Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS: ರಾಜ್ಯದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್: ಶೀಘ್ರವೇ ‘ಗ್ರ್ಯಾಚುಟಿ ಸಮಸ್ಯೆ’ ಇತ್ಯರ್ಥ

06/11/2025 4:48 PM

BREAKING: ಪ್ರತಿ ಟನ್ ಕಬ್ಬಿಗೆ ರೂ.3,200 ನೀಡಲು ನಿರ್ಧಾರ: ಸಿಎಂ ಸಿದ್ಧರಾಮಯ್ಯ ಘೋಷಣೆ

06/11/2025 4:46 PM

BREAKING: ಬೆಟ್ಟಿಂಗ್ ಪ್ರಕರಣ: ‘ED’ಯಿಂದ ಕ್ರಿಕೆಟಿಗ ಸುರೇಶ್ ರೈನಾ, ಶಿಖರ್ ಧವನ್ ಗೆ ಸೇರಿದ 11.14 ಕೋಟಿ ಆಸ್ತಿ ಜಪ್ತಿ

06/11/2025 4:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಪ್ರತಿ ಟನ್ ಕಬ್ಬಿಗೆ ರೂ.3,200 ನೀಡಲು ನಿರ್ಧಾರ: ಸಿಎಂ ಸಿದ್ಧರಾಮಯ್ಯ ಘೋಷಣೆ
KARNATAKA

BREAKING: ಪ್ರತಿ ಟನ್ ಕಬ್ಬಿಗೆ ರೂ.3,200 ನೀಡಲು ನಿರ್ಧಾರ: ಸಿಎಂ ಸಿದ್ಧರಾಮಯ್ಯ ಘೋಷಣೆ

By kannadanewsnow0906/11/2025 4:46 PM

ಬೆಂಗಳೂರು: 3,500 ಪ್ರತಿ ಟನ್ ಕಬ್ಬಿಗೆ ನೀಡಬೇಕು ಎಂಬುದಾಗಿ ರೈತರು ಒತ್ತಾಯಿಸುತ್ತಿದ್ದಾರೆ. ನಾನು ವಿವಿಧ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ನಾವು 3,200 ರೂಪಾಯಿ ಪ್ರತಿ ಟನ್ ಕಬ್ಬಿಗೆ ನೀಡಲು ನಿರ್ಧರಿಸಿದ್ದೇವೆ. 11.25 ರಿಕವರಿ ಬಂದರೇ 3,500 ರೂಪಾಯಿ, 10.25 ರಿಕವರಿ ಬಂದರೇ 3,100 ರೂಪಾಯಿ ಪ್ರತಿ ಟನ್ ಗೆ ನೀಡಲಾಗುತ್ತದೆ. ಇದನ್ನು ರೈತರಿಗೆ ಈಗಾಗಲೇ ಮುಟ್ಟಿಸಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಕಬ್ಬು ಬೆಳೆಗಾರರ ಪ್ರತಿಭಟನೆ ಕುರಿತಂತೆ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ. ಬೆಳಗಾವಿ, ಬಾಗಲಕೋಟೆ, ಬಿಜಾಪುರದಲ್ಲಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಬಹಳ ಸುದೀರ್ಘವಾಗಿ ಚರ್ಚಿಸಲಾಯಿತು. ನಾನು ಸಚಿವ ಹೆಚ್.ಕೆ ಪಾಟೀಲ್ ಅವರಿಗೂ ರೈತರೊಂದಿಗೆ ಚರ್ಚಿಸುವಂತೆ ಸೂಚಿಸಿದ್ದೆನು. ಅವರು ಹೋಗಿ ರೈತರೊಂದಿಗೆ ಚರ್ಚಿಸಿದ್ದಾರೆ ಎಂದರು.

ನಿನ್ನೆ ರೈತರೊಂದಿಗೆ ಸಚಿವ ಹೆಚ್.ಕೆ ಪಾಟೀಲ್, ಎಂ.ಬಿ ಪಾಟೀಲ್ ಮಾತನಾಡಿದ್ದಾರೆ. ನಾವು ಪ್ರತಿಭಟನೆಯನ್ನು ಬಹಳ ಗಂಭೀರವಾಗಿ ಪರಿಗಣಿಸುವಂತ ಕೆಲಸ ಮಾಡಿದೆ. ನಮ್ಮ ಸರ್ಕಾರ ಯಾವತ್ತೂ ರೈತರ ಪರವಾಗಿರುವಂತದ್ದಾಗಿದೆ. ಸಕ್ಕರೆ ಕಾರ್ಖನೆಯು ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಅವರುಗಳದ್ದಾಗಿದೆ. ಸತೀಶ್ ಜಾರಕಿಹೊಳಿ ಅವರು ಡಿಸಿ, ಎಸ್ಪಿಯನ್ನು ರೈತರೊಂದಿಗೆ ಮಾತನಾಡಲು ಕಳುಹಿಸಿದ್ದಾರೆ. ಅವರು ಹೋಗಿ ಪ್ರತಿಭಟನಾ ನಿರತ ರೈತರನ್ನು ಭೇಟಿ ಮಾಡಿ ಮಾತನಾಡಿದ್ದಾರೆ ಎಂದರು.

ರೈತರು ಕೇಳುತ್ತಿರುವಂತ ಎಫ್ ಆರ್ ಸಿ ದರವನ್ನು ನಿಗದಿ ಮಾಡಬೇಕಾಗಿರುವುದು ಕೇಂದ್ರ ಸರ್ಕಾರವಾಗಿದೆ. ಈ ವರ್ಷ ದಿನಾಂಕ 06-05-2025ರಂದು ನಿಗದಿ ಮಾಡಿದ್ದಾರೆ. 2025-26ಕ್ಕೆ ಕಬ್ಬು ಬೆಳೆಗೆ ದರ ನಿಗದಿ ಪಡಿಸಲಾಗಿದೆ. ಎಫ್ಆರ್ ಪಿ 10.25 ರಿಕವರಿ ಇದ್ದರೇ, 3,550 ಪ್ರತಿ ಟನ್ ಗೆ ನಿಗದಿ ಪಡಿಸಲಾಗಿದೆ. ಇದು ಟ್ರಾನ್ಸ್ ಪೋರ್ಟ್ ದರವನ್ನು ಒಳಗೊಂಡು ಒಂದು ಟನ್ ಗೆ ನಿಗದಿ ಪಡಿಸಿರುವಂತ ದರವಾಗಿದೆ ಎಂದು ಹೇಳಿದರು.

ಕೇವಲ ಕೇಂದ್ರ ಸರ್ಕಾರ ಎಫ್ಆರ್ ಸಿ ದರ ನಿಗದಿ ಮಾಡುವುದಲ್ಲ. ಸಕ್ಕರೆ ಮೇಲಿನ ದರ ನಿಯಂತ್ರಣವನ್ನು ಮಾಡುವ ಕೆಲಸ ಮಾಡುತ್ತದೆ. 2017-18ರಲ್ಲಿ 17 ರಿಕವರಿ ಪ್ರಮಾಣವಿದ್ದರೇ, 2022-23ರಂದು 10.05ಕ್ಕೆ ಏರಿಕೆಯನ್ನು ಮಾಡಲಾಗಿದೆ. ಈಗ 10.25 ರಿಕವರಿ ಪ್ರಮಾಣ ನಿಗದಿ ಪಡಿಸಲಾಗಿದೆ. ಸಕ್ಕರೆ ಬೆಲೆಯನ್ನು 2019ರಲ್ಲಿ 35 ರೂಪಾಯಿ ಅವರೇ ನಿಗದಿ ಮಾಡಿದ್ದರು. ಅಂದಿನಿಂದ ಇಲ್ಲಿಯರೆಗೆ ಎಂಎಸ್ಪಿಯನ್ನು ಕೇಂದ್ರ ಸರ್ಕಾರ ಬದಲಾವಣೆ ಮಾಡಿಲ್ಲ ಎಂದರು.

ಸಕ್ಕರೆ ರಪ್ತು ಮಾಡುವುದನ್ನು ನಿಲ್ಲಿಸಲಾಗಿದೆ. ಇಡೀ ದೇಶಕ್ಕೆ ಕೇವಲ 10 ಲಕ್ಷ ಮೆಟ್ರಿಕ್ ಟನ್ ಮಾತ್ರವೇ ರಪ್ತು ಮಾಡಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಕರ್ನಾಟಕದಲ್ಲಿ 41 ಲಕ್ಷ ಮೆಟ್ರಿಕ್ ಟನ್ ಸಕ್ಕರೆ ಉತ್ಪಾದನೆಯಾಗುತ್ತಿದೆ ಎಂದು ಹೇಳಿದರು.

ರೈತರ ಮುಗ್ದತೆಯನ್ನು ಬಳಸಿಕೊಂಡು ರೈತರಿಗೆ ತಪ್ಪು ಮಾಹಿತಿ ನೀಡಿ, ಕೇಂದ್ರ ಸರ್ಕಾರದ ಜವಾಬ್ದಾರಿಯಿದ್ದರೂ ಕೂಡ, ವಿರೋಧ ಪಕ್ಷದವರು ರಾಜಕೀಯ ಮಾಡಲು ಹೊರಟಿದ್ದಾರೆ. ನಾನು ರೈತರಲ್ಲಿ ಮನವಿ ಮಾಡುತ್ತೇನೆ. ವಿರೋಧ ಪಕ್ಷದವರ ಮಾತಿಗೆ ಬಲಿಯಾಗಬೇಡಿ. ನಾಳೆ ಬೆಂಗಳೂರಿನಲ್ಲಿ 11 ಗಂಟೆಗೆ ರಾಜ್ಯದ ಎಲ್ಲಾ ಸಕ್ಕರೆ ಕಾರ್ಖಾನೆಗಳ ಮಾಲೀಕರ ಜೊತೆಗೆ ಸಭೆ ನಡೆಸಲಾಗುತ್ತಿದೆ. ನಾಳೆಯ ಸಭೆಯಲ್ಲಿ ರೈತರ ಪ್ರತಿಭಟನೆ ಬಗ್ಗೆ, ಎಫ್ಆರ್ ಸಿ ಬಗ್ಗೆ ಚರ್ಚಿಸಲಾಗುತ್ತದೆ ಎಂದರು.

ನಾಳೆ 1 ಗಂಟೆಗೆ ರೈತ ಮುಖಂಡರ ಸಭೆಯನ್ನು ಕರೆಯಲಾಗಿದೆ. ಹಾವೇರಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ ಜಿಲ್ಲೆಗಳ ರೈತ ಮುಖಂಡ ಸಭೆಯನ್ನು ಕರೆಯಲಾಗಿದೆ. ಇದರ ಜೊತೆಗೆ ನಾಳೆಯೇ ಪ್ರಧಾನ ಮಂತ್ರಿಯವರಿಗೆ ಪತ್ರ ಬರೆಯುತ್ತಿದ್ದೇನೆ. ನನಗೆ ಭೇಟಿ ನೀಡಲು ಅವಕಾಶ ಮಾಡಿಕೊಡಲು ಪತ್ರ ಬರೆಯುತ್ತಿದ್ದೇನೆ. ಅವರು ತಕ್ಷಣ ಸಮಯ ನೀಡಿದರೇ ದೆಹಲಿಗೆ ತೆರಳಿ, ಅವರನ್ನು ಭೇಟಿ ಮಾಡಿ, ಪ್ರಧಾನ ಮಂತ್ರಿಗಳಿಗೆ ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುತ್ತದೆ. ರೈತರ ಪ್ರತಿಭಟನೆ ಬಗ್ಗೆ, ರೈತರ ಒತ್ತಾಯದ ಬಗ್ಗೆ ಚರ್ಚಿಸಲಾಗುವುದು ಎಂದರು.

3,500 ಪ್ರತಿ ಟನ್ ಕಬ್ಬಿಗೆ ನೀಡಬೇಕು ಎಂಬುದಾಗಿ ರೈತರು ಒತ್ತಾಯಿಸುತ್ತಿದ್ದಾರೆ. ನಾನು ವಿವಿಧ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ನಾವು 3,200 ರೂಪಾಯಿ ಪ್ರತಿ ಟನ್ ಕಬ್ಬಿಗೆ ನೀಡಲು ನಿರ್ಧರಿಸಿದ್ದೇವೆ. 11.25 ರಿಕವರಿ ಬಂದರೇ 3,500 ರೂಪಾಯಿ, 10.25 ರಿಕವರಿ ಬಂದರೇ 3,100 ರೂಪಾಯಿ ಪ್ರತಿ ಟನ್ ಗೆ ನೀಡಲಾಗುತ್ತದೆ. ಇದನ್ನು ರೈತರಿಗೆ ಈಗಾಗಲೇ ಮುಟ್ಟಿಸಲಾಗಿದೆ ಎಂದರು.

ನಾಳೆ ಸಾಗರದಲ್ಲಿ ಹೆದ್ದಾರಿ ರಸ್ತೆ ತಡೆ, ಕಬ್ಬು ಬೆಳೆಗಾರರಿಗೆ ಬೆಂಬಲ: ರೈತ ಮುಖಂಡ ದಿನೇಶ್ ಶಿರವಾಳ

ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ, ಸಚಿವ ರಾಮಲಿಂಗಾ ರೆಡ್ಡಿ ದಿಢೀರ್ ಭೇಟಿ

Share. Facebook Twitter LinkedIn WhatsApp Email

Related Posts

GOOD NEWS: ರಾಜ್ಯದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್: ಶೀಘ್ರವೇ ‘ಗ್ರ್ಯಾಚುಟಿ ಸಮಸ್ಯೆ’ ಇತ್ಯರ್ಥ

06/11/2025 4:48 PM1 Min Read

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಅಣ್ಣನಿಂದಲೇ ಅಪ್ರಾಪ್ತೆ ತಂಗಿ ಮೇಲೆ ಅತ್ಯಾಚಾರ : ಆರೋಪಿ ಅರೆಸ್ಟ್!

06/11/2025 3:44 PM1 Min Read

ನಾಳೆ ಸಾಗರದಲ್ಲಿ ಹೆದ್ದಾರಿ ರಸ್ತೆ ತಡೆ, ಕಬ್ಬು ಬೆಳೆಗಾರರಿಗೆ ಬೆಂಬಲ: ರೈತ ಮುಖಂಡ ದಿನೇಶ್ ಶಿರವಾಳ

06/11/2025 3:42 PM1 Min Read
Recent News

GOOD NEWS: ರಾಜ್ಯದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್: ಶೀಘ್ರವೇ ‘ಗ್ರ್ಯಾಚುಟಿ ಸಮಸ್ಯೆ’ ಇತ್ಯರ್ಥ

06/11/2025 4:48 PM

BREAKING: ಪ್ರತಿ ಟನ್ ಕಬ್ಬಿಗೆ ರೂ.3,200 ನೀಡಲು ನಿರ್ಧಾರ: ಸಿಎಂ ಸಿದ್ಧರಾಮಯ್ಯ ಘೋಷಣೆ

06/11/2025 4:46 PM

BREAKING: ಬೆಟ್ಟಿಂಗ್ ಪ್ರಕರಣ: ‘ED’ಯಿಂದ ಕ್ರಿಕೆಟಿಗ ಸುರೇಶ್ ರೈನಾ, ಶಿಖರ್ ಧವನ್ ಗೆ ಸೇರಿದ 11.14 ಕೋಟಿ ಆಸ್ತಿ ಜಪ್ತಿ

06/11/2025 4:09 PM

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಅಣ್ಣನಿಂದಲೇ ಅಪ್ರಾಪ್ತೆ ತಂಗಿ ಮೇಲೆ ಅತ್ಯಾಚಾರ : ಆರೋಪಿ ಅರೆಸ್ಟ್!

06/11/2025 3:44 PM
State News
KARNATAKA

GOOD NEWS: ರಾಜ್ಯದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್: ಶೀಘ್ರವೇ ‘ಗ್ರ್ಯಾಚುಟಿ ಸಮಸ್ಯೆ’ ಇತ್ಯರ್ಥ

By kannadanewsnow0906/11/2025 4:48 PM KARNATAKA 1 Min Read

ಬೆಂಗಳೂರು : 2011-12ನೇ ಸಾಲಿನಿಂದ ನಿವೃತ್ತಿಯಾಗಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ನೀಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರ…

BREAKING: ಪ್ರತಿ ಟನ್ ಕಬ್ಬಿಗೆ ರೂ.3,200 ನೀಡಲು ನಿರ್ಧಾರ: ಸಿಎಂ ಸಿದ್ಧರಾಮಯ್ಯ ಘೋಷಣೆ

06/11/2025 4:46 PM

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಅಣ್ಣನಿಂದಲೇ ಅಪ್ರಾಪ್ತೆ ತಂಗಿ ಮೇಲೆ ಅತ್ಯಾಚಾರ : ಆರೋಪಿ ಅರೆಸ್ಟ್!

06/11/2025 3:44 PM

ನಾಳೆ ಸಾಗರದಲ್ಲಿ ಹೆದ್ದಾರಿ ರಸ್ತೆ ತಡೆ, ಕಬ್ಬು ಬೆಳೆಗಾರರಿಗೆ ಬೆಂಬಲ: ರೈತ ಮುಖಂಡ ದಿನೇಶ್ ಶಿರವಾಳ

06/11/2025 3:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.