Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಅಮೃತಸರದಿಂದ ಸಹರ್ಸಾಗೆ ತೆರಳುತ್ತಿದ್ದ `ಗರೀಬ್ ರಥ್ ಎಕ್ಸ್ ಪ್ರೆಸ್ ’ ರೈಲಿನಲ್ಲಿ ಭಾರಿ ಬೆಂಕಿ.!

18/10/2025 9:36 AM

BREAKING : ವಿಜಯಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು : ಪೊಲೀಸರ ಎನ್ಕೌಂಟರ್ ನಲ್ಲಿ ನಟೋರಿಯಸ್ ರೌಡಿಶೀಟರ್ ಬಲಿ.!

18/10/2025 9:32 AM

ದೀಪಾವಳಿ ಸಮಯ, ಸಕ್ಕರೆ ಸೇವನೆ ಹೆಚ್ಚಳ ಆತಂಕಕಾರಿ: ತಜ್ಞರ ಎಚ್ಚರಿಕೆ

18/10/2025 9:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಸರ್ಕಾರದ ಸಭೆ, ಸಮಾರಂಭಗಳಲ್ಲಿ ಜನಪ್ರತಿನಿಧಿಗಳನ್ನು ಆಹ್ವಾನಿಸಲು ಈ ನಿಯಮಗಳ ಪಾಲನೆ ಕಡ್ಡಾಯ.!
KARNATAKA

BIG NEWS : ಸರ್ಕಾರದ ಸಭೆ, ಸಮಾರಂಭಗಳಲ್ಲಿ ಜನಪ್ರತಿನಿಧಿಗಳನ್ನು ಆಹ್ವಾನಿಸಲು ಈ ನಿಯಮಗಳ ಪಾಲನೆ ಕಡ್ಡಾಯ.!

By kannadanewsnow5717/10/2025 6:18 AM

ಬೆಂಗಳೂರು : ಸರ್ಕಾರದ ಸಭೆ ಮತ್ತು ಸಮಾರಂಭಗಳಿಗೆ ಜನಪ್ರತಿನಿಧಿಗಳನ್ನು ಆಹ್ವಾನಿಸುವ ಬಗ್ಗೆ ಅನುಸರಿಸಬೇಕಾದ ಶಿಷ್ಟಾಚಾರದ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಸರ್ಕಾರದ ಸಭೆ ಮತ್ತು ಸಮಾರಂಭಗಳಿಗೆ ಜನಪ್ರತಿನಿಧಿಗಳನ್ನು ಆಹ್ವಾನಿಸುವ ಬಗ್ಗೆ ಅನುಸರಿಸಬೇಕಾದ ಶಿಷ್ಟಾಚಾರದ ಕುರಿತು ಸಮಗ್ರವಾದ ಸೂಚನೆಗಳನ್ನು ಈಗಾಗಲೇ ಸರ್ಕಾರದ ಸುತ್ತೋಲೆ ಸಂಖ್ಯೆ: ಸಿಆಸುಇ 34 ಹೆಚ್ ಪಿಎ 2018, ದಿನಾಂಕ:16.04.2019ರಲ್ಲಿ ಹೊರಡಿಸಲಾಗಿರುತ್ತದೆ.

ಸಾರ್ವಜನಿಕ ಸರ್ಕಾರಿ ಕಾರ್ಯಕ್ರಮಗಳ ಆಹ್ವಾನ ಪತ್ರಿಕೆಗಳಲ್ಲಿ ಆಹ್ವಾನಿತರ ಹಾಜರಾಗುವಿಕೆಯನ್ನು ಖಚಿತಪಡಿಸಿಕೊಳ್ಳದೇ ಮುದ್ರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಆಹ್ವಾನಿತರ ಸಂಖ್ಯೆಯು ಹೆಚ್ಚಾಗುತ್ತಿದ್ದು ಶಿಷ್ಟಾಚಾರದನ್ವಯ ಆಸನ ವ್ಯವಸ್ಥೆಯನ್ನು ಏರ್ಪಡಿಸುವಲ್ಲಿ ಗೊಂದಲವಾಗುತ್ತಿರುವುದರಿಂದ ಸರ್ಕಾರಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಹಾಗೂ ಸರ್ಕಾರಿ ಸಾರ್ವಜನಿಕ ಕಾರ್ಯಕ್ರಮಗಳನ್ನು ಸುಗಮವಾಗಿ ಮತ್ತು ಘನತೆಯಿಂದ ನಡೆಸಲು ಅನುವಾಗುವಂತೆ ໖:16.04.20190 ಸುತ್ತೋಲೆಯಲ್ಲಿನ ಮಾರ್ಗಸೂಚಿಗಳನ್ನು ಮಾರ್ಪಡಿಸಿ ಈ ಕೆಳಕಂಡಂತೆ ಹೊಸ ಮಾರ್ಗ ಸೂಚಿಗಳನ್ನು ಅಧಿಸೂಚಿಸಲಾಗಿದೆ.

1. ಸರ್ಕಾರಿ ಕಾರ್ಯಕ್ರಮಗಳನ್ನು ಈ ಕೆಳಕಂಡಂತೆ ವರ್ಗೀಕರಿಸಿದೆ. –

(a) ರಾಜ್ಯ ಮಟ್ಟದ ಕಾರ್ಯಕ್ರಮಗಳು: -ಈ ಕಾರ್ಯಕ್ರಮಗಳು ರಾಜ್ಯ ಸರ್ಕಾರದ ಒಂದು ಇಲಾಖೆಯು ಪ್ರತ್ಯೇಕವಾಗಿ ಅಥವಾ ಇನ್ನೊಂದು ಇಲಾಖೆಯ ಅಂಗಸಂಸ್ಥೆಗಳು / ಸ್ವಯಂ ಸೇವಾ / ಇತರೆ ಸಂಸ್ಥೆಗಳ ಸಹಯೋಗದೊಂದಿಗೆ ಒಂದು ಜಿಲ್ಲೆಗಿಂತ ಹೆಚ್ಚಿನ ಜಿಲ್ಲೆಗಳಿಗೆ ಸಂಬಂಧಿಸಿದ ಯೋಜನೆಗಳು ಅಥವಾ ಕಾರ್ಯಕ್ರಮಗಳ ಕುರಿತು ಆಯೋಜಿಸಲಾಗುತ್ತದೆ.

(b) ಇಲಾಖೆಗಳು ಆಯೋಜಿಸುವ ಜಿಲ್ಲಾ ಮಟ್ಟದ ಕಾರ್ಯಕ್ರಮಗಳು: – ಈ ಕಾರ್ಯಕ್ರಮಗಳು ರಾಜ್ಯ ಸರ್ಕಾರದ ಒಂದು ಇಲಾಖೆಯು ಪ್ರತ್ಯೇಕವಾಗಿ ಅಥವಾ ಇನ್ನೊಂದು ಇಲಾಖೆ/ ಅಂಗಸಂಸ್ಥೆಗಳು / ಸ್ವಯಂ ಸೇವಾ / ಇತರೆ ಸಂಸ್ಥೆಗಳ ಸಹಯೋಗದೊಂದಿಗೆ ಒಂದು ಜಿಲ್ಲೆಗೆ ಸಂಬಂಧಿಸಿದ ಯೋಜನೆಗಳು ಅಥವಾ ಕಾರ್ಯಕ್ರಮಗಳ ಕುರಿತು ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಅಥವಾ ಜಿಲ್ಲೆಯ ಇತರ ಭಾಗದಲ್ಲಿ ಆಯೋಜಿಸಲಾಗುತ್ತದೆ.

(c) ಜಿಲ್ಲಾಡಳಿತವು ಆಯೋಜಿಸುವ ಜಿಲ್ಲಾ ಮಟ್ಟದ ಕಾರ್ಯಕ್ರಮಗಳು: – ಈ ಕಾರ್ಯಕ್ರಮಗಳು ಜಿಲ್ಲಾಡಳಿತವು ಆಯಾ ಜಿಲ್ಲೆಗಳ ಯೋಜನೆಗಳಿಗೆ/ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಅಥವಾ ಜಿಲ್ಲೆಯ ಇತರೆ ಭಾಗದಲ್ಲಿ ಆಯೋಜಿಸಲಾಗುತ್ತದೆ.

(d) ತಾಲ್ಲೂಕು ಮಟ್ಟದ ಕಾರ್ಯಕ್ರಮಗಳು: -ಈ ಕಾರ್ಯಕ್ರಮಗಳು

ಜಿಲ್ಲಾಡಳಿತ ಅಥವಾ ತಾಲ್ಲೂಕು ಆಡಳಿತವು ಒಂದು ತಾಲ್ಲೂಕಿಗೆ ಸಂಬಂಧಿಸಿದ ಯೋಜನೆಗಳು ಅಥವಾ ಕಾರ್ಯಕ್ರಮಗಳ ಕುರಿತು ತಾಲ್ಲೂಕಿನ ಕೇಂದ್ರ ಸ್ಥಾನದಲ್ಲಿ ಅಥವಾ ತಾಲ್ಲೂಕಿನ ಇತರೆ ಭಾಗದಲ್ಲಿ ಆಯೋಜಿಸಲಾಗುತ್ತದೆ.

(e) ರಾಜ್ಯದಲ್ಲಿ ಆಯೋಜಿಸುವ ಕೇಂದ್ರ ಪುರಸ್ಕೃತ/ಪ್ರಾಯೋಜಿತ/ಬೆಂಬಲಿತ ಕಾರ್ಯಕ್ರಮಗಳು: ಈ ಕಾರ್ಯಕ್ರಮಗಳು ರಾಜ್ಯಕ್ಕೆ ಸಂಬಂಧಿಸಿದ ಕೇಂದ್ರ ಪುರಸ್ಕೃತ / ಪ್ರಾಯೋಜಿತ/ಬೆಂಬಲಿತ ಯೋಜನೆಗಳು ಅಥವಾ ಕಾರ್ಯಕ್ರಮಗಳ ಕುರಿತು ರಾಜ್ಯದ ಸಹಯೋಗದೊಂದಿಗೆ ರಾಜ್ಯದ ಕೇಂದ್ರ ಸ್ಥಾನ ಅಥವಾ ರಾಜ್ಯದ ಇತರೆ ಭಾಗದಲ್ಲಿ ಆಯೋಜಿಸಲಾಗುತ್ತದೆ.

2. ಮಟ್ಟದಲ್ಲಿ ಆಯೋಜಿಸುವ ಕಾರ್ಯಕ್ರಮಗಳ ಮಾರ್ಗಸೂಚಿಗಳು: –

(a) ಉದ್ಘಾಟನೆ: -ರಾಜ್ಯ ಮಟ್ಟದ ಕಾರ್ಯಕ್ರಮಗಳನ್ನು ಈ ಕೆಳಕಂಡ ಗಣ್ಯರು

ಉದ್ಘಾಟಿಸುತ್ತಾರೆ: –

ಮಾನ್ಯ ಮುಖ್ಯ ಮಂತ್ರಿಗಳು / ಮಾನ್ಯ ಉಪ ಮುಖ್ಯ ಮಂತ್ರಿಗಳು / ಸಂಬಂಧಪಟ್ಟ ಇಲಾಖಾ ಸಚಿವರು /ಇಲಾಖಾ ಸಚಿವರು ಸೂಚಿಸುವ ಯಾವುದೇ ಗಣ್ಯರು.

(b) ಅಧ್ಯಕ್ಷತೆ:-

(i) ಮಾನ್ಯ ಮುಖ್ಯ ಮಂತ್ರಿಗಳು / ಉಪ ಮುಖ್ಯ ಮಂತ್ರಿಗಳು ಕಾರ್ಯಕ್ರಮವನ್ನು ಉದ್ಘಾಟಿಸಿದರೆ, ಇಲಾಖಾ ಸಚಿವರು ಅಧ್ಯಕ್ಷತೆ ವಹಿಸುತ್ತಾರೆ.

BIG NEWS: It is mandatory to follow these rules when inviting public representatives to government meetings and events!
Share. Facebook Twitter LinkedIn WhatsApp Email

Related Posts

BREAKING : ವಿಜಯಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು : ಪೊಲೀಸರ ಎನ್ಕೌಂಟರ್ ನಲ್ಲಿ ನಟೋರಿಯಸ್ ರೌಡಿಶೀಟರ್ ಬಲಿ.!

18/10/2025 9:32 AM1 Min Read

ಇಂದು ಧನ್ತೇರಸ್ : ಚಿನ್ನ ಖರೀದಿ ಸಮಯ, ಆಚರಣೆ, ಪೂಜಾ ಮಂತ್ರಗಳು, ಆರತಿಯ ಶುಭ ಮೂಹೂರ್ತ ತಿಳಿಯಿರಿ| Dhanteras 2025

18/10/2025 9:23 AM2 Mins Read

BREAKING : ದೀಪಾವಳಿ ಹಬ್ಬಕ್ಕೆ `ಆಶಾ ಕಾರ್ಯಕರ್ತೆ’ರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 3 ತಿಂಗಳ `ಗೌರವಧನ’ ಬಿಡುಗಡೆ

18/10/2025 9:12 AM1 Min Read
Recent News

BREAKING : ಅಮೃತಸರದಿಂದ ಸಹರ್ಸಾಗೆ ತೆರಳುತ್ತಿದ್ದ `ಗರೀಬ್ ರಥ್ ಎಕ್ಸ್ ಪ್ರೆಸ್ ’ ರೈಲಿನಲ್ಲಿ ಭಾರಿ ಬೆಂಕಿ.!

18/10/2025 9:36 AM

BREAKING : ವಿಜಯಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು : ಪೊಲೀಸರ ಎನ್ಕೌಂಟರ್ ನಲ್ಲಿ ನಟೋರಿಯಸ್ ರೌಡಿಶೀಟರ್ ಬಲಿ.!

18/10/2025 9:32 AM

ದೀಪಾವಳಿ ಸಮಯ, ಸಕ್ಕರೆ ಸೇವನೆ ಹೆಚ್ಚಳ ಆತಂಕಕಾರಿ: ತಜ್ಞರ ಎಚ್ಚರಿಕೆ

18/10/2025 9:30 AM

ಇಂದು ಧನ್ತೇರಸ್ : ಚಿನ್ನ ಖರೀದಿ ಸಮಯ, ಆಚರಣೆ, ಪೂಜಾ ಮಂತ್ರಗಳು, ಆರತಿಯ ಶುಭ ಮೂಹೂರ್ತ ತಿಳಿಯಿರಿ| Dhanteras 2025

18/10/2025 9:23 AM
State News
KARNATAKA

BREAKING : ವಿಜಯಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು : ಪೊಲೀಸರ ಎನ್ಕೌಂಟರ್ ನಲ್ಲಿ ನಟೋರಿಯಸ್ ರೌಡಿಶೀಟರ್ ಬಲಿ.!

By kannadanewsnow5718/10/2025 9:32 AM KARNATAKA 1 Min Read

ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿಸಿದ್ದು, ಪೊಲೀಸರ ಗುಂಡೇಟಿಗೆ ನಟೋರಿಯಸ್ ರೌಡಿಶೀಟರ್ ಯೂನೂಸ್ ಇಕ್ಲಾಸ್ ಬಲಿಯಾಗಿದ್ದಾನೆ.  …

ಇಂದು ಧನ್ತೇರಸ್ : ಚಿನ್ನ ಖರೀದಿ ಸಮಯ, ಆಚರಣೆ, ಪೂಜಾ ಮಂತ್ರಗಳು, ಆರತಿಯ ಶುಭ ಮೂಹೂರ್ತ ತಿಳಿಯಿರಿ| Dhanteras 2025

18/10/2025 9:23 AM

BREAKING : ದೀಪಾವಳಿ ಹಬ್ಬಕ್ಕೆ `ಆಶಾ ಕಾರ್ಯಕರ್ತೆ’ರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 3 ತಿಂಗಳ `ಗೌರವಧನ’ ಬಿಡುಗಡೆ

18/10/2025 9:12 AM

ರಾಜ್ಯದ 1 ರಿಂದ 10ನೇ ತರಗತಿ ಮಕ್ಕಳಿಗೆ ‘ಮೌಲ್ಯ ಶಿಕ್ಷಣ’: ನ. 1ರಂದು CM `ಕಲಿಕಾ ಪುಸ್ತಕ’ ಬಿಡುಗಡೆ

18/10/2025 8:56 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.