Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಂಡ್ಯದ ಮದ್ದೂರಲ್ಲಿ ಬೆಳ್ಳಂಬೆಳಿಗ್ಗೆ ಜೆಸಿಬಿ ಘರ್ಜನೆ : ನಗರಸಭಾ ಅಧಿಕಾರಿಗಳಿಂದ ಪುಟ್ ಪಾತ್ ಒತ್ತುವರಿ ತೆರವು

08/01/2026 2:12 PM

ಹೈಕೋರ್ಟ್ ನಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ಪಡೆದು ವಂಚನೆ : 7 ಜನರ ವಿರುದ್ಧ ‘FIR’ ದಾಖಲು

08/01/2026 2:12 PM

HD ಕುಮಾರಸ್ವಾಮಿಗಿಂತ ಹೆಚ್ಚಿನ ಅನುಭವವಿದೆ, ಅವರಿಂದ ಕಲಿಯುವ ಅಗತ್ಯ ನನಗಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು

08/01/2026 2:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಂತರರಾಷ್ಟ್ರೀಯ ಸಂಸ್ಥೆ ಸಿಐಟಿಎಸ್ ನಿಂದ ವಂತಾರ ಸಂಸ್ಥೆಗಳ ಕಾರ್ಯ ನಿರ್ವಹಣೆಗೆ ಶ್ಲಾಘನೆ
INDIA

ಅಂತರರಾಷ್ಟ್ರೀಯ ಸಂಸ್ಥೆ ಸಿಐಟಿಎಸ್ ನಿಂದ ವಂತಾರ ಸಂಸ್ಥೆಗಳ ಕಾರ್ಯ ನಿರ್ವಹಣೆಗೆ ಶ್ಲಾಘನೆ

By kannadanewsnow0904/11/2025 4:09 PM

ನವದೆಹಲಿ : ಗುಜರಾತ್‌ನ ಜಾಮ್‌ನಗರದಲ್ಲಿ ಇರುವ ವಂತಾರ ಯೋಜನೆ ಮತ್ತು ಅದರ ಎರಡು ಸಂಬಂಧಿತ ಸಂಸ್ಥೆಗಳಾದ ಗ್ರೀನ್ ಝೂಲಾಜಿಕಲ್ ರೆಸ್ಕ್ಯೂ ಮತ್ತು ರಿಕವರಿ ಸೆಂಟರ್ (GZRRC) ಮತ್ತು ರಾಧಾಕೃಷ್ಣ ದೇವಾಲಯ ಆನೆ ಕಲ್ಯಾಣ ಟ್ರಸ್ಟ್ (RKTEWT)ನ ಅತ್ಯುತ್ತಮ ಪದ್ಧತಿಗಳು ಮತ್ತು ಕೆಲಸವನ್ನು ಸಿಐಟಿಎಸ್ ಬಹಿರಂಗವಾಗಿ ಶ್ಲಾಘಿಸಿದೆ. ವಿಶ್ವದಾದ್ಯಂತ ಅಳಿವಿನ ಅಂಚಿನಲ್ಲಿ ಇರುವ ವಿವಿಧ ಪ್ರಭೇದದ ಕಾಡು ಪ್ರಾಣಿಗಳು ಮತ್ತು ಪಕ್ಷಿಗಳ ಅಕ್ರಮ ವ್ಯಾಪಾರದ ಮೇಲ್ವಿಚಾರಣೆ ಮಾಡುವ ಸಂಸ್ಥೆ ಸಿಐಟಿಇಎಸ್ (the Convention on International Trade in Endangered Species of Wild Fauna and Flora). ಅಂದ ಹಾಗೆ ಇದಕ್ಕೂ ಮುನ್ನ ಭಾರತದ ಸರ್ವೋಚ್ಚ ನ್ಯಾಯಾಲಯವು (ಸುಪ್ರೀಂ ಕೋರ್ಟ್) ವಂತಾರಕ್ಕೆ ಕ್ಲೀನ್ ಚಿಟ್ ನೀಡಿತ್ತು.

ಎರಡೂ ಸಂಸ್ಥೆಗಳು ಅತ್ಯಂತ ಉನ್ನತ ಗುಣಮಟ್ಟದಲ್ಲಿ ಕಾರ್ಯನಿರ್ವಹಿಸುತ್ತವೆ ಎಂದು ತನ್ನ ತನಿಖಾ ವರದಿಯಲ್ಲಿ CITES ಹೇಳಿದೆ. ಪ್ರಾಣಿಗಳಿಗೆ ಆಧುನಿಕ ವ್ಯವಸ್ಥೆಯ ನೆಲೆಗಳು, ವೈದ್ಯಕೀಯ ಆರೈಕೆ ಮತ್ತು ಸುಧಾರಿತ ಸೌಲಭ್ಯಗಳು ಲಭ್ಯವಿದೆ. ವರದಿಯ ಪ್ರಕಾರ, ಈ ಸಂಸ್ಥೆಗಳು ಪಶುವೈದ್ಯಕೀಯ ಕ್ಷೇತ್ರದಲ್ಲಿ ಹಲವಾರು ಗಮನಾರ್ಹ ಪ್ರಗತಿ ಸಾಧಿಸಿವೆ. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಈ ಸಂಸ್ಥೆಗಳು ತಮ್ಮ ಪಶುವೈದ್ಯಕೀಯ ಅನುಭವವನ್ನು ವೈಜ್ಞಾನಿಕ ಸಮುದಾಯದೊಂದಿಗೆ ಹಂಚಿಕೊಳ್ಳಬೇಕು ಎಂದು ವರದಿ ಶಿಫಾರಸು ಮಾಡಿದೆ.

ಭಾರತದ ವನ್ಯಜೀವಿ ರಕ್ಷಣೆ ಮತ್ತು ನಿಯಂತ್ರಕ ವ್ಯವಸ್ಥೆಯು ಅಂತರರಾಷ್ಟ್ರೀಯ ಮಾನದಂಡಗಳನ್ನು ಪಾಲಿಸುತ್ತವೆ ಮತ್ತು ವಂತಾರ ಪ್ರಾಣಿ ಸಂರಕ್ಷಣಾ ಕ್ಷೇತ್ರದಲ್ಲಿ ಹೊಸ ಪೂರ್ವ ನಿದರ್ಶನವನ್ನು ನಿಗದಿ ಮಾಡುತ್ತಿದೆ ಎಂದು ವರದಿ ಹೇಳಿದೆ. GZRRC ಮತ್ತು RKTEWT ನಡೆಸುವ ಎಲ್ಲ ಪ್ರಾಣಿ ಆಮದು ಪ್ರಕ್ರಿಯೆಗಳು ಭಾರತೀಯ ಕಾನೂನುಗಳಿಗೆ ಅನುಸಾರವಾಗಿ ಸಂಪೂರ್ಣವಾಗಿ ಕಾನೂನುಬದ್ಧ ಮತ್ತು ಪಾರದರ್ಶಕವಾಗಿವೆ ಎಂದು ಭಾರತ ಸರ್ಕಾರ ಖಚಿತಪಡಿಸಿದೆ ಎಂದು CITES ಹೇಳಿದೆ.

ಎಲ್ಲ ಪ್ರಾಣಿಗಳನ್ನು CITES ರಫ್ತು ಅಥವಾ ಮರು-ರಫ್ತು ಪರವಾನಗಿಗಳೊಂದಿಗೆ ಭಾರತಕ್ಕೆ ತರಲಾಗಿದೆ ಎಂದು ಸಂಸ್ಥೆಯ ತನಿಖೆಯಲ್ಲಿ ಕಂಡುಬಂದಿದೆ. ಯಾವುದೇ ಪ್ರಾಣಿಗಳನ್ನು ಪರವಾನಗಿ ಇಲ್ಲದೆ ಭಾರತಕ್ಕೆ ತಂದಿಲ್ಲ. ಇದಲ್ಲದೆ, ಯಾವುದೇ ವಾಣಿಜ್ಯ ಉದ್ದೇಶಕ್ಕಾಗಿ ಪ್ರಾಣಿಗಳನ್ನು ಆಮದು ಮಾಡಿಕೊಳ್ಳಲಾಗುತ್ತಿದೆ ಅಥವಾ ಮಾರಾಟ ಮಾಡಲಾಗುತ್ತಿದೆ ಎಂಬ ಯಾವುದೇ ಸುಳಿವು ಇಲ್ಲ. ಪಾರದರ್ಶಕತೆಯ ಕೊರತೆಯಿಂದಾಗಿ ಕ್ಯಾಮರೂನ್‌ನಿಂದ ಚಿಂಪಾಂಜಿಗಳ ಆಮದನ್ನು ವಂತಾರ ಹೇಗೆ ರದ್ದುಗೊಳಿಸಿದೆ ಎಂಬುದನ್ನು ವರದಿಯು ನಿರ್ದಿಷ್ಟವಾಗಿ ಎತ್ತಿ ತೋರಿಸಿದೆ.

BIG NEWS: ಕೊಲೆಯಾದವನ ಬರ್ತ್‌ಡೇ ದಿನವೇ ಕೊಲೆಗಾರರಿಗೆ ಜೀವಾವಧಿ ಶಿಕ್ಷೆ

BREAKING : ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಕಡ್ಡಾಯಕ್ಕೆ ತಡೆಯಾಜ್ಞೆ ಪ್ರಶ್ನಿಸಿ ಅರ್ಜಿ : ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Share. Facebook Twitter LinkedIn WhatsApp Email

Related Posts

Watch video: ಅಮೆರಿಕದಲ್ಲಿ ವಲಸೆ ಬೇಟೆ: ಐಸಿಇ ಏಜೆಂಟ್ ಗುಂಡಿಗೆ ಬಲಿಯಾದ ಮಹಿಳೆ, ಮಿನ್ನಿಯಾಪೋಲಿಸ್‌ನಲ್ಲಿ ಆಕ್ರೋಶ!

08/01/2026 1:55 PM1 Min Read

ಸೋಮನಾಥ ಸ್ವಾಭಿಮಾನ್ ಪರ್ವಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ | Somnath Swabhiman Parv

08/01/2026 1:30 PM1 Min Read

BREAKING : ಅಪ್ರಾಪ್ತ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್ : ಶೂಟಿಂಗ್ ಕೋಚ್ ಸದಸ್ಯ `ಅಂಕುಶ್ ಭಾರದ್ವಾಜ್’ ಅಮಾನತು.!

08/01/2026 1:22 PM1 Min Read
Recent News

ಮಂಡ್ಯದ ಮದ್ದೂರಲ್ಲಿ ಬೆಳ್ಳಂಬೆಳಿಗ್ಗೆ ಜೆಸಿಬಿ ಘರ್ಜನೆ : ನಗರಸಭಾ ಅಧಿಕಾರಿಗಳಿಂದ ಪುಟ್ ಪಾತ್ ಒತ್ತುವರಿ ತೆರವು

08/01/2026 2:12 PM

ಹೈಕೋರ್ಟ್ ನಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ಪಡೆದು ವಂಚನೆ : 7 ಜನರ ವಿರುದ್ಧ ‘FIR’ ದಾಖಲು

08/01/2026 2:12 PM

HD ಕುಮಾರಸ್ವಾಮಿಗಿಂತ ಹೆಚ್ಚಿನ ಅನುಭವವಿದೆ, ಅವರಿಂದ ಕಲಿಯುವ ಅಗತ್ಯ ನನಗಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು

08/01/2026 2:09 PM

ಮುಂದೆ ಬಿಜೆಪಿ, ಜೆಡಿಎಸ್ ವಿಲೀನ ಸಾಧ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್ ಭವಿಷ್ಯ

08/01/2026 2:06 PM
State News
KARNATAKA

ಮಂಡ್ಯದ ಮದ್ದೂರಲ್ಲಿ ಬೆಳ್ಳಂಬೆಳಿಗ್ಗೆ ಜೆಸಿಬಿ ಘರ್ಜನೆ : ನಗರಸಭಾ ಅಧಿಕಾರಿಗಳಿಂದ ಪುಟ್ ಪಾತ್ ಒತ್ತುವರಿ ತೆರವು

By kannadanewsnow0908/01/2026 2:12 PM KARNATAKA 1 Min Read

ಮಂಡ್ಯ : ಮದ್ದೂರು ನಗರದ ಪೇಟೆ ಬೀದಿಯ ಪುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಯಿತು. ಪೇಟೆ ಬೀದಿ ರಸ್ತೆಯ…

ಹೈಕೋರ್ಟ್ ನಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ಪಡೆದು ವಂಚನೆ : 7 ಜನರ ವಿರುದ್ಧ ‘FIR’ ದಾಖಲು

08/01/2026 2:12 PM

HD ಕುಮಾರಸ್ವಾಮಿಗಿಂತ ಹೆಚ್ಚಿನ ಅನುಭವವಿದೆ, ಅವರಿಂದ ಕಲಿಯುವ ಅಗತ್ಯ ನನಗಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು

08/01/2026 2:09 PM

ಮುಂದೆ ಬಿಜೆಪಿ, ಜೆಡಿಎಸ್ ವಿಲೀನ ಸಾಧ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್ ಭವಿಷ್ಯ

08/01/2026 2:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.