Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: K-SET ಪರೀಕ್ಷೆಯ ವೇಳೆ ಕೆಇಎ ಮತ್ತೊಂದು ಎಡವಟ್ಟು: ಮಹಿಳಾ ಅಭ್ಯರ್ಥಿಗಳ ಕಿವಿಯೋಲೆ, ಮೂಗುತಿ ಬಿಚ್ಚಿಸಿದ ಸಿಬ್ಬಂದಿ

03/11/2025 6:47 AM

ಕರ್ನಾಟಕದಿಂದ ಬಿಹಾರಕ್ಕೆ ಮತದಾನಕ್ಕೆ ತೆರಳುವವರಿಗೆ ಮೂರು ದಿನ ರಜೆ: ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

03/11/2025 6:44 AM

ಕತ್ತಲೆಯಲ್ಲಿ ಮಲಗುವುದು ನಿಮ್ಮ ಹೃದಯಕ್ಕೆ ಏಕೆ ಉತ್ತಮವಾಗಿದೆ?

03/11/2025 6:38 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕದಿಂದ ಬಿಹಾರಕ್ಕೆ ಮತದಾನಕ್ಕೆ ತೆರಳುವವರಿಗೆ ಮೂರು ದಿನ ರಜೆ: ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ
KARNATAKA

ಕರ್ನಾಟಕದಿಂದ ಬಿಹಾರಕ್ಕೆ ಮತದಾನಕ್ಕೆ ತೆರಳುವವರಿಗೆ ಮೂರು ದಿನ ರಜೆ: ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

By kannadanewsnow0903/11/2025 6:44 AM

ಬೆಂಗಳೂರು: “ಬಿಹಾರದ ಅಭಿವೃದ್ಧಿಗಾಗಿ ಮಹಾಘಟಬಂಧನ್ ಗೆ ಮತ ನೀಡಿ ಹಾಗೂ ನಿಮ್ಮ ಸಂಬಂಧಿಕರಿಗೂ ನಮಗೆ ಮತ ನೀಡುವಂತೆ ತಿಳಿಸಿ. ನಿಮ್ಮ ರಾಜ್ಯದ ಅಭಿವೃದ್ಧಿಗಾಗಿ ಮತ ಚಲಾವಣೆ ಮಾಡಬೇಕು. ಮತವನ್ನು ವ್ಯರ್ಥ ಮಾಡಬಾರದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದರು.

ಬ್ಯಾಟರಾಯನಪುರದ ಕಾಫಿ ಬೋರ್ಡ್ ಲೇಔಟ್ ನಲ್ಲಿ ಬಿಹಾರ ಮೂಲದ ಬೆಂಗಳೂರು ನಿವಾಸಿಗಳ ಸಂಘದ ಸದಸ್ಯರನ್ನು ಉದ್ದೇಶಿಸಿ ಭಾನುವಾರ ಮಾತನಾಡಿದರು. ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ನನಗೆ ದೊಡ್ಡ ಸ್ಥಾನ ಬೇಕು ಎಂದು ನೀವೆಲ್ಲರೂ ಹೇಳಿದ್ದೀರಿ. ನನಗೆ ಅದು ಮುಖ್ಯವಲ್ಲ. ಬಿಹಾರದಲ್ಲಿ ಮಹಾಘಟ ಬಂಧನ ಅಧಿಕಾರಕ್ಕೆ ತಂದರೆ ನನಗೆ ಎಲ್ಲಾ ಸ್ಥಾನವನ್ನು ನೀವು ಕೊಟ್ಟಂತೆ. ನಿಮ್ಮ ಒಂದೊಂದು ಮತವೂ ಮಹಾಘಟಬಂದನ್ ಅಧಿಕಾರಕ್ಕೆ ಬರಲು ಮುಖ್ಯವಾದುದು” ಎಂದರು.

“ಈ ಮೊದಲಿನಂತೆ ನಿತೀಶ್ ಕುಮಾರ್ ಅವರ ಕೈಯಲ್ಲಿ ಬಿಹಾರವಿಲ್ಲ. ಅವರು ರಾಜಕೀಯದ ಕೊನೆಗಾಲದಲ್ಲಿದ್ದಾರೆ. ಬಿಹಾರದ‌ ಅಭಿವೃದ್ಧಿಗೆ ಲಾಲುಪ್ರಸಾದ್ ಯಾದವ್ ಅವರ ಪುತ್ರ ತೇಜಸ್ವಿ ಯಾದವ್ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದು ರಾಹುಲ್ ಗಾಂಧಿಯವರು ಘೋಷಣೆ ಮಾಡಿದ್ದಾರೆ” ಎಂದರು.

“ರಾಹುಲ್ ಗಾಂಧಿಯವರನ್ನು ಈ ದೇಶದ ಪ್ರಧಾನಿಯಾಗಿ ಮಾಡಬೇಕು. ನೆಹರು ಅವರ ಕುಟುಂಬ ಈ ದೇಶಕ್ಕೆ ತನ್ನದೇ ಆದ ಕೊಡುಗೆ ‌ನೀಡಿದೆ. ಈ ಕಾರಣಕ್ಕೆ ಅವರಿಗೆ ನೀವು ಶಕ್ತಿ ನೀಡಬೇಕು. ತೇಜಸ್ವಿ ಯಾದವ್ ಅವರನ್ನ ಬೆಂಬಲಿಸಬೇಕು” ಎಂದರು.

ಮತದಾನಕ್ಕೆ ತೆರಳುವವರಿಗೆ ಮೂರು ದಿನ ರಜೆ ‌ನೀಡಲು ಸೂಚನೆ

“ಬಿಹಾರದಲ್ಲಿ ಲಕ್ಷಾಂತರ ಜನರ ಹೆಸರನ್ನು ಮತದಾರರ ಪಟ್ಟಿಯಿಂದ ಕಿತ್ತು ಹಾಕಲಾಗಿದೆ. ನಿಮ್ಮ ಊರಿನಲ್ಲಿರುವವರ ಬದುಕನ್ನು ಉಳಿಸಲು ನಾವು ಪ್ರಯತ್ನ ಮಾಡುತ್ತಿದ್ದೇವೆ. ನೀವುಗಳು ಇಲ್ಲಿ ಬದುಕು ಕಟ್ಟಿಕೊಂಡಿರಬಹುದು. ಆದರೆ ನಿಮ್ಮ ಮತಗಳು ಅಲ್ಲಿರಬಹುದು. ಅಥವಾ ನಿಮ್ಮ ಸಂಬಂಧಿಕರು ಅಲ್ಲಿರಬಹುದು. ಅವರಿಗೆ ಮತದಾನ ಮಾಡಲು ನೀವು ತಿಳಿಸಿ. ನೀವುಗಳು ಸಹ ಮತದಾನ ಮಾಡಲು ಊರಿಗೆ ತೆರಳಿ. ನಿಮಗೆಲ್ಲರಿಗು ಮೂರು ದಿನ ರಜೆ ನೀಡುವಂತೆ ನೀವುಗಳು ಕೆಲಸ ನಿರ್ವಹಿಸುವ ಸಂಸ್ಥೆಗಳು, ಗುತ್ತಿಗೆದಾರರಿಗೆ ಹಾಗೂ ಕ್ರೆಡಾಯ್ ಸಂಸ್ಥೆಗೆ ಸೂಚಿಸುತ್ತೇನೆ” ಎಂದರು.

ಕರ್ನಾಟಕ ಬಿಹಾರ ಸಂಘದ ಸಮುದಾಯ ಭವನಕ್ಕೆ ನಿವೇಶನ

“ಬಿಹಾರದವರು ಇಲ್ಲದಿದ್ದರೆ ಬೆಂಗಳೂರಿನಲ್ಲಿ ಅತ್ಯುತ್ತಮ ‌ಕಟ್ಟಡಗಳನ್ನು ನಿರ್ಮಾಣ ಮಾಡಲು ಸಾಧ್ಯವಿರುತ್ತಿರಲಿಲ್ಲ. ನೀವು ಶ್ರಮಜೀವಿಗಳು. ಮರಗೆಲಸ, ಎಲೆಕ್ಟ್ರಿಕಲ್ ಕೆಲಸಗಳು, ವಿನ್ಯಾಸದ‌‌ ಕೆಲಸಗಳು ಸೇರಿದಂತೆ ಯಾವುದೇ ಕೆಲಸ ನೀಡಿದರು ಅತ್ಯಂತ ಶ್ರದ್ಧೆಯಿಂದ ನಿರ್ವಹಣೆ ಮಾಡುವವರು. ‌ನಿಮ್ಮ ಸಂಘದ ಸಮುದಾಯ ಭವನಕ್ಕೆ ನಿವೇಶನ ನೀಡಲಾಗುವುದು” ಎಂದು ತಿಳಿಸಿದರು.

“ಇನ್ನೊಂದು ತಿಂಗಳಲ್ಲಿ ಇದರ ಬಗ್ಗೆ ಬೇರೆ ರಾಜ್ಯದ ಸಂಘಟನೆಗಳಿಗೆ ನಿವೇಶನಗಳನ್ನು ಮೀಸಲಿಡುವ ಬಗ್ಗೆ ಅಧಿಸೂಚನೆ ಹೊರಡಿಸಲಾಗುವುದು. ನೀವು ನಿವೇಶನಕ್ಕೆ ಅರ್ಜಿ ಸಲ್ಲಿಸಬೇಕು. ಸಂಘದ ಪದಾಧಿಕಾರಿಗಳು ಮುಂದಿನ ವಾರದಲ್ಲಿ ಬಂದು ಭೇಟಿಮಾಡಿ. ಅಸ್ಸಾಂಗೆ ಗಾಯಕ ಜುಬಿನ್ ಅವರ ಸ್ಮರಣೆ ಕಾರ್ಯಕ್ರಮಕ್ಕೆ ಹೋದ ಸಂದರ್ಭದಲ್ಲಿ ನಮಗೂ ಚಟುವಟಿಕೆಗಳನ್ನು ನಡೆಸಲು ನಿವೇಶನ ನೀಡಿ ಎಂದು ಮನವಿ ಮಾಡಿದ್ದರು ಎಲ್ಲರಿಗೂ ಸಿಎ ನಿವೇಶನ ನೀಡಲು ಆಲೋಚಿಸಲಾಗುವುದು” ಎಂದರು.

“ಕರ್ನಾಟಕದಲ್ಲಿ ನಾವು ನೀಡಿದ ಗ್ಯಾರಂಟಿಗಳು ಇಡೀ ದೇಶಕ್ಕೆ ಮಾದರಿಯಾಗಿವೆ‌. ಇಲ್ಲಿ ನೆಲೆಸಿರುವ ನೀವುಗಳು ಸಹ ನಮ್ಮವರಾಗಿದ್ದೀರಿ. ನೀವು ಸಹ ಗ್ಯಾರಂಟಿ ಯೋಜನೆಗಳ ಫಲವನ್ನು ಪಡೆಯುತ್ತಿರಬಹುದು. ನಮ್ಮ ಮಾದರಿಯನ್ನು ನೋಡಿ ಟೀಕೆ ಮಾಡಿದವರೇ ಈಗ ಕರ್ನಾಟಕ ಮಾದರಿ ಅನುಸರಿಸುತ್ತಿದ್ದಾರೆ. ಬಿಹಾರದಲ್ಲಿಯೂ ಗ್ಯಾರಂಟಿ ಯೋಜನೆಗಳನ್ನು ‌ಘೋಷಣೆ ಮಾಡಲಾಗಿದೆ” ಎಂದರು

“ನೀವು ಹೊರಗಿನಿಂದ ಬಂದವರು ಎಂದು ನಾವು ಎಂದಿಗೂ ಬೇಧ ಭಾವ ಎಸಗಿಲ್ಲ. ಕೊರೋನಾ ಸಂದರ್ಭದಲ್ಲಿ ಎರಡರಷ್ಟು ಬಸ್ ದರ ಏರಿಕೆ ಮಾಡಿ ಊರಿಗೆ ಮರಳುವವರಿಗೆ ತೊಂದರೆ ನೀಡಲಾಗಿತ್ತು. ಆಗ ನಾನು ಹೋರಾಟ ಮಾಡಿದ‌ ನಂತರ ಕಾರ್ಮಿಕರನ್ನು ಉಚಿತವಾಗಿ ಕಳುಹಿಸುವ ವ್ಯವಸ್ಥೆ ಮಾಡಲಾಯಿತು” ಎಂದರು.

“ಅತ್ಯಂತ ದೊಡ್ಡ ಇತಿಹಾಸವನ್ನು ಹೊಂದಿರುವ ರಾಜ್ಯ ಬಿಹಾರ. ವಿಶೇಷ ಸಂಸ್ಕೃತಿ ಹೊಂದಿರುವವರು ನೀವು. ನಾವೆಲ್ಲರೂ ಭಾರತೀಯರು. ಕಾಂಗ್ರೆಸ್ ಪಕ್ಷ ಜಾರಿಗೆ‌ ತಂದ ಸಂವಿಧಾನದಿಂದ ನೀವು ನಾವೆಲ್ಲರೂ ಒಟ್ಟಿಗೆ ಬದುಕುತ್ತಿದ್ದೇವೆ” ಎಂದರು.

“ದೆಹಲಿಯಲ್ಲಿ ಇಂದು ಬೇರೆ ಪಕ್ಷ ಆಡಳಿತದಲ್ಲಿರಬಹುದು. ಬಿಜೆಪಿ ಆಗ ಅಧಿಕಾರದಲ್ಲಿ ಇರಲಿಲ್ಲ. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ನಮ್ಮ ಪಕ್ಷ. ರಾಷ್ಟ್ರ ಧ್ವಜ, ಗೀತೆ ಸೇರಿದಂತೆ ಈ‌ ಕಟ್ಟಿದ ಪಕ್ಷ‌ ನಮ್ಮದು. ಇಂದಿರಾಗಾಂಧಿಯವರು, ರಾಜೀವ್ ಗಾಂಧಿಯವರು ‌ಈ‌‌‌ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದರು.‌ ಸೋನಿಯಾ ಗಾಂಧಿಯವರು ಅಧಿಕಾರ ತ್ಯಾಗ ‌ಮಾಡಿದ್ದಾರೆ” ಎಂದರು.

ಕನ್ನಡದಲ್ಲಿ ಮಾತನಾಡಿದ್ದು ಹೆಚ್ಚು ಸಂತೋಷ ನೀಡಿತು

ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕನ್ನಡದಲ್ಲಿ ಮಾಡಿದ ಭಾಷಣವನ್ನು ‌ಬಿಹಾರಿ ಭಾಷೆಗೆ ತರ್ಜುಮೆ ಮಾಡಲು ಹೋದಾಗ “ನಾವು ಬಿಹಾರಿಗಳಲ್ಲ, ಕನ್ನಡದ ಬಿಹಾರಿಗಳು” ಎಂದು ಸಭಿಕರು ಹೇಳಿದರು. “1 ನೇ ತಾರೀಕು ರಾಜ್ಯೋತ್ಸವ ‌ಆಚರಿಸಿದ್ದೇವೆ. ನೀವು ಕನ್ನಡ ಕಲಿತಿರುವುದು ನೋಡಿದರೆ ಸಂತಸವಾಗುತ್ತಿದೆ” ಎಂದು ಶಿವಕುಮಾರ್ ಅವರು ಹೇಳಿದರು.

ಟನಲ್‌ ರಸ್ತೆ ವಿಚಾರವಾಗಿ ಟೀಕಿಸಿದ ತೇಜಸ್ವಿ ಸೂರ್ಯ ಅವರ ತೇಜೋವಧೆ ಮಾಡಲಾಗಿದೆ ಎಂದು ಕೇಳಿದಾಗ, “ನಾನು ಯಾರ ಮೇಲೂ ಸಹ ವೈಯಕ್ತಿಕ ಟೀಕೆ ಮಾಡಿಲ್ಲ. ತೇಜಸ್ವಿ ಸೂರ್ಯ ಅವರ ಮಾತುಗಳು ಎಳಸುತನದಿಂದ ಕೂಡಿದ್ದವು. ಟನಲ್ ರಸ್ತೆ ಬಗ್ಗೆ ಅವರ ಪಕ್ಷದ ಹಿರಿಯ ನಾಯಕರಾದ ನಿತಿನ್ ಗಡ್ಕರಿ ಅವರ ಹೇಳಿಕೆಗಳನ್ನು ಕೇಳಬೇಕು. ಮುಂಬೈ, ಕಾಶ್ಮೀರದಲ್ಲಿನ ಟನಲ್‌ ರಸ್ತೆ ಬಗ್ಗೆ ಏಕೆ ಮಾತನಾಡುತ್ತಿಲ್ಲ. ಟನಲ್ ರಸ್ತೆ ಕೇಂದ್ರ ಸರ್ಕಾರದ ಸಲಹೆ ಕೂಡ ಹೌದು. ಈ ವಿಚಾರದಿಂದ ಬಿಜೆಪಿಯವರ ನಿಜವಾದ ಬಣ್ಣ ಬಯಲಾಗುತ್ತಿದೆ‌. ಬೆಂಗಳೂರಿನ ಅಭಿವೃದ್ಧಿ ವಿರುದ್ದ ಬಿಜೆಪಿಯಿದೆ” ಎಂದರು.

Share. Facebook Twitter LinkedIn WhatsApp Email

Related Posts

BIG NEWS: K-SET ಪರೀಕ್ಷೆಯ ವೇಳೆ ಕೆಇಎ ಮತ್ತೊಂದು ಎಡವಟ್ಟು: ಮಹಿಳಾ ಅಭ್ಯರ್ಥಿಗಳ ಕಿವಿಯೋಲೆ, ಮೂಗುತಿ ಬಿಚ್ಚಿಸಿದ ಸಿಬ್ಬಂದಿ

03/11/2025 6:47 AM1 Min Read

ಉದ್ಯೋಗವಾರ್ತೆ : ಕರ್ನಾಟಕದಲ್ಲಿ `ಆರೋಗ್ಯ ಕವಚ’ ಬಲಪಡಿಸಲು ಮಹತ್ವದ ಕ್ರಮ : `3691’ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

03/11/2025 6:29 AM2 Mins Read

GOOG NEWS : ರಾಜ್ಯದ ಗಣಿಬಾಧಿತ ತಾಲೂಕುಗಳಲ್ಲಿ 1-10ನೇ ತರಗತಿ ವಿದ್ಯಾರ್ಥಿಗಳಿಗೆ `ಪೌಷ್ಠಿಕ ಆಹಾರ’ ವಿತರಣೆ : ಸರ್ಕಾರ ಮಹತ್ವದ ಆದೇಶ

03/11/2025 6:26 AM1 Min Read
Recent News

BIG NEWS: K-SET ಪರೀಕ್ಷೆಯ ವೇಳೆ ಕೆಇಎ ಮತ್ತೊಂದು ಎಡವಟ್ಟು: ಮಹಿಳಾ ಅಭ್ಯರ್ಥಿಗಳ ಕಿವಿಯೋಲೆ, ಮೂಗುತಿ ಬಿಚ್ಚಿಸಿದ ಸಿಬ್ಬಂದಿ

03/11/2025 6:47 AM

ಕರ್ನಾಟಕದಿಂದ ಬಿಹಾರಕ್ಕೆ ಮತದಾನಕ್ಕೆ ತೆರಳುವವರಿಗೆ ಮೂರು ದಿನ ರಜೆ: ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

03/11/2025 6:44 AM

ಕತ್ತಲೆಯಲ್ಲಿ ಮಲಗುವುದು ನಿಮ್ಮ ಹೃದಯಕ್ಕೆ ಏಕೆ ಉತ್ತಮವಾಗಿದೆ?

03/11/2025 6:38 AM

ಭಾರತೀಯ ಮಹಿಳಾ ತಂಡದ ವಿಶ್ವಕಪ್ ಗೆಲುವಿನ ಬಳಿಕ `ರೋಹಿತ್ ಶರ್ಮಾ’ ರಿಯಾಕ್ಷನ್ ವೈರಲ್ | WATCH VIDEO

03/11/2025 6:38 AM
State News
KARNATAKA

BIG NEWS: K-SET ಪರೀಕ್ಷೆಯ ವೇಳೆ ಕೆಇಎ ಮತ್ತೊಂದು ಎಡವಟ್ಟು: ಮಹಿಳಾ ಅಭ್ಯರ್ಥಿಗಳ ಕಿವಿಯೋಲೆ, ಮೂಗುತಿ ಬಿಚ್ಚಿಸಿದ ಸಿಬ್ಬಂದಿ

By kannadanewsnow0903/11/2025 6:47 AM KARNATAKA 1 Min Read

ಬಳ್ಳಾರಿ: ರಾಜ್ಯಾಧ್ಯಂತ ನಿನ್ನೆ ಕೆ-ಸೆಟ್ ಪರೀಕ್ಷೆ ನಡೆಯಿತು. ಈ ಪರೀಕ್ಷೆಯ ಸಂದರ್ಭದಲ್ಲಿ ಕೆಇಎ ಮತ್ತೊಂದು ಎಡವಟ್ಟು ಮಾಡಿದೆ. ಪರೀಕ್ಷೆಗೆ ಹಾಜರಾದಂತ…

ಕರ್ನಾಟಕದಿಂದ ಬಿಹಾರಕ್ಕೆ ಮತದಾನಕ್ಕೆ ತೆರಳುವವರಿಗೆ ಮೂರು ದಿನ ರಜೆ: ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

03/11/2025 6:44 AM

ಉದ್ಯೋಗವಾರ್ತೆ : ಕರ್ನಾಟಕದಲ್ಲಿ `ಆರೋಗ್ಯ ಕವಚ’ ಬಲಪಡಿಸಲು ಮಹತ್ವದ ಕ್ರಮ : `3691’ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

03/11/2025 6:29 AM

GOOG NEWS : ರಾಜ್ಯದ ಗಣಿಬಾಧಿತ ತಾಲೂಕುಗಳಲ್ಲಿ 1-10ನೇ ತರಗತಿ ವಿದ್ಯಾರ್ಥಿಗಳಿಗೆ `ಪೌಷ್ಠಿಕ ಆಹಾರ’ ವಿತರಣೆ : ಸರ್ಕಾರ ಮಹತ್ವದ ಆದೇಶ

03/11/2025 6:26 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.