Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಗೃಹ ಸಚಿವ ಡಾ.ಜಿ.ಪರಮೇಶ್ವರ್

07/12/2025 12:31 PM

ಗಮನಿಸಿ : ಟೊಮೆಟೊ ತಿಂದ್ರೆ `ಕಿಡ್ನಿ ಸ್ಟೋನ್; ಆಗುತ್ತಾ? ಇಲ್ಲಿದೆ ನಿಮ್ಮ ಗೊಂದಲಕ್ಕೆ ಉತ್ತರ

07/12/2025 12:30 PM

ALERT : ‘ಮೊಬೈಲ್’ ಬಳಕೆದಾರರೇ ಎಚ್ಚರ : ಅಪ್ಪಿತಪ್ಪಿಯೂ ಈ ಸಂಖ್ಯೆಯನ್ನು ಡಯಲ್ ಮಾಡಬೇಡಿ.!

07/12/2025 12:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ’ ಬಗ್ಗೆ ಅಪಪ್ರಚಾರ ಬೇಡ, ನಿಲ್ಲಿಸುವ ಬಗ್ಗೆ ಪ್ರಾಮಾಣಿಕ ಪ್ರಯತ್ನ: ಸಂಸದ ಬಿವೈ ರಾಘವೇಂದ್ರ
KARNATAKA

‘ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ’ ಬಗ್ಗೆ ಅಪಪ್ರಚಾರ ಬೇಡ, ನಿಲ್ಲಿಸುವ ಬಗ್ಗೆ ಪ್ರಾಮಾಣಿಕ ಪ್ರಯತ್ನ: ಸಂಸದ ಬಿವೈ ರಾಘವೇಂದ್ರ

By kannadanewsnow0905/10/2025 8:31 PM

ಶಿವಮೊಗ್ಗ : ಶರಾವತಿ ಪಂಪ್ಡ್ ಸ್ಟೋರೇಜ್ ವಿರುದ್ದ ಹೋರಾಟಕ್ಕೆ ನನ್ನ ಬೆಂಬಲವಿದೆ. ಮುಂದಿನ ಪೀಳಿಗೆಯ ಹಿತದೃಷ್ಟಿಯಿಂದ ಪರಿಸರ ಉಳಿಸಿ ಬೆಳೆಸಿಕೊಂಡು ಹೋಗುವುದು ನಮ್ಮ ಆದ್ಯತೆಯಾಗಬೇಕು ಹಸಿರು ಹೊದಿಕೆಯ ಗರ್ಭ ಬಗೆದು ಮುನ್ನಡೆಸುವ ಯೋಜನೆ ಸಲ್ಲದು ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ಉಪವಿಭಾಗಾಧಿಕಾರಿಗಳ ಕಚೇರಿ ಆವರಣದಲ್ಲಿ ರೈತ ಸಂಘದ ವತಿಯಿಂದ ನಡೆಸುತ್ತಿರುವ ಶರಾವತಿ ಪಂಪ್ಡ್ ಸ್ಟೋರೇಜ್ ವಿರುದ್ದದ ಹೋರಾಟದಲ್ಲಿ ಭಾನುವಾರ ಪಾಲ್ಗೊಂಡು ಮಾತನಾಡಿದಂತ ಅವರು, ಶರಾವತಿ ಪಂಪ್ಡ್ ಸ್ಟೋರೇಜ್ ವಿರುದ್ದ ಪಕ್ಷಾತೀತ ಹೋರಾಟ ನಡೆಯುತ್ತಿರುವುದು ಸ್ವಾಗತಾರ್ಹ ಸಂಗತಿ. ಕೇಂದ್ರದಲ್ಲಿ ನಮ್ಮದೆ ಸರ್ಕಾರ ಇದ್ದರೂ ಶರಾವತಿ ಪಂಪ್ಡ್ ಸ್ಟೋರೇಜ್ ಆಗುತ್ತಿರುವುದು ನನ್ನ ಗಮನಕ್ಕೆ ಬಂದಿಲ್ಲ. ಕೇಂದ್ರಕ್ಕೆ ಪ್ರಸ್ತಾವನೆ ಕಳಿಸುವುದು ಸಹಜ ಎಂದರು.

ಕೇಂದ್ರ ಸರ್ಕಾರ ಬೇರೆಬೇರೆ ವಿದ್ಯುತ್ ಯೋಜನೆಗೆ ಒಪ್ಪಿಗೆ ನೀಡುತ್ತಾ ಬರುತ್ತಿದ್ದರೂ ಶರಾವತಿ ಪಂಪ್ಡ್ ಸ್ಟೋರೇಜ್‌ನಿಂದ ಆ ಭಾಗದ ಪರಿಸರ, ಸಿಂಗಳೀಕ ಬಾಲದ ಮಂಗಗಳು, ಜೀವವೈವಿಧ್ಯಕ್ಕೆ ಹಾನಿಯಾಗುತ್ತಿರುವುದರ ಬಗ್ಗೆ ಕೇಂದ್ರದ ಸಂಬoಧಪಟ್ಟ ಸಚಿವರು, ಇಲಾಖೆ ಜೊತೆ ಮಾತನಾಡುತ್ತೇನೆ. ನಾನು ಮತ್ತು ಕೆನರಾ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಜಂಟಿಯಾಗಿ ಯೋಜನೆಗೆ ಪರವಾನಿಗೆ ಸಿಗದಂತೆ ಪ್ರಯತ್ನ ನಡೆಸಲಾಗುತ್ತದೆ. ಯೋಜನೆಯಿಂದ ಹಣಕಾಸು ತೆಗೆದುಕೊಂಡಿದ್ದಾರೆ ಎಂದು ಸುಳ್ಳು ಆರೋಪ ಮಾಡಬೇಡಿ. ಯೋಜನೆ ನಿಲ್ಲಿಸಲು ಏನೇನು ಬೇಕು  ಆ ಎಲ್ಲಾ ಪ್ರಯತ್ನ ಮಾಡುತ್ತೇನೆ. ಪಂಪ್ಡ್ ಸ್ಟೋರೇಜ್ ಬಿಟ್ಟು ಪರ್ಯಾಯ ಮಾರ್ಗವನ್ನು ಆಯ್ಕೆ ಮಾಡಿಕೊಳ್ಳಲು ಸರ್ಕಾರಕ್ಕೆ ಮನವಿ ಮಾಡಲಾಗುತ್ತದೆ ಎಂದು ಹೇಳಿದರು.

ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ ಕೆ.ಆರ್.ಎಸ್. ಪಕ್ಷದ ಅಧ್ಯಕ್ಷ ರವಿಕೃಷ್ಣ ರೆಡ್ಡಿ, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಸಂಪೂರ್ಣ ಅವೈಜ್ಞಾನಿಕವಾಗಿದೆ. ಯೋಜನೆ ಕಾರ್ಯಸಾಧುವಲ್ಲ. ವೈಜ್ಞಾನಿಕವಾಗಿ ಇದು ಸಾಧ್ಯವೇ ಇಲ್ಲ ಎನ್ನುವುದು ತಜ್ಞರು ಹೇಳುತ್ತಿದ್ದಾರೆ. ಇಂತಹ ಹೊತ್ತಿನಲ್ಲಿ ಯೋಜನೆಗೆ ಹೆಚ್ಚಿನ ಆಸಕ್ತಿ ವಹಿಸುತ್ತಿರುವುದು ಅನೇಕ ಅನುಮಾನಕ್ಕೆ ಕಾರಣವಾಗಿದೆ. ಯೋಜನೆ ಅಧಿಕಾರಿಗಳು, ರಾಜಕಾರಣಿಗಳು, ಗುತ್ತಿಗೆದಾರರು ಹಣ ಹೊಡೆಯಲು ಮಾಡಿದ ಯೋಜನೆಯಾಗಿದೆ. ತಕ್ಷಣ ರಾಜ್ಯ ಸರ್ಕಾರ ಈ ಯೋಜನೆ ಕೈಬಿಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಶಿರವಾಳ, ಪ್ರಮುಖರಾದ ರಮೇಶ್ ಕೆಳದಿ, ಅಖಿಲೇಶ್ ಚಿಪ್ಳಿ, ಟಿ.ಡಿ.ಮೇಘರಾಜ್, ಎಸ್ ವಿ ಹಿತಕರ ಜೈನ್, ಮಲ್ಲಿಕಾರ್ಜುನ ಹಕ್ರೆ, ಸುವರ್ಣ ಟೀಕಪ್ಪ ಸೇರಿದಂತೆ ಇತರರು ಹಾಜರಿದ್ದರು.

ಬಂದ ಪುಟ್ಟ, ‘ಬೋರ್ಡ್ ನೆಟ್ಟು’ ಹೋದ ಪುಟ್ಟ: ಇದು ಸಾಗರದ ‘ಅರಣ್ಯಾಧಿಕಾರಿ’ಗಳ ‘ಒತ್ತುವರಿ ತೆರವು’ ಕಾರ್ಯಾಚರಣೆ

BREAKING: ಶಿವಮೊಗ್ಗದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ: ಹಾಡಹಗಲೇ ಇಬ್ಬರಿಗೆ ಚಾಕು ಇರಿತ

Share. Facebook Twitter LinkedIn WhatsApp Email

Related Posts

ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಗೃಹ ಸಚಿವ ಡಾ.ಜಿ.ಪರಮೇಶ್ವರ್

07/12/2025 12:31 PM2 Mins Read

ಗಮನಿಸಿ : ಟೊಮೆಟೊ ತಿಂದ್ರೆ `ಕಿಡ್ನಿ ಸ್ಟೋನ್; ಆಗುತ್ತಾ? ಇಲ್ಲಿದೆ ನಿಮ್ಮ ಗೊಂದಲಕ್ಕೆ ಉತ್ತರ

07/12/2025 12:30 PM2 Mins Read

ALERT : ‘ಮೊಬೈಲ್’ ಬಳಕೆದಾರರೇ ಎಚ್ಚರ : ಅಪ್ಪಿತಪ್ಪಿಯೂ ಈ ಸಂಖ್ಯೆಯನ್ನು ಡಯಲ್ ಮಾಡಬೇಡಿ.!

07/12/2025 12:23 PM2 Mins Read
Recent News

ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಗೃಹ ಸಚಿವ ಡಾ.ಜಿ.ಪರಮೇಶ್ವರ್

07/12/2025 12:31 PM

ಗಮನಿಸಿ : ಟೊಮೆಟೊ ತಿಂದ್ರೆ `ಕಿಡ್ನಿ ಸ್ಟೋನ್; ಆಗುತ್ತಾ? ಇಲ್ಲಿದೆ ನಿಮ್ಮ ಗೊಂದಲಕ್ಕೆ ಉತ್ತರ

07/12/2025 12:30 PM

ALERT : ‘ಮೊಬೈಲ್’ ಬಳಕೆದಾರರೇ ಎಚ್ಚರ : ಅಪ್ಪಿತಪ್ಪಿಯೂ ಈ ಸಂಖ್ಯೆಯನ್ನು ಡಯಲ್ ಮಾಡಬೇಡಿ.!

07/12/2025 12:23 PM

ಆರೋಗ್ಯ ವಿಮೆ ಪರಿಹಾರ ಪಾವತಿಯಲ್ಲಿ ಸೇವಾ ನ್ಯೂನ್ಯತೆ : ವಿಮಾ ಕಂಪನಿಗೆ ದಂಡ ಸಹಿತ ಪರಿಹಾರ ಪಾವತಿಸಲು ಆದೇಶ

07/12/2025 12:19 PM
State News
KARNATAKA

ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಗೃಹ ಸಚಿವ ಡಾ.ಜಿ.ಪರಮೇಶ್ವರ್

By kannadanewsnow0907/12/2025 12:31 PM KARNATAKA 2 Mins Read

ಬೆಂಗಳೂರು : ರಾಜ್ಯವನ್ನು ಮಾದಕ ವ್ಯಸನ ಮುಕ್ತಗೊಳಿಸುವ ನಿಟ್ಟಿನಲ್ಲಿ ಮಾದಕ ವಸ್ತುಗಳ ಮಾರಾಟಗಾರರು, ಬಳಕೆದಾರರ ವಿರುದ್ಧ ಸರ್ಕಾರ ಮತ್ತು ಪೊಲೀಸರು…

ಗಮನಿಸಿ : ಟೊಮೆಟೊ ತಿಂದ್ರೆ `ಕಿಡ್ನಿ ಸ್ಟೋನ್; ಆಗುತ್ತಾ? ಇಲ್ಲಿದೆ ನಿಮ್ಮ ಗೊಂದಲಕ್ಕೆ ಉತ್ತರ

07/12/2025 12:30 PM

ALERT : ‘ಮೊಬೈಲ್’ ಬಳಕೆದಾರರೇ ಎಚ್ಚರ : ಅಪ್ಪಿತಪ್ಪಿಯೂ ಈ ಸಂಖ್ಯೆಯನ್ನು ಡಯಲ್ ಮಾಡಬೇಡಿ.!

07/12/2025 12:23 PM

ಆರೋಗ್ಯ ವಿಮೆ ಪರಿಹಾರ ಪಾವತಿಯಲ್ಲಿ ಸೇವಾ ನ್ಯೂನ್ಯತೆ : ವಿಮಾ ಕಂಪನಿಗೆ ದಂಡ ಸಹಿತ ಪರಿಹಾರ ಪಾವತಿಸಲು ಆದೇಶ

07/12/2025 12:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.