Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾಳೆ ‘SBI’ ಬ್ಯಾಂಕಿಂಗ್ ಸೇವೆಯಲ್ಲಿ ವ್ಯತ್ಯಯ ; UPI, IMPS, NEFT, RTGS, YONO ಮೇಲೆ ಪರಿಣಾಮ!

10/10/2025 7:26 PM

ಹೀಗಿದೆ ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ GBA ಮೊದಲ ಸಭೆಯ ಪ್ರಮುಖ ಹೈಲೈಟ್ಸ್

10/10/2025 7:23 PM

ಈ ಆಂಜನೇಯನ ಅಷ್ಟೋತ್ತರ ಮಂತ್ರ ಪಠಿಸಿ ನೋಡಿ, ನಿಮ್ಮ ಈಡೇರದ ಆಸೆಯೂ ಈಡೇರುತ್ತೆ

10/10/2025 7:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹೀಗಿದೆ ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ GBA ಮೊದಲ ಸಭೆಯ ಪ್ರಮುಖ ಹೈಲೈಟ್ಸ್
KARNATAKA

ಹೀಗಿದೆ ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ GBA ಮೊದಲ ಸಭೆಯ ಪ್ರಮುಖ ಹೈಲೈಟ್ಸ್

By kannadanewsnow0910/10/2025 7:23 PM

ಬೆಂಗಳೂರು: ಇಂದು ಕೆಂಪೇಗೌಡ ಪೌರ ಸಭಾಂಗಣದಲ್ಲಿ ನಡೆದ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಮೊದಲ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನೀಡಿದ ಸೂಚನೆಗಳು, ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ.

* ಬೆಂಗಳೂರು ಜಾಗತಿಕವಾಗಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ. ವಿಶ್ವದ ಹಲವು ದೇಶಗಳು ಜನರು ಇಲ್ಲಿ ಬಂಡವಾಳ ಹೂಡಿಕೆ ಮಾಡಿರುವುದು ಮಾತ್ರವಲ್ಲ, ಇಲ್ಲಿಯೇ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ. ಇಂದು ಬೆಂಗಳೂರಿನ ಜನಸಂಖ್ಯೆ ಸುಮಾರು 1.40 ಕೋಟಿ ಇದೆ. ಇಂತಹ ಬೃಹತ್‌ ನಗರದ ಸಮರ್ಪಕ ಆಡಳಿತ ಕೇವಲ ಒಂದು ಪಾಲಿಕೆಯಿಂದ ಸಾಧ್ಯವಿಲ್ಲ ಎಂಬ ಚರ್ಚೆ ಇತ್ತು.

* ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನಲ್ಲಿ ಹೆಚ್ಚು ಕಾರ್ಪೊರೇಶನ್‌ ರಚನೆ ಸಾಧ್ಯತೆಗಳ ಕುರಿತು ವರದಿ ನೀಡಲು ಸಮಿತಿ ರಚಿಸಿದ್ದೆವು. ಸಮಿತಿ ಮಧ್ಯಂತರ ವರದಿಯನ್ನು ಸಹ ನೀಡಿತ್ತು. ಆದರೆ ನಂತರ ಬಂದ ಸರ್ಕಾರಗಳಲ್ಲಿ ಈ ಕುರಿತು ಯಾವುದೆ ತೀರ್ಮಾನ ಆಗಿರಲಿಲ್ಲ. ನಾವು ಅಧಿಕಾರಕ್ಕೆ ಬಂದ ಬಳಿಕ ಸಮಿತಿ ಪುನರ್ರಚಿಸಿದೆವು. ಇದೀಗ ಸಾರ್ವಜನಿಕರಿಂದ ಸಲಹೆ, ಆಕ್ಷೇಪಣೆಗಳನ್ನು ಸ್ವೀಕರಿಸಿ ನಾವು ಕಾನೂನು ತಂದು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ರಚಿಸಿದ್ದೇವೆ. ಇದೀಗ ಐದು ನಗರಪಾಲಿಕೆಗಳು ಅಸ್ತಿತ್ವಕ್ಕೆ ಬಂದಿವೆ.

* ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಮೇ 15 ರಂದು ಜಾರಿಗೆ ಬಂತು. ಜನರಿಗೆ ಪೂರಕವಾದ, ಅವರ ಆಶೋತ್ತರಗಳನ್ನು ಈಡೇರಿಸುವ ಆಡಳಿತ ನೀಡುವ ಉದ್ದೇಶದಿಂದ ಪ್ರಜಾಪ್ರಭುತ್ವದ ಆಶಯಕ್ಕೆ ಅನುಗುಣವಾಗಿ ಬಿಜಿಎ ರಚಿಸಿದ್ದೇವೆ. ಅಧಿಕಾರದ ವಿಕೇಂದ್ರೀಕರಣ ಇದರಿಂದ ಸಾಧ್ಯವಾಗಲಿದೆ.

* ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಮುಂದಿನ ದಿನಗಳಲ್ಲಿ ಬೆಂಗಳೂರಿನ ನಾಗರಿಕರಿಗೆ ಅಗತ್ಯ ಮೂಲ ಸೌಲಭ್ಯ ಒದಗಿಸುವುದು, ಸಮರ್ಪಕ ಕಸ ವಿಲೇವಾರಿ, ಸಂಚಾರ ದಟ್ಟಣೆ ಕಡಿಮೆ ಮಾಡುವುದು, ರಸ್ತೆ, ಚರಂಡಿ ವ್ಯವಸ್ಥೆ ಚೆನ್ನಾಗಿರುವಂತೆ ಮಾಡಬೇಕು. ಬೆಂಗಳೂರು ನಗರವನ್ನು ಚೊಕ್ಕಟವಾಗಿ ಇಡಲು, ನಗರದ ಸೌಂದರ್ಯ ಹೆಚ್ಚಿಸಲು ಮತ್ತು ಎಲ್ಲಾ ಐದು ನಗರ ಪಾಲಿಕೆಗಳ ಆದಾಯ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇವೆ.

* ಈ ಎಲ್ಲಾ ಕಾರ್ಯಕ್ಕೆ ಸರ್ಕಾರದ ಜೊತೆಗೆ ಸಮನ್ವಯ ಅಗತ್ಯ. ಮುಂದಿನ ದಿನಗಳಲ್ಲಿ ಎಲ್ಲಾ ಸಂಬಂಧಪಟ್ಟ ಇಲಾಖೆಗಳು, ಬೆಂಗಳೂರು ನಾಗರಿಕರಿಗೆ ಸೇವೆ ಒದಗಿಸುತ್ತಿರುವ ಬಿಡಿಎ, ಬಿಡಬ್ಲುಎಸ್‌ಎಸ್‌ಬಿ, ಬೆಸ್ಕಾಂ, ಬಿಎಂಆರ್‌ಸಿಎಲ್‌ನಂತಹ ಸಂಸ್ಥೆಗಳು ಜಿಬಿಎ ಜತೆ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು.

* ಐದು ನಗರಪಾಲಿಕೆಗಳಿಗೆ ಸಮರ್ಪಕವಾದ ಆಡಳಿತ ಕಚೇರಿಗಳನ್ನು ನಿರ್ಮಿಸಲು ಸ್ಥಳವನ್ನು ಗುರುತಿಸಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲು ಸಭೆಯಲ್ಲಿ ಸೂಚನೆ ನೀಡಿದ್ದೇವೆ. ಆಯಾ ಕಾರ್ಪೊರೇಶನ್‌ಗಳು ತಮ್ಮ ಹಂತದಲ್ಲಿಯೇ ಕಸ ವಿಲೇವಾರಿ ಸಮರ್ಪಕವಾಗಿ ಇರುವಂತೆ ಕ್ರಮ ಕೈಗೊಳ್ಳಬೇಕು.

* ಎಲ್ಲಾ ನಗರಸಭೆ ಆಯುಕ್ತರು ತಮ್ಮ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹವನ್ನು ಹೆಚ್ಚಿಸಬೇಕು. ಕಸ ವಿಲೇವಾರಿ, ಸ್ವಚ್ಚತೆಗೆ ಆದ್ಯತೆ ನೀಡಬೇಕು. ಫುಟ್‌ಪಾತ್‌ಗಳು ಸಾಧ್ಯವಾದಷ್ಟು ವಿಸ್ತಾರವಾಗಿರುವಂತೆ ನೋಡಿಕೊಳ್ಳಬೇಕು. ಗುಣಮಟ್ಟದಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗದಂತೆ ನೋಡಿಕೊಳ್ಳಬೇಕು. ಅಧಿಕಾರಿಗಳು ಗುತ್ತಿಗೆದಾರರೊಂದಿಗೆ ಶಾಮೀಲಾದರೆ ಗುಣಮಟ್ಟದ ಕಾಮಗಾರಿ ಸಾಧ್ಯವಿಲ್ಲ. ಇದಕ್ಕೆ ಅವಕಾಶ ನೀಡಬಾರದು ಎಂದು ಸೂಚನೆ ನೀಡಿದ್ದೇವೆ.

* ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಮೆಟ್ರೊ ಲೈನ್‌ನಲ್ಲಿ ಲಾಸ್ಟ್‌ ಮೈಲ್‌ ಕನೆಕ್ಟಿವಿಟಿಯನ್ನು ಹೆಚ್ಚಿಸುವ ಕುರಿತು ಯೋಜನೆ ರೂಪಿಸಿ ಅನುಷ್ಠಾನಗೊಳಿಸಲು ಸೂಚನೆ ನೀಡಲಾಗಿದೆ. ಇದಕ್ಕಾಗಿ ಸಣ್ಣ ಬಸ್ಸುಗಳನ್ನು ನಿಯೋಜಿಸುವ ಬಗ್ಗೆ ಪರಿಶೀಲಿಸಲು ಸಾರಿಗೆ ಸಚಿವರಿಗೆ ಸೂಚನೆ.

* ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ರಚನೆ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ. ಜನರಿಗೆ ಅತ್ಯುತ್ತಮ ನಾಗರಿಕ ಸೌಲಭ್ಯ, ಉತ್ತಮ ಆಡಳಿತ ನೀಡಬೇಕೆಂಬ ಉದ್ದೇಶವನ್ನು ಈಡೇರಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಎಲ್ಲರೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು.

* ಜನಪ್ರತಿನಿಧಿಗಳು ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಹೇಳಿಕೊಳ್ಳಲು ಇಲ್ಲಿ ಅವಕಾಶವಿದೆ. ಆದರೆ ಕೆಲವು ಜನಪ್ರತಿನಿಧಿಗಳು ಈ ಅವಕಾಶ ಕಳೆದುಕೊಂಡಿದ್ದಾರೆ. ಬೆಂಗಳೂರು ಅಭಿವೃದ್ಧಿಗೆ ವಿರೋಧವಿರುವವರು, ಅಧಿಕಾರ ವಿಕೇಂದ್ರೀಕರಣಕ್ಕೆ ವಿರೋಧವಿರುವವರು ಈ ಸಭೆಯನ್ನು ಬಹಿಷ್ಕರಿಸಿದ್ದಾರೆ.

BREAKING: ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್, ಬೆದರಿಕೆ ಕೇಸ್: 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು

ಮಂಡ್ಯದಲ್ಲಿ ಕುಂಭದ್ರೋಣ ಮಳೆಗೆ ಪೋಲೀಸ್ ಠಾಣೆ, 10ಕ್ಕೂ ಹೆಚ್ಚು ಮನೆಗಳಿಗೆ ‘ಜಲ ದಿಗ್ಬಂಧನ’

Share. Facebook Twitter LinkedIn WhatsApp Email

Related Posts

ಈ ಆಂಜನೇಯನ ಅಷ್ಟೋತ್ತರ ಮಂತ್ರ ಪಠಿಸಿ ನೋಡಿ, ನಿಮ್ಮ ಈಡೇರದ ಆಸೆಯೂ ಈಡೇರುತ್ತೆ

10/10/2025 7:17 PM3 Mins Read

ಮಂಡ್ಯದಲ್ಲಿ ಕುಂಭದ್ರೋಣ ಮಳೆಗೆ ಪೋಲೀಸ್ ಠಾಣೆ, 10ಕ್ಕೂ ಹೆಚ್ಚು ಮನೆಗಳಿಗೆ ‘ಜಲ ದಿಗ್ಬಂಧನ’

10/10/2025 7:13 PM2 Mins Read

‘ಹಾಸನಾಂಭ ಭಕ್ತ’ರ ಗಮನಕ್ಕೆ: ‘KSRTC’ಯಿಂದ ಜಾತ್ರೆ ಪ್ರಯುಕ್ತ ‘ವಿಶೇಷ ಪ್ಯಾಕೇಜ್ ಪ್ರವಾಸ’ ಆರಂಭ

10/10/2025 7:11 PM1 Min Read
Recent News

ನಾಳೆ ‘SBI’ ಬ್ಯಾಂಕಿಂಗ್ ಸೇವೆಯಲ್ಲಿ ವ್ಯತ್ಯಯ ; UPI, IMPS, NEFT, RTGS, YONO ಮೇಲೆ ಪರಿಣಾಮ!

10/10/2025 7:26 PM

ಹೀಗಿದೆ ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ GBA ಮೊದಲ ಸಭೆಯ ಪ್ರಮುಖ ಹೈಲೈಟ್ಸ್

10/10/2025 7:23 PM

ಈ ಆಂಜನೇಯನ ಅಷ್ಟೋತ್ತರ ಮಂತ್ರ ಪಠಿಸಿ ನೋಡಿ, ನಿಮ್ಮ ಈಡೇರದ ಆಸೆಯೂ ಈಡೇರುತ್ತೆ

10/10/2025 7:17 PM

BREAKING : ಡಿಸೆಂಬರ್ 13-15ರ ನಡುವೆ 2026ರ ‘IPL’ ಹರಾಜು, ಆಟಗಾರರ ಉಳಿಸಿಕೊಳ್ಳಲು ನ.15 ಕೊನೆ ದಿನ

10/10/2025 7:15 PM
State News
KARNATAKA

ಹೀಗಿದೆ ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ GBA ಮೊದಲ ಸಭೆಯ ಪ್ರಮುಖ ಹೈಲೈಟ್ಸ್

By kannadanewsnow0910/10/2025 7:23 PM KARNATAKA 2 Mins Read

ಬೆಂಗಳೂರು: ಇಂದು ಕೆಂಪೇಗೌಡ ಪೌರ ಸಭಾಂಗಣದಲ್ಲಿ ನಡೆದ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಮೊದಲ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನೀಡಿದ…

ಈ ಆಂಜನೇಯನ ಅಷ್ಟೋತ್ತರ ಮಂತ್ರ ಪಠಿಸಿ ನೋಡಿ, ನಿಮ್ಮ ಈಡೇರದ ಆಸೆಯೂ ಈಡೇರುತ್ತೆ

10/10/2025 7:17 PM

ಮಂಡ್ಯದಲ್ಲಿ ಕುಂಭದ್ರೋಣ ಮಳೆಗೆ ಪೋಲೀಸ್ ಠಾಣೆ, 10ಕ್ಕೂ ಹೆಚ್ಚು ಮನೆಗಳಿಗೆ ‘ಜಲ ದಿಗ್ಬಂಧನ’

10/10/2025 7:13 PM

‘ಹಾಸನಾಂಭ ಭಕ್ತ’ರ ಗಮನಕ್ಕೆ: ‘KSRTC’ಯಿಂದ ಜಾತ್ರೆ ಪ್ರಯುಕ್ತ ‘ವಿಶೇಷ ಪ್ಯಾಕೇಜ್ ಪ್ರವಾಸ’ ಆರಂಭ

10/10/2025 7:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.