ಬೆಳಗಾವಿ: ರಾಜ್ಯದಲ್ಲೊಂದು ಮನಕಲಕುವ ಘಟನೆ ಎನ್ನುವಂತೆ ತಮ್ಮನ ಸಾವಿನ ಸುದ್ದಿಯನ್ನು ಕೇಳಿದಂತ ಅಣ್ಣ ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ಬೆಳಗಾವಿಯಲ್ಲಿ ಸಾವಿನಲ್ಲೂ ಸಹೋದರರು ಒಂದಾಗಿದ್ದಾರೆ.
ಬೆಳಗಾವಿಯ ಕಪರಟ್ಟಿ ಗ್ರಾಮದ ಸತೀಶ್ ಬಾಗನ್ನವರ(16) ಎಂಬ ಯುವಕ ಅನಾರೋಗ್ಯಕ್ಕೆ ಒಳಗಾಗಿದ್ದರು. ಈ ಕಾರಣದಿಂದ ನಿಧನರಾಗಿದ್ದಾರೆ. ಈ ವಿಷಯವನ್ನು ಅಣ್ಣ ಬಸವರಾಜ್(24)ಗೆ ತಿಳಿಸಲಾಗಿದೆ. ಈ ಸುದ್ದಿ ಕೇಳುತ್ತಿದ್ದಂತ ಬಸವರಾಜ್ ಗೆ ಹೃದಯಾಘಾತವಾಗಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯದಲ್ಲೇ ಸಾವನ್ನಪ್ಪಿದ್ದಾರೆ.
ಇಬ್ಬರು ಮಕ್ಕಳನ್ನು ಕಳೆದುಕೊಂಡ ತಂದೆ-ತಾಯಿಗಳು ಆಘಾತಗೊಂಡಿದ್ದಾರೆ. ಅಣ್ಣ-ತಮ್ಮದಿಂರ ಸಾವಿನಿಂದ ಇಡೀ ಕಪರಟ್ಟಿ ಗ್ರಾಮವೇ ಕಣ್ಣೀರಿಟ್ಟಿದೆ.
ಸಕಲ ಸರ್ಕಾರಿ ಗೌರವಗಳೊಂದಿಗೆ ಹಿರಿಯ ಪತ್ರಕರ್ತ ಟಿ.ಜೆ.ಎಸ್ ಜಾರ್ಜ್ ಅಂತ್ಯಕ್ರಿಯೆಗೆ ರಾಜ್ಯ ಸರ್ಕಾರ ಆದೇಶ
ಗಮನಿಸಿ : ನಿಮ್ಮ ಮನೆಯಲ್ಲಿ ಎಷ್ಟು ದಿನಗಳವರೆಗೆ `ನೀರು’ ಸಂಗ್ರಹಿಸಿಡಬಹುದು ಗೊತ್ತಾ?