ಬೆಂಗಳೂರು : ಕೆ.ಎಚ್ ಮುನಿಯಪ್ಪ ಸಿಎಂ ಆದರೆ ನಾನು ಸ್ವಾಗತ ಮಾಡುತ್ತೇನೆ. ಮುನಿಯಪ್ಪ ಸಿಎಂ ಆದರೆ ನಾನು ಸಂತೋಷ ಪಡುತ್ತೇನೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದ್ದು, ಆ ಮೂಲಕ ಗೃಹ ಸಚಿವ ಜಿ ಪರಮೇಶ್ವರ್ ಅವರು ರಾಜ್ಯದಲ್ಲಿ ಸಿಎಂ ಬದಲಾವಣೆ ನಡುವೆ ದಲಿತ ಸಿಎಂ ದಾಳ ಉರುಳಿ ಸಿದ್ಧ ಎನ್ನುವ ಕುತೂಹಲ ಹೆಚ್ಚಾಗಿದೆ.
ಬೆಂಗಳೂರಲ್ಲಿ ಮಾತನಾಡಿದ ಅವರು, ತುಳಿತಕ್ಕೆ ಒಳಗಾಗಿರುವ ವರ್ಗಕ್ಕೆ ಆಡಳಿತ ಬೇಕಿದೆ. ಆ ವರ್ಗಕ್ಕೆ ಆಡಳಿತ ಸಿಗುತ್ತೆ ಎಂದರೆ ಸಂತೋಷ. ಆದರೆ ಎಲ್ಲವನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಮುನಿಯಪ್ಪ ಅವರು ಎರಡು ಬಾರಿ ಎಂಪಿ ಆಗಿದ್ದಾರೆ ಎರಡು ಬಾರಿ ಎಂಪಿಯಾಗಿರುವುದು ಸಾಮಾನ್ಯವಲ್ಲ. ಅವರು ಹಿರಿಯರಾಗಿದ್ದಾರೆ ಅವರು ಕೇಂದ್ರದಲ್ಲಿ ಕೂಡ ಸಚಿವರಾಗಿದ್ದರು. ಕೇಂದ್ರದಲ್ಲಿ ಸಚಿವರಾದ ಬಳಿಕ ರಾಜ್ಯದಲ್ಲಿ ಸಚಿವರಾಗಿದ್ದಾರೆ.
ಹಾಗಾಗಿ ಅವರು ಸಮರ್ಥರಿದ್ದು ಅವರಿಗೆ ಸಿಎಂ ಆಗುವ ಅರ್ಹತೆ ಇದೆ. ಹಾಗಾಗಿ ಅವರು ಸಿಎಂ ಆದರೆ ನಾನು ಸಂತೋಷ ಪಡುತ್ತೇನೆ. ನಾವೆಲ್ಲ ಒಂದು ವರ್ಗಕ್ಕೆ ಸೇರಿದ್ದು ಆ ವರ್ಗಕ್ಕೆ ಆಡಳಿತ ಆದರೆ ಸಂತೋಷಪಡುತ್ತೇನೆ ಯಾವ ವರ್ಗ ತುಳಿತಕ್ಕೆ ಒಳಗಾಗಿದಿಯೋ ಆ ವರ್ಗಕ್ಕೆ ಆಡಳಿತ ಸಿಗುತ್ತೆ ಎಂದರೆ ಸಂತೋಷ ಪಡುತ್ತೇನೆ ಹಾಗಾಗಿ ಮುನಿಯಪ್ಪ ಅವರು ಸಮರ್ಥರಿದ್ದಾರೆ ಅವರು ಸಿಎಂ ಆಗುವುದಾದರೆ ನಾನು ಸಂತೋಷ ಪಡುತ್ತೇನೆ. ಇವಾಗ ಬಿಹಾರ್ ಎಲೆಕ್ಷನ್ ನಡೆಯುತ್ತಿದೆ ಬಿಹಾರ್ ಎಲೆಕ್ಷನ್ ಆದ ಬಳಿಕ ರಾಜ್ಯದಲ್ಲಿ ಬದಲಾವಣೆ ಆಗುವ ಕುರಿತು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.








