Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವಿಶ್ವಕಪ್ ಗೆಲುವಿನ ಬಳಿಕ ‘ಮಹಿಳಾ ಕ್ರಿಕೆಟ್ ತಂಡ’ ಸನ್ಮಾನಿಸಿದ ‘ಪ್ರಧಾನಿ ಮೋದಿ’ ; ಫೋಟೋಸ್ ವೈರಲ್

05/11/2025 8:54 PM

ಶಿವಮೊಗ್ಗ: ಸಾಗರ ಪೇಟೆ ಠಾಣೆಯ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ, ಒಡವೆ ಕದ್ದ ಆರೋಪಿ 24 ಗಂಟೆಯಲ್ಲೇ ಅರೆಸ್ಟ್

05/11/2025 8:44 PM

BREAKING : ಪ್ರಧಾನಿ ನಿವಾಸದಲ್ಲಿ ‘ಮಹಿಳಾ ವಿಶ್ವಕಪ್ ಚಾಂಪಿಯನ್ಸ್’ಗಳಿಗೆ ಸನ್ಮಾನ, ‘ಟ್ರೋಫಿ’ಯೊಂದಿಗೆ ‘ಮೋದಿ’ ಪೋಸ್

05/11/2025 8:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಸಾಗರ ಪೇಟೆ ಠಾಣೆಯ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ, ಒಡವೆ ಕದ್ದ ಆರೋಪಿ 24 ಗಂಟೆಯಲ್ಲೇ ಅರೆಸ್ಟ್
KARNATAKA

ಶಿವಮೊಗ್ಗ: ಸಾಗರ ಪೇಟೆ ಠಾಣೆಯ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ, ಒಡವೆ ಕದ್ದ ಆರೋಪಿ 24 ಗಂಟೆಯಲ್ಲೇ ಅರೆಸ್ಟ್

By kannadanewsnow0905/11/2025 8:44 PM

ಶಿವಮೊಗ್ಗ: ಸಾಗರ ಪೇಟೆ ಠಾಣೆಯ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ 2 ಪ್ರಕರಣದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಿ 44 ಗ್ರಾಂ ತೂಕದ ಅಂದಾಯು 4,48,000 ಮೌಲ್ಯದ ಬಂಗಾರದ ಒಡವೆಗಳನ್ನು ವಶಪಡಿಸಿಕೊಂಡಿದ್ದಾರೆ. ಒಂದು ಪ್ರಕರಣದಲ್ಲಂತೂ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕಳ್ಳತನವಾದಂತ 24 ಗಂಟೆಯಲ್ಲೇ ಆರೋಪಿಗಳನ್ನು ಪತ್ತೆಹಚ್ಚಿ ಜೈಲುಪಾಲು ಮಾಡಿದ್ದಾರೆ.

ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಸಾಗರ ಪೇಟೆ ಠಾಣೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಎಎಸ್ಪಿ ಡಾ.ಬೆನಕ ಪ್ರಸಾದ್ ಮಾಹಿತಿ ನೀಡಿದಂತ ಅವರು, ಮನೆಯಲ್ಲಿನ ಒಡವೆ ಕದ್ದ ಬಗ್ಗೆ ಸಾಗರ ಪೇಟೆ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದವು. ಈ ಸಂಬಂಧ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದಂತ ಕಾರಿಯಪ್ಪ, ರಮೇಶ್ ಅವರ ಮಾರ್ಗದರ್ಶನದಲ್ಲಿ ತಂಡವನ್ನು ರಚಿಸಲಾಗಿತ್ತು ಎಂದರು.

ನನ್ನ ಮೇಲ್ವಿಚಾರಣೆಯಲ್ಲಿ ಸಾಗರ ಪೇಟೆ ಠಾಣೆಯ ಪೊಲೀಸ್ ನಿರೀಕ್ಷಕರಾದಂತ ಪುಲ್ಲಯ್ಯ ರಾಥೋಡ್, ಎಎಸ್ಐ ಮೀರಾಬಾಯಿ, ಅಪರಾಧ ವಿಭಾಗದ ಸಿಬ್ಬಂದಿಗಳಾದಂತ ಹೆಚ್ ಸಿ ಸನಾವುಲ್ಲ, ಪಿಸಿ ಲೋಕೇಶ್, ವಿಶ್ವನಾಥ್, ಕೃಷ್ಣಮೂರ್ತಿ ಒಳಗೊಂಡ ತನಿಖಾ ತಂಡವು ಕ್ಷಿಪ್ರ ಕಾರ್ಯಾಚರಣೆಯನ್ನು ನಡೆಸಿ, ಆರೋಪಿಗಳನ್ನು ಪತ್ತೆ ಹಚ್ಚಿ, ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದರು.

ದಿನಾಂಕ 09-08-2025ರಂದು ವಸಂತ ಲಕ್ಷ್ಮೀ ಎಂಬುವರು ಸಾಗರದ ತಮ್ಮ ಮನೆಯ ದೇವರ ಕೋಣೆಯಲ್ಲಿದ್ದಂತ 24 ಗ್ರಾಂ ತೂಕದ 2,30,000 ಮೌಲ್ಯದ ಬಂಗಾರದ ಸರವನ್ನು ಕಳ್ಳತನ ಮಾಡಿದ್ದಾಗಿ ದೂರು ನೀಡಿದ್ದರು. ಈ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡು ಪ್ರಕರಣ ದಾಖಲಾದಂತ 24 ಗಂಟೆಯಲ್ಲೇ ಸಾಗರದ ಅಶೋಕ ರಸ್ತೆಯ ನಿವಾಸಿಯಾದಂತ ಎ1 ಆರೋಪಿ ದರ್ಶನ್, ಜೆಪಿ ನಗರದ ಎ2 ಆರೋಪಿ ಅಶೋಕ್ ಎಂಬಾತನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳಿಂದ 23 ಗ್ರಾಂ ತೂಕದ ಚಿನ್ನದ ಸರವನ್ನು ವಶಪಡಿಸಿಕೊಂಡಿರುವುದಾಗಿ ತಿಳಿಸಿದರು.

ಇನ್ನೂ ದಿನಾಂಕ 28-10-2025ರಂದು ನಯನ ಎಂಬುವರು ಕೆ ಎಸ್ ಆರ್ ಟಿಸಿ ಬಸ್ಸಿನಲ್ಲಿ ತೆರಳೋದಕ್ಕೆ ನಿಲ್ದಾಣದಲ್ಲಿ ನಿಂತುಕೊಂಡಿದ್ದಾಗ, ಬಸ್ ಹತ್ತುವ ಸಂದರ್ಭದಲ್ಲಿ ತಮ್ಮ ಬ್ಯಾಗಿನಲ್ಲಿದ್ದಂತ 2 ಗ್ರಾಂ ತೂಕದ ಒಂದು ಜೊತೆ ಕಿವಿಯೋಲೆ, 20 ಗ್ರಾಂ ತೂಕದ ನೆಕ್ಲೆಸ್ ಸರ ಸೇರಿದಂತೆ 1,73,000 ಮೌಲ್ಯದ ಒಡವೆಗಳನ್ನು ಕಳ್ಳತನ ಮಾಡಲಾಗಿತ್ತು. ಈ ಸಂಬಂಧ ನೀಡಿದಂತ ದೂರಿನ ಹಿನ್ನಲೆಯಲ್ಲಿ ಸಿಸಿಟಿವಿ ಪರಿಶೀಲಿಸಿ ಶಂಕಿತ ಆರೋಪಿಯನ್ನು ಗುರುತಿಸಲಾಗಿತ್ತು ಎಂದರು.

ಶಂಕಿತ ಆರೋಪಿಯಾದಂತ ಭದ್ರಾವತಿಯ ಹನುಮಂತ ನಗರದ ನಿವಾಸಿ ಶಾಂತಿ ಎಂಬುವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯ ವೆಸಗಿರುವುದು ಬೆಳಕಿಗೆ ಬಂದಿತು. ಈ ಪ್ರಕರಣ ಸಂಬಂಧ ಬಂಧಿತ ಆರೋಪಿಯಿಂದ 12 ಗ್ರಾಂ ತೂಕದ ನೆಕ್ಲೆಸ್, 3 ಗ್ರಾಂ ತೂಕದ ಒಂದು ಜೊತೆ ಕಿವಿಯೋಲೆ, 5 ಗ್ರಾಂ ತೂಕದ 2 ಉಂಗುರ ಸೇರಿದಂತೆ ಒಟ್ಟು 20 ಗ್ರಾಂ ತೂಕದ 2,18,000 ಮೌಲ್ಯ ಬಂಗಾರದ ಒಡವೆಗಳನ್ನು ಜಪ್ತಿ ಮಾಡಲಾಗಿದೆ ಎಂಬುದಾಗಿ ತಿಳಿಸಿದರು.

ಈ ತನಿಖಾ ತಂಡದ ಕಾರ್ಯವನ್ನು ಶಿವಮೊಗ್ಗ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ ಅವರು ಪ್ರಶಂಶಿಸಿ, ಅಭಿನಂದಿಸಿರುವುದಾಗಿ ಸಾಗರ ಉಪ ವಿಭಾಗದ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದಂತ ಡಾ.ಬೆನಕ ಪ್ರಸಾದ್ ಹೇಳಿದರು.

ವರದಿ: ವಸಂತ ಬಿ ಈಶ್ವರಗೆರೆ.., ಸಂಪಾದಕರು

Share. Facebook Twitter LinkedIn WhatsApp Email

Related Posts

BIG NEWS : ಮುಂದಿನ ಚುನಾವಣೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿದೆ : ಮಾಜಿ ಸಂಸದ ಡಿಕೆ ಸುರೇಶ್ 

05/11/2025 4:48 PM1 Min Read

BREAKING : SSLC, ದ್ವಿತೀಯ PUC- 2026ರ ಪರೀಕ್ಷೆ 1, 2ರ ಅಂತಿಮ ವೇಳಾಪಟ್ಟಿ ಪ್ರಕಟ

05/11/2025 4:39 PM1 Min Read

ಕುರುಬ ಸಮಾಜದ ಸಂಪ್ರದಾಯದಂತೆ ಮಾಜಿ ಸಚಿವ ಎಚ್ ವೈ ಮೇಟಿ ಅಂತ್ಯಕ್ರಿಯೆ : ಸಿಎಂ ಸೇರಿ ಹಲವರು ಗಣ್ಯರು ಭಾಗಿ

05/11/2025 4:13 PM1 Min Read
Recent News

BREAKING : ವಿಶ್ವಕಪ್ ಗೆಲುವಿನ ಬಳಿಕ ‘ಮಹಿಳಾ ಕ್ರಿಕೆಟ್ ತಂಡ’ ಸನ್ಮಾನಿಸಿದ ‘ಪ್ರಧಾನಿ ಮೋದಿ’ ; ಫೋಟೋಸ್ ವೈರಲ್

05/11/2025 8:54 PM

ಶಿವಮೊಗ್ಗ: ಸಾಗರ ಪೇಟೆ ಠಾಣೆಯ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ, ಒಡವೆ ಕದ್ದ ಆರೋಪಿ 24 ಗಂಟೆಯಲ್ಲೇ ಅರೆಸ್ಟ್

05/11/2025 8:44 PM

BREAKING : ಪ್ರಧಾನಿ ನಿವಾಸದಲ್ಲಿ ‘ಮಹಿಳಾ ವಿಶ್ವಕಪ್ ಚಾಂಪಿಯನ್ಸ್’ಗಳಿಗೆ ಸನ್ಮಾನ, ‘ಟ್ರೋಫಿ’ಯೊಂದಿಗೆ ‘ಮೋದಿ’ ಪೋಸ್

05/11/2025 8:37 PM

2025ರಲ್ಲಿ ‘ಗಗನಯಾನ’ ಯೋಜನೆ ಆರಂಭವಾಗುವುದಿಲ್ಲ ; ‘ಇಸ್ರೋ ಮುಖ್ಯಸ್ಥ’ರಿಂದ ಹೊಸ ಮಾಹಿತಿ ಬಹಿರಂಗ

05/11/2025 8:10 PM
State News
KARNATAKA

ಶಿವಮೊಗ್ಗ: ಸಾಗರ ಪೇಟೆ ಠಾಣೆಯ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ, ಒಡವೆ ಕದ್ದ ಆರೋಪಿ 24 ಗಂಟೆಯಲ್ಲೇ ಅರೆಸ್ಟ್

By kannadanewsnow0905/11/2025 8:44 PM KARNATAKA 2 Mins Read

ಶಿವಮೊಗ್ಗ: ಸಾಗರ ಪೇಟೆ ಠಾಣೆಯ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ 2 ಪ್ರಕರಣದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಿ 44 ಗ್ರಾಂ…

BIG NEWS : ಮುಂದಿನ ಚುನಾವಣೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿದೆ : ಮಾಜಿ ಸಂಸದ ಡಿಕೆ ಸುರೇಶ್ 

05/11/2025 4:48 PM

BREAKING : SSLC, ದ್ವಿತೀಯ PUC- 2026ರ ಪರೀಕ್ಷೆ 1, 2ರ ಅಂತಿಮ ವೇಳಾಪಟ್ಟಿ ಪ್ರಕಟ

05/11/2025 4:39 PM

ಕುರುಬ ಸಮಾಜದ ಸಂಪ್ರದಾಯದಂತೆ ಮಾಜಿ ಸಚಿವ ಎಚ್ ವೈ ಮೇಟಿ ಅಂತ್ಯಕ್ರಿಯೆ : ಸಿಎಂ ಸೇರಿ ಹಲವರು ಗಣ್ಯರು ಭಾಗಿ

05/11/2025 4:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.