Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ 1 ನೇ ತರಗತಿ ದಾಖಲಾತಿಗೆ 60 ದಿನಗಳ ಸಡಿಲಿಕೆ : ಈ ವರ್ಷದಿಂದಲೇ ಜಾರಿ!

29/03/2026 6:33 AM

ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಸಾಮಾನ್ಯ ಭವಿಷ್ಯ ನಿಧಿ’ (GPF) ನಿಯಮಗಳಿಗೆ ತಿದ್ದುಪಡಿ !

29/03/2026 6:28 AM

ದೇಶದ ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ‘ಸಿಬಿಲ್’ ಸ್ಕೋರ್ ಬದಲಿಗೆ ‘ಗ್ರಾಮೀಣ ಕ್ರೆಡಿಟ್ ಸ್ಕೋರ್’ಕಡ್ಡಾಯ.!

29/03/2026 6:24 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » JOB ALERT: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : `708′ ಸರ್ಕಾರಿ ಹುದ್ದೆಗಳ ನೇಮಕಾತಿಗೆ ‘KEA’ಯಿಂದ ಅರ್ಜಿ ಆಹ್ವಾನ
INDIA

JOB ALERT: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : `708′ ಸರ್ಕಾರಿ ಹುದ್ದೆಗಳ ನೇಮಕಾತಿಗೆ ‘KEA’ಯಿಂದ ಅರ್ಜಿ ಆಹ್ವಾನ

By kannadanewsnow5710/10/2025 7:53 AM

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸರ್ಕಾರಿ ಸಂಸ್ಥೆ, ನಿಗಮ, ಸಂಸ್ಥೆಗಳಲ್ಲಿ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವಂತ ವಿವಿಧ ವೃಂದದ 708 ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.

ಈ ಕುರಿತಂತೆ ಕೆಇಎ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಖಾಲಿ ಇರುವಂತ 18 ಹುದ್ದೆ, ಕರ್ನಾಟಕ ಸೋಪ್ಸ್ ಆಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತ 14 ಸೇರಿದಂತೆ 394 ಹುದ್ದೆಗಳ ನೇಮಕಾತಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ನೇಮಕಾತಿ ಹುದ್ದೆಗಳ ವಿವರ

ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ- 18+07 ಹುದ್ದೆಗಳು

ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ – 07+ 14 ಹುದ್ದೆಗಳು

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ, ಬೆಂಗಳೂರು – 40+4 ಹುದ್ದೆಗಳು

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ- 63+253 ಹುದ್ದೆ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ- 19 ಹುದ್ದೆ

ಕೃಷಿ ಮಾರಾಟ ಇಲಾಖೆ- 180 ಹುದ್ದೆಗಳು

ತಾಂತ್ರಿಕ ಶಿಕ್ಷಣ ಇಲಾಖೆ – 50+43 ಹುದ್ದೆಗಳು

ಶಾಲಾ ಶಿಕ್ಷಣ ಇಲಾಖೆಯ ಪದವಿ ಪೂರ್ವ ವಿಭಾಗದಲ್ಲಿ – 10 ಹುದ್ದೆಗಳು

ಶೈಕ್ಷಣಿಕ ವಿದ್ಯಾರ್ಹತೆ

ಪ್ರಥಮ ದರ್ಜೆ ಸಹಾಯಕರಿಗೆ – ಪದವಿ

ದ್ವಿತೀಯ ದರ್ಜೆ ಸಹಾಯಕರಿಗೆ – ದ್ವಿತೀಯ ಪಿಯುಸಿ

ಸಹಾಯಕ ಸಂಚಾರ ನಿರೀಕ್ಷಕರ ಹುದ್ದೆಗೆ- ಕಲಾ, ವಾಣಿಜ್ಯ, ವಿಜ್ಞಾನ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು.

ನಿರ್ವಾಹಕರ ಹುದ್ದೆ – ಪಿಯುಸಿ

ಸಹಾಯಕ ಲೆಕ್ಕಿಗ – ಬಿಕಾಂ

ಅಧಿಕಾರಿ – ಪದವಿ ಜೊತೆಗೆ ಎಂಬಿಎ

ಕಿರಿಯ ಅಧಿಕಾರಿ- ಎಂಎಸ್ಸಿ ಕೆಮಿಸ್ಟ್ರಿ

ಸಹಾಯಕ ಗ್ರಂಥಪಾಲಕರು – ಎಂಎಸ್ಸಿ ಲೈಬ್ರರಿ ಸೈನ್ಸ್

ಗ್ರಂಥಪಾಲಕರು – ಎಂಲಿಬ್

ಜೂನಿಯರ್ ಪ್ರೋಗ್ರಾಮರ್- ಎಲೆಕ್ಟ್ರಾನಿಕ್ಸ್ ಕಂಪ್ಯೂಟರ್ ಸೈನ್ಸ್ ಅಥವಾ ಎಂಸಿಎ

ಸಹಾಯಕ ಇಂಜಿನಿಯರ್- ಸಿವಿಲ್ ಇಂಜಿನಿಯರಿಂಗ್

ಸಹಾಯಕ ಅಭಿಯಂತರರು- ಬಿಇ ಸಿವಿಲ್

ಕಿರಿಯ ಅಭಿಯಂತರರು- ಡಿಪ್ಲೋಮಾ ಸಿವಿಲ್

ಮಾರುಕಟ್ಟೇ ಮೇಲ್ವಿಚಾರಕರು – ಬಿಎಸ್ಸಿ ಅಕ್ರಿಕಲ್ಚರ್ ಮಾರ್ಕೇಟಿಂಗ್.

ವಯೋಮಿತಿ

ಸಾಮಾನ್ಯ ಅಭ್ಯರ್ಥಿಗಳಿಗೆ 38 ವರ್ಷಗಳು

ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 41 ವರ್ಷ

ಎಸ್ಸಿ, ಎಸ್ಟಿ, ಪ್ರವರ್ಗ-1ರ ಅಭ್ಯರ್ಥಿಗಳಿಗೆ 43 ವರ್ಷ

ಈ ಮೇಲ್ಕಂಡ 394 ಕೆಇಎ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಕೆ, ಇತರೆ ಮಾಹಿತಿಗೆ ಸಂಬಂಧಿಸಿದಂತೆ http://cetonline.karnataka.gov.in/kea/ ಜಾಲತಾಣಕ್ಕೆ ಭೇಟಿ ನೀಡಿ ವೀಕ್ಷಿಸಬಹುದಾಗಿದೆ.

ಸ್ಪರ್ಧಾತ್ಮಕ ಪರೀಕ್ಷೆ;

a) OMR ಆಧಾರಿತ ಪರೀಕ್ಷೆಯಾಗಿದ್ದು ಒಂದು ಪ್ರಶ್ನೆಗೆ OMR ನಲ್ಲಿ 05 ವೃತ್ತಗಳಿದ್ದು, ಮೊದಲ 04 ವೃತ್ತಗಳು ಒಂದು ಸರಿಯಾದ ಉತ್ತರವನ್ನು ಶೇಡ್ ಮಾಡಲು ಸಂಬಂಧಿಸಿವೆ. ಅಭ್ಯರ್ಥಿಗೆ ಯಾವುದಾದರೂ ಪ್ರಶ್ನೆಗೆ / ಪ್ರಶ್ನೆಗಳಿಗೆ ಉತ್ತರ ತಿಳಿದಿಲ್ಲದಿದ್ದರೆ ಕಡ್ಡಾಯವಾಗಿ 05 ನೇ ವೃತ್ತವನ್ನು ಕೇಡ್ ಮಾಡಬೇಕು. ಇಲ್ಲದಿದ್ದಲ್ಲಿ 4 ಅಂಕ ಕಡಿತ ಮಾಡಲಾಗುವುದು.

b) ಋಣಾತ್ಮಕ ಮೌಲ್ಯಮಾಪನವಿದ್ದು, ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದಂಶದಷ್ಟು (7) ಅಂಕಗಳನ್ನು ಕಡಿತ ಮಾಡಲಾಗುವುದು.

c) ಪರೀಕ್ಷಾ ವೇಳಾಪಟ್ಟಿಯನ್ನು ಪ್ರಾಧಿಕಾರದ ವೆಬ್ಸೈಟಿನಲ್ಲಿ ಪ್ರಕಟಿಸಲಾಗುವುದು,

d) ಒಂದೇ ಪಠ್ಯಕ್ರಮವಿರುವ ವಿವಿಧ ಇಲಾಖೆಗಳ ಹುದ್ದೆಗಳಿಗೆ ಒಂದೇ ಪರೀಕ್ಷೆ ನಡೆಸಿ ಸಂಬಂಧಪಟ್ಟ ಇಲಾಖೆಗಳಿಗೆ ಮೆರಿಟ್ ಪಟ್ಟಿ ನೀಡಲಾಗುವುದು.
ಅರ್ಜಿ ಆಹ್ವಾನಿಸಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳ ಮೆರಿಟ್ ಪಟ್ಟಿಯನ್ನು ಸಂಬಂಧ ಪಟ್ಟ ನೇಮಕಾತಿ ಪ್ರಾಧಿಕಾರಗಳಿಗೆ ನೀಡುವ ಜವಾಬ್ದಾರಿ ಮಾತ್ರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ್ದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ನೀಡಿರುವ ಮಾಹಿತಿಯನುಸಾರ ದಾಖಲೆ ಪರಿಶೀಲಿಸಿ ನಿಯಮಾನುಸಾರ ನೇಮಕಾತಿ ಆದೇಶ ನೀಡುವುದು ಸಂಬಂಧ ಪಟ್ಟ ನೇಮಕಾತಿ ಪ್ರಾಧಿಕಾರದ ಜವಾಬ್ದಾರಿಯಾಗಿರುತ್ತದೆ.

ನೇಮಕಾತಿ ಪ್ರಕ್ರಿಯೆ ಕುರಿತು ಅಭ್ಯರ್ಥಿಗಳಿಗೆ ವೈಯಕ್ತಿಕವಾಗಿ ಮಾಹಿತಿಯನ್ನು ಕಳುಹಿಸುವುದಿಲ್ಲ, ಅಭ್ಯರ್ಥಿಗಳು ಆಗಿಂದಾಗ್ಗೆ ಪ್ರಾಧಿಕಾರದ ವೆಬ್ಸೈಟ್ https://cetonline.karnataka.gov.in/keaಗೆ ಭೇಟಿ ನೀಡುತ್ತಿರಲು ಸೂಚಿಸಿದೆ.

#KEARecruitment: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ಕಾರ್ಖಾನೆ, ರಾಜೀವ್ ಗಾಂಧಿ ಆರೋಗ್ಯ ವಿವಿ ಹೀಗೆ 8 ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ 708 ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅ.9ರಿಂದ ನ.11ರವರೆಗೆ ಅರ್ಜಿ ಸಲ್ಲಿಸಬಹುದು. ಸ್ಪರ್ಧಾತ್ಮಕ ಪರೀಕ್ಷೆ ಮೂಲಕ… pic.twitter.com/xsrF20dAAc

— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) October 8, 2025

JOB ALERT: Good news for job seekers: 'KEA' invites applications for recruitment of 708 government posts
Share. Facebook Twitter LinkedIn WhatsApp Email

Related Posts

liver

ನಿಶ್ಶಬ್ದವಾಗಿ ನಿಮ್ಮ ‘ಲಿವರ್’ ಕೊಲ್ಲುವ 3 ಆಹಾರಗಳಿವು ; ವೈದ್ಯರ ಎಚ್ಚರಿಕೆ!

28/03/2026 10:01 PM1 Min Read

‘ಮುಖೇಶ್ ಅಂಬಾನಿ’ ಮನೆಯಲ್ಲಿ ಒಂದೇ ಒಂದು ‘AC’ ಕೂಡ ಇಲ್ಲ ; ಯಾಕೆ ಗೊತ್ತಾ?

28/03/2026 9:47 PM1 Min Read

ಮತ್ತೊಮ್ಮೆ ಬಯಲಾಯ್ತು ಪಾಕ್ ದುಷ್ಟ ಬುದ್ಧಿ ; ಉಗ್ರರಿಗೆ ಆಶ್ರಯ ಕೊಟ್ಟು ಭಾರತದ ವಿರುದ್ಧ ದಾಳಿಗೆ ಸಂಚು ; ಅಮೆರಿಕ ವರದಿ

28/03/2026 9:13 PM1 Min Read
Recent News

ರಾಜ್ಯದಲ್ಲಿ 1 ನೇ ತರಗತಿ ದಾಖಲಾತಿಗೆ 60 ದಿನಗಳ ಸಡಿಲಿಕೆ : ಈ ವರ್ಷದಿಂದಲೇ ಜಾರಿ!

29/03/2026 6:33 AM

ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಸಾಮಾನ್ಯ ಭವಿಷ್ಯ ನಿಧಿ’ (GPF) ನಿಯಮಗಳಿಗೆ ತಿದ್ದುಪಡಿ !

29/03/2026 6:28 AM

ದೇಶದ ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ‘ಸಿಬಿಲ್’ ಸ್ಕೋರ್ ಬದಲಿಗೆ ‘ಗ್ರಾಮೀಣ ಕ್ರೆಡಿಟ್ ಸ್ಕೋರ್’ಕಡ್ಡಾಯ.!

29/03/2026 6:24 AM

SHOCKING : ಬೆಂಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರಿಂದ ಆತ್ಮಹತ್ಯೆ ಯತ್ನ : ತಾಯಿ-ಮಗಳು ಸಾವು, ಇಬ್ಬರ ಸ್ಥಿತಿ ಗಂಭೀರ !

29/03/2026 6:17 AM
State News
KARNATAKA

ರಾಜ್ಯದಲ್ಲಿ 1 ನೇ ತರಗತಿ ದಾಖಲಾತಿಗೆ 60 ದಿನಗಳ ಸಡಿಲಿಕೆ : ಈ ವರ್ಷದಿಂದಲೇ ಜಾರಿ!

By kannadanewsnow5729/03/2026 6:33 AM KARNATAKA 1 Min Read

ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಒಂದನೇ ತರಗತಿ ಪ್ರವೇಶಾತಿಗಾಗಿ ನಿಗದಿಪಡಿಸಲಾಗಿದ್ದ ಕಡ್ಡಾಯ ವಯೋಮಿತಿಯಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ತಂದಿದೆ. 6…

ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಸಾಮಾನ್ಯ ಭವಿಷ್ಯ ನಿಧಿ’ (GPF) ನಿಯಮಗಳಿಗೆ ತಿದ್ದುಪಡಿ !

29/03/2026 6:28 AM

ದೇಶದ ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ‘ಸಿಬಿಲ್’ ಸ್ಕೋರ್ ಬದಲಿಗೆ ‘ಗ್ರಾಮೀಣ ಕ್ರೆಡಿಟ್ ಸ್ಕೋರ್’ಕಡ್ಡಾಯ.!

29/03/2026 6:24 AM

SHOCKING : ಬೆಂಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರಿಂದ ಆತ್ಮಹತ್ಯೆ ಯತ್ನ : ತಾಯಿ-ಮಗಳು ಸಾವು, ಇಬ್ಬರ ಸ್ಥಿತಿ ಗಂಭೀರ !

29/03/2026 6:17 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.