ಬೆಂಗಳೂರು : ಬೆಂಗಳೂರಿನ ಲಾಲ್ ಬಾಗ್ನಲ್ಲಿ ನಡೆಯುತ್ತಿರುವ ಜಿಬಿಎ ವಾಕಥಾನ್ ನಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗವಹಿಸಿದ್ದರು.
ಬೆಂಗಳೂರಿನ ಸಾಮಾನ್ಯ ನಾಗರಿಕರ ಬಳಿ ನಾನು ಮಾತನಾಡಬೇಕು. ಅವರ ಸಮಸ್ಯೆ, ಅಭಿಪ್ರಾಯಗಳನ್ನು ಆಲಿಸಬೇಕು. ಈ ಕಾರಣಕ್ಕಾಗಿ ಪ್ರತಿ ಶನಿವಾರ ಹಾಗೂ ಭಾನುವಾರದ ಬೆಳಿಗ್ಗೆ ವೇಳೆ ಪಾಲಿಕೆವಾರು ‘ಉದ್ಯಾನ ನಡಿಗೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
ಬಿಜಿಎ ಸಭಾಂಗಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಪಾಲಿಕೆವಾರು ಭದ್ಯಾನಗಳಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇನೆ. ಇದೇ ಶನಿವಾರ ಲಾಲ್ ಬಾಗ್ ನಲ್ಲಿ ಹಾಗೂ ಭಾನುವಾರ ಜೆ.ಪಿ. ಪಾರ್ಕ್ ನಲ್ಲಿ ಈ ನಡಿಗೆ ಕಾರ್ಯಕ್ರಮ ಇಟ್ಟುಕೊಂಡಿದ್ದೇನೆ. ಇದೇ ರೀತಿ ಮೊದಲ ಹಂತದಲ್ಲಿ 10 ದಿನ 10 ಉದ್ಯಾನಗಳಲ್ಲಿ ಈ ಕಾರ್ಯಕ್ರಮ ಮಾಡಲಿದ್ದೇನೆ. ಸಾರ್ವಜನಿಕರ ಅಭಿಪ್ರಾಯ, ಸಲಹೆ ಪಡೆದು ಅಗತ್ಯ ಬದಲಾವಣೆ ತಿದ್ದುಪಡಿ ಮಾಡಿಕೊಳ್ಳಲು ಈ ಕಾರ್ಯಕ್ರಮ. ನಡಿಗೆಯ ಅವಧಿ ಒಂದು ಗಂಟೆಯಿರುತ್ತದೆ. ಈ ವೇಳೆ ಜನ ಸಾಮಾನ್ಯರ ಬಳಿ ವಿಚಾರಗಳ ವಿನಿಮಯ ಹಾಗೂ ಚರ್ಚೆ ನಡೆಸಲಾಗುವುದು. ಏಕೆಂದರೆ ನಾಯಕರೇ ಒಂದು ಹೇಳುತ್ತಾರೆ. ಜನಸಾಮಾನ್ಯರೇ ಒಂದಷ್ಟು ಹೇಳುತ್ತಾರೆ. ಜನರ ಸಮಸ್ಯೆ ಏನಿದೆ ಎಂದು ಅವರಿಂದಲೇ ತಿಳಿದುಕೊಳ್ಳಬೇಕು. ಈ ದೃಷ್ಟಿಯಿಂದ ಈ ಕಾರ್ಯಕ್ರಮ ನಡೆಸಲಾಗುತ್ತಿದೆ” ಎಂದರು.
ಟನಲ್ ರಸ್ತೆಯಿಂದ ಲಾಲ್ ಬಾಗ್ ಗೆ ಹಾನಿಯಾಗಲಿದೆ ಎಂದು ಕೇಳಿದಾಗ “ಟನಲ್ ರಸ್ತೆಯಿಂದ ಲಾಲ್ ಬಾಗ್ ಹಾಳಾಗುತ್ತದೆ ಎಂದು ಹೇಳಲಾಗುತ್ತಿದೆ. ಲಾಲ್ ಬಾಗ್ ಹಾಳಾಗುವುದಿಲ್ಲ. ಅದನ್ನು ಹಾಳು ಮಾಡಿದರೆ ನನ್ನ ತಲೆ ಒಡೆದು ಹಾಕುತ್ತಾರೆ ಎಂಬುದು ನನಗೆ ಗೊತ್ತಿದೆ. ಒಂದು ಮೂಲೆಯಲ್ಲಿ ಭೂಗರ್ಭದಲ್ಲಿ ಹೋಗುತ್ತದೆ. ಲಾಲ್ ಬಾಗ್ ಗೆ ಯಾವುದೇ ತೊಂದರೆಯಾಗುವುದಿಲ್ಲ, ತೊಂದರೆ ಮಾಡಲು ಆಗುವುದಿಲ್ಲ” ಎಂದರು.
“ಉದ್ಯಾನದ ಒಂದು ಮೂಲೆಯಲ್ಲಿ ಕಲ್ಲು ಬಂಡೆಯಿದ್ದು ಅಲ್ಲಿ ಟನಲ್ ರಸ್ತೆಗೆ ಪ್ರವೇಶ ಕಲ್ಪಿಸುವಂತೆ ಯೋಜಿಸಲಾಗಿದೆ. ಆ ಪ್ರದೇಶವನ್ನು ನಾನು ವೀಕ್ಷಣೆ ಮಾಡುತ್ತೇನೆ. ಏನಾದರೂ ತೊಂದರೆಗಳು, ಬದಲಾವಣೆಗಳಿದ್ದರೆ ಅದನ್ನು ಮಾಡಿಕೊಳ್ಳೋಣ. ಐತಿಹಾಸಿಕ ಲಾಲ್ ಬಾಗ್ ಅನ್ನು ಹಾಳು ಮಾಡಲು ಆಗುತ್ತದೆಯೇ? ಅಧಿಕಾರಿಗಳು ವರದಿ ನೀಡಿದ್ದಾರೆ. ಆದರೆ ನಾನೇ ಕಣ್ಣಾರೆ ನೋಡಿ ತಿಳಿದುಕೊಳ್ಳುತ್ತೇನೆ” ಎಂದು ತಿಳಿಸಿದರು.
#WATCH | Karnataka Deputy CM DK Shivakumar participates in GBA Walkathon at Lalbagh, Bengaluru. pic.twitter.com/tqVaOwEBwq
— ANI (@ANI) October 11, 2025