Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ರಾಜ್ಯದಲ್ಲಿ ‘ಪಡಿತರ ಚೀಟಿದಾರ’ರಿಗೆ 5 ಕೆಜಿ ಅಕ್ಕಿ ಬದಲು ʻಇಂದಿರಾ ಆಹಾರ ಕಿಟ್‌ʼ: ಸಂಪುಟದ ಮಹತ್ವ ನಿರ್ಧಾರ

09/10/2025 3:55 PM

BREAKING : ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಬೈರತಿ ಬಸವರಾಜ್ ಗೆ ಸಂಕಷ್ಟ : ಬಂಧನದಿಂದ ರಕ್ಷಣೆ ಆದೇಶ ತೆರವು ಕೋರಿ ಅರ್ಜಿ ಸಲ್ಲಿಕೆ

09/10/2025 3:51 PM
vidhana soudha

ಎಲ್ಲಾ ನೇರ ನೇಮಕಾತಿಯಲ್ಲಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ: ರಾಜ್ಯ ಸಚಿವ ಸಂಪುಟ ಅನುಮೋದನೆ

09/10/2025 3:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘ಮಹಿಳೆ’ಯರಿಗೆ ಒಂದು ದಿನದ ವೇತನ ಸಹಿತ ‘ಮುಟ್ಟಿನ ರಜೆ’ ನೀಡಲು ರಾಜ್ಯ ಸರ್ಕಾರ ‘ಗ್ರೀನ್‌ ಸಿಗ್ನಲ್‌’.!
KARNATAKA

BREAKING : ‘ಮಹಿಳೆ’ಯರಿಗೆ ಒಂದು ದಿನದ ವೇತನ ಸಹಿತ ‘ಮುಟ್ಟಿನ ರಜೆ’ ನೀಡಲು ರಾಜ್ಯ ಸರ್ಕಾರ ‘ಗ್ರೀನ್‌ ಸಿಗ್ನಲ್‌’.!

By kannadanewsnow0709/10/2025 3:40 PM
vidhana soudha
vidhana soudha

* ಅವಿನಾಶ್‌ ಆರ್‌ ಭೀಮಸಂದ್ರ

ಬೆಂಗಳೂರು: ಇಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ರಾಜ್ಯ ಸರ್ಕಾರ ಐತಿಹಾಸಿಕ ತೀರ್ಮಾನವನ್ನು ತೆಗೆದುಕೊಂಡು ಮಹಿಳಾ ಉದ್ಯೋಗಿಗಳಿಗೆ ವೇತನ ಸಹಿತ ಒಂದು ದಿನದ ಮುಟ್ಟಿನ ರಜೆಯನ್ನು ನೀಡುವುದುಕ್ಕೆ ಮುಂದಾಗಿದೆ.  ಅಂದ ಹಾಗೇ ರಾಜ್ಯದ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್​, ಬಹುರಾಷ್ಟ್ರೀಯ ಕಂಪನಿಗಳು (MNC), ಐಟಿ, ಖಾಸಗಿ ಕೈಗಾರಿಕಾ ವಲಯಗಳಲ್ಲಿ ಮುಟ್ಟಿನ ರಜೆ ಅನ್ವಯವಾಗಲಿದೆ ಅಂತ ತಿಳಿದು ಬಂದಿದೆ.

ಸರ್ಕಾರಿ ಕಚೇರಿಗಳು, ವಿವಿಧ ಖಾಸಗಿ ವಲಯದ ಕೈಗಾರಿಕೆಗಳು, ಬಹುರಾಷ್ಟ್ರೀಯ ಕಂಪನಿಗಳು, ಐಟಿ ಮತ್ತು ರಾಜ್ಯದೊಳಗೆ ಕಾರ್ಯನಿರ್ವಹಿಸುತ್ತಿರುವ ಇತರ ಕಂಪನಿಗಳು ಸೇರಿದಂತೆ ರಾಜ್ಯದ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಎಲ್ಲಾ ಮಹಿಳೆಯರಿಗೆ ಒಂದು ದಿನದ ವೇತನ ಸಹಿತ ರಜೆ ಮಂಜೂರು ಮಾಡಲು 2025 ರ ಮುಟ್ಟಿನ ರಜೆ ನೀತಿಗೆ ಕಾರ್ಮಿಕ ಇಲಾಖೆ ಆಡಳಿತಾತ್ಮಕ ಅನುಮೋದನೆ ಕೋರಿತ್ತು. ಈಗಾಲೇ ಕೇರಳವು ಕೈಗಾರಿಕಾ ತರಬೇತಿ ಸಂಸ್ಥೆಗಳ (ಐಟಿಐ) ಮಹಿಳಾ ಪ್ರಶಿಕ್ಷಣಾರ್ಥಿಗಳಿಗೆ ಎರಡು ದಿನಗಳ ಮುಟ್ಟಿನ ರಜೆಯನ್ನು ಪರಿಚಯಿಸಿದೆ. ಬಿಹಾರ ಮತ್ತು ಒಡಿಶಾದಲ್ಲಿ, 12 ದಿನಗಳ ವಾರ್ಷಿಕ ಮುಟ್ಟಿನ ರಜೆ ನೀತಿ ಇದೆ, ಆದರೆ ಅದು ಆಯಾ ರಾಜ್ಯ ಸರ್ಕಾರಿ ಉದ್ಯೋಗಿಗಳಿಗೆ ಮಾತ್ರ ನೀಡುತ್ತದೆ.

ಹೀಗಿದೆ ಇಂದಿನ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್

2025-26ನೇ ಸಾಲಿನ ರಸಗೊಬ್ಬರ ಕಾಪು ದಾಸ್ತಾನು ಮಾಡಲು ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿರವರು ಪಡೆಯುವ ತಲಾ 200 ಕೋಟಿಗಳ ಬಂಡವಾಳ ಸಾಲಕ್ಕೆ ಸರ್ಕಾರ ಖಾತ್ರಿ ನೀಡಲು ಒಪ್ಪಿಗೆ ನೀಡಲಾಗಿದೆ.

“ಜಲಾನಯನ ಅಭಿವೃದ್ಧಿ ಘಟಕ-ಪ್ರಧಾನ ಮಂತ್ರಿ ಕೃಷಿ ಸಿಂಚಯಿ ಯೋಜನೆ 2.0 (PMKSY-WDC 2.0) ಯೋಜನೆಯಡಿ ಹೆಚ್ಚುವರಿ 15 ಯೋಜನೆಗಳನ್ನು ರಾಜ್ಯದ 15 ತಾಲ್ಲೂಕುಗಳಲ್ಲಿ 39413 ಹೆಕ್ಟೇರ್ ಪ್ರದೇಶದಲ್ಲಿ ಯೋಜನಾ ಮೊತ್ತ ರೂ.90.07 ಕೋಟಿಗಳಲ್ಲಿ (ಕೇಂದ್ರ ಮತ್ತು ರಾಜ್ಯ ಸರ್ಕಾರ -ಶೇ.60:40) ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಒಪ್ಪಿಗೆ ಸೂಚಿಸಿದೆ.

ರಾಜ್ಯ ಸಿವಿಲ್ ಸೇವೆ ಹುದ್ದೆಗಳ ನೇರ ನೇಮಕಾತಿಯಲ್ಲಿ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳನ್ನು ಸಡಿಲಿಸಿ ದಿನಾಂಕ: 29.09.2025 ರಂದು ಹೊರಡಿಸಿರುವ ಆದೇಶಕ್ಕೆ ಘಟನೋತ್ತರ ಅನುಮೋದನೆ ನೀಡಲು ಒಪ್ಪಿಗೆ ನೀಡಲಾಗಿದೆ.

ಕರ್ನಾಟಕ ರಾಜ್ಯ ದತ್ತಾಂಶ ಕೇಂದ್ರದಲ್ಲಿನ ಭದ್ರತಾ ಕಾರ್ಯಾಚರಣೆ ಕೇಂದ್ರವನ್ನು ನವೀಕರಿಸಲು ಮತ್ತು ಸೈಬರ್ ಭದ್ರತೆಯನ್ನು ಮತ್ತಷ್ಟು ಬಲಪಡಿಸು ವುದಕ್ಕಾಗಿ 38.33 ಕೋಟಿಗಳ ಅಂದಾಜು ಮೊತ್ತದಲ್ಲಿ ಹೊಸ ತಂತ್ರಾಂಶಗಳನ್ನು ಅಳವಡಿಸಲು ಆಡಳಿತಾತ್ಮಕ ಅನುಮೋದನೆ ನೀಡಿದೆ.

ಬೆಂಗಳೂರು ಉತ್ತರ ತಾಲ್ಲೂಕಿನ ಮಾಚೋಹಳ್ಳಿ ಗ್ರಾಮದ ಕಾಯ್ದಿಟ್ಟ ಅರಣ್ಯ ಪ್ರದೇಶದ ಸರ್ವೆ ನಂ.81ರಲ್ಲಿ ಒಟ್ಟು 78 ಎಕರೆ ಅರಣ್ಯ ಪ್ರದೇಶವನ್ನು ದಿನಾಂಕ 06.01.1964ರಲ್ಲಿ ಕಂದಾಯ ಇಲಾಖೆಗೆ ಬಿಡುಗಡೆಗೊಳಿಸಲಾಗಿದ್ದು, ಕಂದಾಯ ಇಲಾಖೆಯು ದಿನಾಂಕ: 18.12.20170 ಆದೇಶದಲ್ಲಿ ಸದರಿ ಜಮೀನನ್ನು ವಿವಿಧ ಸಂಸ್ಥೆಗಳಿಗೆ ಮಂಜೂರು ಮಾಡಿದ್ದು, ಸದರಿ ಆದೇಶಗಳನ್ನು ಹಿಂಪಡೆಯಲು ( ಮುಂದೂಡಿಕೆ) ಮಾಡಲಾಗಿದೆ.

ಕೇಂದ್ರ ಪುರಸ್ಕೃತ ICJS-2.0 (Inter-Operable Criminal Justice System 2.0) ಯೋಜನೆಯಡಿ ಕೇಂದ್ರ ಗೃಹ ಮಂತ್ರಾಲಯವು ಮಂಜೂರು ಮಾಡಿರುವ 89.22 ಕೋಟಿಗಳ ಮೊತ್ತದಲ್ಲಿ ಉಪಕರಣಗಳನ್ನು ಪೊಲೀಸ್ ಗಣಕ ವಿಭಾಗದ ವತಿಯಿಂದ ಖರೀದಿಸಲು ಹಾಗೂ ತರಬೇತಿ ಹಾಗೂ ಇತರೆ ಕಾರ್ಯಗಳನ್ನು ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು ಒಪ್ಪಿಗೆ ನೀಡಿದೆ.

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಎರಡನೇ ಹಂತದಲ್ಲಿ 11 ಶ್ರಮಿಕ ವಸತಿ ಶಾಲೆಗಳನ್ನು ರೂ.405.55 ಕೋಟಿಗಳ ಮೊತ್ತದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದಿಸಿದೆ.

ರಾಜ್ಯದಾದ್ಯಂತ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್ MNCಗಳು, IT ಮತ್ತು ಇತರೆ ಖಾಸಗಿ ಕೈಗಾರಿಕೆಗಳು ಸೇರಿದಂತೆ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ರಜೆ ನೀಡುವ “ಋತು ಚಕ್ರ ರಜೆ ನೀತಿ 2025” (Menstrual Leave Policy, 2025)ನ್ನು ಜಾರಿಗೆ ತರಲು ಅಸ್ತು ಎಂದಿದೆ.

ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ (ತಿದ್ದುಪಡಿ) ವಿಧೇಯಕ, 2025 ಕೆ ಅನುಮೋದನೆ ನೀಡಲು ಅನುಮೋದನೆ ನೀಡಲಾಗಿದೆ.

ಸೇತುವೆಗಳು ಪುನರ್ ನಿರ್ಮಾಣ ಹಾಗೂ ಪುನಶ್ವೇತನ ಕಾಮಗಾರಿಗಳನ್ನು ರೂ. 2000 ಕೋಟಿಗಳ ಅಂದಾಜು ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ತಾತ್ವಿಕ ಅನುಮೋದನೆ ಹಾಗೂ ಮೊದಲನೇ ಹಂತದಲ್ಲಿ PRAMC ಅಧ್ಯಯನದಲ್ಲಿ ಗುರುತಿಸಿರುವ 39 ಬೃಹತ್ ಸೇತುವೆಗಳ ಪುನರ್ ನಿರ್ಮಾಣ/ನಿರ್ಮಾಣ ಕಾಮಗಾರಿಗಳನ್ನು ರೂ.1000 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಿದೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕರಿವೋಬನಹಳ್ಳಿಯಿಂದ ವತಿಯಿಂದ ನಾಗಸಂದ್ರ ಹೊಸ ಬಳಸಿದ ನೀರು ಸಂಸ್ಕರಣಾ ಘಟಕದವರೆಗೆ ಇರುವ ರೈಸಿಂಗ್ ಮೇನ್ ಸೇರಿ ನಾಗಸಂದ್ರದಲ್ಲಿ 20 MLD ಬಳಸಿದ ನೀರು ಸಂಸ್ಕರಣಾ ಘಟಕ (UWTP) ಮತ್ತು 5 MLD ಮಧ್ಯಂತರ ತ್ಯಾಜ್ಯ ನೀರಿನ ಯಂತ್ರಾಗಾರಗಳ 05 ವರ್ಷಗಳ ಸಮಗ್ರ ಕಾರ್ಯಾಚರಣೆ ಮತ್ತು ನಿರ್ವಹಣೆ (O&M) ಯನ್ನು ರೂ.26.02 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದಿಸಿದೆ.

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಗೆ ಬಹುಮಹಡಿ ಕಟ್ಟಡಗಳಲ್ಲಿ ಸಂಭವಿಸಬಹುದಾದ ಅಗ್ನಿ ಅನಾಹುತ ತಡೆಗಟ್ಟುವ ಸಲುವಾಗಿ 52-54 ಮೀಟರ್ ಎತ್ತರಕ್ಕೆ ತಲುಪುವ Aerial Ladder Platform Vehicleನ್ನು 16.00 ಕೋಟಿಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಅನುಮೋದನೆ ನೀಡಿದೆ.

ಕನಕಪುರದಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ವಾಯತ್ತ ಸ್ಥಾನಮಾನದೊಂದಿಗೆ 150 ಎಂಬಿಬಿಎಸ್ ಪ್ರವೇಶ ಮಿತಿಯೊಂದಿಗೆ ಪ್ರಾರಂಬಿಸಲು ಮತ್ತು ಅವ್ಯವಿರುವ ವೈದ್ಯಕೀಯ ಕಾಲೇಜು ಕಟ್ಟಡ, 300 ಹಾಸಿಗೆಗಳ ಬೋಧನಾ ಆಸ್ಪತ್ರೆ, ವಸತಿ ನಿಲಯಗಳು ಮತ್ತಿತರ ಕಾಮಗಾರಿಗಳನ್ನು ರೂ.550 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ರಾಜಕನಾಲ್ ಮತ್ತು ಹಂತ-11 ರಲ್ಲಿ 40 MLD ಬಳಸಿದ ನೀರು ಸಂಸ್ಕರಣಾ ಘಟಕ (UWTP), ಟರ್ಮಿನಲ್ ತ್ಯಾಜ್ಯ ನೀರಿನ ಯಂತ್ರಗಾರ (TSPS) ಮತ್ತು ಮಧ್ಯಂತರ ತ್ಯಾಜ್ಯ ನೀರಿನ ಯಂತ್ರಗಾರದೆ (ISPS) ವರ್ಷಗಳ ಕಾರ್ಯಾಚರಣೆ ಮತ್ತು ನಿರ್ವಹಣೆ ಸಮಗ್ರ (O&M)ಯನ್ನು ರೂ.29.70 ಕೋಟಿಗಳ ವೆಚ್ಚದಲ್ಲಿ ಕೈಗೊಳ್ಳುವ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದಿಸಿದೆ.

ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪುರಸಭೆ 2 1668.80 2. Ơ ಜಿಲ್ಲೆಯ ಅಫಜಲ್‌ಪುರ ಪುರಸಭೆ ವ್ಯಾಪ್ತಿಯಲ್ಲಿ 1120.60 ಚ.ಮೀ, ಧಾರವಾಡ ಜಿಲ್ಲೆಯ ನಲವಗುಂದ ಪುರಸಭೆ ವ್ಯಾಪ್ತಿಯಲ್ಲಿ 1287.77 ಚ.ಮೀ ಮತ್ತು ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ಪುರಸಭೆ ವ್ಯಾಪ್ತಿಯಲ್ಲಿ 4200.00 ಚ.ಅಡಿ ನಾಗರೀಕ ಸೌಲಭ್ಯ ನಿವೇಶನಗಳನ್ನು ಕಾಂಗ್ರೆಸ್ ಭವನ ನಿರ್ಮಾಣ ಮಾಡಲು ಕಾಂಗ್ರೆಸ್ ಭವನ ಟ್ರಸ್ಟ್, ಬೆಂಗಳೂರು ಇವರಿಗೆ ಗುತ್ತಿಗೆ ಆಧಾರದ ಮೇಲೆ ಮಂಜೂರು ಮಾಡಲಾಗಿದೆ.

ಮಂಗಳೂರಿನ ದೇರೆಬೈಲ್‌ನ ಬ್ಲೂಬೆರಿ ಹಿಲ್ಸ್ ರಸ್ತೆಯಲ್ಲಿರುವ 3.285 ಎಕರೆ ಭೂಮಿಯನ್ನು ವಾಣಿಜ್ಯ ಕಛೇರಿ ಟೆಕ್ ಪಾರ್ಕ್ ಉದ್ದೇಶಕ್ಕಾಗಿ PPP ಮಾದರಿಯಲ್ಲಿ DBFOT ಆಧಾರದ ಮೇಲೆ ನಗದೀಕರಿಸಲು ಮತ್ತು ಅಭಿವೃದ್ಧಿ ಪಡಿಸಲು ಅನುಮೋದನೆ. 30 ವರ್ಷಗಳವರೆಗೆ ವಿಸ್ತರಿಸುವ 135 ಕೋಟಿ ರೂ. ವೆಚ್ಚದ ಯೋಜಬೆ ಇದಾಗಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಘೋಡಗೇರಿ ಗ್ರಾಮದ ಸ.ನಂ.666 ರಲ್ಲಿನ 9-00 ಎಕರೆ ಗಾಯರಾಣ ಜಮೀನನ್ನು ಶ್ರೀ ಶಿವಾನಂದ ಗ್ರಾಮೀಣ ವಿದ್ಯಾಪೀಠ (ಶಿಕ್ಷಣ ಸಂಸ್ಥೆ) ಘೋಡಗೇರಿ ರವರಿಗೆ ಮಂಜೂರು ಮಾಡಿದೆ.

ಸಿಪಿಸಿ ಪಾಲಿಟೆಕ್ನಿಕ್, ಮೈಸೂರು ಸಂಸ್ಥೆಯ ಕಟ್ಟಡದ ನವೀಕರಣ & ಹೊಸ ಸಂಸ್ಥೆಯ ಕಟ್ಟಡದ ನವೀಕರಣ & ಆಡಿಟೋರಿಯಮ್ ಅನ್ನು ಒಳಗೊಂಡಂತೆ ಮೂಲಭೂತ ಸೌಕರ್ಯಗಳನ್ನು ತಲಾ ರೂ.70 ಕೋಟಿಗಳು ಹಾಗೂ ರೂ.50 ಕೋಟಿಗಳ ಮೊತ್ತದಲ್ಲಿ ಒದಗಿಸಿರುವ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ.

BREAKING: State government gives green signal to provide one-day paid menstrual leave to women!
Share. Facebook Twitter LinkedIn WhatsApp Email

Related Posts

BIG NEWS: ರಾಜ್ಯದಲ್ಲಿ ‘ಪಡಿತರ ಚೀಟಿದಾರ’ರಿಗೆ 5 ಕೆಜಿ ಅಕ್ಕಿ ಬದಲು ʻಇಂದಿರಾ ಆಹಾರ ಕಿಟ್‌ʼ: ಸಂಪುಟದ ಮಹತ್ವ ನಿರ್ಧಾರ

09/10/2025 3:55 PM1 Min Read

BREAKING : ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಬೈರತಿ ಬಸವರಾಜ್ ಗೆ ಸಂಕಷ್ಟ : ಬಂಧನದಿಂದ ರಕ್ಷಣೆ ಆದೇಶ ತೆರವು ಕೋರಿ ಅರ್ಜಿ ಸಲ್ಲಿಕೆ

09/10/2025 3:51 PM1 Min Read
vidhana soudha

ಎಲ್ಲಾ ನೇರ ನೇಮಕಾತಿಯಲ್ಲಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ: ರಾಜ್ಯ ಸಚಿವ ಸಂಪುಟ ಅನುಮೋದನೆ

09/10/2025 3:49 PM1 Min Read
Recent News

BIG NEWS: ರಾಜ್ಯದಲ್ಲಿ ‘ಪಡಿತರ ಚೀಟಿದಾರ’ರಿಗೆ 5 ಕೆಜಿ ಅಕ್ಕಿ ಬದಲು ʻಇಂದಿರಾ ಆಹಾರ ಕಿಟ್‌ʼ: ಸಂಪುಟದ ಮಹತ್ವ ನಿರ್ಧಾರ

09/10/2025 3:55 PM

BREAKING : ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಬೈರತಿ ಬಸವರಾಜ್ ಗೆ ಸಂಕಷ್ಟ : ಬಂಧನದಿಂದ ರಕ್ಷಣೆ ಆದೇಶ ತೆರವು ಕೋರಿ ಅರ್ಜಿ ಸಲ್ಲಿಕೆ

09/10/2025 3:51 PM
vidhana soudha

ಎಲ್ಲಾ ನೇರ ನೇಮಕಾತಿಯಲ್ಲಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ: ರಾಜ್ಯ ಸಚಿವ ಸಂಪುಟ ಅನುಮೋದನೆ

09/10/2025 3:49 PM

BREAKING: ರಾಜ್ಯದ ‘ರೇಷನ್ ಕಾರ್ಡ್’ದಾರರಿಗೆ ಗುಡ್ ನ್ಯೂಸ್: ಇನ್ಮುಂದೆ 5 ಕೆಜಿ ಅಕ್ಕಿ ಬದಲು ‘ಆಹಾರದ ಕಿಟ್’ ವಿತರಣೆಗೆ ಸರ್ಕಾರ ನಿರ್ಧಾರ

09/10/2025 3:44 PM
State News
KARNATAKA

BIG NEWS: ರಾಜ್ಯದಲ್ಲಿ ‘ಪಡಿತರ ಚೀಟಿದಾರ’ರಿಗೆ 5 ಕೆಜಿ ಅಕ್ಕಿ ಬದಲು ʻಇಂದಿರಾ ಆಹಾರ ಕಿಟ್‌ʼ: ಸಂಪುಟದ ಮಹತ್ವ ನಿರ್ಧಾರ

By kannadanewsnow0909/10/2025 3:55 PM KARNATAKA 1 Min Read

ಬೆಂಗಳೂರು: ರಾಜ್ಯದ ಬಿಪಿಎಲ್ ಕಾರ್ಡ್ ದಾರರು ಹಾಗೂ ಅಂತ್ಯೋದಯ ಕಾರ್ಡ್ ದಾರರಿಗೆ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ 10 ಕೆಜಿ ಅಕ್ಕಿ…

BREAKING : ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಬೈರತಿ ಬಸವರಾಜ್ ಗೆ ಸಂಕಷ್ಟ : ಬಂಧನದಿಂದ ರಕ್ಷಣೆ ಆದೇಶ ತೆರವು ಕೋರಿ ಅರ್ಜಿ ಸಲ್ಲಿಕೆ

09/10/2025 3:51 PM
vidhana soudha

ಎಲ್ಲಾ ನೇರ ನೇಮಕಾತಿಯಲ್ಲಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ: ರಾಜ್ಯ ಸಚಿವ ಸಂಪುಟ ಅನುಮೋದನೆ

09/10/2025 3:49 PM

BREAKING: ರಾಜ್ಯದ ‘ರೇಷನ್ ಕಾರ್ಡ್’ದಾರರಿಗೆ ಗುಡ್ ನ್ಯೂಸ್: ಇನ್ಮುಂದೆ 5 ಕೆಜಿ ಅಕ್ಕಿ ಬದಲು ‘ಆಹಾರದ ಕಿಟ್’ ವಿತರಣೆಗೆ ಸರ್ಕಾರ ನಿರ್ಧಾರ

09/10/2025 3:44 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.