Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Republic Day 2026: ಕರ್ತವ್ಯ ಪಥದಲ್ಲಿ ‘ಆಪರೇಷನ್ ಸಿಂಧೂರ್’ ಪರಾಕ್ರಮ: ಸಶಸ್ತ್ರ ಪಡೆಗಳ ಜಂಟಿ ಶಕ್ತಿಯ ಭವ್ಯ ಪ್ರದರ್ಶನ

25/01/2026 1:01 PM

BREAKING: ಬೆಳಗಾವಿಯಲ್ಲಿ 400 ಕೋಟಿ ರೂ.ದರೋಡೆ ಕೇಸ್ : ಮತ್ತೊಬ್ಬ ಆರೋಪಿ ಅರೆಸ್ಟ್

25/01/2026 12:48 PM

ಅಮೇರಿಕಾದ 3ನೇ ಅತಿದೊಡ್ಡ ಗುರಿ ಈಗ ಸಿಖ್ ಸಮುದಾಯ: ದ್ವೇಷ ತಡೆಗೆ DOJ ಟಾಸ್ಕ್ ಫೋರ್ಸ್ ರಚನೆ

25/01/2026 12:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗಮನಿಸಿ : ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ಇಲ್ಲಿದೆ ಅಪ್ಲಿಕೇಶನ್.!
KARNATAKA

ಗಮನಿಸಿ : ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ಇಲ್ಲಿದೆ ಅಪ್ಲಿಕೇಶನ್.!

By kannadanewsnow5709/10/2025 6:40 AM

ಕರ್ನಾಟಕ ವಿಧಾನ ಪರಿಷತ್ತಿನ  ಪದವೀಧರರ ಕ್ಷೇತ್ರದ ಚುನಾವಣೆ ಸಂಬಂಧ ಮತದಾರ ಪಟ್ಟಿ ತಯಾರಿಕೆ ಪ್ರಕ್ರಿಯೆ ಆರಂಭವಾಗಿದೆ. ನಮೂನೆ-18 ರಲ್ಲಿ ಮತಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ನವೆಂಬರ್ 6 ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಭಾರತ ಚುನಾವಣಾ ಆಯೋಗದ ಸೂಚನೆಯಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ ಸಂಬಂಧ ಮತದಾರ ಪಟ್ಟಿ ತಯಾರಿಕೆಗೆ ವೇಳಾಪಟ್ಟಿ ನಿಗಧಿಪಡಿಸಿದ್ದಾರೆ. 1 ನವೆಂಬರ್ 2025 ಕ್ಕೆ ಇದ್ದಂತೆ ಮತದಾರರ ಪಟ್ಟಿ ಸಿದ್ದಪಡಿಸಲಾಗವುದು. ಈ ಸಂಬಂಧ ಜಿಲ್ಲೆಯ ಎಲ್ಲಾ ತಾಲ್ಲೂಕುಗಳು, ನಗರಸಭೆ ವ್ಯಾಪ್ತಿಯಲ್ಲಿ ಸಹಾಯಕ ಮತದಾರರ ನೊಂದಣಾಧಿಕಾರಿ ಹಾಗೂ ನಿರ್ಧಿಷ್ಟಾಧಿಕಾರಿಗಳನ್ನು ನೇಮಿಸಲಾಗಿದೆ.

ಮತದಾರ ಪಟ್ಟಿ ತಯಾರಿಕೆಗೆ ಸೆ.30 ರಂದು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 15 ರಂದು ಮೊದಲ ಬಾರಿಗೆ ಹಾಗೂ 25 ರಂದು ಎರಡನೇ ಬಾರಿಗೆ ಅಧಿಸೂಚನೆಯನ್ನು ಪತ್ರಿಕೆಗಳಲ್ಲಿ ಪ್ರಕಟಣೆ ನೀಡಲಾಗುವುದು. ನಮೂನೆ-18 ರಲ್ಲಿ ಅರ್ಜಿ ಸಲ್ಲಿಸಲು ನವೆಂಬರ್ 6 ಕಡೆಯ ದಿನವಾಗಿದೆ. ನವೆಂಬರ್ 20 ವರೆಗೆ ಕರಡು ಮತದಾರರ ಪಟ್ಟಿ ಸಿದ್ದಪಡಿಸಲಾಗುವುದು. ನವೆಂಬರ್ 25 ರಂದು ಕರಡು ಪ್ರತಿ ಪ್ರಕಟಿಸಿ ಆಕ್ಷೇಪಣೆ ಆಹ್ವಾನಿಸಲಾಗುವುದು. ಡಿಸೆಂಬರ್ 10 ಆಕ್ಷೇಪಣೆಗಳನ್ನು ಸಲ್ಲಿಸಲು ಕಡೆಯ ದಿನವಾಗಿದೆ. ಡಿಸೆಂಬರ್ 25ರ ಒಳಗೆ ಆಕ್ಷೇಪಣೆಗಳ ವಿಲೇವಾರಿಗೆ ಕ್ರಮ ವಹಿಸಲಾಗುವುದು. ಡಿಸೆಂಬರ್ 30 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು.

ಹೆಸರು ನೊಂದಾಯಿಸಲು ದಾಖಲೆಗಳು ಕಡ್ಡಾಯ

2022ರ ನವಂಬರ್ 1ಕ್ಕೂ ಮುನ್ನ ಯಾವುದೇ ಪದವಿ ಪಡೆದ ಪದವೀಧರರು ಅರ್ಜಿ ಸಲ್ಲಿಸಲು ಅರ್ಹರು

ನಿಗದಿತ ನಮೂನೆಯ ಜೊತೆಗೆ ಗೆಜೆಟೆಡ್ ಅಧಿಕಾರಿಯಂದ ದೃಢೀಕರಿಸಿದ

1- ಆಧಾರ್ ಕಾರ್ಡ್

2-ವೋಟರ್ ಐಡಿ

3-ಎಸ್ ಎಸ್ ಎಲ್ ಸಿ ಅಂಕಪಟ್ಟಿ

4-ಪದವಿ ಪ್ರಮಾಣ ಪತ್ರದ ನಕಲು ಜೊತೆಗೆ

5-ಒಂದು ಪಾಸ್ಪೋರ್ಟ್ ಸೈಜ್ ಫೋಟೋವನ್ನು ಅರ್ಜಿ ಜೊತೆ ಲಗತ್ತಿಸಬೇಕು

6- ಮತದಾರರು ತಮ್ಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ

ಪದವಿಧರ ಕ್ಷೇತ್ರದ ಸಾಮಾನ್ಯ ನಿವಾಸಿಯಾಗಿರಬೇಕು. 1 ನವೆಂಬರ್ 2025 ನಿರ್ಧಿಷ್ಟಪಡಿಸಿದ ಅರ್ಹ ದಿನಾಂಕವಾಗಿದ್ದು, ಇದಕ್ಕೂ ಕನಿಷ್ಟ 3 ವರ್ಷಗಳ ಮೊದಲು ರಾಜ್ಯ ಸರ್ಕಾರ ಅಧಿಸೂಚಿಸಿರುವ ವಿಶ್ವ ವಿದ್ಯಾಲಯದಿಂದ ಪದವಿ ಅಥವಾ ಅದಕ್ಕೆ ಸಮಾನವಾದ ವಿದ್ಯಾರ್ಹತೆ ಹೊಂದಿರಬೇಕು.

ವಿದ್ಯಾರ್ಹತೆಯ ಪ್ರಮಾಣ ಪತ್ರಗಳೊಂದಿಗೆ ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪಾಸ್ ಪೋರ್ಟ್, ಡ್ರೈವಿಂಗ್ ಲೈಸೆನ್ಸ್, ಬ್ಯಾಂಕ್, ಕಿಸಾನ್ ಅಥವಾ ಅಂಚೆ ಕಚೇರಿ ಚಾಲ್ತಿ ಖಾತೆಯ ಪಾಸ್ ಬುಕ್ ಅಥವಾ ಚುನಾವಣೆ ಆಯೋಗ ನಿಗದಿಪಡಿಸಿದ ಇತರೆ ದಾಖಲೆಗಳನ್ನು ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿ ನಮೂನೆ-18 ಅರ್ಜಿಯೊಂದಿಗೆ ವಾಸಸ್ಥಳ ವ್ಯಾಪ್ತಿಯ ಸಹಾಯಕ ಮತದಾರರ ನೋಂದಣಾಧಿಕಾರಿ ಅಥವಾ ನಿರ್ದಿಷ್ಟಪಡಿಸಿದ ಅಧಿಕಾರಿಗಳಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆಯನ್ನು ಚುನಾವಣಾ ಆಯೋಗದ ವೆಬ್‍ಸೈಟ್ http://eci.gov.in/files/category/356-forms-for-registration-in-eroll/ ರಾಜ್ಯ ಚುನಾವಣಾಧಿಕಾರಿಗಳ ಕಚೇರಿ ವೆಬ್‍ಸೈಟ್https://ceo.karnataka.gov.in/20/download-forms/en ಮೂಲಕ ಡೌನ್‍ಲೋಡ್ ಮಾಡಿಕೊಳ್ಳಬಹುದು.

Note: Here is the application to register your name for the voter list of the Graduate Constituency!
Share. Facebook Twitter LinkedIn WhatsApp Email

Related Posts

BREAKING: ಬೆಳಗಾವಿಯಲ್ಲಿ 400 ಕೋಟಿ ರೂ.ದರೋಡೆ ಕೇಸ್ : ಮತ್ತೊಬ್ಬ ಆರೋಪಿ ಅರೆಸ್ಟ್

25/01/2026 12:48 PM2 Mins Read

ALERT : ಅತಿಯಾದ `ಮೊಬೈಲ್’ ಬಳಕೆಯಿಂದ ಯುವಜನರಲ್ಲಿ ಹೆಚ್ಚುತ್ತಿದೆ ಈ ಗಂಭೀರ ಕಾಯಿಲೆ.!

25/01/2026 12:34 PM3 Mins Read

LPG ಸಿಲಿಂಡರ್ ಗ್ರಾಹಕರೇ ಗಮನಿಸಿ : ಜ.31ರೊಳಗೆ ಈ ಕೆಲಸ ಮಾಡದಿದ್ದರೆ ಸಿಗಲ್ಲ ಸಬ್ಸಿಡಿ’ !

25/01/2026 11:47 AM1 Min Read
Recent News

Republic Day 2026: ಕರ್ತವ್ಯ ಪಥದಲ್ಲಿ ‘ಆಪರೇಷನ್ ಸಿಂಧೂರ್’ ಪರಾಕ್ರಮ: ಸಶಸ್ತ್ರ ಪಡೆಗಳ ಜಂಟಿ ಶಕ್ತಿಯ ಭವ್ಯ ಪ್ರದರ್ಶನ

25/01/2026 1:01 PM

BREAKING: ಬೆಳಗಾವಿಯಲ್ಲಿ 400 ಕೋಟಿ ರೂ.ದರೋಡೆ ಕೇಸ್ : ಮತ್ತೊಬ್ಬ ಆರೋಪಿ ಅರೆಸ್ಟ್

25/01/2026 12:48 PM

ಅಮೇರಿಕಾದ 3ನೇ ಅತಿದೊಡ್ಡ ಗುರಿ ಈಗ ಸಿಖ್ ಸಮುದಾಯ: ದ್ವೇಷ ತಡೆಗೆ DOJ ಟಾಸ್ಕ್ ಫೋರ್ಸ್ ರಚನೆ

25/01/2026 12:48 PM

ಕಾಫಿ ಕುಡಿದರೆ ಆಯಸ್ಸು ಹೆಚ್ಚುತ್ತೆ ಅನ್ನೋದು ನಿಜ! ಆದರೆ ಈ ‘ಒಂದು’ ವಿಷಯ ನೆನಪಿರಲಿ

25/01/2026 12:37 PM
State News
KARNATAKA

BREAKING: ಬೆಳಗಾವಿಯಲ್ಲಿ 400 ಕೋಟಿ ರೂ.ದರೋಡೆ ಕೇಸ್ : ಮತ್ತೊಬ್ಬ ಆರೋಪಿ ಅರೆಸ್ಟ್

By kannadanewsnow5725/01/2026 12:48 PM KARNATAKA 2 Mins Read

ಬೆಳಗಾವಿ : ಬೆಳಗಾವಿ ಗಡಿಭಾಗದಲ್ಲಿ ದೇಶದ ಅತೀ ದೊಡ್ಡ ರಾಬರಿ ನಡೆದಿದ್ದು, 400 ಕೋಟಿ ರೂ. ಇದ್ದ 2 ಕಂಟೇನರ್…

ALERT : ಅತಿಯಾದ `ಮೊಬೈಲ್’ ಬಳಕೆಯಿಂದ ಯುವಜನರಲ್ಲಿ ಹೆಚ್ಚುತ್ತಿದೆ ಈ ಗಂಭೀರ ಕಾಯಿಲೆ.!

25/01/2026 12:34 PM

LPG ಸಿಲಿಂಡರ್ ಗ್ರಾಹಕರೇ ಗಮನಿಸಿ : ಜ.31ರೊಳಗೆ ಈ ಕೆಲಸ ಮಾಡದಿದ್ದರೆ ಸಿಗಲ್ಲ ಸಬ್ಸಿಡಿ’ !

25/01/2026 11:47 AM

ಕನ್ನಡದ ಖ್ಯಾತ ಚುಟುಕು ಕವಿ `ಗಣೇಶ್ ವೈದ್ಯ’ ನಿಧನ | Ganesh Vaidya passes away

25/01/2026 11:33 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.