ಹಾಸನ : ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ವಿರುದ್ಧ ಶಾಸಕ ಎಚ್ ಡಿ ರೇವಣ್ಣ ಆಕ್ರೋಶ ಹೊರಹಾಕಿದ್ದು ಜಿಲ್ಲಾಧಿಕಾರಿ ಕೆ ಎಸ್ ಲತಾ ಕುಮಾರಿ ಸರ್ವಾಧಿಕಾರಿ ಅಂತೆ ವರ್ತಿಸುತ್ತಿದ್ದಾರೆ ಜಿಲ್ಲಾ ಉಸ್ತುವಾರಿ ಸಚಿವರು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಇಲ್ಲವಾದರೆ ಜಿಲ್ಲೆಯ ಜನ ಜಿಲ್ಲಾಧಿಕಾರಿಯನ್ನು ಸರಿ ಮಾಡುತ್ತಾರೆ ಎಂದು ಮಾಜಿ ಸಚಿವ ಎಚ್ ಡಿ ರೇವಣ್ಣ ವಾಗ್ದಾಳಿ ನಡೆಸಿದರು.
ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಹಾಸನಾಂಬೆ ಜಾತ್ರೆಯಲ್ಲಿ ಹಾಸನ ಎಡಿಎಲ್ ಆರ್ ನನ್ನ ಜೊತೆಗೆ ಬಂದಿದ್ದರು. ಸಂಶುದ್ದಿನ್ ನನ್ನ ಜೊತೆ ನಡೆದುಕೊಂಡು ಬಂದರು. ಇದೇ ಕಾರಣಕ್ಕೆ ಸಂಶುದ್ದೀನ್ ರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದ್ದಾರೆ. ಸರ್ಕಾರಿ ಅಧಿಕಾರಿಗಳು ಎಂಎಲ್ಎ ಜೊತೆ ಮಾತನಾಡಬಾರದ? ಪ್ರಮಾಣಿಕ ಅಧಿಕಾರಿ ಸಂಶುದ್ದಿನ್ ಮಾಡಿದ ತಪ್ಪಾದರೂ ಏನು? ಮುಸ್ಲಿಮರು ವೋಟ್ ಹಾಕದಿದ್ದರೆ ಕಾಂಗ್ರೆಸ್ 136 ಸ್ಥಾನ ಗೆಲ್ಲುತ್ತಿರಲಿಲ್ಲ. ಆದರೆ ರಾಜ್ಯದಲ್ಲಿ ಮುಸ್ಲಿಮರಿಗೆ ಭದ್ರತೆ ಇಲ್ಲದಂತಾಗಿದೆ ಎಂದು ಹಾಸನದಲ್ಲಿ ಮಾಜಿ ಸಚಿವ ಎಚ್.ಡಿ ರೇವಣ್ಣ ವಾಗ್ದಾಳಿ ನಡೆಸಿದರು








