ಹಾವೇರಿ: ಆಟವಾಡುತ್ತಿದ್ದ ಬಾಲಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದು ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ನಡೆದಿದೆ.
ತರುಣ ಸಿದ್ದನಗೌಡ ಮರಿಪರಪ್ಪನವರ (9)ಮೃತನು. ಗ್ರಾಮದಲ್ಲಿ ಇರುವ ನೀರಿನ ಹೊಂಡದ ಬಳಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಲ್ಲಿಬಿದ್ದು ಮುಳುಗಿದ್ದಾನೆ ಎಂದು ಮೃತ ಬಾಲಕನ ತಂದೆ ಸಿದ್ದನಗೌಡ ಮರಿಪರಪ್ಪನವರ ಪೊಲೀಸರಿಗೆ ನೀಡಿದ ದೂರಿನಲ್ಲಿತಿಳಿಸಿದ್ದಾರೆ. ಹಂಸಭಾವಿ ಪೊಲೀಸ್ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.