Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ: ಸಿಎಂ ಸಿದ್ದರಾಮಯ್ಯ

07/10/2025 1:27 PM

ಬುರುಡೆ ಗ್ಯಾಂಗ್ ಜೊತೆ ಸೇರಿಕೊಂಡು ತಪ್ಪು ಮಾಡಿದೆ : ಧರ್ಮಸ್ಥಳಕ್ಕೆ ಹೋಗಿ ಕ್ಷಮೆಯಾಚಿಸುತ್ತೇನೆ ಎಂದ ಸುಜಾತಾ ಭಟ್

07/10/2025 1:20 PM

2024-25ರಲ್ಲಿ ಭಾರತ 1.20 ಲಕ್ಷ ಕೋಟಿ ರೂ.ಗಳ ಮಿಲಿಟರಿ ಯಂತ್ರಾಂಶವನ್ನು ಖರೀದಿಸಿದೆ: ರಾಜನಾಥ್ ಸಿಂಗ್

07/10/2025 1:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜಾತಿಗಣತಿ ಸಮೀಕ್ಷೆ ಹಿನ್ನಲೆ: ರಾಜ್ಯದ ಸರ್ಕಾರಿ, ಅನುದಾನಿತ ಶಾಲೆಗಳ ಸಮಯ ಬದಲಾವಣೆ ನಿಗದಿ
KARNATAKA

ಜಾತಿಗಣತಿ ಸಮೀಕ್ಷೆ ಹಿನ್ನಲೆ: ರಾಜ್ಯದ ಸರ್ಕಾರಿ, ಅನುದಾನಿತ ಶಾಲೆಗಳ ಸಮಯ ಬದಲಾವಣೆ ನಿಗದಿ

By kannadanewsnow0907/10/2025 1:15 PM

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆಯನ್ನು ಕೈಗೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಸಮಯ ಮರು ನಿಗದಿ ಮಾಡಿ, ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದಂತ ಸುರಲ್ಕರ್ ವಿಕಾಸ ಕಿಶೋರ್ ಅವರು ಜ್ಞಾಪನಾದೇಶ ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಡಿಜಿಟಲ್ ವಿಧಾನದಲ್ಲಿ ಕೈಗೊಳ್ಳುವುದು ಮತ್ತು ಸಮೀಕ್ಷೆಯನ್ನು ಡಿಜಿಟಲ್ ವಿಧಾನದಲ್ಲಿ ಮಾಡಲು ತಂತ್ರಾಂಶದ ಅಭಿವೃದ್ಧಿ ಮತ್ತು ಉಸ್ತುವಾರಿಯನ್ನು ಕೈಗೊಳ್ಳುವುದು, ಹಿಂದುಳಿದ ವರ್ಗಗಳ ಆಯೋಗವು ನಡೆಸುವ ಸಮೀಕ್ಷೆಗೆ ಸಾರ್ವಜನಿಕವಾಗಿ ಲಭ್ಯವಿರುವ ಚುನಾವಣಾ ಮತದಾರರ ಪಟ್ಟಿಯನ್ನು ಉಪಯೋಗಿಸಿಕೊಂಡು ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಲು ಅಧಿಕಾರಿಗಳನ್ನು ಹಾಗೂ ಶಿಕ್ಷಕರನ್ನು ಹಾಗೂ ಇತರೆ ಸಿಬ್ಬಂದಿಗಳು ಕೆಲಸ ನಿರ್ವಹಿಸುವಂತೆ ಆದೇಶಿಸಿದ. ಸದರಿ ಆದೇಶದಂತೆ ಸಮೀಕ್ಷೆಯನ್ನು ನಡೆಸಲಾಗುತ್ತಿದೆ.

ಸಮೀಕ್ಷೆಯನ್ನು ಗ್ರೇಟರ್ ಬೆಂಗಳೂರು ಆಥಾರಿಟಿ ವ್ಯಾಪ್ತಿಯಲ್ಲಿ ದಿನಾಂಕ: 04-10-2025 ರಿಂದ ಪ್ರಾರಂಭಿಸಲಾಗಿದ್ದು, ರಾಜ್ಯದ ಇತರ ಭಾಗಗಳಲ್ಲಿ ದಿನಾಂಕ: 22-09-2025 ರಿಂದ ಪ್ರಾರಂಭಿಸಲಾಗಿದೆ.

ಸಮೀಕ್ಷೆಯು ಪೂರ್ಣಗೊಳ್ಳಲು ಹಚ್ಚಿನ ಕಾಲಾವಕಾಶದ ಅಗತ್ಯವಿರುವುದನ್ನು ಮನಗೊಂಡು, ದಿನಾಂಕ: 26.09.2025 ರಂದು ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಿರುವಂತೆ ಸಮೀಕ್ಷೆಯು ರಜಾ ಅವಧಿಯ ನಂತರವು ಮುಂದುವರೆಯುವ ಸಾಧ್ಯತೆ ಇರುವುದರಿಂದ ರಜಾ ಅವಧಿಯ ನಂತರ ಶಾಲೆ ನಡೆಯುವ ಸಮಯವನ್ನು ಪರೀಷ್ಕರಿಸಿ ಆದೇಶಿಸುವುದು ಸೂಕ್ತ ಎಂದು ತೀರ್ಮಾನಿಸಿ ಅದರಂತೆ ಕ್ರಮವಹಿಸಲು ನಿರ್ಧರಿಸಲಾಯಿತು.

ಸಮೀಕ್ಷೆ ಪೂರ್ಣಗೊಳಿಸಲು ಇನ್ನೂ ಹೆಚ್ಚಿನ ಕಾಲಾವಕಾಶದ ಅಗತ್ಯವಿರುವುದಾಗಿ ತಿಳಿಸಿರುವ ಹಿನ್ನೆಲೆಯಲ್ಲಿ, ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಮಧ್ಯವಾರ್ಷಿಕ ರಜಾ ದಿನಗಳ ನಂತರ ಶಾಲಾ ತರಗತಿಗಳು ಸಮೀಕ್ಷೆಯ ಕಾರಣದಿಂದ ಕುಂಠಿತವಾಗಬಾರದು ಎನ್ನುವ ದೃಷ್ಟಿಯಿಂದ ಈ ಕೆಳಗಿನ ಸೂಚನೆಗಳಂತ ಕ್ರಮವಹಿಸುವುದು.

ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ: ಈ ವ್ಯಾಪ್ತಿಯಲ್ಲಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ದಿ: 8-10-2025 ರಿಂದ 24-10-2025 ರವರೆಗೆ ಶಾಲಾ ತರಗತಿಗಳನ್ನು ಬೆಳಿಗೆ 8.00 ಗಂಟೆಯಿಂದ ಅಪರಾಹ್ನ 1.00 ಗಂಟೆಯವರೆಗೆ ನಿರ್ವಹಿಸಿ, ನಂತರದ ಅವಧಿಯಲ್ಲಿ ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಶಿಕ್ಷಕರು ಸಮೀಕ್ಷಾ ಕಾರ್ಯವನ್ನು ನಿರ್ವಹಿಸುವುದು. ಸಮೀಕ್ಷೆಯನ್ನು ಕೈಗೊಂಡು ದಿನಾಂಕ: 24-10-2025 ರ ಅಂತ್ಯದೊಳಗೆ ಪೂರ್ಣಗೊಳಿಸುವುದು. • ರಾಜ್ಯದ ಇತರ ಭಾಗಗಳಲ್ಲಿ (ಗ್ರೇಟರ್ ಬೆಂಗಳೂರು ವ್ಯಾಪ್ತಿ ಹೊರತುಪಡಿಸಿ ಉಳಿದ ಭಾಗಗಳು): ಈ ವ್ಯಾಪ್ತಿಯಲ್ಲಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ದಿ: 8-10-2025 ರಿಂದ 12-10-2025 ರವರೆಗೆ ಶಾಲಾ ತರಗತಿಗಳನ್ನು ಬೆಳಿಗ್ಗೆ 8.00 ಗಂಟೆಯಿಂದ ಅಪರಾಹ್ನ, 1.00 ಗಂಟೆಯವರೆಗೆ ನಿರ್ವಹಿಸಿ, ನಂತರದ ಅವಧಿಯಲ್ಲಿ ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಶಿಕ್ಷಕರು ಸಮೀಕ್ಷಾ ಕಾರ್ಯವನ್ನು ನಿರ್ವಹಿಸುವುದು. ಸಮೀಕ್ಷೆಯನ್ನು ರಜಾ ದಿನಗಳಲ್ಲಿಯೂ ಕೈಗೊಂಡು ದಿನಾಂಕ: 12-10-2025 ರ ಅಂತ್ಯದೊಳಗೆ ಪೂರ್ಣಗೊಳಿಸುವುದು. ಈ ಎಲ್ಲ ಅಂಶಗಳಂತೆ ರಾಜ್ಯದ ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಕಾರ್ಯನಿರ್ವಹಿಸುವಂತೆ ಸೂಚಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ: ಸಿಎಂ ಸಿದ್ದರಾಮಯ್ಯ

07/10/2025 1:27 PM1 Min Read

ಬುರುಡೆ ಗ್ಯಾಂಗ್ ಜೊತೆ ಸೇರಿಕೊಂಡು ತಪ್ಪು ಮಾಡಿದೆ : ಧರ್ಮಸ್ಥಳಕ್ಕೆ ಹೋಗಿ ಕ್ಷಮೆಯಾಚಿಸುತ್ತೇನೆ ಎಂದ ಸುಜಾತಾ ಭಟ್

07/10/2025 1:20 PM1 Min Read

ಸಾರ್ವಜನಿಕರೇ ಗಮನಿಸಿ : ನಿಮ್ಮ ಬಳಿ ಈ 8 `ಕಾರ್ಡ್’ಗಳಿದ್ರೆ ಉಚಿತ ಚಿಕಿತ್ಸೆಯಿಂದ ಶಿಕ್ಷಣದವರೆಗೆ ಸಿಗಲಿವೆ ಹಲವು ಸೌಲಭ್ಯಗಳು.!

07/10/2025 1:16 PM3 Mins Read
Recent News

ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ: ಸಿಎಂ ಸಿದ್ದರಾಮಯ್ಯ

07/10/2025 1:27 PM

ಬುರುಡೆ ಗ್ಯಾಂಗ್ ಜೊತೆ ಸೇರಿಕೊಂಡು ತಪ್ಪು ಮಾಡಿದೆ : ಧರ್ಮಸ್ಥಳಕ್ಕೆ ಹೋಗಿ ಕ್ಷಮೆಯಾಚಿಸುತ್ತೇನೆ ಎಂದ ಸುಜಾತಾ ಭಟ್

07/10/2025 1:20 PM

2024-25ರಲ್ಲಿ ಭಾರತ 1.20 ಲಕ್ಷ ಕೋಟಿ ರೂ.ಗಳ ಮಿಲಿಟರಿ ಯಂತ್ರಾಂಶವನ್ನು ಖರೀದಿಸಿದೆ: ರಾಜನಾಥ್ ಸಿಂಗ್

07/10/2025 1:20 PM

ಸಾರ್ವಜನಿಕರೇ ಗಮನಿಸಿ : ನಿಮ್ಮ ಬಳಿ ಈ 8 `ಕಾರ್ಡ್’ಗಳಿದ್ರೆ ಉಚಿತ ಚಿಕಿತ್ಸೆಯಿಂದ ಶಿಕ್ಷಣದವರೆಗೆ ಸಿಗಲಿವೆ ಹಲವು ಸೌಲಭ್ಯಗಳು.!

07/10/2025 1:16 PM
State News
KARNATAKA

ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ: ಸಿಎಂ ಸಿದ್ದರಾಮಯ್ಯ

By kannadanewsnow0907/10/2025 1:27 PM KARNATAKA 1 Min Read

ಬೆಂಗಳೂರು : ರಾಮಾಯಣ ದಂತಹ ಮಹಾನ್ ಗ್ರಂಥವನ್ನು ರಚಿಸಿದ ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ ಎಂದು ಮುಖ್ಯಮಂತ್ರಿ…

ಬುರುಡೆ ಗ್ಯಾಂಗ್ ಜೊತೆ ಸೇರಿಕೊಂಡು ತಪ್ಪು ಮಾಡಿದೆ : ಧರ್ಮಸ್ಥಳಕ್ಕೆ ಹೋಗಿ ಕ್ಷಮೆಯಾಚಿಸುತ್ತೇನೆ ಎಂದ ಸುಜಾತಾ ಭಟ್

07/10/2025 1:20 PM

ಸಾರ್ವಜನಿಕರೇ ಗಮನಿಸಿ : ನಿಮ್ಮ ಬಳಿ ಈ 8 `ಕಾರ್ಡ್’ಗಳಿದ್ರೆ ಉಚಿತ ಚಿಕಿತ್ಸೆಯಿಂದ ಶಿಕ್ಷಣದವರೆಗೆ ಸಿಗಲಿವೆ ಹಲವು ಸೌಲಭ್ಯಗಳು.!

07/10/2025 1:16 PM

ಜಾತಿಗಣತಿ ಸಮೀಕ್ಷೆ ಹಿನ್ನಲೆ: ರಾಜ್ಯದ ಸರ್ಕಾರಿ, ಅನುದಾನಿತ ಶಾಲೆಗಳ ಸಮಯ ಬದಲಾವಣೆ ನಿಗದಿ

07/10/2025 1:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.