Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಿಜೆಪಿಯವರು ಒಂದೇ ಒಂದು ಮನೆ ಕೊಟ್ಟಿದ್ದರೆ, ಇಂದು ಸಂಜೆಯೇ ರಾಜೀನಾಮೆ ಕೊಡ್ತೇನೆ : ಸಚಿವ ಜಮೀರ್ ಅಹಮದ್ ಸವಾಲು

06/10/2025 3:51 PM

BIG NEWS : ಸಿರಫ್‌ಗಳ ಮಾದರಿ ಸಂಗ್ರಹಿಸಿ ತಪಾಸಣೆ, ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ : ದಿನೇಶ್ ಗುಂಡೂರಾವ್

06/10/2025 3:48 PM

ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಟಿಟಿ ವಾಹನ ಡಿಕ್ಕಿಯಾಗಿ, ಬೈಕ್ ನಲ್ಲಿದ್ದ ದಂಪತಿಗಳು ಸ್ಥಳದಲ್ಲೆ ಸಾವು!

06/10/2025 3:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಸಿರಫ್‌ಗಳ ಮಾದರಿ ಸಂಗ್ರಹಿಸಿ ತಪಾಸಣೆ, ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ : ದಿನೇಶ್ ಗುಂಡೂರಾವ್
KARNATAKA

BIG NEWS : ಸಿರಫ್‌ಗಳ ಮಾದರಿ ಸಂಗ್ರಹಿಸಿ ತಪಾಸಣೆ, ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ : ದಿನೇಶ್ ಗುಂಡೂರಾವ್

By kannadanewsnow0506/10/2025 3:48 PM

ಬೆಂಗಳೂರು : ದೇಶದ ಬೇರೆ ರಾಜ್ಯಗಳಲ್ಲಿ ಕಾಫ್‌ ಸಿರಫ್‌ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಹಾಸನದ ಚೆನ್ನರಾಯಪಟ್ಟಣದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕಳಪೆ ಕಾಫ್ ಸಿರಫ್ ಕರ್ನಾಟಕ ರಾಜ್ಯದಲ್ಲಿ ಸರಬರಾಜು ಆಗಿಲ್ಲ ಎಂದು ಸ್ಪಷ್ಟಪಡಿಸಿದರು.

ಮುನ್ನೆಚ್ವರಿಕೆ ಕ್ರಮವಾಗಿ ಎಲ್ಲಾ ಕಂಪನಿಗಳ ಕಾಫ್‌ ಸಿರಫ್‌ಗಳ ಮಾದರಿ ಸಂಗ್ರಹಿಸಿ ತಪಾಸಣೆಗೆ ಒಳಪಡಿಸಲಾಗುತ್ತಿದೆ. ರಾಜ್ಯದಲ್ಲಿಯ ಕಾಫ್‌ ಸಿರಫ್‌ಗಳ ಟೆಸ್ಟ್‌ಗೆ ಇಲಾಖೆ ಮುಂಜಾಗ್ರತ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ಈ ಮೊದಲಿನಿಂದಲು ಔಷಧಿ ನಿಯಂತ್ರಣ ಇಲಾಖೆ ಎಚ್ಚರಿಕೆ ವಹಿಸಿದೆ. ಹೆಚ್ಚಿನ ಔಷಧಿಗಳನ್ನು ತಪಾಸಣೆಗೆ ಒಳಪಡಿಸುತ್ತಿದ್ದು, ಇದರಲ್ಲಿ ಕರ್ನಾಟಕ ದೇಶದಲ್ಲೇ ಮುಂಚೂಣಿಯಲ್ಲಿದೆ ಎಂದು ತಿಳಿಸಿದರು.

ರಾಜ್ಯ ಆರೋಗ್ಯ ಇಲಾಖೆಯಿಂದ ಕಾಫ್‌ ಸಿರಫ್‌ ಬಳಕೆ ಬಗ್ಗೆ ಮಾರ್ಗಸೂಚಿ ಬಿಡುಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈಗಾಗಲೇ ಬೇರೆ ಬೇರೆ ಕಂಪನಿಗಳ ಎಲ್ಲಾ ಕಾಫ್‌ ಸಿರಫ್‌ಗಳ ಮಾದರಿ ಸಂಗ್ರಹಿಸಿ ತಪಾಸಣೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಕರ್ನಾಟಕದಲ್ಲಿ ಸರಬರಾಜು ಆಗಿಲ್ಲ

ಬೇರೆ ರಾಜ್ಯಗಳಲ್ಲಿ ಮಕ್ಕಳ ಸಾವಿಗೆ ಕಾರಣವಾಗಿರುವ ಕಾಫ್‌ ಸಿರಫ್‌ ಕರ್ನಾಟಕದಲ್ಲಿ ಸರಬರಾಜು ಆಗಿಲ್ಲ. ಹಾಗಾಗಿ ಇಲ್ಲಿ ಯಾವುದೇ ಅನಾಹುತ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ ಆರೋಗ್ಯ ಸಚಿವರು, ಔಷಧಿ ತಯಾರಿಕಾ ಘಟಕಗಳ ಬೇಜವಾಬ್ದಾರಿಯಿಂದಾಗಿ ತಮಿಳುನಾಡು, ಮಧ್ಯಪ್ರದೇಶ, ಒಡಿಶಾ, ರಾಜಸ್ಥಾನ, ಪುದುಚೆರಿ ಭಾಗದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಿದರು.

ಪೋಷಕರು ಎಚ್ಚರಿಕೆ ವಹಿಸಬೇಕು

ರಾಜ್ಯದಲ್ಲಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಯಾವುದೇ ಸಿರಫ್‌ ಕುಡಿಸುವಾಗಲೂ ಪೋಷಕರು ಬಹಳ ಎಚ್ಚರಿಕೆ ವಹಿಸಬೇಕು. ಕಾಫ್‌ ಸಿರಫ್‌ ಸೇವನೆ ಕಡಿಮೆ ಮಾಡಬೇಕೆಂದು ಸಲಹೆ ನೀಡಿದರು.

ಕೇಂದ್ರಕ್ಕೆ ಪತ್ರ ಬರೆದಿದ್ದೆ

ಕೆಲ ಔಷಧಿಗಳ ಕಲಬೆರಕೆ, ನಕಲಿ ಔಷಧಿ ಮತ್ತು ತಪಾಸಣೆ ಕುರಿತಂತೆ ಈ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೆ. ಯಾವುದೇ ಡ್ರಗ್ಸ್‌ ಕಲಬೆರಕೆ ಎಂದು ಗೊತ್ತಾದಲ್ಲಿ ತ್ವರಿತವಾಗಿ ದೇಶಾದ್ಯಂತ ಮಾಹಿತಿ ರವಾನೆ-ವಿನಿಮಯಕ್ಕೆ ಪ್ರತ್ಯೇಕ ʼವೆಬ್‌ಸೈಟ್‌ʼ ರಚಿಸುವಂತೆ ಕೇಂದ್ರ ಆರೋಗ್ಯ ಸಚಿವರ ಗಮನ ಸೆಳೆದಿದ್ದೆ. ಔಷಧಿಗಳ ಕಲಬೆರಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ಕಠಿಣ ಕಾನೂನನ್ನು ಜಾರಿಗೆ ತರುವ ಅವಶ್ಯಕತೆ ಇದೆ. ಅಲ್ಲದೇ ರಾಜ್ಯ ರಾಜ್ಯಗಳ ನಡುವೆ ಮಾಹಿತಿ ಸಿಗುವಂತಹ ವ್ಯವಸ್ಥೆ ಜಾರಿಗೆ ತರುವತ್ತ ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಆರೋಗ್ಯ ಸಚಿವ ಗುಂಡೂರಾವ್‌ ಇದೇ ವೇಳೆ ಹೇಳಿದರು.

Share. Facebook Twitter LinkedIn WhatsApp Email

Related Posts

ಬಿಜೆಪಿಯವರು ಒಂದೇ ಒಂದು ಮನೆ ಕೊಟ್ಟಿದ್ದರೆ, ಇಂದು ಸಂಜೆಯೇ ರಾಜೀನಾಮೆ ಕೊಡ್ತೇನೆ : ಸಚಿವ ಜಮೀರ್ ಅಹಮದ್ ಸವಾಲು

06/10/2025 3:51 PM1 Min Read

ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಟಿಟಿ ವಾಹನ ಡಿಕ್ಕಿಯಾಗಿ, ಬೈಕ್ ನಲ್ಲಿದ್ದ ದಂಪತಿಗಳು ಸ್ಥಳದಲ್ಲೆ ಸಾವು!

06/10/2025 3:34 PM1 Min Read

BREAKING : ಮಕ್ಕಳ ಸರಣಿ ಸಾವು ಕೇಸ್ : ರಾಜ್ಯದಲ್ಲಿ ಈ ಎರಡು ಸಿರಪ್‌ಗಳ ಮಾರಾಟ & ಖರೀದಿ ನಿಷೇಧಿಸಿದ ಸರ್ಕಾರ

06/10/2025 3:31 PM1 Min Read
Recent News

ಬಿಜೆಪಿಯವರು ಒಂದೇ ಒಂದು ಮನೆ ಕೊಟ್ಟಿದ್ದರೆ, ಇಂದು ಸಂಜೆಯೇ ರಾಜೀನಾಮೆ ಕೊಡ್ತೇನೆ : ಸಚಿವ ಜಮೀರ್ ಅಹಮದ್ ಸವಾಲು

06/10/2025 3:51 PM

BIG NEWS : ಸಿರಫ್‌ಗಳ ಮಾದರಿ ಸಂಗ್ರಹಿಸಿ ತಪಾಸಣೆ, ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ : ದಿನೇಶ್ ಗುಂಡೂರಾವ್

06/10/2025 3:48 PM

ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಟಿಟಿ ವಾಹನ ಡಿಕ್ಕಿಯಾಗಿ, ಬೈಕ್ ನಲ್ಲಿದ್ದ ದಂಪತಿಗಳು ಸ್ಥಳದಲ್ಲೆ ಸಾವು!

06/10/2025 3:34 PM

BREAKING : ಮಕ್ಕಳ ಸರಣಿ ಸಾವು ಕೇಸ್ : ರಾಜ್ಯದಲ್ಲಿ ಈ ಎರಡು ಸಿರಪ್‌ಗಳ ಮಾರಾಟ & ಖರೀದಿ ನಿಷೇಧಿಸಿದ ಸರ್ಕಾರ

06/10/2025 3:31 PM
State News
KARNATAKA

ಬಿಜೆಪಿಯವರು ಒಂದೇ ಒಂದು ಮನೆ ಕೊಟ್ಟಿದ್ದರೆ, ಇಂದು ಸಂಜೆಯೇ ರಾಜೀನಾಮೆ ಕೊಡ್ತೇನೆ : ಸಚಿವ ಜಮೀರ್ ಅಹಮದ್ ಸವಾಲು

By kannadanewsnow0506/10/2025 3:51 PM KARNATAKA 1 Min Read

ಕೊಪ್ಪಳ : ಬಿಜೆಪಿ ಒಂದೆ ಒಂದು ಮನೆ ಕೊಟ್ಟಿದ್ರೆ ರಾಜೀನಾಮೆ ಕೊಡುತ್ತೇನೆ ಎಂದು ಕೊಪ್ಪಳದಲ್ಲಿ ವಸತಿ ಸಚಿವ ಜಮೀರ್ ಅಹ್ಮದ್…

BIG NEWS : ಸಿರಫ್‌ಗಳ ಮಾದರಿ ಸಂಗ್ರಹಿಸಿ ತಪಾಸಣೆ, ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ : ದಿನೇಶ್ ಗುಂಡೂರಾವ್

06/10/2025 3:48 PM

ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಟಿಟಿ ವಾಹನ ಡಿಕ್ಕಿಯಾಗಿ, ಬೈಕ್ ನಲ್ಲಿದ್ದ ದಂಪತಿಗಳು ಸ್ಥಳದಲ್ಲೆ ಸಾವು!

06/10/2025 3:34 PM

BREAKING : ಮಕ್ಕಳ ಸರಣಿ ಸಾವು ಕೇಸ್ : ರಾಜ್ಯದಲ್ಲಿ ಈ ಎರಡು ಸಿರಪ್‌ಗಳ ಮಾರಾಟ & ಖರೀದಿ ನಿಷೇಧಿಸಿದ ಸರ್ಕಾರ

06/10/2025 3:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.