ಬೆಂಗಳೂರು: ಕುಮಾರಸ್ವಾಮಿ ಫ್ಯಾಕ್ಟರಿ ಕಟ್ಟಲಿ, ಅನುಮತಿ ಕೊಡ್ತೀವಿ ಎಂದು ಡಿಸಿಎಂ ಡಿಕೆಶಿ ಹೇಳಿಕೆ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು; ನಾನು ಸಿಎಂ ಆಗಿದ್ದಾಗ ಏನೆಲ್ಲ ಸುಧಾರಣೆಗಳನ್ನು ತಂದಿದ್ದೇನೆ ಎಂಬುದನ್ನು ಅವರು ತಿಳಿದುಕೊಳ್ಳಲಿ. ಇವರ ಯೋಗ್ಯತೆಗೆ ರಸ್ತೆ ಗುಂಡಿ ಮುಚ್ಚೋಕೆ ಆಗಿಲ್ಲ ಎಂಬುದಾಗಿ ಹೇಳುವ ಮೂಲಕ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ನಾನು ಕಾಂಪಿಟ್ ವಿತ್ ಚೈನಾ ಎನ್ನುವ ಯೋಜನೆ ಮಾಡಿದೆ. 9 ಕ್ಲಸ್ಟರ್ ಗಳಲ್ಲಿ ಕೈಗಾರಿಕೆ ಮಾಡಿದ್ದೆ. ಲಕ್ಷಾಂತರ ಜನರಿಗೆ ಉದ್ಯೋಗ ಮಾಡಿಕೊಡಲು ಯೋಜನೆ ಅದಾಗಿತ್ತು. ಕೈಗಾರಿಕೆ ಕ್ಷೇತ್ರಕ್ಕೆ 25 ಸಾವಿರ ಕೋಟಿ ಸಬ್ಸಿಡಿ ನೀಡುವ ಯೋಜನೆ ಇತ್ತು. ಆದರೆ ಇವರು ಸೇರಿ ನನ್ನ ಸರ್ಕಾರ ತೆಗೆದರು. ಇವರ ಯೋಗ್ಯತೆಗೆ ಗುಂಡಿ ಮುಚ್ಚೋಕೆ ಆಗಿಲ್ಲ. ಯಾಕ್ಕೆ ಆಗಿಲ್ಲ ಇವರಿಂದ? ಎಂದು ಡಿಕೆಶಿಗೆ ತಿರುಗೇಟು ಕೊಟ್ಟರು.
ಚರ್ಚೆ ಮಾಡುವಷ್ಟು ಯೋಗ್ಯತೆ ಉಳಿಸಿಕೊಂಡಿಲ್ಲ:
ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲು ಹಾಕಿರುವ ಡಿಕೆಶಿಗೆ ಟಾಂಗ್ ಕೊಟ್ಟ ಕೇಂದ್ರ ಸಚಿವರು, ಚರ್ಚೆ ಮಾಡುವಷ್ಟು ಯೋಗ್ಯತೆ ಆ ವ್ಯಕ್ತಿಗೆ ಇಲ್ಲ ಎಂದರು.
ಬಹಿರಂಗ ಚರ್ಚೆ ಅವರ ಜೊತೆ ಮಾತಾಡೋಕೆ ಆಗುತ್ತಾ? ಯೋಗ್ಯತೆ ಉಳಿಸಿಕೊಂಡಿಲ್ಲ ಅವರು. ಅವರ ರೀತಿ ದುಡ್ಡು ಹೊಡೆಯೋ ಕೆಲಸ ನಾನು ಮಾಡಿಲ್ಲ. ನಾನು ಸಿಎಂ ಆಗಿದ್ದಾಗ ಏನೇನು ಕೆಲಸ ಮಾಡಿದ್ದೇನೆ ನೋಡಿಲಿ. ಕೇಂದ್ರದಲ್ಲಿ ನನ್ನ ಖಾತೆಗಳು ಏನು? ಅವುಗಳ ಕಾರ್ಯವ್ಯಾಪ್ತಿ ಏನು? ಎಂಬುದನ್ನು ಮೊದಲು ತಿಳಿಯಲಿ. ನನ್ನ ಇಲಾಖೆ ಕಾರ್ಖಾನೆ ತರುವ ಇಲಾಖೆ ಅಲ್ಲ. ಕೆಲವು ನೀತಿಗಳನ್ನು ರೂಪಿಸುವ, ಕೆಲ ಉತ್ತೇಜನಕಾರಿ ಸೌಲಭ್ಯಗಳನ್ನು ನೀಡುವ ಇಲಾಖೆ. ಬೃಹತ್ ಕೈಗಾರಿಕೆ ಖಾತೆ ಎಂದರೆ ಕಾರ್ಖಾನೆ ಸ್ಥಾಪನೆ ಮಾಡುವ ಖಾತೆ ಅಲ್ಲ. ಆದರೂ ನನ್ನ ಕೆಲಸ ನಾನು ಮಾಡುತ್ತಿದ್ದೇನೆ. ಬೆಂಗಳೂರು ನಗರಕ್ಕೆ 4,500 ಎಲೆಕ್ಟ್ರಿಕ್ ಬಸ್ಸುಗಳನ್ನು ಕೊಡಲು ನಿರ್ಧಾರ ಮಾಡಿದ್ದೇನೆ. ರಾಜ್ಯಕ್ಕೆ ಸಂಬಂಧಿಸಿ ಇನ್ನು ಹಲವಾರು ಯೋಜನೆಗಳನ್ನು ಹಾಕಿಕೊಂಡಿದ್ದೇನೆ ಎಂದು ಅವರು ಡಿಕೆಶಿಗೆ ತಿರುಗೇಟು ಕೊಟ್ಟರು.
ಹಿಂದೆ ಬೆಂಗಳೂರು ನಗರಾಭಿವೃದ್ಧಿ ಮಂತ್ರಿ ಆಗಿದ್ದ ಈ ವ್ಯಕ್ತಿ, ಎಷ್ಟು ಕಾರ್ಖಾನೆ ಮಾಡಿದ್ದಾರೆ? ಕಾರ್ಖಾನೆ ಮಾಡುವುದು ಇರಲಿ, ಎಷ್ಟು ಸೊಸೈಟಿ ನುಂಗಿದ್ದಾರೆ ಎನ್ನುವುದು ಗೊತ್ತಿದೆ. ಪಟ್ಟಿ ಧಾರಾವಾಹಿ ತರಹ ಬಿಡ್ತೀನಿ ಬೇಕಾದರೆ.. ಎಂದು ಕಿಡಿಕಾರಿದರು
ಕುಮಾರಸ್ವಾಮಿ ಅವರು ಮೋದಿ ಮುಂದೆ ಅನುದಾನ ಕೇಳಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು; ನಾನು ಯಾಕೆ ಅನುದಾನ ಕೇಳಲಿ? ಜನ 136 ಸ್ಥಾನ ಕೊಟ್ಟಿರೋದು ನಿಮಗೆ. ನಾನು ಯಾಕೆ ಮಾತಾಡಲಿ. ನಾನು ಸಿಎಂ ಆಗಿದ್ದಾಗ ಮೋದಿ ದುಡ್ಡು ಕೊಡಲಿಲ್ಲ.. ಮೋದಿ ದುಡ್ಡು ಕೊಡಲಿಲ್ಲ ಎಂದು ಕೈಕಟ್ಟಿ ಕೂತೆನಾ? ಪ್ರವಾಹ ಬಂದಾಗ ಕೊಡಗಿನಲ್ಲಿ 1000 ಮನೆ ಕಟ್ಟಿಸಿದ್ದೇನೆ. ಕೇಂದ್ರ ಹಣ ಕೊಡಲಿಲ್ಲ ಎಂದು ಸುಮ್ಮನೆ ಇರಲಿಲ್ಲ. ಇವರಿಗೆ ಅಂತಹ ಯೋಗ್ಯತೆ, ಇಚ್ಛಾಶಕ್ತಿ.ಇಲ್ಲ ಎಂದು ಅವರು ದೂರಿದರು.
ಕಾಂಗ್ರೆಸ್ಸಿಗರು ಕೆಂಪೇಗೌಡರ ಕನಸನ್ನು 5 ತುಂಡು ಮಾಡಿದ್ದಾರೆ: ಛಲವಾದಿ ನಾರಾಯಣಸ್ವಾಮಿ
ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು RSS ವಿಷಯ ಕೆದಕಿದ್ದಾರೆ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಾಗ್ಧಾಳಿ








