Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚಿಕ್ಕಬಳ್ಳಾಪುರ : ಮಂತ್ರಾಲಯದಿಂದ ವಾಪಸ್ ಆಗುವಾಗ ಭೀಕರ ಅಪಘಾತ : ಓರ್ವ ಮಹಿಳೆ ಸಾವು, 6 ಜನರಿಗೆ ಗಂಭೀರ ಗಾಯ

03/10/2025 4:20 PM

ಕಲ್ಯಾಣದಲ್ಲಿ ನೆರೆ; ಪರಿಹಾರದ ವಿವರ ನೀಡುವಂತೆ ಸರಕಾರಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಗಡುವು

03/10/2025 4:15 PM

“ನಕ್ಷೆಯಲ್ಲಿ ಉಳಿಯಬೇಕೆ ಅಥ್ವಾ ಬೇಡವೇ ಪಾಕಿಸ್ತಾನ ನಿರ್ಧರಿಸ್ಬೇಕು” ; ಸೇನಾ ಮುಖ್ಯಸ್ಥರಿಂದ ‘ಆಪರೇಷನ್ 2.0’ ಎಚ್ಚರಿಕೆ

03/10/2025 4:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಲ್ಯಾಣದಲ್ಲಿ ನೆರೆ; ಪರಿಹಾರದ ವಿವರ ನೀಡುವಂತೆ ಸರಕಾರಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಗಡುವು
INDIA

ಕಲ್ಯಾಣದಲ್ಲಿ ನೆರೆ; ಪರಿಹಾರದ ವಿವರ ನೀಡುವಂತೆ ಸರಕಾರಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಗಡುವು

By kannadanewsnow0903/10/2025 4:15 PM

ಬೆಂಗಳೂರು: ಕಲ್ಯಾಣ ಕರ್ನಾಟಕದ ನೆರೆಪೀಡಿತ ಜಿಲ್ಲೆಗಳಿಗೆ ಈವರೆಗೆ ಏನೆಲ್ಲಾ ಪರಿಹಾರ ಒದಗಿಸಲಾಗಿದೆ ಎಂಬ ಬಗ್ಗೆ 48 ಗಂಟೆಗಳಲ್ಲಿ ಜನತೆಗೆ ಸಮಗ್ರ ಮಾಹಿತಿ ನೀಡಿಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ರಾಜ್ಯ ಸರಕಾರಕ್ಕೆ ಗಡುವು ನೀಡಿದ್ದಾರೆ.

ಜೆಡಿಎಸ್‌ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿ ಮಾತನಾಡಿದ ಮಾಜಿ ಪ್ರಧಾನಿಗಳು; ನೆರೆ ಪರಿಹಾರ ಕಾರ್ಯಕ್ರಮಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳಬೇಕು. ಪ್ರವಾಹದಿಂದ ಜನರು ಅತೀವ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂದಿನ 3-4 ದಿನಗಳಲ್ಲಿ ನಾನೂ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಈ ಸರಕಾರ ಏನೆಲ್ಲಾ ಪರಿಹಾರವನ್ನು ಒದಗಿಸಿದೆ ಎಂಬುದನ್ನು ಖುದ್ದು ನೋಡುತ್ತೇನೆ ಎಂದರು.

ಸಾಧ್ಯವಿರುವ ಕಡೆಗಳಿಗೆ ನಾನು ರಸ್ತೆಯ ಮೂಲಕವೇ ತೆರಳಿ ನೆರೆ ಸಂತ್ರಸ್ತರನ್ನು ಭೇಟಿ ಮಾಡುತ್ತೇನೆ. ಅವರು ಎದುರಿಸುತ್ತಿರುವ ಸಮಸ್ಯೆಗಳನ್ನು ಕಣ್ಣಾರೆ ಕಂಡು ಅವರಿಂದ ಮಾಹಿತಿ ಪಡೆಯುತ್ತೇನೆ. ಆಗಿರುವ ನಷ್ಟದ ಬಗ್ಗೆ ವಿವರ ಪಡೆದು ಅದಕ್ಕೆ ತಕ್ಕಂತೆ ರಾಜ್ಯ ಸರಕಾರ ನೆರವಿಗೆ ಬಂದಿದೆಯೇ ಇಲ್ಲವೇ ಎಂಬುದನ್ನು ತಿಳಿದುಕೊಳ್ಳುತ್ತೇನೆ. ಬಳಿಕ ಸಮಗ್ರ ವರದಿ ಸಿದ್ಧಪಡಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸುತ್ತೇನೆ ಎಂದು ಮಾಜಿ ಪ್ರಧಾನಿಗಳು ಹೇಳಿದರು.

ನೆರೆ ವಿಷಯದಲ್ಲಿ ಯಾರೂ ರಾಜಕೀಯ ಮಾಡಬಾರದು. ಸರಕಾರ ಇದನ್ನು ತುರ್ತು ಆದ್ಯತೆ ಎಂದು ಪರಿಗಣಿಸಬೇಕು. ಆದರೆ ಖಜಾನೆಯಲ್ಲಿ ಹಣವಿಲ್ಲ ಎಂದು ಶಾಸಕರೇ ಹೇಳುತ್ತಿರುವುದನ್ನು ಗಮನಿಸಿದ್ದೇನೆ. ಗ್ಯಾರಂಟಿ ಯೋಜನೆಗಳಿಗೆ ಹಣ ನೀಡುತ್ತಿರುವುದರಿಂದ ನೆರೆ ಪೀಡಿತ ಜಿಲ್ಲೆಗಳಿಗೆ ಮತ್ತು ಇನ್ನಿತರ ಬಾಬ್ತುಗಳಿಗೆ ಹಣವಿಲ್ಲ ಎಂದು ಅವರೇ ಹೇಳುತ್ತಿದ್ದಾರೆ. ಪಂಚ ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಕಲ್ಯಾಣ ಕರ್ನಾಟಕದ ಆರು ಜಿಲ್ಲೆಗಳಲ್ಲಿ ಉಂಟಾಗಿರುವ ತೀವ್ರ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಈ ಸರಕಾರದ ಬಳಿ ಹಣವಿಲ್ಲ ಎಂದು ದೇವೇಗೌಡರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ನೆರೆಯಿಂದಾಗಿ 50ಕ್ಕೂ ಹೆಚ್ಚು ಜನರು ಜೀವ ಕಳೆದುಕೊಂಡಿದ್ದಾರೆ. ಅಪಾರ ಸಂಖ್ಯೆಯಷ್ಟು ಜಾನುವಾರುಗಳು ಸಾವನ್ನಪ್ಪಿವೆ. ದೊಡ್ಡ ಪ್ರಮಾಣದಲ್ಲಿ ಆಸ್ತಿ, ಬೆಳೆ ನಷ್ಟವಾಗಿದೆ. ಮೂಲಸೌಕರ್ಯಗಳಲ್ಲಿ ರಸ್ತೆಗಳು, ಸೇತುವೆಗಳು ಕುಸಿದಿವೆ. ಮನೆಗಳಿಗೆ ನೆರೆ ನೀರು ನುಗ್ಗಿ ಜನರು ನಿರ್ಗತಿಕರಾಗಿದ್ದಾರೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಪಕ್ಷ ಸಂಘಟನೆ ಶ್ರಮ, ಅಕ್ಟೋಬರ್‌ ನಲ್ಲಿ ಮಹಿಳಾ ಸಮಾವೇಶ:

ಪಕ್ಷ ಸಂಘಟನೆಗೆ ನಾನು ಶ್ರಮ ಹಾಕುತ್ತೇನೆ. ಹಿಂದಿನಂತೆ ಕೇಂದ್ರ ಸಚಿವರಾದ ಹೆಚ್​​.ಡಿ ಕುಮಾರಸ್ವಾಮಿ ಅವರು ಸಕ್ರಿಯವಾಗಿ ಕೆಲಸ ಮಾಡಲಿದ್ದಾರೆ. ಅವರ ಆರೋಗ್ಯ ಉತ್ತಮವಾಗಿದೆ. ನಿಖಿಲ್ ಕುಮಾರಸ್ವಾಮಿ ಅವರು ಪಕ್ಷ ಸಂಘಟನೆಯನ್ನು ಮಾಡುತ್ತಿದ್ದಾರೆ. ಮೂರು ಸಲ ಅವರು ಚುನಾವಣೆಯಲ್ಲಿ ಸೋತರೂ ಮನೆಯಲ್ಲಿ ಕೂರದೆ ಸಂಘಟನೆ ಕೆಲಸದಲ್ಲಿ ನಿರತರಾಗಿದ್ದಾರೆ. ಸೋಲಿನ ಅನುಭವದಿಂದ ಪಾಠ ಕಲಿತು ರಾಜ್ಯ ಪ್ರವಾಸ ಮಾಡುತ್ತಿರುವ ಅವರು, ಅನುಭವೀ ರಾಜಕಾರಣಿಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ನಿಖಿಲ್‌ ಕುಮಾರಸ್ವಾಮಿ ಅವರು ರಾಜ್ಯ ವ್ಯಾಪಿ ನಡೆಸುತ್ತಿರುವ ಸದಸ್ಯ ಅಭಿಯಾನ ಮತ್ತು ಸಂಘಟನಾ ಪ್ರವಾಸ ಯಶಸ್ವಿಯಾಗಿದೆ. ಅಲ್ಲದೆ; ಬೆಂಗಳೂರು ನಗರದಲ್ಲಿ ಪಕ್ಷವನ್ನು ಗಟ್ಟಿಯಾಗಿ ಕಟ್ಟುತ್ತೇವೆ. ಈ ನಿಟ್ಟಿನಲ್ಲಿ ಅಕ್ಟೋಬರ್ 12ರಂದು ಜೆಡಿಎಸ್ ಮಹಿಳಾ ಸಮಾವೇಶವನ್ನು ಆಯೋಜಿಸಲಾಗುವುದು. ಕನಿಷ್ಠ 50,000- 60,000 ಮಹಿಳೆಯರು ಭಾಗವಹಿಸಲಿದ್ದಾರೆ. ತಳಮಟ್ಟದಿಂದ ಪಕ್ಷವನ್ನು ಸಂಘಟಿಸಲಾಗುವುದು ಎಂದ ಅವರು; ಚುನಾವಣೆ ಬಂದಾಗ ನಮ್ಮ ಶಕ್ತಿ ಎಷ್ಟಿದೆ ಎಂಬುದು ಎಲ್ಲರಿಗೂ ತಿಳಿಯಲಿದೆ ಎಂದು ಮಾರ್ಮಿಕವಾಗಿ ನುಡಿದರು.

ಮುಂಬರುವ ಜಿಬಿಎ ಚುನಾವಣೆಯಲ್ಲಿ ಕನಿಷ್ಠ 50-60 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಜೆಡಿಎಸ್​​​ ಹೊಂದಿದೆ. ಹೀಗಾಗಿ ನಗರದಲ್ಲಿ ಪಕ್ಷವನ್ನು ಸಂಘಟನೆ ಮಾಡುತ್ತಿರುವುದಾಗಿ ಅವರು ತಿಳಿಸಿದರು.

ಬಿಜೆಪಿ-ಜೆಡಿಎಸ್ ಮೈತ್ರಿ ಅಬಾಧಿತ:

ಲೋಕಸಭೆ ಚುನಾವಣೆಗೆ ಜೆಡಿಎಸ್‌ – ಬಿಜೆಪಿ ಮೈತ್ರಿ ಮಾಡಿಕೊಂಡವು. ಈ ಮೈತ್ರಿ ಮುಂದಿನ ಚುನಾವಣೆಗಳಿಗೂ ಅಬಾಧಿತವಾಗಿ ಮುಂದುವರಿಯುತ್ತದೆ. ಯಾವುದೇ ಚುನಾವಣೆಯಾದರೂ ಮೈತ್ರಿಗೆ ಧಕ್ಕೆ ಇಲ್ಲ. ಈ ಬಗ್ಗೆ ಯಾರೂ ಚಿಂತಿಸುವ ಅಗತ್ಯವಿಲ್ಲ. ಪಂಚಾಯಿತಿ ಮತ್ತು ವಿಧಾನಸಭೆ ಚುನಾವಣೆಗಳಿಗೂ ಮುಂದುವರಿಯುತ್ತದೆ ಎಂದು ದೇವೇಗೌಡರು ಒತ್ತಿ ಹೇಳಿದರು.

ಮುಂದುವರಿದು ಹೇಳಿದ ಮಾಜಿ ಪ್ರಧಾನಿಗಳು; “ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ನನ್ನ ಸಂಬಂಧ ಎಂದಿಗೂ ಬದಲಾಗುವುದಿಲ್ಲ. ನಮ್ಮ ಬಾಂಧವ್ಯ ಉತ್ತಮವಾಗಿದೆ. ಕಳೆದ ಹತ್ತು ವರ್ಷಗಳಲ್ಲಿ ನಾನು ಅವರ ಬಗ್ಗೆ ಲಘುವಾಗಿ ಮಾತನಾಡಿದ ಒಂದು ಸಂದರ್ಭವನ್ನು ತೋರಿಸಿ’ ಎಂದು ಹೇಳಿದರು.

ಬಿಡದಿ ಟೌನ್ ಶಿಪ್ ಬಗ್ಗೆ ಎಲ್ಲಾ ಗೊತ್ತಿದೆ:

ಈ ಯೋಜನೆ ಬಗ್ಗೆ ನನಗೆ ಎಲ್ಲಾ ಮಾಹಿತಿಯೂ ಇದೆ. ಭೂಸ್ವಾಧೀನಕ್ಕೆ ರೈತರು ವಿರೋಧ ಮಾಡುತ್ತಿದ್ದಾರೆ. ಸರಕಾರ ಕಾಂಗ್ರೆಸ್ ಕೈಯ್ಯಲ್ಲಿದೆ. ಚುನಾವಣೆ ಬಂದಾಗ ಜನ ತೀರ್ಪು ಕೊಡಬೇಕು. ಅಲ್ಲಿಯವರೆಗೂ ಕಾಯಬೇಕು ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು ಮಾಜಿ ಪ್ರಧಾನಿಗಳು.

ಈ ಯೋಜನೆಯ ಬಗ್ಗೆ ಬೇರೆಯವ ಹೆಸರು ತೆಗೆದು ಚರ್ಚೆ ಮಾಡುವುದು ಬೇಡ. ಆ ವಿಚಾರವನ್ನು ನಾನು ಮಾತಾಡಲು ಹೋಗಲ್ಲ. ಮೂರು ತಿಂಗಳ ಹಿಂದೆ ಮಾಧ್ಯಮಗಳು ಬೆಳಗ್ಗೆ ಆರು ಗಂಟೆಯಿಂದ ರಾತ್ರಿ 10 ಗಂಟೆವರೆಗೆ ನಮ್ಮ ಮನೆ ಬಳಿಯೇ ಇರುತ್ತಿದ್ದವು. ಇದು ಯಾರ ಪ್ರೇರಣೆಯಿಂದ? ಅದರ ಹಿಂದೆ ಯಾರ ಶಕ್ತಿ ಇತ್ತು? ನನಗೆ ಗೊತ್ತಿದೆ, ಅದರ ಬಗ್ಗೆ ಚರ್ಚೆ ಬೇಡ. ನಮ್ಮದು ಸಣ್ಣ ರಾಜಕೀಯ ಪಕ್ಷ. ಇರಲಿ, ಎಲ್ಲವನ್ನೂ ಕಾಲವೇ ನಿರ್ಣಯಿಸುತ್ತದೆ ಎಂದು ಯಾರ ಹೆಸರನ್ನೂ ಹೇಳಿದೆ ಕುಟುಕಿದರು ದೇವೇಗೌಡರು.

ಮಾಧ್ಯಮಗೋಷ್ಠಿಯಲ್ಲಿ ಮಾಜಿ ಸಚಿವೆ ಲೀಲಾದೇವಿ ಆರ್.‌ ಪ್ರಸಾದ್‌, ವಿಧಾನ ಪರಿಷತ್‌ ಸದಸ್ಯರಾದ ಟಿ. ಜವರಾಯಿ ಗೌಡ, ವಿವೇಕಾನಂದ, ಮಾಜಿ ಎಮ್ಮೆಲ್ಸಿಗಳಾ ಕೆ.ಎ. ತಿಪ್ಪೇಸ್ವಾಮಿ, ಚೌಡರೆಡ್ಡಿ ತೂಪಲ್ಲಿ, ಕೆ.ಟಿ. ಶ್ರೀಕಂಠೇಗೌಡ, ಮಾಜಿ ಶಾಸಕ ನಿಂಗಪ್ಪ ಜೆಡಿಎಸ್‌ ನಗರ ಘಟಕದ ಅಧ್ಯಕ್ಷ ಹೆಚ್.‌ಎಂ. ರಮೇಶ್‌ ಗೌಡ, ನಗರ ಘಟಕದ ಮಹಿಳಾ ಅಧ್ಯಕ್ಷೆ ಶೈಲಾ ಸಂತೋಷ ರಾವ್‌ ಮುಂತಾದವರು ಉಪಸ್ಥಿತರಿದ್ದರು.

BREAKING: ಬೆಂಗಳೂರು ಗ್ರಾಮಾಂತರದಲ್ಲಿ ಭೀಕರ ಅಪಘಾತ: ಯುವತಿಯರ ಮೇಲೆ ಕ್ಯಾಂಟರ್ ಹರಿದು ಇಬ್ಬರು ಸ್ಥಳದಲ್ಲೇ ಸಾವು

ALERT : ಧೂಮಪಾನಿಗಳೇ ಎಚ್ಚರ : `ಸಿಗರೇಟ್’ನಿಂದ ಈ ಗಂಭೀರ ಕಾಯಿಲೆಗಳು ಬರಬಹುದು.!

Share. Facebook Twitter LinkedIn WhatsApp Email

Related Posts

ಚಿಕ್ಕಬಳ್ಳಾಪುರ : ಮಂತ್ರಾಲಯದಿಂದ ವಾಪಸ್ ಆಗುವಾಗ ಭೀಕರ ಅಪಘಾತ : ಓರ್ವ ಮಹಿಳೆ ಸಾವು, 6 ಜನರಿಗೆ ಗಂಭೀರ ಗಾಯ

03/10/2025 4:20 PM1 Min Read

“ನಕ್ಷೆಯಲ್ಲಿ ಉಳಿಯಬೇಕೆ ಅಥ್ವಾ ಬೇಡವೇ ಪಾಕಿಸ್ತಾನ ನಿರ್ಧರಿಸ್ಬೇಕು” ; ಸೇನಾ ಮುಖ್ಯಸ್ಥರಿಂದ ‘ಆಪರೇಷನ್ 2.0’ ಎಚ್ಚರಿಕೆ

03/10/2025 4:11 PM1 Min Read

BREAKING : ಬೆಂಗಳೂರಲ್ಲಿ ಮತ್ತೊಂದು ಭೀಕರ ಅಪಘಾತ : ಕ್ಯಾಂಟರ್ ಹರಿದು ಸ್ಥಳದಲ್ಲೇ ಯುವತಿಯರಿಬ್ಬರ ದುರ್ಮರಣ!

03/10/2025 4:10 PM1 Min Read
Recent News

ಚಿಕ್ಕಬಳ್ಳಾಪುರ : ಮಂತ್ರಾಲಯದಿಂದ ವಾಪಸ್ ಆಗುವಾಗ ಭೀಕರ ಅಪಘಾತ : ಓರ್ವ ಮಹಿಳೆ ಸಾವು, 6 ಜನರಿಗೆ ಗಂಭೀರ ಗಾಯ

03/10/2025 4:20 PM

ಕಲ್ಯಾಣದಲ್ಲಿ ನೆರೆ; ಪರಿಹಾರದ ವಿವರ ನೀಡುವಂತೆ ಸರಕಾರಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಗಡುವು

03/10/2025 4:15 PM

“ನಕ್ಷೆಯಲ್ಲಿ ಉಳಿಯಬೇಕೆ ಅಥ್ವಾ ಬೇಡವೇ ಪಾಕಿಸ್ತಾನ ನಿರ್ಧರಿಸ್ಬೇಕು” ; ಸೇನಾ ಮುಖ್ಯಸ್ಥರಿಂದ ‘ಆಪರೇಷನ್ 2.0’ ಎಚ್ಚರಿಕೆ

03/10/2025 4:11 PM

BREAKING : ಬೆಂಗಳೂರಲ್ಲಿ ಮತ್ತೊಂದು ಭೀಕರ ಅಪಘಾತ : ಕ್ಯಾಂಟರ್ ಹರಿದು ಸ್ಥಳದಲ್ಲೇ ಯುವತಿಯರಿಬ್ಬರ ದುರ್ಮರಣ!

03/10/2025 4:10 PM
State News
KARNATAKA

ಚಿಕ್ಕಬಳ್ಳಾಪುರ : ಮಂತ್ರಾಲಯದಿಂದ ವಾಪಸ್ ಆಗುವಾಗ ಭೀಕರ ಅಪಘಾತ : ಓರ್ವ ಮಹಿಳೆ ಸಾವು, 6 ಜನರಿಗೆ ಗಂಭೀರ ಗಾಯ

By kannadanewsnow0503/10/2025 4:20 PM KARNATAKA 1 Min Read

ಚಿಕ್ಕಬಳ್ಳಾಪುರ : ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದಂತಹ ಇನೋವಾ ಕಾರು ಡಿಕ್ಕಿ ಹೊಡೆದಿದೆ ಪರಿಣಾಮ ಕಾರಿನಲ್ಲಿದ್ದ 35…

ಕಲ್ಯಾಣದಲ್ಲಿ ನೆರೆ; ಪರಿಹಾರದ ವಿವರ ನೀಡುವಂತೆ ಸರಕಾರಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಗಡುವು

03/10/2025 4:15 PM

BREAKING : ಬೆಂಗಳೂರಲ್ಲಿ ಮತ್ತೊಂದು ಭೀಕರ ಅಪಘಾತ : ಕ್ಯಾಂಟರ್ ಹರಿದು ಸ್ಥಳದಲ್ಲೇ ಯುವತಿಯರಿಬ್ಬರ ದುರ್ಮರಣ!

03/10/2025 4:10 PM

BREAKING: ಬೆಂಗಳೂರು ಗ್ರಾಮಾಂತರದಲ್ಲಿ ಭೀಕರ ಅಪಘಾತ: ಯುವತಿಯರ ಮೇಲೆ ಕ್ಯಾಂಟರ್ ಹರಿದು ಇಬ್ಬರು ಸ್ಥಳದಲ್ಲೇ ಸಾವು

03/10/2025 4:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.