ಬೆಂಗಳೂರು: ನಗರದಲ್ಲಿ ಮೆಟ್ರೋ ರೈಲು ಹಳಿಗೆ ಹಾರಿ ಪ್ರಯಾಣಿಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದನು. ಹೀಗಾಗಿ ಕೆಲ ಕಾಲ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಆ ಬಳಿಕ ಇದೀಗ ರೈಲು ಸಂಚಾರ ಪುನರಾರಂಭಗೊಂಡಿದೆ.
ಈ ಬಗ್ಗೆ ಬಿಎಂಆರ್ ಸಿಎಲ್ ಮಾಹಿತಿ ನೀಡಿದ್ದು, ಇಂದು (04.10.2025) ರಂದು ಸುಮಾರು 15.17 ಗಂಟೆಗೆ ನಾಡಾಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ಮಾಧವಾರ ಕಡೆಗೆ ಹೋಗುವ ಹಸಿರು ಮಾರ್ಗದಲ್ಲಿ ಒಬ್ಬ ಪ್ರಯಾಣಿಕನು ರೈಲಿನ ಹಳಿಯ ಮುಂದೆ ಹಾರಿದ ಪರಿಣಾಮವಾಗಿ ಈ ಬಾಗದ ರೈಲು ಸೇವೆಯಲ್ಲಿ ವ್ಯತ್ಯಾಯವಾಯಿತು ಎಂದಿದೆ.
ಸದರಿ ಪ್ರಯಾಣಿಕನನ್ನು ರಕ್ಷಿಸಿ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಯಿತು. ಈ ಸಮಯದಲ್ಲಿ ರೇಷ್ಮೆ ಸಂಸ್ಥೆ ಮತ್ತು ನ್ಯಾಷನಲ್ ಕಾಲೇಜು ಮತ್ತು ರಾಜಾಜಿನಗರ ಮತ್ತು ಮಾದಾವರ ನಡುವೆ ಶಾರ್ಟ್ ಲೂಪ್ ಸೇವೆಯನ್ನು ನಡೆಸಲಾಯಿತು. ನಂತರ ಸುಮಾರು 15.47 ಗಂಟೆಗೆ ಸಾಮಾನ್ಯ ಸೇವೆಯನ್ನು ಪುನಃ ಆರಂಭಿಸಲಾಯಿತು ಎಂದು ಮಾಹಿತಿ ನೀಡಿದೆ.