Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈತರಿಗೆ ಉಪಯುಕ್ತ ಮಾಹಿತಿ: ಈ ಸಮಗ್ರ, ಸುಸ್ಥಿತ ಕೃಷಿ ಪದ್ಧತಿ ಅನುಸರಿಸಿ, ಲಕ್ಷಾಂತರ ಆದಾಯ ಗಳಿಸಿ

08/11/2025 6:34 PM

ನೀವು ಅರ್ಜಿ ಸಲ್ಲಿಸಿದ ಪ್ರತಿ 4 ‘ಜಾಬ್’ಗಳಲ್ಲಿ 1 ನಕಲಿ ; ಶಾಕಿಂಗ್ ವರದಿ

08/11/2025 6:12 PM

‘ಬೆಳ್ಳಿ ಫಿಲ್ಲಿಂಗ್’ಗೆ ಗುಡ್ ಬೈ ; 2034ರ ವೇಳೆಗೆ ದಂತವೈದ್ಯಶಾಸ್ತ್ರದಲ್ಲಿ ‘ಪಾದರಸ ಬಳಕೆ’ ಕೊನೆಗೆ ಒಪ್ಪಿಗೆ!

08/11/2025 5:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲೆ ಶೂ ಎಸೆದಿರುವುದು ಮನುವಾದದ ಬೆಂಬಲಿಗರ ಷಡ್ಯಂತ್ರದ ಭಾಗ: MLC ರಮೇಶ್ ಬಾಬು
KARNATAKA

ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲೆ ಶೂ ಎಸೆದಿರುವುದು ಮನುವಾದದ ಬೆಂಬಲಿಗರ ಷಡ್ಯಂತ್ರದ ಭಾಗ: MLC ರಮೇಶ್ ಬಾಬು

By kannadanewsnow0908/10/2025 8:12 PM

ಬೆಂಗಳೂರು: ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲೆ ಶೂ ಎಸೆದಿರುವುದು ಮನುವಾದದ ಬೆಂಬಲಿಗರ ಷಡ್ಯಂತ್ರದ ಭಾಗವಾಗಿದೆ. ದೇಶದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಪ್ರಜಾಪ್ರಭುತ್ವವಾದಿಗಳು, ಸಂವಿಧಾನವಾದಿಗಳು ತಲೆ ತಗ್ಗಿಸುವ ವಿಚಾರ ಇದಾಗಿದೆ. ಈ ಷಡ್ಯಂತ್ರದ ಹಿಂದಿರುವ ಕೈಗಳು ಹೊರಬರಬೇಕು ಅದಕ್ಕಾಗಿ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಹೇಳಿದ್ದಾರೆ.

ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಶೂ ಎಸೆತ ಸಣ್ಣ ಪ್ರಮಾಣದ ಕೃತ್ಯವಲ್ಲ. ಇದರ ಹಿಂದಿರುವ ಕುತಂತ್ರ ಬಹಿರಂಗಗೊಳ್ಳಬೇಕು ಎಂದರೆ ಉನ್ನತ ಮಟ್ಟದ ನ್ಯಾಯಾಂಗ ತನಿಖೆಯಾಗಬೇಕು. ದಲಿತರ ಮೇಲೆ ಆಗುತ್ತಿರುವ ದೌರ್ಜನ್ಯಕ್ಕೆ ಬಿಜೆಪಿ ಮನಸ್ಥಿತಿ ಕಾರಣ. ಹಿಂದುಳಿದ ವರ್ಗಗಳ, ದಲಿತರ ನಾಯಕರು, ಅಧಿಕಾರಿಗಳನ್ನು ಗುರಿ ಮಾಡಿ ಟೀಕೆ ಮಾಡಲಾಗುತ್ತಿದೆ ಎಂದರು.

ದೇಶದ ಇತಿಹಾಸದಲ್ಲಿ ಇಬ್ಬರು ದಲಿತರು ಮಾತ್ರ ಮುಖ್ಯನ್ಯಾಯಧೀಶರಾಗಿ ಕೆಲಸ ಮಾಡಿದ್ದಾರೆ. ಮೊದಲನೆಯದಾಗಿ ಜಸ್ಟೀಸ್ ಬಾಲಕೃಷ್ಣ ಅವರು ಎರಡನೇ ವ್ಯಕ್ತಿಯಾಗಿ ಗವಾಯಿ ಅವರು. ಇವರು ಇಂತಹ ಉನ್ನತ ಸ್ಥಾನಕ್ಕೆ ದಲಿತರು ಹೋಗಿದ್ದಾರೆ ಎಂಬುದನ್ನು ಬಿಜೆಪಿಗೆ ಸಹಿಸಲು ಆಗುತ್ತಿಲ್ಲ. ಇದರ ವಿರುದ್ದ ಬಿಜೆಪಿ ಕೆಲಸ ಮಾಡುತ್ತಿದೆ. ಸುಪ್ರೀಂ ಕೋರ್ಟ್ ಘನತೆ ಉಳಿಯಬೇಕು ಎಂದರೆ ಕೇಂದ್ರ ಸರ್ಕಾರ ಕಠಿಣ ಕ್ರಮ ತಗೆದುಕೊಳ್ಳಬೇಕು ಎಂದು ಹೇಳಿದರು.

ದೇಶದ ಪ್ರಧಾನ ಮಂತ್ರಿಗಳು ಇಡೀ ದೇಶದಲ್ಲಿ ಯಾವುದೇ ಸಣ್ಣ ಘಟನೆಯಾದರೂ ಪ್ರಚಾರದ ಉದ್ದೇಶಕ್ಕಾದರೂ ಟ್ವೀಟ್ ಮಾಡುತ್ತಾರೆ. ಆದರೆ ಶೂ ಎಸೆತ ಘಟನೆಯಾದ ಆರು ಗಂಟೆಗಳ ನಂತರ ಪ್ರತಿಕ್ರಿಯೆ ನೀಡಿದ್ದಾರೆ. ಅಂದರೆ ಇದರಲ್ಲಿ ಇವರ ಪಾತ್ರವೂ ಇದೆಯೇ ಎನ್ನುವ ಅನುಮಾನ ಮೂಡುತ್ತಿದೆ ಎಂದರು.

ಘಟನೆಯಾದ ಸಂಧರ್ಭದಲ್ಲಿ ಮುಖ್ಯನ್ಯಾಯಧೀಶರಾದ ಗವಾಯಿ ಅವರು ಇಂತಹ ಘಟನೆಗಳಿಂದ ನಾನು ವಿಚಲಿತನಾಗುವುದಿಲ್ಲ, ನೀವುಗಳೂ ಸಹ ವಿಚಲಿತರಾಗಬೇಡಿ. ನೀವು ಕಲಾಪ ಮುಂದುವರೆಸಿ ಎಂದು ಸ್ಥಳದಲ್ಲಿದ್ದ ವಕೀಲರಿಗೆ ಅವರು ತಿಳಿಸಿದರು. ಇದು ಅವರ ಮೇಲಿನ ಮೊದಲ ಹಲ್ಲೆ ಪ್ರಕರಣ ಮಾತ್ರವಲ್ಲ ಕೆಲವು ದಿನಗಳ ಹಿಂದೆಯೂ ಹಲ್ಲೆ ಪ್ರಯತ್ನವಾಗಿತ್ತು. ಆದರೂ ಮೋದಿ ಸರ್ಕಾರ ಈ ದೇಶದ ಉನ್ನತ ಸ್ಥಾನದಲ್ಲಿರುವ ದಲಿತ ವ್ಯಕ್ತಿಯ ಮೇಲೆ ಅಸಡ್ಡೆ ಹೊಂದಿದೆ ಎಂದರು.

ಮೋದಿ ಅವರ ಸಂಪುಟದ ಸಹೋದ್ಯೋಗಿಗಳು ಇಂತಹ ಘಟನೆಗೆ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಕಾರಣರಾಗಿದ್ದಾರೆ. ಉಪರಾಷ್ಟ್ರಪತಿ ಚುನಾವಣೆ ವೇಳೆ ಯುಪಿಎ ಅಭ್ಯರ್ಥಿಗಳಾಗಿದ್ದ ಸುದರ್ಶನ ರೆಡ್ಡಿ ಅವರ ಮೇಲೆ ದೇಶದ ಗೃಹಮಂತ್ರಿ ಅಮಿತ್ ಶಾ ಅವರು ನಕ್ಸಲ್ ಎಂದು ಆರೋಪ ಮಾಡಿದರು.

ಸನಾತನಿಗಳು ದಲಿತ, ಹಿಂದುಳಿದ ವರ್ಗಗಳ ಜನರನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಲಾಗುತ್ತಿದೆ. ಬಿಜೆಪಿ ಮುಖಂಡ ಭಾಸ್ಕರ್ ರಾವ್ ಅವರು ಮುಖ್ಯ ನ್ಯಾಯಾಧೀಶರ ಮೇಲೆ ಆದ ದಾಳಿಯನ್ನು ಬೆಂಬಲಿಸಿ ಮಾತನಾಡಿದ್ದಾರೆ. ಇದು ಇವರ ವೈಯಕ್ತಿಕ ಹೇಳಿಕೆ ಮಾತ್ರವಲ್ಲ. ಇದು ಹಿಂದುತ್ವ ಮನುವಾದಿಗಳ, ಬಿಜೆಪಿಯ ಹೇಳಿಕೆಯಾಗಿದೆ ಎಂದರು.

ಗ್ವಾಲಿಯರ್ ಬಾರ್ ಅಸೋಸಿಯೇಶನ್ ಮಾಜಿ ಅಧ್ಯಕ್ಷ ಅನಿಲ್ ಮಿಶ್ರಾ ಎನ್ನುವ ವ್ಯಕ್ತಿ ಅಂಬೇಡ್ಕರ್ ಅವರು ಕೊಳಕು ಮನಸ್ಸಿನ ವ್ಯಕ್ತಿ ಎಂದು ಹೇಳಿದ್ದಾರೆ. ಅಂದರೆ ಇವರೆಲ್ಲರೂ ಬಿಜೆಪಿಯ ಮನಸ್ಥಿತಿಯನ್ನು ಈ ರೀತಿ ಅಭಿಪ್ರಾಯಗಳನ್ನು ಹೊರಹಾಕಿದ್ದಾರೆ. ಬಿಜೆಪಿ ಸಿದ್ದಾಂತ ಎಂದಿಗೂ ಪರಿಶಿಷ್ಟ ಜಾತಿ, ಪಂಗಡದ ಪರವಾಗಿಲ್ಲ. ಬಿಜೆಪಿ ಅಧ್ಯಕ್ಷರಾಗಿದ್ದ ಬಂಗಾರು ಹನುಮಂತು ಅವರನ್ನು ಷಡ್ಯಂತ್ರ ಮಾಡಿ ಜೈಲಿಗೆ ಹಾಕಲಾಯಿತು ಎಂದು ತಿಳಿಸಿದರು.

BREAKING: ಈ ಬಾರಿ ‘ರಾಜ್ಯೋತ್ಸವ ಪ್ರಶಸ್ತಿ’ಗೆ ಆನ್ ಮೂಲಕ ಅರ್ಜಿ ಪ್ರಕ್ರಿಯೆ ಇಲ್ಲ: ಸಚಿವ ಶಿವರಾಜ ತಂಗಡಗಿ

‘ಸ್ಥಳೀಯರಿಗೆ ಉದ್ಯೋಗ’ ನೀಡುವ ನಿಟ್ಟಿನಲ್ಲಿ ಸಾಗರದಲ್ಲಿ ‘ರಾಯಲ್ ಎನ್ ಫೀಲ್ಡ್ ಶೋ ರೂಂ’ ಓಪನ್: RBD ಮಹೇಶ್

Share. Facebook Twitter LinkedIn WhatsApp Email

Related Posts

ರೈತರಿಗೆ ಉಪಯುಕ್ತ ಮಾಹಿತಿ: ಈ ಸಮಗ್ರ, ಸುಸ್ಥಿತ ಕೃಷಿ ಪದ್ಧತಿ ಅನುಸರಿಸಿ, ಲಕ್ಷಾಂತರ ಆದಾಯ ಗಳಿಸಿ

08/11/2025 6:34 PM9 Mins Read

ದೇಶದ ಇತಿಹಾಸದಲ್ಲೇ ಇದೇ ಮೊದಲು: ಪ್ರತಿಯೊಬ್ಬ ರಾಜ್ಯ ಸರ್ಕಾರಿ ನೌಕರರಿಗೂ ಸಂಘದ ಕ್ಯಾಲೆಂಡರ್ ವಿತರಣೆ

08/11/2025 5:08 PM1 Min Read

ಬೆಂಗಳೂರು ನಗರದ ತಲಾದಾಯ ಕುಸಿತ: ಛಲವಾದಿ ನಾರಾಯಣಸ್ವಾಮಿ ವಾಗ್ಧಾಳಿ

08/11/2025 5:00 PM3 Mins Read
Recent News

ರೈತರಿಗೆ ಉಪಯುಕ್ತ ಮಾಹಿತಿ: ಈ ಸಮಗ್ರ, ಸುಸ್ಥಿತ ಕೃಷಿ ಪದ್ಧತಿ ಅನುಸರಿಸಿ, ಲಕ್ಷಾಂತರ ಆದಾಯ ಗಳಿಸಿ

08/11/2025 6:34 PM

ನೀವು ಅರ್ಜಿ ಸಲ್ಲಿಸಿದ ಪ್ರತಿ 4 ‘ಜಾಬ್’ಗಳಲ್ಲಿ 1 ನಕಲಿ ; ಶಾಕಿಂಗ್ ವರದಿ

08/11/2025 6:12 PM

‘ಬೆಳ್ಳಿ ಫಿಲ್ಲಿಂಗ್’ಗೆ ಗುಡ್ ಬೈ ; 2034ರ ವೇಳೆಗೆ ದಂತವೈದ್ಯಶಾಸ್ತ್ರದಲ್ಲಿ ‘ಪಾದರಸ ಬಳಕೆ’ ಕೊನೆಗೆ ಒಪ್ಪಿಗೆ!

08/11/2025 5:41 PM

BIG NEWS: ಬಂಧಿತ ಆರೋಪಿಗೆ ಬಂಧನದ ಕಾರಣವನ್ನು ಲಿಖಿತ ರೂಪದಲ್ಲಿ ಅವರ ಭಾಷೆಯಲ್ಲಿ ನೀಡಬೇಕು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

08/11/2025 5:25 PM
State News
KARNATAKA

ರೈತರಿಗೆ ಉಪಯುಕ್ತ ಮಾಹಿತಿ: ಈ ಸಮಗ್ರ, ಸುಸ್ಥಿತ ಕೃಷಿ ಪದ್ಧತಿ ಅನುಸರಿಸಿ, ಲಕ್ಷಾಂತರ ಆದಾಯ ಗಳಿಸಿ

By kannadanewsnow0908/11/2025 6:34 PM KARNATAKA 9 Mins Read

ಅಡಿಕೆ ತೆಂಗು ಬಾಳೆ ಬೆಳೆಗಳ ವ್ಯವಸ್ಥೆಯಲ್ಲಿ ನಮ್ಮ ಆದಾಯವನ್ನು ದ್ವಿಗುಣಗೊಳಿಸುವ ಸುಲಭ ವಿಧಾನವೇ ಸಮಗ್ರ ಮತ್ತು ಸುಸ್ಥಿರ ಕೃಷಿ ಪದ್ಧತಿ.…

ದೇಶದ ಇತಿಹಾಸದಲ್ಲೇ ಇದೇ ಮೊದಲು: ಪ್ರತಿಯೊಬ್ಬ ರಾಜ್ಯ ಸರ್ಕಾರಿ ನೌಕರರಿಗೂ ಸಂಘದ ಕ್ಯಾಲೆಂಡರ್ ವಿತರಣೆ

08/11/2025 5:08 PM

ಬೆಂಗಳೂರು ನಗರದ ತಲಾದಾಯ ಕುಸಿತ: ಛಲವಾದಿ ನಾರಾಯಣಸ್ವಾಮಿ ವಾಗ್ಧಾಳಿ

08/11/2025 5:00 PM

BREAKING: ರಾಜ್ಯ ಸರ್ಕಾರದಿಂದ ‘ಕಬ್ಬಿಗೆ ಹೆಚ್ಚುವರಿ ಬೆಲೆ’ ನಿಗದಿಗೊಳಿಸಿ ಅಧಿಕೃತ ಆದೇಶ

08/11/2025 4:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.