Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉದ್ಯೋಗದಾತರೇ ಗಮನಿಸಿ ; ದಂಡವಿಲ್ಲದೆ ‘EPF ಲೋಪ ಕ್ರಮಬದ್ಧಗೊಳಿಸಲು 6 ತಿಂಗಳ ಕಾಲಾವಕಾಶ

19/12/2025 8:44 PM

ಗ್ಯಾರಂಟಿ ಯೋಜನೆಗಳಡಿ ಉತ್ತರ ಕರ್ನಾಟಕ ಭಾಗಕ್ಕೆ ರೂ.46,277 ಕೋಟಿ ಖರ್ಚು: ಸಿಎಂ ಸಿದ್ದರಾಮಯ್ಯ

19/12/2025 8:21 PM

ಪಿಜಿ/ಯುಜಿ ಆಯುಷ್ ಫಲಿತಾಂಶ ಪ್ರಕಟಿಸಿದ ಕೆಇಎ

19/12/2025 8:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಮಾದಕದ್ರವ್ಯ ನಿಗ್ರಹಿಸಲು, ವಿಶೇಷ ಕಾರ್ಯಪಡೆಗೆ ಸಿಎಂ ಸಿದ್ದರಾಮಯ್ಯ ಚಾಲನೆ
KARNATAKA

ರಾಜ್ಯದಲ್ಲಿ ಮಾದಕದ್ರವ್ಯ ನಿಗ್ರಹಿಸಲು, ವಿಶೇಷ ಕಾರ್ಯಪಡೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

By kannadanewsnow0528/10/2025 3:22 PM

ಬೆಂಗಳೂರು : ರಾಜ್ಯದಲ್ಲಿ ಮಾದಕ ದ್ರವ್ಯ ಸೇವನೆ ಹಾಗೂ ಬಳಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇದೀಗ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯೊಂದು ಇಟ್ಟಿದ್ದು, ಮಾದಕವಸ್ತುಗಳ ಹಾವಳಿಯನ್ನು ನಿಗ್ರಹಿಸಲು ರಚಿಸಲಾದ ಮಾದಕದ್ರವ್ಯ ವಿರೋಧಿ ಕಾರ್ಯಪಡೆ (ANTF)ಗೆ ಇಂದು ಚಾಲನೆ ನೀಡಲಾಯಿತು.

ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಒಂದು ಕಾರ್ಯಪಡೆಗೆ ಚಾಲನೆ ನೀಡಿದ್ದಾರೆ.66 ಸಿಬ್ಬಂದಿಗಳ ಅನುಮೋದಿತ ಬಲದೊಂದಿಗೆ ಮಾದಕವಸ್ತು ನಿಗ್ರಹ ದಳವನ್ನು ರಚಿಸಿ ಆಗಸ್ಟ್‌ನಲ್ಲಿ ರಾಜ್ಯ ಸರ್ಕಾರ ಆದೇಶಿಸಿತ್ತು. ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಅವರು ನೂತನ ಕಾರ್ಯಪಡೆಗೆ ಚಾಲನೆ ನೀಡಿದರು.

ಹೇಗೆ ಕಾರ್ಯ ನಿರ್ವಹಿಸಲಿದೆ?

ಕೇಂದ್ರ ತನಿಖಾ ಸಂಸ್ಥೆಯಾಗಿರುವ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಮಾದರಿಯಲ್ಲಿ ಕಾರ್ಯ ನಿರ್ವಹಿಸಿಸಲಿರುವ ರಾಜ್ಯ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ, ಬೆಂಗಳೂರು ಸೇರಿದಂತೆ ರಾಜ್ಯದ ಇತರ ನಗರಗಳು ಮಾತ್ರವಲ್ಲದೆ ಜಿಲ್ಲೆಗಳಲ್ಲಿನ ಸಂಘಟಿತ ಮಾದಕವಸ್ತು ಜಾಲಗಳನ್ನು ಪತ್ತೆ ಹಚ್ಚಲು ಕಾರ್ಯ ನಿರ್ವಹಿಸಲಿದೆ. ಹಾಗೂ ಕೇಂದ್ರ ತನಿಖಾ ಸಂಸ್ಥೆಗಳೊಂದಿಗೆ ಸಮನ್ವಯತೆ ಸುಧಾರಿಸುವ ಗುರಿಯನ್ನು ಹೊಂದಿದೆ.

ಇದಕ್ಕಾಗಿ 10 ಹೊಸ ಹುದ್ದೆಗಳನ್ನು ರಚಿಸಲಾಗಿದೆ ಹಾಗೂ ನಕ್ಸಲ್ ನಿಗ್ರಹ‌ಪಡೆ (ANF) ಯಲ್ಲಿದ್ದ 56 ಸಿಬ್ಬಂದಿಯನ್ನು ಸೇರ್ಪಡೆಗೊಳಿಸಿಕೊಳ್ಳಲಾಗಿದೆ. ಹೊಸದಾಗಿ ರಚಿಸಲಾದ ಹುದ್ದೆಗಳಲ್ಲಿ ಇಬ್ಬರು ಹೆಚ್ಚುವರಿ ಪೊಲೀಸ್ ಸೂಪರಿಂಟೆಂಡೆಂಟ್‌ಗಳು (Addl SP), ಇಬ್ಬರು ಉಪ ಪೊಲೀಸ್ ಸೂಪರಿಂಟೆಂಡೆಂಟ್‌ಗಳು (DSP), ಓರ್ವ ಸಹಾಯಕ ಆಡಳಿತ ಅಧಿಕಾರಿ, ಓರ್ವ ಸೆಕ್ಷನ್ ಸೂಪರಿಂಟೆಂಡೆಂಟ್, ಓರ್ವ ಕಿರಿಯ ಸಹಾಯಕ, ಓರ್ವ ಪ್ರಥಮ ದರ್ಜೆ ಸಹಾಯಕ, ಓರ್ವ ಸ್ಟೆನೋಗ್ರಾಫರ್ ಮತ್ತು ದಳಾಯತ್ ಇರಲಿದ್ದಾರೆ.

ಅಷ್ಟೆ ಅಲ್ಲದೇ ನಕ್ಸಲ್ ನಿಗ್ರಹ ಪಡೆಯಿಂದ ಸೇರ್ಪಡೆಗೊಳಿಸಲಾಗುವ 56 ಸಿಬ್ಬಂದಿಯಲ್ಲಿ ಇಬ್ಬರು ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಮತ್ತು ನಾಲ್ವರು ಪೊಲೀಸ್ ಸಬ್ – ಇನ್‌ಸ್ಪೆಕ್ಟರ್‌ಗಳು, 20 ಹೆಡ್ ಕಾನ್ಸ್​ಟೇಬಲ್​ಗಳು ಮತ್ತು 30 ಕಾನ್ಸ್​ಟೇಬಲ್​ಗಳು ಇರಲಿದ್ದಾರೆ. ಬೆಂಗಳೂರೊಂದರಲ್ಲೇ ಪ್ರಸಕ್ತ ವರ್ಷ ಬರೋಬ್ಬರಿ 81.21 ಕೋಟಿ ರೂಪಾಯಿ ಮೌಲ್ಯದ ವಿವಿಧ ಮಾದಕ‌ ಪದಾರ್ಥಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Share. Facebook Twitter LinkedIn WhatsApp Email

Related Posts

ಗ್ಯಾರಂಟಿ ಯೋಜನೆಗಳಡಿ ಉತ್ತರ ಕರ್ನಾಟಕ ಭಾಗಕ್ಕೆ ರೂ.46,277 ಕೋಟಿ ಖರ್ಚು: ಸಿಎಂ ಸಿದ್ದರಾಮಯ್ಯ

19/12/2025 8:21 PM4 Mins Read

ಪಿಜಿ/ಯುಜಿ ಆಯುಷ್ ಫಲಿತಾಂಶ ಪ್ರಕಟಿಸಿದ ಕೆಇಎ

19/12/2025 8:13 PM1 Min Read

ಸಂಕಷ್ಟದಲ್ಲೂ ಭರವಸೆಯ ಬೆಳಕಾಗಿ ಕಂಡವರು ಶಿವಾನಂದ ತಗಡೂರು: ಗಣ್ಯರ ಶ್ಲಾಘನೆ

19/12/2025 8:05 PM2 Mins Read
Recent News

ಉದ್ಯೋಗದಾತರೇ ಗಮನಿಸಿ ; ದಂಡವಿಲ್ಲದೆ ‘EPF ಲೋಪ ಕ್ರಮಬದ್ಧಗೊಳಿಸಲು 6 ತಿಂಗಳ ಕಾಲಾವಕಾಶ

19/12/2025 8:44 PM

ಗ್ಯಾರಂಟಿ ಯೋಜನೆಗಳಡಿ ಉತ್ತರ ಕರ್ನಾಟಕ ಭಾಗಕ್ಕೆ ರೂ.46,277 ಕೋಟಿ ಖರ್ಚು: ಸಿಎಂ ಸಿದ್ದರಾಮಯ್ಯ

19/12/2025 8:21 PM

ಪಿಜಿ/ಯುಜಿ ಆಯುಷ್ ಫಲಿತಾಂಶ ಪ್ರಕಟಿಸಿದ ಕೆಇಎ

19/12/2025 8:13 PM

ಸಂಕಷ್ಟದಲ್ಲೂ ಭರವಸೆಯ ಬೆಳಕಾಗಿ ಕಂಡವರು ಶಿವಾನಂದ ತಗಡೂರು: ಗಣ್ಯರ ಶ್ಲಾಘನೆ

19/12/2025 8:05 PM
State News
KARNATAKA

ಗ್ಯಾರಂಟಿ ಯೋಜನೆಗಳಡಿ ಉತ್ತರ ಕರ್ನಾಟಕ ಭಾಗಕ್ಕೆ ರೂ.46,277 ಕೋಟಿ ಖರ್ಚು: ಸಿಎಂ ಸಿದ್ದರಾಮಯ್ಯ

By kannadanewsnow0919/12/2025 8:21 PM KARNATAKA 4 Mins Read

ಬೆಳಗಾವಿ ಸುವರ್ಣಸೌಧ : ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳಿಗೆ ಇದುವರೆಗೂ ರೂ.1,06,066 ಕೋಟಿ ಖರ್ಚು ಮಾಡಿದೆ. ಇದರಲ್ಲಿ ಉತ್ತರ…

ಪಿಜಿ/ಯುಜಿ ಆಯುಷ್ ಫಲಿತಾಂಶ ಪ್ರಕಟಿಸಿದ ಕೆಇಎ

19/12/2025 8:13 PM

ಸಂಕಷ್ಟದಲ್ಲೂ ಭರವಸೆಯ ಬೆಳಕಾಗಿ ಕಂಡವರು ಶಿವಾನಂದ ತಗಡೂರು: ಗಣ್ಯರ ಶ್ಲಾಘನೆ

19/12/2025 8:05 PM

BIG NEWS: ರಾಜ್ಯದ ‘ಸರ್ಕಾರಿ ನೌಕರ’ರಿಗೆ ಬಿಗ್ ಶಾಕ್: ಅನಧಿಕೃತವಾಗಿ ಕಚೇರಿಯಿಂದ ಹೊರ ಹೋಗುವುದಕ್ಕೆ ಸರ್ಕಾರ ಬ್ರೇಕ್

19/12/2025 8:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.