ನವದೆಹಲಿ : ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ರಸ್ತೆಯಲ್ಲೇ ಖಾಸಗಿ ಬಸ್ ಹೊತ್ತಿ ಉರಿದು 20 ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದು, ಮೃತರ ಕುಟುಂಬಗಳಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಿಂದ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ಈ ಕಷ್ಟದ ಸಮಯದಲ್ಲಿ ಸಂತ್ರಸ್ತ ಜನರು ಮತ್ತು ಅವರ ಕುಟುಂಬಗಳೊಂದಿಗೆ ನನ್ನ ಆಲೋಚನೆಗಳು ಇವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.ಮೃತರ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ.
ಖಾಸಗಿ ಟ್ರಾವೆಲ್ ಬಸ್ ಬೆಂಕಿ ಅವಘಡದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಇನ್ನೂ ಸ್ಪಷ್ಟವಾಗಿಲ್ಲ. ಇಲ್ಲಿಯವರೆಗೆ 22 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಲ್ಲಿಯವರೆಗೆ 11 ಶವಗಳನ್ನು ಹೊರತೆಗೆಯಲಾಗಿದೆ ಮತ್ತು ಇನ್ನೂ ಕೆಲವರನ್ನು ಗುರುತಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ಸಿರಿ ಹೇಳುತ್ತಾರೆ. ಇದರಿಂದಾಗಿ, ಪ್ರಯಾಣಿಕರ ಸಂಬಂಧಿಕರು ಎಲ್ಲಿದ್ದಾರೆಂದು ತಿಳಿಯದೆ ಆತಂಕಗೊಂಡಿದ್ದಾರೆ.
Extremely saddened by the loss of lives due to a mishap in Kurnool district of Andhra Pradesh. My thoughts are with the affected people and their families during this difficult time. Praying for the speedy recovery of the injured.
An ex-gratia of Rs. 2 lakh from PMNRF would be…
— PMO India (@PMOIndia) October 24, 2025
ಹೈದರಾಬಾದ್ನಿಂದ ಬೆಂಗಳೂರಿಗೆ ಹೋಗುತ್ತಿದ್ದ ವೇಮುರಿ ಕಾವೇರಿ ಟ್ರಾವೆಲ್ಸ್ಗೆ ಸೇರಿದ ವೋಲ್ವೋ ಬಸ್ ಗುರುವಾರ ಮಧ್ಯರಾತ್ರಿಯ ನಂತರ ಗಂಭೀರ ಅಪಘಾತಕ್ಕೀಡಾಗಿದೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಯನ್ನು ಅವಲಂಬಿಸಿ ಈ ಘಟನೆಯಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
https://twitter.com/PTI_News/status/1981545555965997095?ref_src=twsrc%5Etfw%7Ctwcamp%5Etweetembed%7Ctwterm%5E1981545555965997095%7Ctwgr%5E82e24b5d38bc3fe89c97354408af6f110b1579c0%7Ctwcon%5Es1_c10&ref_url=https%3A%2F%2Fkannadadunia.com%2Fhorrific-tragedy-in-andhra-pradesh-25-people-burnt-alive-after-bus-catches-fire-watch-video%2F








