Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು-ಗದಗಕ್ಕೆ ‘ಪಲ್ಲಕ್ಕಿ ನಾನ್ ಎಸಿ ಸ್ಲೀಪರ್ ಬಸ್’ ಸಂಚಾರ ಆರಂಭ: ಹೀಗಿದೆ ವೇಳಾಪಟ್ಟಿ, ಟಿಕೆಟ್ ದರ

14/10/2025 5:25 PM

ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಆತ್ಮಹತ್ಯೆ ಗ್ಯಾರೆಂಟಿ: ಡಾ.ಸಿ.ಎನ್.ಅಶ್ವತ್ಥನಾರಾಯಣ್

14/10/2025 4:50 PM

ಶಿವಮೊಗ್ಗ: ‘ಮೆಸ್ಕಾಂ ಇಲಾಖೆ’ಯ ನಿರ್ಲಕ್ಷ್ಯಕ್ಕೆ ಸೊರಬದ ಉಳವಿಯಲ್ಲಿ ಯುವಕನಿಗೆ ‘ವಿದ್ಯುತ್ ಶಾಕ್’

14/10/2025 4:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಆತ್ಮಹತ್ಯೆ ಗ್ಯಾರೆಂಟಿ: ಡಾ.ಸಿ.ಎನ್.ಅಶ್ವತ್ಥನಾರಾಯಣ್
KARNATAKA

ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಆತ್ಮಹತ್ಯೆ ಗ್ಯಾರೆಂಟಿ: ಡಾ.ಸಿ.ಎನ್.ಅಶ್ವತ್ಥನಾರಾಯಣ್

By kannadanewsnow0914/10/2025 4:50 PM

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಕಾರ್ಯ ವೈಖರಿಯಿಂದ ಸರ್ಕಾರದ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಈ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಆತ್ಮಹತ್ಯೆ ಗ್ಯಾರೆಂಟಿ ಒಂದೇ ಇರುವುದು ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಅವರು ಆರೋಪಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಜವಾಬ್ದಾರಿ, ಸೂಕ್ಷ್ಮತೆ, ನೈತಿಕತೆ ಮತ್ತು ಮೌಲ್ಯಗಳ ಕಾಳಜಿ ಇಟ್ಟುಕೊಂಡಿರುವ ಪ್ರಾಮಾಣಿಕ ಅಧಿಕಾರಿಗಳು ಇಂದು ಕಾಂಗ್ರೆಸ್ ಸರ್ಕಾರದ ಆಡಳಿತದಿಂದ ಸಾಯುವ ಸ್ಥಿತಿ ಬಂದಿದೆ ಎಂದು ತಿಳಿಸಿದರು.

ಕಲಬುರ್ಗಿ ಜಿಲ್ಲೆಯ ಗ್ರಂಥಾಲಯದ ಗ್ರಂಥಪಾಲಕಿ ಭಾಗ್ಯವತಿ ಅವರು 15 ತಿಂಗಳಿಂದ ಗ್ರಂಥಾಲಯದ ದಿನಪತ್ರಿಕೆ ಬಿಲ್ಲನ್ನು ಪಾವತಿಸಿಲ್ಲ, ಕರೆಂಟ್ ಬಿಲ್ಲನ್ನು ಪಾವತಿಸಿಲ್ಲ, ಗ್ರಂಥಾಲಯದಲ್ಲಿ ಕಾರ್ಯವನ್ನು ಮಾಡುವುದಕ್ಕೆ ಯಾವುದೇ ರೀತಿಯ ಸಹಕಾರ ಇಲ್ಲ. ಗ್ರಂಥಪಾಲಕಿ ಪ್ರತಿನಿತ್ಯ ಅನುಭವಿಸುತ್ತಿದ್ದ ಅವಮಾನ ಮತ್ತು ಅಸಹಾÀಯಕತೆಯನ್ನು ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡು ಸರ್ಕಾರಕ್ಕೆ ಬಹಳ ಸ್ಪಷ್ಟವಾದ ಸಂದೇಶ ಕೊಟ್ಟಿದ್ದಾರೆ ಎಂದು ವಿವರಿಸಿದರು.

ಲಜ್ಜೆಗೆಟ್ಟ ಈ ಸರ್ಕಾರ ಯಾವ ಜವಾಬ್ದಾರಿ ಇಲ್ಲದೆ ಮನಬಂದಂತೆ ಏನು ಬೇಕಾದರೂ ಮಾಡಿ ಜಯಿಸಬಹುದು; ಯಾವುದರ ಬಗ್ಗೆ ಪರಿಜ್ಞಾನ ಇಲ್ಲದಿದ್ದರೂ ಕಾರ್ಯ ನಿರ್ವಹಿಸುತ್ತಿರುವ ಇಂತಹ ಕೆಟ್ಟ ಸರ್ಕಾರವನ್ನು ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ಬಯಲಿಗೆಳೆಯುವ ಪರಿಸ್ಥಿತಿ ಇಂದು ನಿರ್ಮಾಣವಾಗಿದೆ ಎಂದು ತಿಳಿಸಿದರು.

ಒಳಜಗಳದಿಂದ ಬೆಂಗಳೂರು ಕಡೆಗಣನೆ…

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಬೆಂಗಳೂರು ನಗರವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳ ಒಳಜಗಳದಿಂದ ಬೆಂಗಳೂರನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ ಎಂದು ಡಾ.ಸಿ.ಎನ್. ಅಶ್ವತ್ಥನಾರಾಯಣ್ ಅವರು ಆರೋಪಿಸಿದರು.

ಇಂದು ಬೆಂಗಳೂರಿನ ರಸ್ತೆಗಳಲ್ಲಿ ಗುಂಡಿ ಮುಚ್ಚಲು ಆಗುತ್ತಿಲ್ಲ, ಕಸ ವಿಲೇವಾರಿ ಮಾಡುವುದಕ್ಕೆ ಆಗುತ್ತಿಲ್ಲ ಮತ್ತು ಕಾನೂನು ಸುವ್ಯವಸ್ಥೆ ನೀಡುವುದಕ್ಕೆ ವಿಫಲರಾಗಿದ್ದಾರೆ ಎಂದು ತಿಳಿಸಿದರು. ಉದ್ಯಮಿಗಳಾದ ಕಿರಣ್ ಮಜುಂದಾರ್-ಶಾ ಅವರು, ಮೋಹನ್ ದಾಸ್ ಪೈ, ಬ್ಲಾಕ್ ಬಕ್‍ನ ಸಿಇಒ ಅವರು ಬೆಂಗಳೂರು ಅವ್ಯವಸ್ಥೆ ಬಗ್ಗೆ ಹೇಳುತ್ತಿದ್ದಾರೆ. ಅವರ ಹೇಳಿಕೆಗಳಿಗೆ ಬೆದರಿಕೆ ಹಾಕುವ ಕೆಲಸವಾಗುತ್ತಿದೆ ಎಂದು ಆರೋಪಿಸಿದರು.

ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವ ಪ್ರಿಯಾಂಕ್ ಖರ್ಗೆ ಅವರನ್ನು ಯಾರಾದರೂ ಖಂಡಿಸಿದರೆ, ಪ್ರಶ್ನೆ ಮಾಡಿದರೆ ಅವರು ಬಿಜೆಪಿ ಬೆಂಬಲಿಗರು ಎಂದು ಹೇಳುತ್ತಾರೆ. ಅವರು ಪ್ರಜಾಪ್ರಭುತ್ವ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಉಲ್ಲೇಖ ಮಾಡುತ್ತಿರುತ್ತಾರೆ. ಅವರಿಗೆ ನೈತಿಕತೆ ಇದೆಯೇ?; ಅವರು ಯಾವ ಪ್ರಜಾಪ್ರಭುತ್ವವನ್ನು ಗೌರವಿಸುತ್ತಾರೆ ಹಾಗೂ ಪ್ರಜಾಪ್ರಭುತ್ವದ ಅವರಿಗೆ ತಿಳಿದಿದೆಯೇ ಎಂದು ಕೇಳಿದರು.

ಮಲ್ಲಿಕಾರ್ಜುನ ಖರ್ಗೆ ಅವರ ಮಗನಾಗಿರುವುದಕ್ಕೆ ಇಂದು ಅವರಿಗೆ ಸ್ಥಾನ ಸಿಕ್ಕಿದೆ. ಪ್ರಿಯಾಂಕ್ ಖರ್ಗೆ ಆಗಿಲ್ಲದ್ದಿದ್ದರೆ ಅವರ ವಿದ್ಯಾರ್ಹತೆಗೆ ಕಚೇರಿ ಸಹಾಯಕ ಉದ್ಯೋಗವೂ ಸಿಗುತ್ತಿರಲಿಲ್ಲ ಎಂದು ವ್ಯಂಗ್ಯವಾಡಿದರು. ಕಾಂಗ್ರೆಸ್ ಸರ್ಕಾರ ಬಂದಾಗ ಮಾತ್ರ ಸಾರ್ವಜನಿಕರು, ಗುತ್ತಿಗೆದಾರರು, ಸರ್ಕಾರಿ ಅಧಿಕಾರಿಗಳು ಸರಣಿ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ನಾವು ಕಾಣುತ್ತಿದ್ದೇವೆ ಎಂದು ಆಕ್ಷೇಪಿಸಿದರು. ಇಂದು ಸಚಿವ ಪ್ರಿಯಾಂಕ್ ಖರ್ಗೆ ಅವರ ಜಿಲ್ಲೆ ಮತ್ತು ಇಲಾಖೆ ಯಲ್ಲಿ ವೇತನ ನೀಡಿರುವುದಿಲ್ಲ. ಇದೆಲ್ಲವನ್ನು ಗಮನಿಸಿದ ಮಹಾನ್ ದೇಶಭಕ್ತ, ಮಹಾನ್ ಸಾಧಕ ಎಲ್ಲಿ ಹೋಗಿದ್ದೀರ ಎಂದು ಪ್ರಶ್ನಿಸಿದರು.

ಇಂತಹ ವಿಚಾರಗಳು ಇದ್ದಾಗ ಪ್ರಿಯಾಂಕ್ ಖರ್ಗೆ ಅವರ ಧ್ವನಿ ಅಡಗಿ ಹೋಗುತ್ತದೆ. ಎಷ್ಟಾದರೂ ಹೇಳಿ; ಏನಾದರೂ ಹೇಳಿ- ಅವರು ವಿಚಾರಗಳ ಸೂಕ್ಷ್ಮತೆಯನ್ನೇ ಕಳೆದುಕೊಂಡಿದ್ದಾರೆ ಎಂದರು. ಎಷ್ಟೇ ಅಂಕುಶದಲ್ಲಿ ಅವರಿಗೆ ಚುಚ್ಚಿದರು ತಲೆಗೆ ಬಂದ ಹಾಗೆ, ಮನಬಂದ ಹಾಗೆ ಮಾತನಾಡುತ್ತಾರೆ. ರಾಜ್ಯದ ಜನ ಪಶ್ಚಾತ್ತಾಪಪಡುತ್ತಿದ್ದು, ಜನರ ಜೀವವನ್ನು ತೆಗೆದುಕೊಳ್ಳುವ ಸರ್ಕಾರ ತೊಲಗಲಿ; ಸಾಕಪ್ಪ ಸಾಕು ಈ ಸರ್ಕಾರ ಎಂದು ಹೇಳುತ್ತಿದ್ದಾರೆ ಎಂದು ತಿಳಿಸಿದರು.

ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಮತ್ತು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಅವರು ಉಪಸ್ಥಿತರಿದ್ದರು.

ಶಿವಮೊಗ್ಗ: ‘ಮೆಸ್ಕಾಂ ಇಲಾಖೆ’ಯ ನಿರ್ಲಕ್ಷ್ಯಕ್ಕೆ ಸೊರಬದ ಉಳವಿಯಲ್ಲಿ ಯುವಕನಿಗೆ ‘ವಿದ್ಯುತ್ ಶಾಕ್’

BREAKING : ‘ಬಿಹಾರ ವಿಧಾನಸಭಾ ಚುನಾವಣೆ’ಗೆ BJP ಮೊದಲ ಪಟ್ಟಿ ಬಿಡುಗಡೆ: ’71 ಅಭ್ಯರ್ಥಿ’ಗಳ ಹೆಸರು ಘೋಷಣೆ

Good News ; ‘RBI’ನಿಂದ ‘e₹’ ಅನಾವರಣ ; ಈಗ ಇಂಟರ್ನೆಟ್ ಅಗತ್ಯವಿಲ್ಲ, ಒಂದೇ ಕ್ಲಿಕ್’ನಲ್ಲಿ ‘ಪಾವತಿ’

Share. Facebook Twitter LinkedIn WhatsApp Email

Related Posts

ಬೆಂಗಳೂರು-ಗದಗಕ್ಕೆ ‘ಪಲ್ಲಕ್ಕಿ ನಾನ್ ಎಸಿ ಸ್ಲೀಪರ್ ಬಸ್’ ಸಂಚಾರ ಆರಂಭ: ಹೀಗಿದೆ ವೇಳಾಪಟ್ಟಿ, ಟಿಕೆಟ್ ದರ

14/10/2025 5:25 PM1 Min Read

ಶಿವಮೊಗ್ಗ: ‘ಮೆಸ್ಕಾಂ ಇಲಾಖೆ’ಯ ನಿರ್ಲಕ್ಷ್ಯಕ್ಕೆ ಸೊರಬದ ಉಳವಿಯಲ್ಲಿ ಯುವಕನಿಗೆ ‘ವಿದ್ಯುತ್ ಶಾಕ್’

14/10/2025 4:45 PM2 Mins Read

BREAKING : ಸಾರಿಗೆ ನೌಕರರಿಗೆ ಬಿಗ್ ಶಾಕ್ : ಮುಷ್ಕರದ ಅವಧಿಯಲ್ಲಿ ರಜೆ ನೀಡಲ್ಲವೆಂದು ‘KSRTC’ ಖಡಕ್ ಆದೇಶ

14/10/2025 4:39 PM1 Min Read
Recent News

ಬೆಂಗಳೂರು-ಗದಗಕ್ಕೆ ‘ಪಲ್ಲಕ್ಕಿ ನಾನ್ ಎಸಿ ಸ್ಲೀಪರ್ ಬಸ್’ ಸಂಚಾರ ಆರಂಭ: ಹೀಗಿದೆ ವೇಳಾಪಟ್ಟಿ, ಟಿಕೆಟ್ ದರ

14/10/2025 5:25 PM

ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಆತ್ಮಹತ್ಯೆ ಗ್ಯಾರೆಂಟಿ: ಡಾ.ಸಿ.ಎನ್.ಅಶ್ವತ್ಥನಾರಾಯಣ್

14/10/2025 4:50 PM

ಶಿವಮೊಗ್ಗ: ‘ಮೆಸ್ಕಾಂ ಇಲಾಖೆ’ಯ ನಿರ್ಲಕ್ಷ್ಯಕ್ಕೆ ಸೊರಬದ ಉಳವಿಯಲ್ಲಿ ಯುವಕನಿಗೆ ‘ವಿದ್ಯುತ್ ಶಾಕ್’

14/10/2025 4:45 PM

Watch Video : ಮದೀನಾದಲ್ಲಿ ‘ಪ್ರೇಮಾನಂದ ಮಹಾರಾಜ’ ಆರೋಗ್ಯಕ್ಕಾಗಿ ಪ್ರಾರ್ಥಿಸಿದ ಮುಸ್ಲಿಂ ಯುವಕ, ವಿಡಿಯೋ ವೈರಲ್

14/10/2025 4:45 PM
State News
KARNATAKA

ಬೆಂಗಳೂರು-ಗದಗಕ್ಕೆ ‘ಪಲ್ಲಕ್ಕಿ ನಾನ್ ಎಸಿ ಸ್ಲೀಪರ್ ಬಸ್’ ಸಂಚಾರ ಆರಂಭ: ಹೀಗಿದೆ ವೇಳಾಪಟ್ಟಿ, ಟಿಕೆಟ್ ದರ

By kannadanewsnow0914/10/2025 5:25 PM KARNATAKA 1 Min Read

ಬೆಂಗಳೂರು: ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಕೆ ಎಸ್ ಆರ್ ಟಿಸಿಯಿಂದ ಬೆಂಗಳೂರಿನಿಂದ ಶಿರಹಟ್ಟಿಗೆ ನಾನ್ ಎಸಿ ಸ್ಲೀಪರ್ ಪಲ್ಲಕ್ಕಿ…

ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಆತ್ಮಹತ್ಯೆ ಗ್ಯಾರೆಂಟಿ: ಡಾ.ಸಿ.ಎನ್.ಅಶ್ವತ್ಥನಾರಾಯಣ್

14/10/2025 4:50 PM

ಶಿವಮೊಗ್ಗ: ‘ಮೆಸ್ಕಾಂ ಇಲಾಖೆ’ಯ ನಿರ್ಲಕ್ಷ್ಯಕ್ಕೆ ಸೊರಬದ ಉಳವಿಯಲ್ಲಿ ಯುವಕನಿಗೆ ‘ವಿದ್ಯುತ್ ಶಾಕ್’

14/10/2025 4:45 PM

BREAKING : ಸಾರಿಗೆ ನೌಕರರಿಗೆ ಬಿಗ್ ಶಾಕ್ : ಮುಷ್ಕರದ ಅವಧಿಯಲ್ಲಿ ರಜೆ ನೀಡಲ್ಲವೆಂದು ‘KSRTC’ ಖಡಕ್ ಆದೇಶ

14/10/2025 4:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.