Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾನು ಬಿಜೆಪಿಯಲ್ಲಿದ್ದಾಗ ಅಂದಿನ ‘RSS’ ಚೆನ್ನಾಗಿತ್ತು, ಈಗ ಪುಡಾರಿಗಳು ಸೇರಿದ್ದಾರೆ : ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ

30/10/2025 3:36 PM

ಶಿವಮೊಗ್ಗ: ಲೆಕ್ಕಿಗರ ಹುದ್ದೆಗೆ ಅರ್ಜಿ ಆಹ್ವಾನ

30/10/2025 3:36 PM

BREAKING: ‘KUWJ ಚುನಾವಣೆ’ಯಲ್ಲಿ ‘ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು’ ನೇತೃತ್ವದಲ್ಲಿ ಎಲ್ಲಾ ಸ್ಥಾನಗಳಿಗೂ ಅವಿರೋಧ ಆಯ್ಕೆ

30/10/2025 3:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘KUWJ ಚುನಾವಣೆ’ಯಲ್ಲಿ ‘ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು’ ನೇತೃತ್ವದಲ್ಲಿ ಎಲ್ಲಾ ಸ್ಥಾನಗಳಿಗೂ ಅವಿರೋಧ ಆಯ್ಕೆ
KARNATAKA

BREAKING: ‘KUWJ ಚುನಾವಣೆ’ಯಲ್ಲಿ ‘ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು’ ನೇತೃತ್ವದಲ್ಲಿ ಎಲ್ಲಾ ಸ್ಥಾನಗಳಿಗೂ ಅವಿರೋಧ ಆಯ್ಕೆ

By kannadanewsnow0930/10/2025 3:33 PM

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಚುನಾವಣೆ ಘೋಷಣೆಯಾಗಿತ್ತು. ನವೆಂಬರ್.9ರಂದು ನಡೆಯಬೇಕಿದ್ದಂತ ಚುನಾವಣೆಗೆ ಪೂರ್ವದಲ್ಲೇ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ನೇತೃತ್ವದಲ್ಲಿ ಎಲ್ಲಾ ಸ್ಥಾನಗಳಿಗೂ ಅವಿರೋಧ ಆಯ್ಕೆಯಾಗಿದೆ.

ಈ ಬಗ್ಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮುಖ್ಯ ಚುನಾವಣಾಧಿಕಾರಿ ಎನ್.ರವಿಕುಮಾರ್ ಮಾಹಿತಿ ನೀಡಿದ್ದು, ದಿನಾಂಕ 09-11-2025ರಂದು ನಡೆಯಲಿರುವ ಚುನಾವಣೆಗೆ, ಕೆಯುಡಬ್ಲ್ಯೂಜೆ ಸಂಘದ ರಾಜ್ಯ ಘಟಕದ ಚುನಾವಣಾ ಕಣದಲ್ಲಿ ಉಳಿದ ಅಭ್ಯರ್ಥಿಗಳ ಅಂತಿಮ ಪಟ್ಟಿ ಈ ಕೆಳಗಿನಂತಿದೆ ಎಂದಿದ್ದಾರೆ.

  1. ಶಿವಾನಂದ ತಗಡೂರು, ಅಧ್ಯಕ್ಷರು
  2. ಹೆಚ್.ಬಿ ಮದನಗೌಡ, ಉಪಾಧ್ಯಕ್ಷರು
  3. ಮತ್ತೀಕೆರೆ ಜಯರಾಮ, ಉಪಾಧ್ಯಕ್ಷರು
  4. ಅಜ್ಜಮಾಡು ರಮೇಶ್ ಕುಟ್ಟಪ್ಪ, ಉಪಾಧ್ಯಕ್ಷರು
  5. ಜೆ.ಸಿ ಲೋಕೇಶ, ಪ್ರಧಾನ ಕಾರ್ಯದರ್ಶಿ
  6. ಪುಂಡಲೀಕ ಬಿ ಬಾಳೋಜಿ, ಕಾರ್ಯದರ್ಶಿ
  7. ಸೋಮಶೇಖರ ಕೆರಗೋಡು, ಕಾರ್ಯದರ್ಶಿ
  8. ನಿಂಗಪ್ಪ ಚಾವಡಿ, ಕಾರ್ಯದರ್ಶಿ
  9. ವಾಸುದೇವ ಹೊಳ್ಳ ಎಂ, ರಾಜ್ಯ ಖಜಾಂಚಿ

ಕೆಯುಡಬ್ಲೂಜೆ ರಾಜ್ಯಾಧ್ಯಕ್ಷರಾಗಿ ಶಿವಾನಂದ ತಗಡೂರು ಸತತ ಮೂರನೇ ಅವಧಿಗೆ ಪುನರಾಯ್ಕೆ

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ(ಕೆಯುಡಬ್ಲೂಜೆ) ರಾಜ್ಯ ಅಧ್ಯಕ್ಷರಾಗಿ ಶಿವಾನಂದ ತಗಡೂರು ಅವರು ಪುನಾರಾಯ್ಕೆಯಾಗಿದ್ದಾರೆ. 2025-28ನೇ ಸಾಲಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಒಂದೇ ನಾಮಪತ್ರ ಬಂದಿದ್ದರಿಂದ ಅವಿರೋಧ ಆಯ್ಕೆಯಾದಂತಾಗಿದೆ.

ಶಿವಾನಂದ ತಗಡೂರ ಯಾರು?

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ಕುಗ್ರಾಮ ತಗಡೂರು ಗ್ರಾಮದ ರೈತ ಕುಟುಂಬದ ಶ್ರೀಮತಿ ಕಮಲಮ್ಮ ಮತ್ತು ವೀರೇಗೌಡ ದಂಪತಿಗಳ ಪುತ್ರನಾಗಿ ಜನಿಸಿದ ಟಿ.ವಿ.ಶಿವಾನಂದ (ಆನಂದ) ಅವರು ತೊಂಬತ್ತರ ದಶಕದಲ್ಲಿ ಪತ್ರಿಕೋದ್ಯಮ ಪ್ರವೇಶಿಸಿದವರು.

ಬಾಗೂರು-ನವಿಲೆ ಸುರಂಗ ಸಂತ್ರಸ್ತರ ಪರವಾಗಿ ಹೋರಾಟ ಸಂಘಟಿಸಿದ್ದ ಅವರು, ಹಾಸನ ಜಿಲ್ಲಾ ನೀರಾವರಿ ಹೋರಾಟ ಸಮಿತಿಗಳ ಒಕ್ಕೂಟ, ರೈತ ಹಿತ ರಕ್ಷಣಾ ಸಮಿತಿ, ಹಾಸನ ಜಿಲ್ಲಾ ಸಾಕ್ಷರತಾ ಆಂದೋಲನ ಸಮಿತಿ ಸಂಚಾಲಕರಾಗಿ ದುಡಿದವರು. ಹಲವು ಜನಪರ ಚಳವಳಿಯಲ್ಲಿ ಮುಂದಾಳಾಗಿ ಗುರುತಿಸಿಕೊಳ್ಳುತ್ತಲೇ ಪತ್ರಕರ್ತರಾಗಿ ಮಾಗಿದವರು.

2004ರಲ್ಲಿ ಹಾಸನ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಅಧ್ಯಕ್ಷರಾಗಿದ್ದಾಗ ಸುಸಜ್ಜಿತ ಪತ್ರಕರ್ತರ ಭವನವನ್ನು ನಿರ್ಮಾಣ ಮಾಡಿದ್ದು ಅವರ ಕ್ರೀಯಾಶೀಲತೆಗೆ ಸಾಕ್ಷಿ. 2018ರಲ್ಲಿ ಉಪಾಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಕೆಯುಡಬ್ಲೂೃಜೆಗೆ ಹೆಜ್ಜೆ ಇಟ್ಟ ತಗಡೂರು, ಅಧ್ಯಕ್ಷರೊಬ್ಬರ ರಾಜೀನಾಮೆ ತರುವಾಯ ಆ ಸಂಘಟನೆಯ ಚುಕ್ಕಾಣಿ ಹಿಡಿದವರು.

ಕೋವಿಡ್ ಸಂದರ್ಭದಲ್ಲಿ ಮೃತಪಟ್ಟ ಪತ್ರಕರ್ತರುಗಳ ಕುಟುಂಬಗಳಿಗೆ ತಲಾ 5 ಲಕ್ಷ ರೂ ನೆರವು ಕೊಡಿಸಿದ ಅವರ ಹೋರಾಟದ ಪರಿಯನ್ನು ಯಾರೂ ಮರೆಯುವಂತಿಲ್ಲ. ಬಹುರೂಪಿ ಪ್ರಕಾಶನ ಪ್ರಕಟಿಸಿರುವ ಕೋವಿಡ್ ಕಥೆಗಳು ಪುಸ್ತಕದಲ್ಲಿ ಪ್ರತಿ ಘಟನೆಗಳನ್ನು ತಗಡೂರು ದಾಖಲಿಸಿದ್ದಾರೆ.

75ನೇ ವರ್ಷದ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಹಿರಿಯ ಪತ್ರಕರ್ತರ ಮನೆಯಂಗಳಕ್ಕೆ ಕೆಯುಡಬ್ಲೂೃಜೆ ಎನ್ನುವ ಹೊಸ ಕಲ್ಪನೆಯೊಂದಿಗೆ ಹಿರಿಯ ಪತ್ರಕರ್ತರನ್ನು ಅವರ ಮನೆ ಅಂಗಳದಲ್ಲಿಯೇ ಗೌರವಿಸಿ, ಅವರ ಅನುಭವಗಳನ್ನು ದಾಖಲೀಕರಣ ಮಾಡಿದ್ದ್ದು ವಿಶೇಷ. ಅಷ್ಟೇ ಅಲ್ಲ, ಈ ಬಗ್ಗೆ ಅಮೃತ ಬೀಜ ಎನ್ನುವ ಪುಸ್ತಕವನ್ನು ಹೊರ ತಂದಿದ್ದಾರೆ.

ರಾಜ್ಯ ಪತ್ರಕರ್ತರ ಸಮ್ಮೇಳನಗಳಿಗೆ ಹೊಸ ರೂಪ ನೀಡಿದ್ದಲ್ಲದೆ, ಪತ್ರಕರ್ತರ ಕ್ಷೇಮ ನಿಧಿಯನ್ನು ಒಂದು ಕೋಟಿಗೆ ಹೆಚ್ಚಿಸಿದ್ದು ಸಾಧನೆ. ಹತ್ತು ಹಲವು ಕಾರ್ಯಕ್ರಮದ ಮೂಲಕ ಕೆಯುಡಬ್ಲೂೃಜೆಗೆ ಹೊಸ ಆಯಾಮ ನೀಡಿದ ತಗಡೂರು ಅವರು ಸತತ ಎರಡು ಬಾರಿ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವುದು ಅವರ ಸಾಧನೆಗೆ ಹಿಡಿದ ಕನ್ನಡಿ ಮತ್ತು ಅವರ ಸೇವೆಗೆ ಸಂದ ಗೌರವ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

ಸಾಗರದಲ್ಲಿ ‘ಯೂಟ್ಯೂಬ್ ಚಾನಲ್’ ಹೆಸರಿನಲ್ಲಿ ಬ್ಲಾಕ್ ಮೇಲ್: ಸೂಕ್ತ ಕಾನೂನು ಕ್ರಮಕ್ಕೆ ‘ASP’ಗೆ ‘KUWJ’ ಮನವಿ

ಉತ್ತರಕನ್ನಡದಲ್ಲಿ ಸ್ಟೇರಿಂಗ್ ಕಟ್ ಆಗಿ ವಿದ್ಯುತ್ ಕಂಬಕ್ಕೆ ಗುದ್ದಿದ ‘KSRTC’ ಬಸ್ : 60 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು!

Share. Facebook Twitter LinkedIn WhatsApp Email

Related Posts

ನಾನು ಬಿಜೆಪಿಯಲ್ಲಿದ್ದಾಗ ಅಂದಿನ ‘RSS’ ಚೆನ್ನಾಗಿತ್ತು, ಈಗ ಪುಡಾರಿಗಳು ಸೇರಿದ್ದಾರೆ : ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ

30/10/2025 3:36 PM1 Min Read

ಶಿವಮೊಗ್ಗ: ಲೆಕ್ಕಿಗರ ಹುದ್ದೆಗೆ ಅರ್ಜಿ ಆಹ್ವಾನ

30/10/2025 3:36 PM1 Min Read

ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಯನಾಡಿನ ಚಂದಾ ವಸೂಲಿಗಾರರೋ? : ಸಿಎಂ ವಿರುದ್ಧ ಅಶೋಕ್ ವಾಗ್ದಾಳಿ

30/10/2025 3:24 PM2 Mins Read
Recent News

ನಾನು ಬಿಜೆಪಿಯಲ್ಲಿದ್ದಾಗ ಅಂದಿನ ‘RSS’ ಚೆನ್ನಾಗಿತ್ತು, ಈಗ ಪುಡಾರಿಗಳು ಸೇರಿದ್ದಾರೆ : ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ

30/10/2025 3:36 PM

ಶಿವಮೊಗ್ಗ: ಲೆಕ್ಕಿಗರ ಹುದ್ದೆಗೆ ಅರ್ಜಿ ಆಹ್ವಾನ

30/10/2025 3:36 PM

BREAKING: ‘KUWJ ಚುನಾವಣೆ’ಯಲ್ಲಿ ‘ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು’ ನೇತೃತ್ವದಲ್ಲಿ ಎಲ್ಲಾ ಸ್ಥಾನಗಳಿಗೂ ಅವಿರೋಧ ಆಯ್ಕೆ

30/10/2025 3:33 PM

ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಯನಾಡಿನ ಚಂದಾ ವಸೂಲಿಗಾರರೋ? : ಸಿಎಂ ವಿರುದ್ಧ ಅಶೋಕ್ ವಾಗ್ದಾಳಿ

30/10/2025 3:24 PM
State News
KARNATAKA

ನಾನು ಬಿಜೆಪಿಯಲ್ಲಿದ್ದಾಗ ಅಂದಿನ ‘RSS’ ಚೆನ್ನಾಗಿತ್ತು, ಈಗ ಪುಡಾರಿಗಳು ಸೇರಿದ್ದಾರೆ : ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ

By kannadanewsnow0530/10/2025 3:36 PM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಆರ್ ಎಸ್ ಎಸ್ ನಿರ್ಬಂಧ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ವಿಪಕ್ಷ…

ಶಿವಮೊಗ್ಗ: ಲೆಕ್ಕಿಗರ ಹುದ್ದೆಗೆ ಅರ್ಜಿ ಆಹ್ವಾನ

30/10/2025 3:36 PM

BREAKING: ‘KUWJ ಚುನಾವಣೆ’ಯಲ್ಲಿ ‘ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು’ ನೇತೃತ್ವದಲ್ಲಿ ಎಲ್ಲಾ ಸ್ಥಾನಗಳಿಗೂ ಅವಿರೋಧ ಆಯ್ಕೆ

30/10/2025 3:33 PM

ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಯನಾಡಿನ ಚಂದಾ ವಸೂಲಿಗಾರರೋ? : ಸಿಎಂ ವಿರುದ್ಧ ಅಶೋಕ್ ವಾಗ್ದಾಳಿ

30/10/2025 3:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.