Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ಸಾಗರದಲ್ಲಿ ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆಗೆ ಯತ್ನ, ಗಂಭೀರ ಗಾಯ

19/12/2025 6:58 PM

ಬೆಟ್ಟಿಂಗ್ ಆ್ಯಪ್ ಕೇಸ್: ಯುವರಾಜ್, ಉತ್ತಪ್ಪ, ಮಿಮಿ ಚಕ್ರವರ್ತಿ, ಸೋನು ಸೂದ್ ಗೆ ಸೇರಿದ ಆಸ್ತಿ ಮುಟ್ಟುಗೋಲು ಹಾಕಿದ ED

19/12/2025 6:56 PM

BREAKING ; ಫೆ.1ರಂದು 2026-27ನೇ ಸಾಲಿನ ‘ಕೇಂದ್ರ ಬಜೆಟ್’ ಮಂಡನೆ ಸಾಧ್ಯತೆ : ಮೂಲಗಳು

19/12/2025 6:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಸಿಎಂ ಬದಲಾವಣೆ ವಿಷಯ’ ಮರೆಮಾಚಲು ‘RSS’ ವಿಷಯ ಪ್ರಸ್ತಾಪ: ಪ್ರತಿಪಕ್ಷ ನಾಯಕ ಆರ್‌.ಅಶೋಕ್
KARNATAKA

‘ಸಿಎಂ ಬದಲಾವಣೆ ವಿಷಯ’ ಮರೆಮಾಚಲು ‘RSS’ ವಿಷಯ ಪ್ರಸ್ತಾಪ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

By kannadanewsnow0923/10/2025 8:10 PM

ಧಾರವಾಡ: ರಾಜ್ಯ ಸರ್ಕಾರದಲ್ಲಿ ಸಿಎಂ ಬದಲಾವಣೆಯಾಗಲಿದೆ. ಆ ವಿಷಯವನ್ನು ಬೇರೆಡೆ ತಿರುಗಿಸಲು ಆರ್‌ಎಸ್‌ಎಸ್‌ ವಿಷಯವನ್ನು ತರಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕೋಪಯೋಗಿ, ಶಿಕ್ಷಣ, ನೀರಾವರಿ ಸೇರಿದಂತೆ ಎಲ್ಲ ಇಲಾಖೆಗಳಲ್ಲೂ ಕಾಂಗ್ರೆಸ್‌ ಸರ್ಕಾರ ವಿಫಲವಾಗಿದ್ದು, ಖಾಲಿ ಡಬ್ಬ ಶಬ್ದ ಮಾಡುವಂತೆ ಮಾಡುತ್ತಿದ್ದಾರೆ. ಬಿಜೆಪಿ ಅವಧಿಯಲ್ಲಿ ಹಣ ಬಿಡುಗಡೆ ಮಾಡಿ, ಟೆಂಡರ್‌ ಮಾಡಿದ ಕಾಮಗಾರಿಗಳನ್ನು ಕಾಂಗ್ರೆಸ್‌ ನಾಯಕರು ಉದ್ಘಾಟಿಸುತ್ತಿದ್ದಾರೆ. ಆರ್ಥಿಕ ಇಲಾಖೆಯಲ್ಲಿ ಯಾವ ಯೋಜನೆಗೂ ಹಣವಿಲ್ಲ. ಬಜೆಟ್‌ನಲ್ಲಿ ಒಟ್ಟು ಅನುದಾನ 80 ಸಾವಿರ ಕೋಟಿ ರೂ. ಇದ್ದರೆ, ಗ್ಯಾರಂಟಿಗಳಿಗೆ 60-70 ಸಾವಿರ ಕೋಟಿ ರೂ. ಆಗುತ್ತದೆ. ಉಳಿದ 10 ಸಾವಿರ ಕೋಟಿ ರೂ. ನಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌, ಸಚಿವರ ಮನೆಯ ದುರಸ್ತಿ, ಕಾಂಗ್ರೆಸ್‌ ಸಮಾವೇಶಕ್ಕೆ, ಜಾತಿ ಗಣತಿಗೆ ಖರ್ಚು ಮಾಡುತ್ತಿದ್ದಾರೆ. ಈ ಸರ್ಕಾರ ಪಾಪರ್‌ ಆಗಿದೆ ಎಂದರು.

ಮಾಧ್ಯಮಗಳಲ್ಲಿ ರಸ್ತೆ ಗುಂಡಿಗಳ ಬಗ್ಗೆ ಸುದ್ದಿ ಬರುತ್ತಿದೆ. ಆ ವಿಚಾರವನ್ನು ಬೇರೆ ಕಡೆ ತಿರುಗಿಸಲು ಸಚಿವ ಪ್ರಿಯಾಂಕ್‌ ಖರ್ಗೆ ಆರ್‌ಎಸ್‌ಎಸ್‌ ಬಗ್ಗೆ ಮಾತಾಡುತ್ತಿದ್ದಾರೆ. ಆರ್‌ಎಸ್‌ಎಸ್‌ ನೋಂದಣಿ ಮಾಡಬೇಕೆಂದು ಎಲ್ಲೂ ನಿಯಮವಿಲ್ಲ. ಸಂವಿಧಾನದಲ್ಲಿ ಆ ರೀತಿಯ ನಿಯಮವಿಲ್ಲ. ಸಾಧನೆಗಳು ಇಲ್ಲದೆ ಅಭಿವೃದ್ಧಿ ಮೂಲೆಗುಂಪಾಗಿದೆ. ಆರ್‌ಎಸ್‌ಎಸ್‌ ವಿರುದ್ಧ ಇವರ ತಾತ ಮುತ್ತಾತನ ಕಾಲದಿಂದಲೂ ಏನೂ ಮಾಡಿಲ್ಲ. ನೌಕರರಿಗೆ, ಅಂಗನವಾಡಿ ಕಾರ್ಯಕರ್ತರಿಗೆ ಸಂಬಳ ನೀಡಿಲ್ಲ. ಹಣದ ಬದಲು ಹೆಣಗಳು ಬೀಳುತ್ತಿದೆ, ಆತ್ಮಹತ್ಯೆಗಳು ನಡೆಯುತ್ತಿದೆ. ಈ ಸರ್ಕಾರ ಯಾವಾಗ ತೊಲಗುತ್ತದೆ ಎಂದು ಜನರು ಕೂಡ ಕಾಯುತ್ತಿದ್ದಾರೆ ಎಂದರು.

ನಾನು ನವೆಂಬರ್‌ ಕ್ರಾಂತಿ ಎಂದಾಗ ಬಿಜೆಪಿಯವರು ಬುರುಡೆ ಬಿಡುತ್ತಿದ್ದಾರೆ ಎಂದರು. ಈಗ ಯತೀಂದ್ರ ಸಿದ್ದರಾಮಯ್ಯ ಅದನ್ನೇ ಹೇಳುತ್ತಿದ್ದಾರೆ. ಕೆ.ಎನ್‌.ರಾಜಣ್ಣ ಹೇಳಿದಾಗ ಅವರನ್ನು ಸಚಿವ ಸ್ಥಾನದಿಂದ ಕಿತ್ತುಹಾಕಿದರು. ಡಿ.ಕೆ.ಶಿವಕುಮಾರ್‌ ನಾಮ ಹಾಕಿಕೊಂಡು ಟೆಂಪಲ್‌ ರನ್‌ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯನವರಿಗೆ ನಾಮ ಹಾಕಲು ಎಲ್ಲರೂ ಸಿದ್ಧತೆ ಮಾಡುತ್ತಿದ್ದಾರೆ. ಯತೀಂದ್ರ ಅವರ ಹೇಳಿಕೆ ಬಂದಿರುವುದು ಸಿದ್ದರಾಮಯ್ಯನವರ ಕಡೆಯಿಂದಲೇ ಎಂದರು.

ಗುತ್ತಿಗೆದಾರರಿಗೆ ಸುಮಾರು 30 ಸಾವಿರ ಕೋಟಿ ರೂ. ಬಿಲ್‌ ನೀಡಿಲ್ಲ. ಗುತ್ತಿಗೆದಾರರ ಸಂಘ ಬಿಜೆಪಿ ಕಮಿಶನ್‌ ಬಗ್ಗೆ ಹೇಳಿದ್ದರು. ಈಗ ಕಾಂಗ್ರೆಸ್‌ ಅವಧಿಯಲ್ಲೇ 60 ಪರ್ಸೆಂಟ್‌ ಕಮಿಶನ್‌ ಇದೆ ಎಂದು ಹೇಳುತ್ತಿದ್ದಾರೆ. ಉದ್ಯಮಿ ಮೋಹನ್‌ದಾಸ್‌ ಪೈ ಕೂಡ ಇದನ್ನೇ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಕಲೆಕ್ಷನ್‌ ಸಭೆ ಮಾಡಿ, ಬಿಹಾರ ಚುನಾವಣೆಗಾಗಿ 300-400 ಕೋಟಿ ರೂ. ಸಂಗ್ರಹ ಮಾಡಬೇಕೆಂದು ಸೂಚನೆ ನೀಡಿದ್ದಾರೆ. ಸಚಿವ ಸ್ಥಾನ ಉಳಿಯಲು ಕಪ್ಪ ಕಾಣಿಕೆ ಕೊಡಿ ಎಂದು ಹೇಳಿ ಇಲಾಖಾವಾರು ಫಿಕ್ಸ್‌ ಮಾಡಿದ್ದಾರೆ. ಹಣ ನೀಡದಿದ್ದರೆ ಎಲ್ಲರನ್ನೂ ಕಳಿಸುತ್ತಾರೆ ಎಂದರು.

ಡಿ.ಕೆ.ಶಿವಕುಮಾರ್‌ ದಾರಿ ತಪ್ಪಿದ ಮಗ ಆಗಿದ್ದಾರೆ. ದೆಹಲಿಯಲ್ಲಿರುವ ಇಟಲಿ ದೇವಸ್ಥಾನವನ್ನು ಅವರು ಸುತ್ತಬೇಕಿದೆ. ಹಿಂದೂ ದೇವಸ್ಥಾನಗಳಿಗೆ ಹೋಗಿ ಪ್ರಯೋಜನವಿಲ್ಲ ಎಂದರು.

ವಿಧಾನಪರಿಷತ್‌ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂಬಂಧ ಚರ್ಚೆ ನಡೆದಿದೆ. ಜೊತೆಗೆ ಸಂಘಟನೆ ಹೆಚ್ಚಿಸಲು ಹುಬ್ಬಳ್ಳಿಗೆ ಭೇಟಿ ನೀಡಿದ್ದೇನೆ. ಕಾರ್ಯಕರ್ತರ ಅಭಿಪ್ರಾಯ ಪಡೆದು, ವರಿಷ್ಠರ ಅಭಿಪ್ರಾಯ ಪಡೆದು ಅಭ್ಯರ್ಥಿಗಳನ್ನು ನಿರ್ಧರಿಸಲಾಗುವುದು ಎಂದು ತಿಳಿಸಿದರು.

ನ.18ರಿಂದ 3 ದಿನ `ಬೆಂಗಳೂರು ಟೆಕ್ ಸಮ್ಮಿಟ್-2025’ ಆಯೋಜನೆ : CM ಸಿದ್ದರಾಮಯ್ಯ ಮಾಹಿತಿ

ಈ ರಾಜ್ಯಕ್ಕೆ ಕಾಂಗ್ರೆಸ್ ಸರ್ಕಾರ ಮಾರಕ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಸಾಗರದಲ್ಲಿ ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆಗೆ ಯತ್ನ, ಗಂಭೀರ ಗಾಯ

19/12/2025 6:58 PM1 Min Read

‘KUWJ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ’ಗೆ ‘ಲೋಹಿಯಾ ಪ್ರಶಸ್ತಿ’ ಪ್ರದಾನ

19/12/2025 6:36 PM1 Min Read

ರಾಜ್ಯದ ‘ಪೌರ ಕಾರ್ಮಿಕ’ರಿಗೆ ಸಚಿವ ಬೈರತಿ ಸುರೇಶ್ ಗುಡ್ ನ್ಯೂಸ್: ಪಾಲಿಕೆಯಿಂದಲೇ ‘ನೇರ ವೇತನ’ ಪಾವತಿ

19/12/2025 6:18 PM2 Mins Read
Recent News

ಶಿವಮೊಗ್ಗ: ಸಾಗರದಲ್ಲಿ ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆಗೆ ಯತ್ನ, ಗಂಭೀರ ಗಾಯ

19/12/2025 6:58 PM

ಬೆಟ್ಟಿಂಗ್ ಆ್ಯಪ್ ಕೇಸ್: ಯುವರಾಜ್, ಉತ್ತಪ್ಪ, ಮಿಮಿ ಚಕ್ರವರ್ತಿ, ಸೋನು ಸೂದ್ ಗೆ ಸೇರಿದ ಆಸ್ತಿ ಮುಟ್ಟುಗೋಲು ಹಾಕಿದ ED

19/12/2025 6:56 PM

BREAKING ; ಫೆ.1ರಂದು 2026-27ನೇ ಸಾಲಿನ ‘ಕೇಂದ್ರ ಬಜೆಟ್’ ಮಂಡನೆ ಸಾಧ್ಯತೆ : ಮೂಲಗಳು

19/12/2025 6:39 PM

‘KUWJ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ’ಗೆ ‘ಲೋಹಿಯಾ ಪ್ರಶಸ್ತಿ’ ಪ್ರದಾನ

19/12/2025 6:36 PM
State News
KARNATAKA

ಶಿವಮೊಗ್ಗ: ಸಾಗರದಲ್ಲಿ ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆಗೆ ಯತ್ನ, ಗಂಭೀರ ಗಾಯ

By kannadanewsnow0919/12/2025 6:58 PM KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರದ ಚಂದ್ರಮಾವಿನ ಕೊಪ್ಪಲು ಬಳಿ ರೈಲಿಗೆ ತಲೆ ಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗುತ್ತಿದೆ. ಈ ಘಟನೆಯಲ್ಲಿ…

‘KUWJ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ’ಗೆ ‘ಲೋಹಿಯಾ ಪ್ರಶಸ್ತಿ’ ಪ್ರದಾನ

19/12/2025 6:36 PM

ರಾಜ್ಯದ ‘ಪೌರ ಕಾರ್ಮಿಕ’ರಿಗೆ ಸಚಿವ ಬೈರತಿ ಸುರೇಶ್ ಗುಡ್ ನ್ಯೂಸ್: ಪಾಲಿಕೆಯಿಂದಲೇ ‘ನೇರ ವೇತನ’ ಪಾವತಿ

19/12/2025 6:18 PM

‘ಶಿವಮೊಗ್ಗ ಜಿಲ್ಲಾ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ’ದ ಅಧ್ಯಕ್ಷರಾಗಿ ‘ಡಾ.ನಾಗೇಂದ್ರಪ್ಪ’ ಆಯ್ಕೆ

19/12/2025 6:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.