Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

“ಆಪರೇಷನ್ ಸಿಂಧೂರ್ ಕೇವಲ ಟ್ರೇಲರ್, ಇಡೀ ಪಾಕಿಸ್ತಾನ ಬ್ರಹ್ಮೋಸ್ ವ್ಯಾಪ್ತಿಯಲ್ಲಿದೆ” ; ರಾಜನಾಥ್ ಸಿಂಗ್ ಎಚ್ಚರಿಕೆ

18/10/2025 3:17 PM

ಬೆಂಗಳೂರಲ್ಲಿ ಲಂಚ ಕೇಳಿದ RO ವಿರುದ್ಧ ಕ್ರಮಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ

18/10/2025 2:50 PM

BREAKING : ‘IBPS SO ಪ್ರಿಲಿಮ್ಸ್’ ಫಲಿತಾಂಶ ಪ್ರಕಟ ; ಸ್ಕೋರ್ಕಾರ್ಡ್ ಡೌನ್ಲೋಡ್ ಮಾಡಲು ಈ ಹಂತ ಅನುಸರಿಸಿ! IBPS SO Prelims Result

18/10/2025 2:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ಲಂಚ ಕೇಳಿದ RO ವಿರುದ್ಧ ಕ್ರಮಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ
KARNATAKA

ಬೆಂಗಳೂರಲ್ಲಿ ಲಂಚ ಕೇಳಿದ RO ವಿರುದ್ಧ ಕ್ರಮಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ

By kannadanewsnow0918/10/2025 2:50 PM

ಬೆಂಗಳೂರು: ಖಾತಾ ಮಾಡಿಸಲು 10-15 ಸಾವಿರ ಲಂಚ ಕೇಳುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಕೆ.ಆರ್. ಪುರಂ ಆರ್ ಓ ಬಸವರಾಜ್ ಅವರ ವಿರುದ್ಧ ಕ್ರಮ ಜರುಗಿಸುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರಿನ ಕೆ ಆರ್ ಪುರಂನ ಟಿ.ಸಿ. ಪಾಳ್ಯದ ವೆಂಗಯ್ಯ ಪಾರ್ಕ್ ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶನಿವಾರ “ಬೆಂಗಳೂರು ನಡಿಗೆ” ಅಭಿಯಾನ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ಕಾರ್ಯಕ್ರಮದ ವೇಳೆ ಸುಲ್ತಾನ್ ಮಿರ್ಜಾ ಎಂಬುವವರು ಮಾತನಾಡಿ, “ಇಷ್ಟು ದಿನ ನಮ್ಮ ಆಸ್ತಿಯ ಖಾತೆ ಮಾಡಿಸಲು ಬಹಳಷ್ಟು ಕಷ್ಟಪಡಬೇಕಾಗಿತ್ತು. ಆದರೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಇದಕ್ಕಾಗಿ ಯೋಜನೆ ರೂಪಿಸಿ ಬಹಳ ಅನುಕೂಲ ಮಾಡಿಕೊಟ್ಟಿದ್ದಾರೆ. ಆದರೆ ಖಾತಾ ಮಾಡಿಸಲು ಕಂದಾಯ ಅಧಿಕಾರಿಗಳು ಹೆಚ್ಚು ಲಂಚ ಕೇಳುತ್ತಾರೆ. ಈ ವಿಚಾರವಾಗಿ ಬಿಬಿಎಂಪಿ ಕಮಿಷನರ್ ಬಳಿ ದೂರು ನೀಡಿದ್ದೇನೆ” ಎಂದರು.

ಈ ವೇಳೆ ಮಾತನಾಡಿದ ಶಿವಕುಮಾರ್ ಅವರು, “ಲಂಚ ಕೇಳುತ್ತಿರುವ ಅಧಿಕಾರಿಯ ಹೆಸರು ಹೇಳಿ, ನಾನು ಇಲ್ಲೇ ಆ ಅಧಿಕಾರಿಯನ್ನು ಅಮಾನತು ಮಾಡುತ್ತೇನೆ” ಎಂದರು.

ಆಗ ಸುಲ್ತಾನ್ ಮಿರ್ಜಾ ಅವರು, “ಆರ್ ಓ ಬಸವರಾಜ್, ವಿಜಿನಾಪುರ ಆರ್ ಐ ಅವರು ಲಂಚದ ಬೇಡಿಕೆ ಇಟ್ಟಿದ್ದಾರೆ. ನಾನು ಕಳೆದ ಎರಡು ತಿಂಗಳಿನಿಂದ ಅಲೆದಾಡುತ್ತಿದ್ದು, ಇವರು 10-15 ಸಾವಿರ ಲಂಚದ ಬೇಡಿಕೆ ಇಡುತ್ತಿದ್ದಾರೆ. ಆನ್ ಲೈನ್ ಮೂಲಕ ಅರ್ಜಿ ಹಾಕಿದರೂ ಅನುಮೋದನೆ ನೀಡುವುದಿಲ್ಲ. ಹೊರಮಾವು ಕಚೇರಿಗೆ ಹೋಗಿ ಎನ್ನುತ್ತಾರೆ. ಅಲ್ಲಿಗೆ ಹೋದರೆ ವಿಜಿನಾಪುರ ಬಿಬಿಎಂಪಿ ಕಚೇರಿಗೆ ಹೋಗಿ ಎನ್ನುತ್ತಾರೆ. ನನಗೆ ಮಾತ್ರ ತೊಂದರೆಯಾಗುತ್ತಿಲ್ಲ. ಹಿರಿಯ ನಾಗರಿಕರಿಗೂ ತೊಂದರೆಯಾಗುತ್ತಿದೆ. ಆ ಕಚೇರಿಯಲ್ಲಿ ಮಂಜು ಎನ್ನುವ ದಲ್ಲಾಳಿಯನ್ನು ಇಟ್ಟಿದ್ದಾರೆ. ಆತ ಪಾಲಿಕೆಯ ಸಿಬ್ಬಂದಿಯಲ್ಲ. ಆತ ಇದೆಲ್ಲವನ್ನು ನೋಡಿಕೊಳ್ಳುತ್ತಾನೆ” ಎಂದು ದೂರಿದರು.

ನಂತರ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಲಂಚ ಬೇಡಿಕೆ ವಿಚಾರವಾಗಿ ಶೀಘ್ರ ಪರಿಶೀಲನೆ ನಡೆಸಿ ಶನಿವಾರ (ಇಂದು) ಸಂಜೆಯೊಳಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಪಾಲಿಕೆ ಆಯುಕ್ತರಿಗೆ ಸೂಚಿಸಿದರು. ಇದರ ಜೊತೆಗೆ‌ ಏಜೆಂಟ್‌ ವಿರುದ್ದ ಪೊಲೀಸ್ ‌ಇಲಾಖೆ ಮತ್ತು ಪಾಲಿಕೆ ಕ್ರಮ‌ ತೆಗೆದುಕೊಳ್ಳಲಿದೆ” ಎಂದು ತಿಳಿಸಿದರು.

ಆರು ತಿಂಗಳಿಂದ ಗೃಹಲಕ್ಷ್ಮಿ ಹಣ ಬಂದಿಲ್ಲವೆಂಬ ಸುಳ್ಳು ಆರೋಪ ಬಯಲಿಗೆಳೆದ ಡಿಸಿಎಂ

ಮಹಿಳೆಯೊಬ್ಬರು ತಮಗೆ ಆರು ತಿಂಗಳಿನಿಂದ ಗೃಹಲಕ್ಷ್ಮಿ ಬಂದಿಲ್ಲ, ಬೇಕಿದ್ದರೆ ನನ್ನ ಮೊಬೈಲ್ ಇಲ್ಲೇ ಇದೆ, ನೋಡಿ ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ ಅವರು, “ಆರು ತಿಂಗಳಿನಷ್ಟು ಬಾಕಿ ಇಟ್ಟಿಲ್ಲ. ಸಾರ್ವಜನಿಕರ ಮುಂದೆ ಸುಮ್ಮನೆ ಆರು ತಿಂಗಳಿಂದ ಬಂದಿಲ್ಲ ಎಂದರೆ ಹೇಗೆ? ಇಲ್ಲಿ ನಮ್ಮ ಅಧಿಕಾರಿಗಳ ತಪ್ಪಿರಬೇಕು ಅಥವಾ ಇವರ ಆರೋಪ ತಪ್ಪಾಗಿರಬೇಕು. ಹೀಗಾಗಿ ಇಲ್ಲೇ ಇದನ್ನು ಪರಿಶೀಲಿಸುತ್ತೇನೆ” ಎಂದರು. ನಂತರ ಶಿವಕುಮಾರ್ ಅವರು ತಮ್ಮ ಆಪ್ತ ಕಾರ್ಯದರ್ಶಿ ಡಾ. ರಾಜೇಂದ್ರ ಪ್ರಸಾದ್ ಅವರ ಮೂಲಕ ಮಹಿಳಾ ಮತ್ತು ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿ “ಇಲ್ಲಿ ಮಹಿಳೆಯೊಬ್ಬರು ಆರು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಂದಿಲ್ಲ ಎಂದು ಹೇಳುತ್ತಿದ್ದಾರೆ. ಈ ಪ್ರಕರಣದಲ್ಲಿ ಏನಾಗಿದೆ” ಎಂದು ವಿಚಾರಿಸಿದರು. ದೂರವಾಣಿ ಕರೆಯಲ್ಲಿ ಅಧಿಕಾರಿಯು ‘ಜುಲೈ ತಿಂಗಳ ಗೃಹಲಕ್ಷ್ಮಿ ಹಣ ಈ ತಿಂಗಳು ಸಂದಾಯವಾಗಿದೆ. ಈ ಮಹಿಳೆಯ ವಿಚಾರದಲ್ಲಿ ಏನಾದರೂ ಸಮಸ್ಯೆಯಾಗಿದ್ದರೆ ಪರಿಶೀಲಿಸಿ, ಅದನ್ನು ಬಗೆಹರಿಸುವೆ’ ಎಂದು ತಿಳಿಸಿದರು. ದೂರು ನೀಡಿದ ಮಹಿಳೆಯ ಮೊಬೈಲ್ ಫೋನ್ ಪರಿಶೀಲಿಸಿದ ರಾಜೇಂದ್ರ ಪ್ರಸಾದ್ ಅವರು, ಅಕ್ಟೋಬರ್ 3 ರಂದು ಜುಲೈ ತಿಂಗಳ ಗೃಹ ಲಕ್ಷ್ಮಿ ಹಣ ಪಾವತಿಯಾಗಿರುವ ಸಂದೇಶವನ್ನು ಡಿಸಿಎಂ ಅವರಿಗೆ ತೋರಿಸಿದರು. ಈ ವೇಳೆ ಶಿವಕುಮಾರ್ ಅವರು, ಗೃಹ ಲಕ್ಷ್ಮಿ ಹಣ ಪಾವತಿಯಾಗಿರುವ ಮೆಸೇಜ್ ಅನ್ನು ಸಾರ್ವಜನಿಕರ ಸಮ್ಮುಖದಲ್ಲಿ ಓದಿದರು.

“ಗೃಹಲಕ್ಷ್ಮಿ ಹಣದ ಪಾವತಿಯಾಗಿಲ್ಲ ಎಂದು ಈ ಮಹಿಳೆ ಮಾಡಿರುವ ಆರೋಪ ಸುಳ್ಳು. ಜುಲೈವವರೆಗಿನ ಹಣ ಸಂದಾಯವಾಗಿದ್ದು, ಆಗಸ್ಟ್ ತಿಂಗಳ ಹಣ ಸಂದಾಯ ಪ್ರಕ್ರಿಯೆಯಲ್ಲಿದೆ. ಈ ಮಹಿಳೆ ಆರೋಪ ಮಾಡಿದನ್ನು ನೋಡಿ ಆ ಅಧಿಕಾರಿಯನ್ನು ಸಸ್ಪೆಂಡ್ ಮಾಡಬೇಕು ಎಂದು ತೀರ್ಮಾನಿಸಿದ್ದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೂ ತರಾಟೆಗೆ ತೆಗೆದುಕೊಳ್ಳಬೇಕು ಎಂದುಕೊಂಡಿದ್ದೆ, ಸದ್ಯ ಅವರು ಫೋನ್ ಕಾಲ್ ತೆಗೆದುಕೊಳ್ಳಲಿಲ್ಲ” ಎಂದರು.

ಯಾರೇ ಬೆದರಿಕೆ ಹಾಕಿದರೂ ಕಾನೂನು ಕ್ರಮ

ಎನ್.ಆರ್ ಲೇಔಟಿನ ನಿವಾಸಿ ವಿಘ್ನೇಶ್ ಎಂಬುವವರು ನಾನು 2 ವರ್ಷಗಳಿಂದ ನನ್ನ ನಿವೇಶನದಲ್ಲಿ ಮನೆ ಕಟ್ಟಿದ್ದು, ಆ ಜಾಗ ಖರೀದಿ ಮಾಡಬೇಕೆಂದು ಕೊಂಡಿದ್ದ ನೆರೆ ಮನೆಯ ವ್ಯಕ್ತಿ ಮಲ್ಲಿಕಾರ್ಜುನ್ ಎಂಬುವವರು ನಾನು ಕಟ್ಟಿರುವ ಮನೆಗೆ ಹೋಗಲು ಬಿಡುತ್ತಿಲ್ಲ. 10 ಲಕ್ಷ ಹಣ ನೀಡಬೇಕು. ಆಗ ಮಾತ್ರ ಮನೆ ಪ್ರವೇಶಿಸು ಎಂದು ರೌಡಿಗಳು ಹಾಗೂ ಕನ್ನಡಪರ ಸಂಘಟನೆಗಳ ಮೂಲಕ ಬೆದರಿಸುತ್ತಿದ್ದಾನೆ ಎಂದು ಕಣ್ಣೀರು ಹಾಕಿದರು. ಇದಕ್ಕೆ ಸ್ಪಂದಿಸಿದ ಶಿವಕುಮಾರ್ ಅವರು, “ಅವರು ಯಾವ ಸಂಘಟನೆಯವರೇ ಆಗಿರಲಿ, ಕಾಂಗ್ರೆಸ್ ನವರೇ ಆಗಿರಲಿ, ಬಿಜೆಪಿಗರೇ ಆಗಿರಲಿ, ದಳದವರೇ ಆಗಿರಲಿ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇನೆ. ನೀವು ಕೂಡಲೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಸಂಜೆ ವೇಳೆಗೆ ಕ್ರಮ ಕೈಗೊಳ್ಳುವಂತೆ ಸೂಚಿಸುತ್ತೇನೆ. ಅವರು 10 ಲಕ್ಷ ಕೇಳಿದ್ದೇ ಆದರೆ ಮೊದಲು ಲಿಖಿತ ದೂರು ನೀಡು ಕ್ರಮ ಕೈಗೊಳ್ಳುವಂತೆ ನಾನು ನೋಡಿಕೊಳ್ಳುತ್ತೇನೆ. ಒಮ್ಮೆ ದೂರು ಕೊಟ್ಟ ನಂತರ ಅದಕ್ಕೆ ಬದ್ಧವಾಗಿರಬೇಕು” ಎಂದು ತಿಳಿಸಿದರು.

“ಪಾಲಿಕೆ ಆಧಿಕಾರಿಗಳು ಆ ಜಾಗಕ್ಕೆ ಹೋಗಿ ಪರಿಸ್ಥಿತಿ ಏನಿದೆ ಎಂದು ಪರಿಶೀಲಿಸಿ, ಹಣ ಕೇಳಿ ಬೆದರಿಕೆ ಹಾಕಿದ್ದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಿ” ಎಂದು ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು.

ಐಟಿ-ಬಿಟಿ ಕಂಪನಿಗಳೊಂದಿಗೆ ಸಭೆ ನಡೆಸಿ ಸಮಸ್ಯೆ ಆಲಿಸುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

Good News: ಬೆಂಗಳೂರಿನ ಜನತೆಗೆ ದೀಪಾವಳಿ ಗಿಫ್ಟ್: ಈ ಎಲ್ಲರಿಗೂ ‘ಎ‌‌’ ಖಾತೆ ವಿತರಣೆ, ಇಷ್ಟು ಶುಲ್ಕ ನಿಗದಿ

Share. Facebook Twitter LinkedIn WhatsApp Email

Related Posts

ಐಟಿ-ಬಿಟಿ ಕಂಪನಿಗಳೊಂದಿಗೆ ಸಭೆ ನಡೆಸಿ ಸಮಸ್ಯೆ ಆಲಿಸುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

18/10/2025 2:48 PM4 Mins Read

GOOD NEWS: ಬೆಂಗಳೂರಲ್ಲಿ ‘ಸರ್ಕಾರಿ ಜಾಗ’ದಲ್ಲಿನ ಮನೆಗಳಿಗೆ ‘ಬಿ’ ಖಾತೆ ಹೊಂದಿದ್ದರೂ, ಹೊಂದಿರದಿದ್ದರೂ ‘ಎ‌‌’ ಖಾತ ವಿತರಣೆ

18/10/2025 2:47 PM1 Min Read
vidhana soudha

Good News: ಬೆಂಗಳೂರಿನ ಜನತೆಗೆ ದೀಪಾವಳಿ ಗಿಫ್ಟ್: ಈ ಎಲ್ಲರಿಗೂ ‘ಎ‌‌’ ಖಾತೆ ವಿತರಣೆ, ಇಷ್ಟು ಶುಲ್ಕ ನಿಗದಿ

18/10/2025 2:44 PM1 Min Read
Recent News

“ಆಪರೇಷನ್ ಸಿಂಧೂರ್ ಕೇವಲ ಟ್ರೇಲರ್, ಇಡೀ ಪಾಕಿಸ್ತಾನ ಬ್ರಹ್ಮೋಸ್ ವ್ಯಾಪ್ತಿಯಲ್ಲಿದೆ” ; ರಾಜನಾಥ್ ಸಿಂಗ್ ಎಚ್ಚರಿಕೆ

18/10/2025 3:17 PM

ಬೆಂಗಳೂರಲ್ಲಿ ಲಂಚ ಕೇಳಿದ RO ವಿರುದ್ಧ ಕ್ರಮಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ

18/10/2025 2:50 PM

BREAKING : ‘IBPS SO ಪ್ರಿಲಿಮ್ಸ್’ ಫಲಿತಾಂಶ ಪ್ರಕಟ ; ಸ್ಕೋರ್ಕಾರ್ಡ್ ಡೌನ್ಲೋಡ್ ಮಾಡಲು ಈ ಹಂತ ಅನುಸರಿಸಿ! IBPS SO Prelims Result

18/10/2025 2:49 PM

ಐಟಿ-ಬಿಟಿ ಕಂಪನಿಗಳೊಂದಿಗೆ ಸಭೆ ನಡೆಸಿ ಸಮಸ್ಯೆ ಆಲಿಸುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

18/10/2025 2:48 PM
State News
KARNATAKA

ಬೆಂಗಳೂರಲ್ಲಿ ಲಂಚ ಕೇಳಿದ RO ವಿರುದ್ಧ ಕ್ರಮಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ

By kannadanewsnow0918/10/2025 2:50 PM KARNATAKA 3 Mins Read

ಬೆಂಗಳೂರು: ಖಾತಾ ಮಾಡಿಸಲು 10-15 ಸಾವಿರ ಲಂಚ ಕೇಳುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಕೆ.ಆರ್. ಪುರಂ ಆರ್ ಓ…

ಐಟಿ-ಬಿಟಿ ಕಂಪನಿಗಳೊಂದಿಗೆ ಸಭೆ ನಡೆಸಿ ಸಮಸ್ಯೆ ಆಲಿಸುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

18/10/2025 2:48 PM

GOOD NEWS: ಬೆಂಗಳೂರಲ್ಲಿ ‘ಸರ್ಕಾರಿ ಜಾಗ’ದಲ್ಲಿನ ಮನೆಗಳಿಗೆ ‘ಬಿ’ ಖಾತೆ ಹೊಂದಿದ್ದರೂ, ಹೊಂದಿರದಿದ್ದರೂ ‘ಎ‌‌’ ಖಾತ ವಿತರಣೆ

18/10/2025 2:47 PM
vidhana soudha

Good News: ಬೆಂಗಳೂರಿನ ಜನತೆಗೆ ದೀಪಾವಳಿ ಗಿಫ್ಟ್: ಈ ಎಲ್ಲರಿಗೂ ‘ಎ‌‌’ ಖಾತೆ ವಿತರಣೆ, ಇಷ್ಟು ಶುಲ್ಕ ನಿಗದಿ

18/10/2025 2:44 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.