Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಎಲ್ಲಾ ಸಮುದಾಯದವರಿಗಾಗಿ ಪಂಚ ಗ್ಯಾರಂಟಿ ಯೋಜನೆ ಜಾರಿ: ಸಚಿವ ಎನ್ ಚಲುವರಾಯಸ್ವಾಮಿ

03/11/2025 9:09 PM

ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ: ಸಿಎಂ ಸಿದ್ದರಾಮಯ್ಯ ಕರೆ

03/11/2025 9:08 PM

ಅಕ್ರಮ ಚಟುವಟಿಕೆಯಿಂದ ಷೇರು ಮೌಲ್ಯದ ಹೆಚ್ಚಳವನ್ನು ED ಲಗತ್ತಿಸಬಹುದು : ಹೈಕೋರ್ಟ್

03/11/2025 9:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ: ಸಿಎಂ ಸಿದ್ದರಾಮಯ್ಯ ಕರೆ
KARNATAKA

ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ: ಸಿಎಂ ಸಿದ್ದರಾಮಯ್ಯ ಕರೆ

By kannadanewsnow0903/11/2025 9:08 PM

ಮೈಸೂರು : ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ ಜೀವನದಲ್ಲೂ ನಡೆದುಕೊಳ್ಳಬೇಕು. ಡಾ.ರಾಜ್ ಕುಮಾರ್ ಅವರು ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು. ಈ ಕಾರಣಕ್ಕೇ ಜನಮಾನಸದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ ಎಂದು ಮುಖ್ಯಮಂತ್ರಿ ಅವರು ಕರೆ ನೀಡಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇಲ್ಲಿನ ಘಟಿಕೋತ್ಸವ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, 2018 ಮತ್ತು 19 ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು.

ಸಿನಿಮಾ ಅತ್ಯಂತ ಪ್ರಭಾವೀ ಮಾಧ್ಯಮ. ಸಮಾಜದ ಮೇಲೆ ಆಳವಾದ ಪರಿಣಾಮ ಬೀರುತ್ತದೆ. ಆದ್ದರಿಂದ ಸಿನಿಮಾ ತಾರೆಯರು ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅಷ್ಟೇ ಮೌಲ್ಯಯುತವಾಗಿ ಬದುಕಬೇಕು. ಸಮಾಜ ತಿದ್ದುವ ಸಿನಿಮಾಗಳನ್ನು ಹೆಚ್ಚೆಚ್ಚು ತಯಾರಿಸಿ ಎಂದು ಕರೆ ನೀಡಿದರು.

ನಮ್ಮ ಸರ್ಕಾರ ಕನ್ನಡ ಸಿನಿಮೋದ್ಯಮದ ಆರೋಗ್ಯಕಾರಿ ಪ್ರಗತಿ ಮತ್ತು ಬೆಳವಣಿಗೆಗೆ ಸದಾ ಬೆಂಬಲ ನೀಡುತ್ತದೆ. ಕೇವಲ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ. ಒಳ್ಳೆ ಸಿನಿಮಾ ಮಾಡಿ, ಜನ ಮೆಚ್ಚುವ, ಸಮಾಜದ ಮೇಲೆ ಉತ್ತಮ‌ ಪರಿಣಾಮ ಬೀರುವ ಸಿನಿಮಾ ಮಾಡಿದರೆ ಸಬ್ಸಿಡಿ ನೀಡಿದ್ದಕ್ಕೂ ಸಾರ್ಥಕವಾಗುತ್ತದೆ. ಸದ್ಯ ಬಾಕಿ ಇರುವ ಎಲ್ಲಾ ವರ್ಷದ ಸಬ್ಸಿಡಿಯನ್ನೂ ಒಟ್ಟಿಗೇ ನೀಡಲಾಗುವುದು ಎಂದರು.

ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಚಿತ್ರನಗರಿ ಮಾಡಲು 160 ಎಕರೆ ಜಾಗವನ್ನು ವಾರ್ತಾ ಇಲಾಖೆಗೆ ಹಸ್ತಾಂತರಿಸಲಾಗಿದೆ. ಎರಡು ತಿಂಗಳಲ್ಲಿ ಕಾನೂನು ಪ್ರಕ್ರಿಯೆ ಮುಗಿಸಿ ಚಿತ್ರನಗರಿ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ತಿಳಿಸಿದರು.

ಹಿಂದಿನ ಸರ್ಕಾರ ಆಯಾ ವರ್ಷವೇ ಚಲನಚಿತ್ರ ಪ್ರಶಸ್ತಿಗಳನ್ನು ವಿತರಿಸದ ಕಾರಣಕ್ಕೇ 2018ರ ಸಾಲಿನಿಂದ ಪ್ರಶಸ್ತಿಗಳು ಬಾಕಿ ಉಳಿದಿವೆ. ಇದು ತಪ್ಪು ಹೀಗಾಗಬಾರದು. ಆದ್ದರಿಂದ ನಮ್ಮ ಸರ್ಕಾರ ಇನ್ನು ಮುಂದೆ ಪ್ರತೀ ವರ್ಷ ಸಿನಿಮಾ ಪ್ರಶಸ್ತಿಗಳನ್ನು ನೀಡಲು ಸೂಚಿಸಲಾಗಿದೆ ಎಂದರು.

ಆಯಾ ವರ್ಷದ ಸಿನಿಮಾಗಳಿಗೆ ಮರು ವರ್ಷವೇ ಕೊಟ್ಟರೆ ಮಾತ್ರ ಅರ್ಥಪೂರ್ಣ ಆಗಿರುತ್ತದೆ. ಇಂದು ಎರಡು ವರ್ಷದ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಕೆಲವೇ ದಿನಗಳಲ್ಲಿ ಹಳೆ ಸರ್ಕಾರದ ಅವಧಿಯ ಇನ್ನೆರಡು ವರ್ಷದ ಸಿನಿಮಾ ಪ್ರಶಸ್ತಿಗಳನ್ನು ನೀಡಲು ಸೂಚನೆ ನೀಡಿದ್ದೇನೆ. ಬಳಿಕ ಆಯಾ ವರ್ಷದ ಪ್ರಶಸ್ತಿಗಳನ್ನು ಮರು ವರ್ಷದ ಆರಂಭದಲ್ಲೇ ನೀಡಲು ವೇದಿಕೆಯಲ್ಲೇ ಸೂಚನೆ ನೀಡಿದರು.

ಮೊದಲೆಲ್ಲಾ ಸಿನಿಮಾಗಳ ಸಂಖ್ಯೆ ಕಡಿಮೆ ಇತ್ತು. ನಾವು ನೋಡಿದ್ದನ್ನೇ ಮತ್ತೆ ಮತ್ತೆ ನೋಡುತ್ತಿದ್ದೆವು. ಈಗ ಸಿಕ್ಕಾಪಟ್ಟೆ ಸಿನಿಮಾಗಳು ಬರುತ್ತಿವೆ. ಆದರೆ, ಸಾಮಾಜಿಕ ಕಾಳಜಿ ಮತ್ತು ಗುಣಮಟ್ಟ ಕಡಿಮೆ ಆಗುತ್ತಿದೆ. ಆದ್ದರಿಂದ ಈಗ ಸಿನಿಮಾ ನೋಡುವುದನ್ನೇ ಕಡಿಮೆ ಮಾಡಿದ್ದೇನೆ ಎಂದರು.

ನ.5ರಂದು ಡಿಸಿಎಂ ಡಿ.ಕೆ ಶಿವಕುಮಾರ್ ಬರೆದಿರುವ ‘ನೀರಿನ ಹೆಜ್ಜೆ’ ಕೃತಿಯನ್ನು ಸಿಎಂ ಸಿದ್ಧರಾಮಯ್ಯ ಲೋಕಾರ್ಪಣೆ

BIG NEWS: ರಾಜ್ಯದಲ್ಲೊಂದು ‘ಹೃದಯ ವಿದ್ರಾವಕ’ ಘಟನೆ: ಮಾಲೀಕನ ಸಾವಿನಿಂದ ನೊಂದು ‘ಪ್ರಾಣಬಿಟ್ಟ ಶ್ವಾನ’

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಎಲ್ಲಾ ಸಮುದಾಯದವರಿಗಾಗಿ ಪಂಚ ಗ್ಯಾರಂಟಿ ಯೋಜನೆ ಜಾರಿ: ಸಚಿವ ಎನ್ ಚಲುವರಾಯಸ್ವಾಮಿ

03/11/2025 9:09 PM3 Mins Read

ನ.5ರಂದು ಡಿಸಿಎಂ ಡಿ.ಕೆ ಶಿವಕುಮಾರ್ ಬರೆದಿರುವ ‘ನೀರಿನ ಹೆಜ್ಜೆ’ ಕೃತಿಯನ್ನು ಸಿಎಂ ಸಿದ್ಧರಾಮಯ್ಯ ಲೋಕಾರ್ಪಣೆ

03/11/2025 8:44 PM1 Min Read

ರಾಜ್ಯದಲ್ಲಿ ಮಾನವ-ವನ್ಯಜೀವಿ ಸಂಘರ್ಷ ತಡೆಗೆ ‘AI ತಂತ್ರಜ್ಞಾನ’ ಬಳಕೆ: ಸಚಿವ ಈಶ್ವರ್ ಖಂಡ್ರೆ

03/11/2025 8:38 PM1 Min Read
Recent News

ರಾಜ್ಯದಲ್ಲಿ ಎಲ್ಲಾ ಸಮುದಾಯದವರಿಗಾಗಿ ಪಂಚ ಗ್ಯಾರಂಟಿ ಯೋಜನೆ ಜಾರಿ: ಸಚಿವ ಎನ್ ಚಲುವರಾಯಸ್ವಾಮಿ

03/11/2025 9:09 PM

ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ: ಸಿಎಂ ಸಿದ್ದರಾಮಯ್ಯ ಕರೆ

03/11/2025 9:08 PM

ಅಕ್ರಮ ಚಟುವಟಿಕೆಯಿಂದ ಷೇರು ಮೌಲ್ಯದ ಹೆಚ್ಚಳವನ್ನು ED ಲಗತ್ತಿಸಬಹುದು : ಹೈಕೋರ್ಟ್

03/11/2025 9:03 PM

BREAKING : ಭಾರತ-ನ್ಯೂಜಿಲೆಂಡ್ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆ ಆರಂಭ

03/11/2025 8:46 PM
State News
KARNATAKA

ರಾಜ್ಯದಲ್ಲಿ ಎಲ್ಲಾ ಸಮುದಾಯದವರಿಗಾಗಿ ಪಂಚ ಗ್ಯಾರಂಟಿ ಯೋಜನೆ ಜಾರಿ: ಸಚಿವ ಎನ್ ಚಲುವರಾಯಸ್ವಾಮಿ

By kannadanewsnow0903/11/2025 9:09 PM KARNATAKA 3 Mins Read

ಬೆಂಗಳೂರು: ಗ್ಯಾರಂಟಿ ಯೋಜನೆ ಕೇವಲ ಬಡವರಿಗೆ ಹಾಗೂ ದಲಿತರಿಗೆ ಸಿಮಿತವಾದದ್ದಲ್ಲ, ರಾಜ್ಯದಲ್ಲಿನ ಎಲ್ಲಾ ಸಮುದಾಯದವರಿಗಾಗಿ ರೂಪಿತವಾಗಿರುವುದೇ ಪಂಚ ಗ್ಯಾರಂಟಿ ಯೋಜನೆಯಾಗಿದ್ದು. ಪ್ರತಿ…

ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ: ಸಿಎಂ ಸಿದ್ದರಾಮಯ್ಯ ಕರೆ

03/11/2025 9:08 PM

ನ.5ರಂದು ಡಿಸಿಎಂ ಡಿ.ಕೆ ಶಿವಕುಮಾರ್ ಬರೆದಿರುವ ‘ನೀರಿನ ಹೆಜ್ಜೆ’ ಕೃತಿಯನ್ನು ಸಿಎಂ ಸಿದ್ಧರಾಮಯ್ಯ ಲೋಕಾರ್ಪಣೆ

03/11/2025 8:44 PM

ರಾಜ್ಯದಲ್ಲಿ ಮಾನವ-ವನ್ಯಜೀವಿ ಸಂಘರ್ಷ ತಡೆಗೆ ‘AI ತಂತ್ರಜ್ಞಾನ’ ಬಳಕೆ: ಸಚಿವ ಈಶ್ವರ್ ಖಂಡ್ರೆ

03/11/2025 8:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.