Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಟಾಟಾ ಟ್ರಸ್ಟ್’ಗಳಲ್ಲಿ ಉದ್ವಿಗ್ನತೆ ಹೆಚ್ಚಳದ ನಡುವೆ ಸರ್ಕಾರ ಮಧ್ಯಪ್ರವೇಶ ಸಾಧ್ಯತೆ : ವರದಿ

07/10/2025 6:14 PM

ಬೆಂಗಳೂರು–ಬೆಳಗಾವಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭ

07/10/2025 6:10 PM

BREAKING: ‘ಜಾಲಿವುಡ್‌ ಸ್ಟುಡಿಯೋಸ್‌’ಗೆ ‘ಬೀಗ ಮುದ್ರೆ’: ಖ್ಯಾತ ಕನ್ನಡದ ‘ಬಿಗ್‌ ಬಾಸ್‌ ಶೋ’ ಸ್ಥಗಿತ? | BBK12

07/10/2025 6:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿಕ್ಷಕರ ಸಂಘದ ಮನವಿ ಮೇರೆಗೆ 10 ದಿನಗಳ ಕಾಲ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ: ಡಿಸಿಎಂ ಡಿ.ಕೆ. ಶಿವಕುಮಾರ್
KARNATAKA

ಶಿಕ್ಷಕರ ಸಂಘದ ಮನವಿ ಮೇರೆಗೆ 10 ದಿನಗಳ ಕಾಲ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ: ಡಿಸಿಎಂ ಡಿ.ಕೆ. ಶಿವಕುಮಾರ್

By kannadanewsnow0907/10/2025 5:59 PM

ಬೆಂಗಳೂರು : “ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪೂರ್ಣಗೊಳಿಸಲು ಹೆಚ್ಚಿನ ಕಾಲಾವಕಾಶ ಬೇಕೆನ್ನುವ ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕಕ್ಷಕರ ಸಂಘದ ಮನವಿ ಮೇರೆಗೆ ಇದೇ ತಿಂಗಳು 18 ರವರೆಗೆ ಅಂದರೆ 10 ದಿನಗಳ ಕಾಲ ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಶಾಲೆಗಳಿಗೆ ಸರ್ಕಾರ ರಜೆ ಘೋಷಿಸಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕರ್ನಾಟಕ ರಾಜ್ಯ ಸಾಮಾಜಿಕ ಮತ್ತು ಶೈಕ್ಷಣಿಕ ಆಯೋಗವು ನಡೆಸುತ್ತಿರುವ ಸಮೀಕ್ಷೆ ಪ್ರಗತಿ ಕುರಿತು ವಿಧಾನಸೌಧದಲ್ಲಿ ಮಂಗಳವಾರ ನಡೆದ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು.

“ರಾಜ್ಯಾದ್ಯಂತ ನಡೆಯುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ಕುರಿತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಶೇ.90ರಷ್ಟು ಜನರು ಸಮೀಕ್ಷೆಗೆ ಸಹಕಾರ ನೀಡಿದ್ದಾರೆ. ಸರ್ಕಾರದ ಪರವಾಗಿ ಅವರಿಗೆ ಅಭಿನಂದಿಸುತ್ತೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ತರಬೇತಿ ಹಾಗೂ ಚುನಾವಣಾ ಆಯೋಗದ ಕೆಲಸಗಳ ಹಿನ್ನೆಲೆಯಲ್ಲಿ ಸಮೀಕ್ಷೆಯನ್ನು ಸ್ವಲ್ಪ ತಡವಾಗಿ ಆರಂಭಿಸಿದ್ದೇವೆ. ಈ ಭಾಗದಲ್ಲಿ ಸಮೀಕ್ಷೆ ಮಂದಗತಿಯಲ್ಲಿದ್ದು, ಶೇ.25ರಷ್ಟು ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಐದೂ ಪಾಲಿಕೆ ಆಯುಕ್ತರು ಹಾಗೂ ಶಿಕ್ಷಣ ಇಲಾಖೆಯ ಜತೆಗೆ ಸಭೆ ಮಾಡಿ ಚರ್ಚೆ ಮಾಡಿದ್ದೇವೆ” ಎಂದು ತಿಳಿಸಿದರು.

“ರಾಜ್ಯದಲ್ಲಿರುವ ಎಲ್ಲಾ ಜನರಿಗೆ ನ್ಯಾಯ ಒದಗಿಸಿಕೊಡಲು ಸರ್ಕಾರ ಸಮೀಕ್ಷೆ ನಡೆಸುತ್ತಿದೆ. ಬೆಂಗಳೂರು ನಗರದಲ್ಲಿರುವ ಜನರು ಈ ಸಮೀಕ್ಷೆಗೆ ಸಂಪೂರ್ಣ ಸಹಕಾರ ನೀಡಬೇಕು. ಈ ಸಮೀಕ್ಷೆಯಲ್ಲಿ ಆನ್ ಲೈನ್ ಮೂಲಕ ಭಾಗವಹಿಸಿಯೂ ಸಾರ್ವಜನಿಕರು ಮಾಹಿತಿ ಸಲ್ಲಿಸಬಹುದು. ನಿಮಗೆ ಇಚ್ಛೆಯಿರುವಷ್ಟು ಮಾಹಿತಿ ನೀಡಬಹುದು. ಇಲ್ಲಿ ಸರ್ಕಾರ ಹೆಚ್ಚಿನ ಒತ್ತಡ ಹಾಕುವುದಿಲ್ಲ” ಎಂದು ತಿಳಿಸಿದರು.

“ಗ್ರಾಮೀಣ ಭಾಗದ ಜನರ ಬದುಕಿನ ಪ್ರಗತಿ ಬಗ್ಗೆ ಅರಿಯಲು ಕೆಲವು ಪ್ರಶ್ನೆಗಳನ್ನು ಸೇರಿಸಲಾಗಿದೆ. ಅನೇಕರು ಗ್ರಾಮೀಣ ಭಾಗದಿಂದ ಬಂದು ಇಲ್ಲಿ ವಾಸವಾಗಿದ್ದಾರೆ. ಇವರ ಜೀವನದಲ್ಲಿ ಶೈಕ್ಷಣಿಕ ಪರಿಸ್ಥಿತಿ, ಆರ್ಥಿಕ ಶಕ್ತಿ ಬಗ್ಗೆ ತಿಳಿಯಲು ಸರ್ಕಾರ ಪ್ರಯತ್ನಿಸುತ್ತಿದೆ. ಇದಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡುತ್ತೇವೆ. ಇನ್ನು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದವರು ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ ಅವರ ನೇತೃತ್ವದಲ್ಲಿ ಸಿಎಂ ಹಾಗೂ ನನ್ನನ್ನು ಭೇಟಿ ಮಾಡಿ ತಮ್ಮ ಮನವಿ ನೀಡಿದ್ದಾರೆ. ಈ ಸಮೀಕ್ಷೆಯಲ್ಲಿ ಭಾಗವಹಿಸುತ್ತೇವೆ, ನಮಗೆ ಸ್ವಲ್ಪ ಕಾಲಾವಕಾಶ ಬೇಕು ಎಂದು ಕೋರಿದ್ದಾರೆ. ಇದು ಖಾಸಗಿ ಹಾಗೂ ಪಿಯುಸಿಗಳಿಗೆ ಅನ್ವಯವಾಗುವುದಿಲ್ಲ” ಎಂದರು.

ನಾವು ಯಾರನ್ನೂ ವಿಭಜಿಸುವುದಿಲ್ಲ:

ಲಿಂಗಾಯತ ಧರ್ಮದ ವಿಚಾರವಾಗಿ ಕಾಂಗ್ರೆಸ್ ನಲ್ಲೇ ಭಿನ್ನಮತವಿದೆ ಎಂದು ಹೇಳಿದಾಗ, “ನಾವು ಯಾರನ್ನೂ ವಿಭಜಿಸುವುದಿಲ್ಲ. ಈ ವಿಚಾರ ಆ ಸಮಾಜಕ್ಕೆ ಹಾಗೂ ಜನರಿಗೆ ಬಿಡುತ್ತೇವೆ. ಈ ಸಮುದಾಯದ ವಿಚಾರದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ. ನಾವು ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ವಿಚಾರವಾಗಿ ಮಾತ್ರ ಅವರ ಸಮುದಾಯದ ಗುರುತು ಕೇಳುತ್ತಿದ್ದೇವೆ. ಇದರ ಹೊರತಾಗಿ ನಮ್ಮ ಮುಂದೆ ಬೇರೆ ಯಾವುದೇ ಆಲೋಚನೆಗಳಿಲ್ಲ. ಅವುಗಳ ಬಗ್ಗೆ ನಾವು ಚಿಂತಿಸುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

Share. Facebook Twitter LinkedIn WhatsApp Email

Related Posts

ಬೆಂಗಳೂರು–ಬೆಳಗಾವಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭ

07/10/2025 6:10 PM1 Min Read

BREAKING: ‘ಜಾಲಿವುಡ್‌ ಸ್ಟುಡಿಯೋಸ್‌’ಗೆ ‘ಬೀಗ ಮುದ್ರೆ’: ಖ್ಯಾತ ಕನ್ನಡದ ‘ಬಿಗ್‌ ಬಾಸ್‌ ಶೋ’ ಸ್ಥಗಿತ? | BBK12

07/10/2025 6:05 PM1 Min Read

BREAKING: ಕನ್ನಡ ಖ್ಯಾತ ರಿಯಾಲಿಟಿ ಶೋ ‘ಬಿಗ್ ಬಾಸ್’ ಬಂದ್: ಜಾಲಿವುಡ್ ಡೇಸ್ ಸ್ಟುಡಿಯೋಗೆ ಬೀಗ

07/10/2025 5:57 PM1 Min Read
Recent News

BREAKING : ಟಾಟಾ ಟ್ರಸ್ಟ್’ಗಳಲ್ಲಿ ಉದ್ವಿಗ್ನತೆ ಹೆಚ್ಚಳದ ನಡುವೆ ಸರ್ಕಾರ ಮಧ್ಯಪ್ರವೇಶ ಸಾಧ್ಯತೆ : ವರದಿ

07/10/2025 6:14 PM

ಬೆಂಗಳೂರು–ಬೆಳಗಾವಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭ

07/10/2025 6:10 PM

BREAKING: ‘ಜಾಲಿವುಡ್‌ ಸ್ಟುಡಿಯೋಸ್‌’ಗೆ ‘ಬೀಗ ಮುದ್ರೆ’: ಖ್ಯಾತ ಕನ್ನಡದ ‘ಬಿಗ್‌ ಬಾಸ್‌ ಶೋ’ ಸ್ಥಗಿತ? | BBK12

07/10/2025 6:05 PM

ಶಿಕ್ಷಕರ ಸಂಘದ ಮನವಿ ಮೇರೆಗೆ 10 ದಿನಗಳ ಕಾಲ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ: ಡಿಸಿಎಂ ಡಿ.ಕೆ. ಶಿವಕುಮಾರ್

07/10/2025 5:59 PM
State News
KARNATAKA

ಬೆಂಗಳೂರು–ಬೆಳಗಾವಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭ

By kannadanewsnow0907/10/2025 6:10 PM KARNATAKA 1 Min Read

ಹುಬ್ಬಳ್ಳಿ: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು…

BREAKING: ‘ಜಾಲಿವುಡ್‌ ಸ್ಟುಡಿಯೋಸ್‌’ಗೆ ‘ಬೀಗ ಮುದ್ರೆ’: ಖ್ಯಾತ ಕನ್ನಡದ ‘ಬಿಗ್‌ ಬಾಸ್‌ ಶೋ’ ಸ್ಥಗಿತ? | BBK12

07/10/2025 6:05 PM

ಶಿಕ್ಷಕರ ಸಂಘದ ಮನವಿ ಮೇರೆಗೆ 10 ದಿನಗಳ ಕಾಲ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ: ಡಿಸಿಎಂ ಡಿ.ಕೆ. ಶಿವಕುಮಾರ್

07/10/2025 5:59 PM

BREAKING: ಕನ್ನಡ ಖ್ಯಾತ ರಿಯಾಲಿಟಿ ಶೋ ‘ಬಿಗ್ ಬಾಸ್’ ಬಂದ್: ಜಾಲಿವುಡ್ ಡೇಸ್ ಸ್ಟುಡಿಯೋಗೆ ಬೀಗ

07/10/2025 5:57 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.