದೆವು. ಈಗ ಕಾಂಗ್ರೆಸ್‌ನ ಯಾವುದೇ ಸಚಿವರು ದೆಹಲಿಗೆ ಹೋಗಿ ಭೇಟಿ ಮಾಡುತ್ತಿಲ್ಲ. ಸಿಎಂ ಬದಲಾವಣೆ ಯಾವಾಗ ಎಂದು ಚರ್ಚೆಯಾಗುತ್ತಿದೆ. ಶಾಸಕರು ನಾನೇ ಮಂತ್ರಿ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದರು.

ಬಿಜೆಪಿ ವತಿಯಿಂದ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲಾಗಿದೆ. ಮನೆ ಹಾನಿ, ರಸ್ತೆ ಹಾನಿ, ಬೆಳೆ ಹಾನಿ ಮೊದಲಾದವನ್ನು ಪರಿಶೀಲಿಸಲಾಗಿದೆ. ಜನರು ಬೀದಿಗೆ ಬಂದು ನಿಲ್ಲುವ ಸ್ಥಿತಿ ಬಂದಿದೆ. ಈ ಸರ್ಕಾರಕ್ಕೆ ಜನರ ಸಂಕಷ್ಟ ಅರಿವಿಗೆ ಬರುತ್ತಿಲ್ಲ. ಮಳೆ ಹಾನಿಯಾದಾಗ ಅದರ ವರದಿ ಪಡೆಯಬೇಕು. ಎಲ್ಲಿ ಎಷ್ಟು ಹಾನಿಯಾಗಿದೆ ಎಂದು ತಿಳಿದು, ಮುಖ್ಯಮಂತ್ರಿಗಳು ಸಚಿವರ ಜೊತೆ ಚರ್ಚಿಸಿ ತಂಡಗಳನ್ನು ಪ್ರತಿ ಜಿಲ್ಲೆಗಳಿಗೆ ಕಳುಹಿಸಬೇಕು. ಕೇಂದ್ರ ಸರ್ಕಾರದ ಅಧಿಕಾರಿಗಳ ತಂಡಕ್ಕೆ, ರಾಜ್ಯಕ್ಕೆ ಭೇಟಿ ಮಾಡಲು ಹೇಳಬೇಕು. ಸಚಿವರಿಗೆ ಕೆಲಸ ಕೊಡದೆ ಸಿಎಂ ಸಿದ್ದರಾಮಯ್ಯ ಬೇಜವಾಬ್ದಾರಿ ತೋರಿದ್ದಾರೆ. ನಾನೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆಯೇ ಹೊರತು, ಯಾವ ಕ್ರಮ ಕೈಗೊಂಡಿದ್ದೇನೆ ಎನ್ನುತ್ತಿಲ್ಲ ಎಂದರು.

ಕಿತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಸೋಯಾಬೀನ್‌ ಬೆಳೆ ಹಾನಿ ವೀಕ್ಷಿಸಲಾಗಿದೆ. ಸರ್ಕಾರ ಬದುಕಿದ್ದರೆ ಕೇಂದ್ರ ಸರ್ಕಾರದ ಬಳಿ ಹೋಗಿ ಚರ್ಚಿಸಬೇಕಿತ್ತು. ಮೊದಲು ರಾಜ್ಯ ಸರ್ಕಾರ ಪರಿಹಾರ ಬಿಡುಗಡೆ ಮಾಡಿದ ಬಳಿಕ, ಕೇಂದ್ರ ಸರ್ಕಾರ ಪರಿಹಾರ ನೀಡುತ್ತದೆ. ಇದು ಸಾಮಾನ್ಯವಾಗಿ ನಡೆಯುವ ಪ್ರಕ್ರಿಯೆ. ಸಿದ್ದರಾಮಯ್ಯ ಎರಡು ಬಾರಿ ಸಿಎಂ ಆದರೂ ಪ್ರಯೋಜನವಿಲ್ಲ. ರೈತರ ಜೊತೆ ನಿಂತು ಹೆಚ್ಚು ಪರಿಹಾರ ನೀಡುತ್ತೇನೆ ಎನ್ನಬೇಕಿತ್ತು. ಗ್ಯಾರಂಟಿಯೂ ಕೊಡಲ್ಲ, ಪರಿಹಾರವೂ ಇಲ್ಲ ಎಂಬಂತಾಗಿದೆ ಎಂದರು.

ನವೆಂಬರ್‌ನಲ್ಲಿ ಸಿಎಂ ಬದಲಾವಣೆಯಾಗಲಿದೆ ಎಂದು ನಾನು ಹೇಳಿದ್ದೆ. ಕ್ರಾಂತಿಯಾಗಲಿದೆ ಎಂದಿದ್ದ ರಾಜಣ್ಣ ಮನೆಗೆ ಹೋಗಿದ್ದಾರೆ. ಸಿಎಂ ಬದಲಾವಣೆ ಒಪ್ಪಂದ ಆಗಿರುವುದು ನೂರಕ್ಕೆ ನೂರು ನಿಜ. ಸಿಎಂ ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡುವುದಿಲ್ಲ, ಡಿಸಿಎಂ ಡಿ.ಕೆ.ಶಿವಕುಮಾರ್‌ ಹಠ ಬಿಡುವುದಿಲ್ಲ. ಆದರೆ ಬಿಜೆಪಿಯಿಂದ ಸರ್ಕಾರ ರಚನೆ ಮಾಡುವುದಿಲ್ಲ. ಚುನಾವಣೆ ನಡೆಯುವುದೇ ಸೂಕ್ತ ಎನ್ನುವುದು ನಮ್ಮೆಲ್ಲರ ಅಭಿಪ್ರಾಯ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ರಸ್ತೆಗಳು ಗುಂಡಿ ಬಿದ್ದಿವೆ. ಬೆಂಗಳೂರಿನಲ್ಲಿ ಹಳ್ಳ ಇಲ್ಲದ ರಸ್ತೆಯೇ ಇಲ್ಲ. ಇಂತಹ ಪರಿಸ್ಥಿತಿ ಈಗ ಇದೆ ಎಂದರು.

BREAKING: ತಿರುಪತಿಗೆ ಭಯೋತ್ಪಾದಕರಿಂದ ಬಾಂಬ್ ಬೆದರಿಕೆ | Bomb threat

ALERT : ಧೂಮಪಾನಿಗಳೇ ಎಚ್ಚರ : `ಸಿಗರೇಟ್’ನಿಂದ ಈ ಗಂಭೀರ ಕಾಯಿಲೆಗಳು ಬರಬಹುದು.!

Share. Facebook Twitter LinkedIn WhatsApp Email

Related Posts

ತಾವೇ ಹೆಚ್ಚಿಸಿದ್ದ GST ಕಡಿತಗೊಳಿಸಿ ಕೇಂದ್ರಸರ್ಕಾರ ಬೆನ್ನು ತಟ್ಟಿಕೊಳ್ಳುತ್ತಿದೆ: ಸಿಎಂ ಸಿದ್ಧರಾಮಯ್ಯ ವ್ಯಂಗ್ಯ

03/10/2025 3:23 PM3 Mins Read

BREAKING: ಕೊಪ್ಪಳದ ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಕೇಸ್: ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿ ಕೋರ್ಟ್ ಆದೇಶ

03/10/2025 2:38 PM1 Min Read

BREAKING : ಶೀಘ್ರದಲ್ಲೇ ಮದುವೆ ಆಗ್ತೀನಿ : ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಡಿಂಪಲ್ ಕ್ವೀನ್ ರಚಿತಾ ರಾಮ್

03/10/2025 2:11 PM1 Min Read
Recent News

ತಾವೇ ಹೆಚ್ಚಿಸಿದ್ದ GST ಕಡಿತಗೊಳಿಸಿ ಕೇಂದ್ರಸರ್ಕಾರ ಬೆನ್ನು ತಟ್ಟಿಕೊಳ್ಳುತ್ತಿದೆ: ಸಿಎಂ ಸಿದ್ಧರಾಮಯ್ಯ ವ್ಯಂಗ್ಯ

03/10/2025 3:23 PM

ಕುಷ್ಕಿಗೆ ಎಕರೆಗೆ 25,000, ನೀರಾವರಿ ಜಮೀನಿಗೆ ಎಕರೆಗೆ 50,000 ಪರಿಹಾರ ನೀಡಿ: ಆರ್.ಅಶೋಕ್ ಆಗ್ರಹ

03/10/2025 3:19 PM

BREAKING : ತಿರುಪತಿಗೆ ಬಾಂಬ್ ಬೆದರಿಕೆ, ISI ಮತ್ತು LTTE ಉಗ್ರರಿಂದ ಪಿತೂರಿ ಆರೋಪ |Bomb Threat

03/10/2025 3:17 PM

BREAKING: ತಿರುಪತಿಗೆ ಭಯೋತ್ಪಾದಕರಿಂದ ಬಾಂಬ್ ಬೆದರಿಕೆ | Bomb threat

03/10/2025 3:13 PM
State News
KARNATAKA

ತಾವೇ ಹೆಚ್ಚಿಸಿದ್ದ GST ಕಡಿತಗೊಳಿಸಿ ಕೇಂದ್ರಸರ್ಕಾರ ಬೆನ್ನು ತಟ್ಟಿಕೊಳ್ಳುತ್ತಿದೆ: ಸಿಎಂ ಸಿದ್ಧರಾಮಯ್ಯ ವ್ಯಂಗ್ಯ

By kannadanewsnow0903/10/2025 3:23 PM KARNATAKA 3 Mins Read

ಮೈಸೂರು: ಬಿಹಾರ ಚುನಾವಣೆಯ ಹಿನ್ನಲೆಯಲ್ಲಿ ಜಿಎಸ್ ಟಿ ಯನ್ನು ಸರಳೀಕರಣಗೊಳಿಸಿರುವ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ರಾಜ್ಯಕ್ಕೆ ಅಂದಾಜು 15…

ಕುಷ್ಕಿಗೆ ಎಕರೆಗೆ 25,000, ನೀರಾವರಿ ಜಮೀನಿಗೆ ಎಕರೆಗೆ 50,000 ಪರಿಹಾರ ನೀಡಿ: ಆರ್.ಅಶೋಕ್ ಆಗ್ರಹ

03/10/2025 3:19 PM

BREAKING: ಕೊಪ್ಪಳದ ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಕೇಸ್: ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿ ಕೋರ್ಟ್ ಆದೇಶ

03/10/2025 2:38 PM

BREAKING : ಶೀಘ್ರದಲ್ಲೇ ಮದುವೆ ಆಗ್ತೀನಿ : ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಡಿಂಪಲ್ ಕ್ವೀನ್ ರಚಿತಾ ರಾಮ್

03/10/2025 2:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.