Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಅಂತಾರಾಷ್ಟ್ರೀಯ ಕ್ರೀಡೆ’ಯಲ್ಲಿ ಪದಕ ಗೆದ್ದರೇ ‘ಪೊಲೀಸ್ ಹುದ್ದೆ’: ಸಿಎಂ ಸಿದ್ಧರಾಮಯ್ಯ ಘೋಷಣೆ

03/11/2025 8:33 PM

SC, ST ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ‘ಉಚಿತ ತರಬೇತಿ’ ಕಾರ್ಯಾಗಾರ ‘ಡಿಎಸ್ ವೀರಯ್ಯ’ ಉದ್ಘಾಟನೆ

03/11/2025 8:25 PM

BREAKING: ಇನ್ಮುಂದೆ ಪ್ರತೀ ವರ್ಷ ಸಿನಿಮಾ ಪ್ರಶಸ್ತಿಗಳನ್ನು ನೀಡಲಾಗುವುದು: ಸಿಎಂ ಸಿದ್ದರಾಮಯ್ಯ ಘೋಷಣೆ

03/11/2025 7:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SC, ST ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ‘ಉಚಿತ ತರಬೇತಿ’ ಕಾರ್ಯಾಗಾರ ‘ಡಿಎಸ್ ವೀರಯ್ಯ’ ಉದ್ಘಾಟನೆ
KARNATAKA

SC, ST ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ‘ಉಚಿತ ತರಬೇತಿ’ ಕಾರ್ಯಾಗಾರ ‘ಡಿಎಸ್ ವೀರಯ್ಯ’ ಉದ್ಘಾಟನೆ

By kannadanewsnow0903/11/2025 8:25 PM

ಬೆಂಗಳೂರು: ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವ ನಿಟ್ಟಿನಲ್ಲಿ ಪಂಚಶೀಲ ವೆಲ್ಫೇರ್ ಅಸೋಸಿಯೇಷನ್ ಹಾಗೂ ಸಿದ್ಧಾರ್ಥ ಶಿಕ್ಷಣ ಮತ್ತು ಸಾಂಸ್ಕೃತಿಕ ಸಂಘ ಮಹತ್ವದ ಹೆಜ್ಜೆಯನ್ನು ಇರಿಸಿದೆ. ಅದೇ 75 ದಿನಗಳ ಕಾಲ ಎಸ್ಸಿ, ಎಸ್ಟಿ ಸಮುದಾಯದ ಅಭ್ಯರ್ಥಿಗಳಿಗೆ ಉಚಿತವಾಗಿ ಸ್ಪರ್ಧಾತ್ಮಕ ತರಬೇತಿಯನ್ನು ನೀಡುವ ಕಾರ್ಯಾಗಾರವನ್ನು ಪಂಚಶೀಲ ವೆಲ್ಫೇರ್ ಅಸೋಸಿಯೇಷನ್ ನ ಮುಖ್ಯಸ್ಥರು, ಲೇಖಲ ಡಿಎಸ್ ವೀರಯ್ಯ ಅವರು ಉದ್ಘಾಟಿಸಿದರು.

ಇಂದು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವಂತ ಪಂಚಶೀಲ ಗ್ರೂಪ್ ಆಫ್ ಇನ್ ಸ್ಟಿಟ್ಯೂಷನ್ ನ ಸೆಮಿನಾರ್ ಹಾಲ್ ನಲ್ಲಿ ಉಚಿತ ಸ್ಪರ್ಧಾತ್ಮಕ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದಂತ ಅವರು, ಈ ಸ್ಪರ್ಧಾತ್ಮಕ ಯುಗದಲ್ಲಿ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳನ್ನು ತಯಾರಿ ಮಾಡುವುದೇ ನಮ್ಮ ಉದ್ದೇಶವಾಗಿದೆ. ಅಭ್ಯರ್ಥಿಗಳಲ್ಲಿ ನಾನು ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಿ ಸರ್ಕಾರಿ ನೌಕರಿ ಪಡೆಯುತ್ತೇನೆ ಎನ್ನುವಂತ ವಿಶ್ವಾಸವನ್ನು ಹುಟ್ಟಿಸುವ ಕೆಲಸವನ್ನು ಈ ತರಬೇತಿಯ ಮೂಲಕ ಮಾಡಲಾಗುತ್ತದೆ ಎಂದರು.

ಪಂಚಶೀಲ ವೆಲ್ಫೇರ್ ಅಸೋಸಿಯೇಷನ್ ಮತ್ತು ಸಿದ್ಧಾರ್ಥ ಶಿಕ್ಷಣ ಮತ್ತು ಸಾಂಸ್ಕೃತಿಕ ಸಂಘದ ಮೂಲಕ ಈ ಕಾರ್ಯವನ್ನು ಮಾಡಲಾಗುತ್ತಿದೆ. ಇದು 75 ದಿನಗಳ ತರಬೇತಿಯಾಗಿದೆ. ಉಚಿತವಾಗಿ ನೀಡಲಾಗುತ್ತದೆ. ಉನ್ನತ ಸಾಧನೆಯನ್ನು ಮಾಡಿದಂತ ಸಾಧಕರಿಂದ ತರಬೇತಿಯನ್ನು ಕೊಡಿಸಲಾಗುತ್ತದೆ. ಪದವಿ, ಪಿಯುಸಿ ಉತ್ತೀರ್ಣರಾಗಿ ಸ್ಪರ್ಧಾತ್ಮಕ ತರಬೇತಿಗೆ ಅಣಿಯಾಗುವಂತ ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಈ ತರಬೇತಿಯನ್ನು ಆಯೋಜಿಸಲಾಗಿದೆ ಎಂದರು.

ಅಂದಹಾಗೇ 30 ಅಭ್ಯರ್ಥಿಗಳು ಉಚಿತ ಸ್ಪರ್ಧಾತ್ಮಕ ತರಬೇತಿಗೆ ನೋಂದಾಯಿಸಿಕೊಂಡಿದ್ದಾರೆ. ಇವರಿಗೆ ಉನ್ನತ ಸಾಧನೆ ಮಾಡಿದಂತ ಸಾಧಕರಿಂದ ತರಬೇತಿಯನ್ನು ಕೊಡಿಸಲಾಗುತ್ತದೆ. ಪ್ರಸ್ತುತ ದಿನಗಳಲ್ಲಿ ಐಎಎಸ್, ಕೆಎಎಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ, ಉತ್ತೀರ್ಣರಾಗಿ ಹೇಗೆ ಸರ್ಕಾರಿ ಉದ್ಯೋಗ ಪಡೆಯುವುದು ಎನ್ನುವ ಬಗ್ಗೆ ಕಾರ್ಯಾಗಾರದಲ್ಲಿ ಪಾಲ್ಗೊಂಡವರಿಗೆ ತಿಳಿಸಿಕೊಡಲಾಗುತ್ತದೆ.

ಇಂದಿನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಯಲಕ್ಷ್ಮೀ ಆರ್, ಐಪಿಎಸ್ ಅಧಿಕಾರಿ ಸುಭಾಷ್ ಭರಣಿ ಅವರ ಪತ್ನಿ ಮೋಹನ ಸುಭಾಷ್ ಭರಣಿ, ಸುಗುಣ ರಾವ್, ಜಿ.ಮಣಿವಾಚಗಂ ಭಾಗವಹಿಸಿದ್ದರು.

ಈ ವೇಳೆ ಪಂಚಶೀಲ ವೆಲ್ಫೇರ್ ಅಸೋಸಿಯೇಷನ್ ನ ಸಿಎಓ ಗೀತಾಂಜಲಿ, ಸಿಬ್ಬಂದಿಗಳಾದಂತ ಕೃಷ್ಣಮೂರ್ತಿ, ರಾಮಗೋಪಾಲ್, ಶಂಬೇಗೌಡ, ಕೃತಿಕಾ, ಎಲ್ ಎನ್ ಆರ್ ಕಾಲೇಜಿನ ವಿದ್ಯಾರ್ಥಿಗಳು, ಪಂಚಶೀಲ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಇತತರು ಉಪಸ್ಥಿತರಿದ್ದರು.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

BREAKING: ಇನ್ಮುಂದೆ ಪ್ರತೀ ವರ್ಷ ಸಿನಿಮಾ ಪ್ರಶಸ್ತಿಗಳನ್ನು ನೀಡಲಾಗುವುದು: ಸಿಎಂ ಸಿದ್ದರಾಮಯ್ಯ ಘೋಷಣೆ

ಶಿವಮೊಗ್ಗ: ಸೊರಬದ ‘ಕಾನಹಳ್ಳಿ’ಯಲ್ಲಿ ಅದ್ಧೂರಿಯಾಗಿ ‘ಕನ್ನಡ ರಾಜ್ಯೋತ್ಸವ’ ಆಚರಣೆ

Share. Facebook Twitter LinkedIn WhatsApp Email

Related Posts

‘ಅಂತಾರಾಷ್ಟ್ರೀಯ ಕ್ರೀಡೆ’ಯಲ್ಲಿ ಪದಕ ಗೆದ್ದರೇ ‘ಪೊಲೀಸ್ ಹುದ್ದೆ’: ಸಿಎಂ ಸಿದ್ಧರಾಮಯ್ಯ ಘೋಷಣೆ

03/11/2025 8:33 PM1 Min Read

BREAKING: ಇನ್ಮುಂದೆ ಪ್ರತೀ ವರ್ಷ ಸಿನಿಮಾ ಪ್ರಶಸ್ತಿಗಳನ್ನು ನೀಡಲಾಗುವುದು: ಸಿಎಂ ಸಿದ್ದರಾಮಯ್ಯ ಘೋಷಣೆ

03/11/2025 7:55 PM2 Mins Read

ಶಿವಮೊಗ್ಗ: ಸೊರಬದ ‘ಕಾನಹಳ್ಳಿ’ಯಲ್ಲಿ ಅದ್ಧೂರಿಯಾಗಿ ‘ಕನ್ನಡ ರಾಜ್ಯೋತ್ಸವ’ ಆಚರಣೆ

03/11/2025 6:57 PM1 Min Read
Recent News

‘ಅಂತಾರಾಷ್ಟ್ರೀಯ ಕ್ರೀಡೆ’ಯಲ್ಲಿ ಪದಕ ಗೆದ್ದರೇ ‘ಪೊಲೀಸ್ ಹುದ್ದೆ’: ಸಿಎಂ ಸಿದ್ಧರಾಮಯ್ಯ ಘೋಷಣೆ

03/11/2025 8:33 PM

SC, ST ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ‘ಉಚಿತ ತರಬೇತಿ’ ಕಾರ್ಯಾಗಾರ ‘ಡಿಎಸ್ ವೀರಯ್ಯ’ ಉದ್ಘಾಟನೆ

03/11/2025 8:25 PM

BREAKING: ಇನ್ಮುಂದೆ ಪ್ರತೀ ವರ್ಷ ಸಿನಿಮಾ ಪ್ರಶಸ್ತಿಗಳನ್ನು ನೀಡಲಾಗುವುದು: ಸಿಎಂ ಸಿದ್ದರಾಮಯ್ಯ ಘೋಷಣೆ

03/11/2025 7:55 PM

BREAKING : ಭಾರತದ ‘ಯೂತ್ ಏಷ್ಯನ್ ಗೇಮ್ಸ್’ ವಿಜೇತರಿಗೆ ನಗದು ಕೊಡುಗೆ ಘೋಷಿಸಿದ ‘IOA’

03/11/2025 7:51 PM
State News
KARNATAKA

‘ಅಂತಾರಾಷ್ಟ್ರೀಯ ಕ್ರೀಡೆ’ಯಲ್ಲಿ ಪದಕ ಗೆದ್ದರೇ ‘ಪೊಲೀಸ್ ಹುದ್ದೆ’: ಸಿಎಂ ಸಿದ್ಧರಾಮಯ್ಯ ಘೋಷಣೆ

By kannadanewsnow0903/11/2025 8:33 PM KARNATAKA 1 Min Read

ಬೆಂಗಳೂರು: ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಪಟುಗಳಿಗೆ ಪೊಲೀಸ್‌ ಇಲಾಖೆಯಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲು ನಮ್ಮ ಸರ್ಕಾರ ನಿರ್ಧರಿಸಿದೆ. ಪೊಲೀಸ್‌…

SC, ST ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ‘ಉಚಿತ ತರಬೇತಿ’ ಕಾರ್ಯಾಗಾರ ‘ಡಿಎಸ್ ವೀರಯ್ಯ’ ಉದ್ಘಾಟನೆ

03/11/2025 8:25 PM

BREAKING: ಇನ್ಮುಂದೆ ಪ್ರತೀ ವರ್ಷ ಸಿನಿಮಾ ಪ್ರಶಸ್ತಿಗಳನ್ನು ನೀಡಲಾಗುವುದು: ಸಿಎಂ ಸಿದ್ದರಾಮಯ್ಯ ಘೋಷಣೆ

03/11/2025 7:55 PM

ಶಿವಮೊಗ್ಗ: ಸೊರಬದ ‘ಕಾನಹಳ್ಳಿ’ಯಲ್ಲಿ ಅದ್ಧೂರಿಯಾಗಿ ‘ಕನ್ನಡ ರಾಜ್ಯೋತ್ಸವ’ ಆಚರಣೆ

03/11/2025 6:57 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.