Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಿವೈ ವಿಜಯೇಂದ್ರ ಏನು ಮುಖ್ಯಮಂತ್ರಿ ಆಗಲ್ಲ : ಶಾಸಕ ಯತ್ನಾಳ್ ಹೇಳಿಕೆ

26/10/2025 5:09 PM

ಈ ಮಂತ್ರ ಹೇಳಿದರೆ 3 ದಿನದಲ್ಲಿ ನಿಮ್ಮ ಇಷ್ಟಾರ್ಥ ನೆರವೇರುತ್ತೆ, ಇದು ಲಕ್ಷಾಂತರ ಜನರ ನಂಬಿಕೆಯೂ ಹೌದು

26/10/2025 5:07 PM

Watch Video : ಮಲೇಷ್ಯಾ ನೃತ್ಯಕಾರರೊಂದಿಗೆ ಟ್ರಂಪ್ ಡ್ಯಾನ್ಸ್, ನೆಟ್ಟಿಗರಿಂದ ಮೆಚ್ಚುಗೆ, ವಿಡಿಯೋ ವೈರಲ್

26/10/2025 5:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರ ಗುಡ್ ನ್ಯೂಸ್: ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆ ರೂಪಿಸಲು ಅವಕಾಶ
KARNATAKA

GOOD NEWS: ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರ ಗುಡ್ ನ್ಯೂಸ್: ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆ ರೂಪಿಸಲು ಅವಕಾಶ

By kannadanewsnow0926/10/2025 4:55 PM

ಬೆಂಗಳೂರು: ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ಥಳೀಯ ಯೋಜನಾ ಪ್ರದೇಶವನ್ನು ಹೊರತುಪಡಿಸಿದ ಪ್ರದೇಶಗಳಲ್ಲಿನ ಭೂಪರಿವರ್ತಿತ ಜಮೀನುಗಳಲ್ಲಿ ಬಡಾವಣೆಗಳ ವಿನ್ಯಾಸ ಅನುಮೋದನೆಯ ಕುರಿತು ವಹಿಸಬೇಕಾದ ಕ್ರಮಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಸುತ್ತೋಲೆಯ ಮೂಲಕ ಸ್ಪಷ್ಟ ನಿರ್ದೇಶನಗಳನ್ನು ನೀಡಿದ್ದು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಅಧಿನಿಯಮ, 2025 ರ ಪ್ರಕರಣ 199(ಬಿ) ರಲ್ಲಿ ಕಟ್ಟಡ ನಿರ್ಮಾಣ ಉದ್ದೇಶಗಳಿಗಾಗಿ ಇರುವ ಕಟ್ಟಡ ನಿವೇಶನಗಳಿಗಾಗಿ ಹೊಸ ಖಾತಾ ಅಥವಾ ಪಿ.ಐ.ಡಿ-ಯನ್ನು ನೀಡಲು, ಗ್ರಾಮ ಪಂಚಾಯತಿ ಅಥವಾ ಸರ್ಕಾರವು ಅಧಿಸೂಚನೆಯ ಮೂಲಕ ಗೊತ್ತುಪಡಿಸಲಾದ ಪ್ರಾಧಿಕಾರಗಳು, ಅಧಿಕಾರ ವ್ಯಾಪ್ತಿಯ ಯೋಜನಾ ಪ್ರಾಧಿಕಾರದ ಮೂಲಕ ಬಡಾವಣೆ ನಕ್ಷೆಗಾಗಿ ಪೂರ್ವಾನುಮೋದನೆಯನ್ನು ಪಡೆದುಕೊಳ್ಳಬೇಕಾಗಿದೆ ಎಂದು ತಿಳಿಸಿರುವ ಸಚಿವರು ಅಭಿವೃದ್ಧಿದಾರರು ವಿನಿಯಮ 4(1) ರಲ್ಲಿ ತಿಳಿಸಿರುವಂತೆ ನಮೂನೆ-1ರಲ್ಲಿ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಗ್ರಾಮ ಪಂಚಾಯತಿಗೆ ಸಲ್ಲಿಸಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ವಿನ್ಯಾಸ ನಕ್ಷೆಯ ಪ್ರಕಾರ ಬಡಾವಣೆಯ ಮಾಲೀಕರು ಸಂಬಂಧಿಸಿದ ಗ್ರಾಮ ಪಂಚಾಯತಿಗೆ ವಿನ್ಯಾಸ ನಕ್ಷೆಯ ಪ್ರಕಾರ ರಸ್ತೆಗಳ ಅಗಲೀಕರಣಕ್ಕೆ ಮೀಸಲಿರಿಸಿದ ರಸ್ತೆಗಳು ಸೇರಿದಂತೆ ರಸ್ತೆಗಳು, ಪಾರ್ಕ್ಗಳು, ವಾಹನ ನಿಲ್ದಾಣಗಳು, ನಾಗರೀಕ ಸೌಲಭ್ಯದ ಪ್ರದೇಶಗಳು, ಸಾರ್ವಜನಿಕ ಬಳಕೆಯ ಪ್ರದೇಶಗಳು ಹಾಗೂ ಇತರೆ ಮೂಲಭೂತ ಸೌಕರ್ಯಗಳ ಪ್ರದೇಶಗಳನ್ನು ಉಚಿತವಾಗಿ ನೋಂದಾಯಿತ ಪರಿತ್ಯಾಜನ ಪತ್ರದ ಮುಖಾಂತರ ವರ್ಗಾಯಿಸ ಬೇಕಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಮಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಬಡಾವಣೆಯ ಮಾಲೀಕರು, ವಿನಿಯಮ-11 ರ ಪ್ರಕಾರ ಅನುಮೋದಿತ ಬಡಾವಣೆಯಲ್ಲಿನ ಅಭಿವೃದ್ಧಿ ಕಾರ್ಯಗಳನ್ನು ಪ್ರಸ್ತುತ ಜಾರಿಯಲ್ಲಿರುವ ನಿಯಮಗಳಂತೆ ಸಂಬಂಧಿಸಿದ ಇಲಾಖೆಗಳಾದ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಎಸ್ಕಾಂ ಹಾಗೂ ಅವಶ್ಯಕ ಇತರೆ ಇಲಾಖೆಗಳಿಂದ ಅನುಮೋದಿತ ವಿನ್ಯಾಸದಂತೆ ದೃಢೀಕೃತ ಅಂದಾಜು ಪಟ್ಟಿಗಳನ್ವಯ ಅನುಷ್ಟಾನ ಮಾಡಬೇಕಾಗುತ್ತದೆ ಎಂದೂ ಸಚಿವರು ಮಾಹಿತಿ ನೀಡಿದ್ದಾರೆ.

ಸ್ಥಳೀಯ ಯೋಜನಾ ಪ್ರದೇಶವನ್ನು ಹೊರತುಪಡಿಸಿದ ಪ್ರದೇಶದಲ್ಲಿ ಬರುವ ಗ್ರಾಮ ಪಂಚಾಯತಿಗಳು ತಮ್ಮ ವ್ಯಾಪ್ತಿಯಲ್ಲಿನ ಭೂಪರಿವರ್ತಿತ ಜಮೀನುಗಳಲ್ಲಿ ವಿನ್ಯಾಸ ಅನುಮೋದನೆ ಹಾಗೂ ಅಭಿವೃದ್ಧಿ ಕಾಮಗಾರಿಗಳನ್ನು ಮಾರ್ಗಸೂಚಿಗಳನ್ವಯ ಅನುಷ್ಠಾನಗೊಳಿಸಿರುವುದನ್ನು ಖಾತ್ರಿಪಡಿಸಿಕೊಂಡು ಬಡಾವಣೆಗಳಿಗೆ ಸಂಬಂಧಿಸಿದ ಎಲ್ಲಾ ಅಗತ್ಯ ದಾಖಲೆಗಳನ್ನು ನಿರ್ವಹಿಸಿ, ತೆರಿಗೆ ವ್ಯಾಪ್ತಿಗೆ ಒಳಪಡಿಸಲು ಅಗತ್ಯ ಕ್ರಮವಹಿಸಲು ತಿಳಿಸಲಾಗಿದೆ ಎಂದೂ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ, ಸಿಗುವ ವಿಶ್ವಾಸವಿದೆ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

BIG NEWS : ಅಕ್ರಮವಾಗಿ `BPL’ ರೇಷನ್ ಕಾರ್ಡ್ ಪಡೆದವರಿಗೆ ಸರ್ಕಾರದಿಂದ ಬಿಗ್ ಶಾಕ್.!

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಿವೈ ವಿಜಯೇಂದ್ರ ಏನು ಮುಖ್ಯಮಂತ್ರಿ ಆಗಲ್ಲ : ಶಾಸಕ ಯತ್ನಾಳ್ ಹೇಳಿಕೆ

26/10/2025 5:09 PM1 Min Read

ಈ ಮಂತ್ರ ಹೇಳಿದರೆ 3 ದಿನದಲ್ಲಿ ನಿಮ್ಮ ಇಷ್ಟಾರ್ಥ ನೆರವೇರುತ್ತೆ, ಇದು ಲಕ್ಷಾಂತರ ಜನರ ನಂಬಿಕೆಯೂ ಹೌದು

26/10/2025 5:07 PM3 Mins Read

ಚಾಮರಾಜನಗರ : ಓವರ್ ಟೆಕ್ ಭರದಲ್ಲಿ ಕಾರಿಗೆ ಡಿಕ್ಕಿ ಹೊಡೆದ ಮತ್ತೊಂದು ಕಾರು : ಮಕ್ಕಳು ಸೇರಿ ಐವರಿಗೆ ಗಂಭೀರ ಗಾಯ

26/10/2025 5:02 PM1 Min Read
Recent News

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಿವೈ ವಿಜಯೇಂದ್ರ ಏನು ಮುಖ್ಯಮಂತ್ರಿ ಆಗಲ್ಲ : ಶಾಸಕ ಯತ್ನಾಳ್ ಹೇಳಿಕೆ

26/10/2025 5:09 PM

ಈ ಮಂತ್ರ ಹೇಳಿದರೆ 3 ದಿನದಲ್ಲಿ ನಿಮ್ಮ ಇಷ್ಟಾರ್ಥ ನೆರವೇರುತ್ತೆ, ಇದು ಲಕ್ಷಾಂತರ ಜನರ ನಂಬಿಕೆಯೂ ಹೌದು

26/10/2025 5:07 PM

Watch Video : ಮಲೇಷ್ಯಾ ನೃತ್ಯಕಾರರೊಂದಿಗೆ ಟ್ರಂಪ್ ಡ್ಯಾನ್ಸ್, ನೆಟ್ಟಿಗರಿಂದ ಮೆಚ್ಚುಗೆ, ವಿಡಿಯೋ ವೈರಲ್

26/10/2025 5:07 PM

ಚಾಮರಾಜನಗರ : ಓವರ್ ಟೆಕ್ ಭರದಲ್ಲಿ ಕಾರಿಗೆ ಡಿಕ್ಕಿ ಹೊಡೆದ ಮತ್ತೊಂದು ಕಾರು : ಮಕ್ಕಳು ಸೇರಿ ಐವರಿಗೆ ಗಂಭೀರ ಗಾಯ

26/10/2025 5:02 PM
State News

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಿವೈ ವಿಜಯೇಂದ್ರ ಏನು ಮುಖ್ಯಮಂತ್ರಿ ಆಗಲ್ಲ : ಶಾಸಕ ಯತ್ನಾಳ್ ಹೇಳಿಕೆ

By kannadanewsnow0526/10/2025 5:09 PM KARNATAKA 1 Min Read

ವಿಜಯಪುರ : ಆರ್ ಎಸ್ ಎಸ್ ಪಾಠ ಸಂಚಲನಕ್ಕೆ ಅನುಮತಿ ನೀಡುವ ವಿಚಾರಕ್ಕೆ ಸಂಬಂಧಪಟ್ಟಂತೆ ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್…

ಈ ಮಂತ್ರ ಹೇಳಿದರೆ 3 ದಿನದಲ್ಲಿ ನಿಮ್ಮ ಇಷ್ಟಾರ್ಥ ನೆರವೇರುತ್ತೆ, ಇದು ಲಕ್ಷಾಂತರ ಜನರ ನಂಬಿಕೆಯೂ ಹೌದು

26/10/2025 5:07 PM

ಚಾಮರಾಜನಗರ : ಓವರ್ ಟೆಕ್ ಭರದಲ್ಲಿ ಕಾರಿಗೆ ಡಿಕ್ಕಿ ಹೊಡೆದ ಮತ್ತೊಂದು ಕಾರು : ಮಕ್ಕಳು ಸೇರಿ ಐವರಿಗೆ ಗಂಭೀರ ಗಾಯ

26/10/2025 5:02 PM

GOOD NEWS: ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರ ಗುಡ್ ನ್ಯೂಸ್: ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆ ರೂಪಿಸಲು ಅವಕಾಶ

26/10/2025 4:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.