Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಇರೋದು ತೆರಿಗೆ ಭಯೋತ್ಪಾದಕ ಸರ್ಕಾರ: ಜೆಡಿಎಸ್ ಮಾಜಿ MLC ಹೆಚ್.ಎಂ ರಮೇಶ್ ಗೌಡ ಕಿಡಿ

07/11/2025 3:37 PM

ಇಂದಿನಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ, ಚಾರಣ ಬಂದ್: ಸಚಿವ ಈಶ್ವರ್ ಖಂಡ್ರೆ

07/11/2025 3:18 PM

ಬ್ರಾಹ್ಮಣರ ಸಮಸ್ಯೆ ಪರಿಹರಿಸಲು ನಾವೆಲ್ಲ ಒಗ್ಗಟ್ಟಾಗಿ ಪ್ರಯತ್ನಿಸೋಣ: ಸಚಿವ ದಿನೇಶ್ ಗುಂಡೂರಾವ್

07/11/2025 3:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದಿನಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ, ಚಾರಣ ಬಂದ್: ಸಚಿವ ಈಶ್ವರ್ ಖಂಡ್ರೆ
KARNATAKA

ಇಂದಿನಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ, ಚಾರಣ ಬಂದ್: ಸಚಿವ ಈಶ್ವರ್ ಖಂಡ್ರೆ

By kannadanewsnow0907/11/2025 3:18 PM

ಬೀದರ್ : ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಅವರು, ಸರಗೂರು ತಾಲೂಕು ಮೊಳೆಯೂರು ವಲಯದ ಹಳೆ ಹೆಗ್ಗೋಡಿಲು ಗ್ರಾಮದ ಬಳಿ ಇಂದು ಬೆಳಗ್ಗೆ ಚೌಡಯ್ಯ ನಾಯ್ಕ (35) ಎಂಬುವವರು ಹುಲಿ ದಾಳಿಯಿಂದ ಮೃತಪಟ್ಟಿರುವ ಬಗ್ಗೆ ತೀವ್ರ ನೋವು ವ್ಯಕ್ತಪಡಿಸಿದ್ದು, ಮುಂದಿನ ಆದೇಶದವರೆಗೆ ಎರಡೂ ಕಡೆ ಸಫಾರಿ ಬಂದ್ ಮಾಡಿ, ಅಧಿಕಾರಿ ಮತ್ತು ಸಿಬ್ಬಂದಿಯ ಸೇವೆಯನ್ನು ಹುಲಿ ಸೆರೆ ಕಾರ್ಯಾಚರಣೆ ಬಳಸಿಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.

ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಬಂಡೀಪುರ, ನಾಗರಹೊಳೆ ಅರಣ್ಯದಂಚಿನಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಹುಲಿ ದಾಳಿಯಿಂದ ಮೂರು ಅಮೂಲ್ಯ ಜೀವ ಹಾನಿ ಆಗಿರುವುದು ಅತೀವ ನೋವು ತಂದಿದೆ ಎಂದೂ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಹುಲಿ ದಾಳಿಯ ನಂತರ ಅಕ್ಟೋಬರ್ 27ರಂದು ಬಂಡೀಪುರದಲ್ಲಿ ಅಧಿಕಾರಿಗಳ ಸಭೆ ನಡೆಸಿ ಹಾಗೂ ಕಳೆದ 2ರಂದು ಚಾಮರಾಜನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಮತ್ತು ಸಮಾಜ ಕಲ್ಯಾಣ ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ ಹಾಗೂ ಶಾಸಕರುಗಳ ಸಮ್ಮುಖದಲ್ಲಿ ರೈತರು, ಸಾರ್ವಜನಿಕರೊಂದಿಗೆ ಸಂವಾದ ನಡೆಸಿ, ಹುಲಿ ಸೆರೆಗೆ ಎಲ್ಲ ಸಾಧ್ಯ ಕ್ರಮ ಕೈಗೊಳ್ಳುವಂತೆ ಸೂಚಿಸುವುದರ ಜೊತೆಗೆ ಸಫಾರಿ ಬಂದ್ ಮಾಡುವ ಎಚ್ಚರಿಕೆಯನ್ನೂ ನೀಡಿದ್ದರೂ ಮತ್ತೊಂದು ದಾರುಣ ಘಟನೆ ಸಂಭವಿಸಿರುವುದು ಆಘಾತ ತಂದಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಇಂದಿನಿಂದಲೇ ನಾಗರಹೊಳೆ ಮತ್ತು ಬಂಡೀಪುರದಲ್ಲಿ ಸಫಾರಿ ಬಂದ್ ಮಾಡಲು ಮತ್ತು ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಟ್ರಕ್ಕಿಂಗ್ (ಚಾರಣ) ಸ್ಥಗಿತಗೊಳಿಸಲು ಹಾಗೂ ಬಂಡೀಪುರ, ನಾಗರಹೊಳೆ ಸಫಾರಿಯ ಕಾರ್ಯದಲ್ಲಿ ನಿಯೋಜನೆಗೊಂಡಿರುವ ಎಲ್ಲ ಅಧಿಕಾರಿಗಳು ಮತ್ತು ವಾಹನ ಚಾಲಕರ ಸಹಿತ ಎಲ್ಲ ಸಿಬ್ಬಂದಿ ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜನೆ ಮಾಡಲು ಹಾಗೂ ವನ್ಯಜೀವಿ ವಿಭಾಗದ ಎಪಿಸಿಸಿಎಫ್ ಮತ್ತು ಹುಲಿ ಯೋಜನೆಯ ನಿರ್ದೇಶಕರು ಸ್ಥಳದಲ್ಲೇ ಮೊಕ್ಕಾಂ ಹೂಡಿ ಪದೆ ಪದೇ ದಾಳಿ ಮಾಡುತ್ತಿರುವ ಹುಲಿಯನ್ನು ಹಿಡಿಯಲು ಕ್ರಮ ಕೈಗೊಳ್ಳುವಂತೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಬ್ರಾಹ್ಮಣರ ಸಮಸ್ಯೆ ಪರಿಹರಿಸಲು ನಾವೆಲ್ಲ ಒಗ್ಗಟ್ಟಾಗಿ ಪ್ರಯತ್ನಿಸೋಣ: ಸಚಿವ ದಿನೇಶ್ ಗುಂಡೂರಾವ್

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಇರೋದು ತೆರಿಗೆ ಭಯೋತ್ಪಾದಕ ಸರ್ಕಾರ: ಜೆಡಿಎಸ್ ಮಾಜಿ MLC ಹೆಚ್.ಎಂ ರಮೇಶ್ ಗೌಡ ಕಿಡಿ

07/11/2025 3:37 PM2 Mins Read

ಬ್ರಾಹ್ಮಣರ ಸಮಸ್ಯೆ ಪರಿಹರಿಸಲು ನಾವೆಲ್ಲ ಒಗ್ಗಟ್ಟಾಗಿ ಪ್ರಯತ್ನಿಸೋಣ: ಸಚಿವ ದಿನೇಶ್ ಗುಂಡೂರಾವ್

07/11/2025 3:16 PM2 Mins Read

ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲಾಗದ ಸಿಎಂ ಸಿದ್ಧರಾಮಯ್ಯ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ: HDK

07/11/2025 3:08 PM2 Mins Read
Recent News

ರಾಜ್ಯದಲ್ಲಿ ಇರೋದು ತೆರಿಗೆ ಭಯೋತ್ಪಾದಕ ಸರ್ಕಾರ: ಜೆಡಿಎಸ್ ಮಾಜಿ MLC ಹೆಚ್.ಎಂ ರಮೇಶ್ ಗೌಡ ಕಿಡಿ

07/11/2025 3:37 PM

ಇಂದಿನಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ, ಚಾರಣ ಬಂದ್: ಸಚಿವ ಈಶ್ವರ್ ಖಂಡ್ರೆ

07/11/2025 3:18 PM

ಬ್ರಾಹ್ಮಣರ ಸಮಸ್ಯೆ ಪರಿಹರಿಸಲು ನಾವೆಲ್ಲ ಒಗ್ಗಟ್ಟಾಗಿ ಪ್ರಯತ್ನಿಸೋಣ: ಸಚಿವ ದಿನೇಶ್ ಗುಂಡೂರಾವ್

07/11/2025 3:16 PM

BREAKING: ಇಂಡೋನೇಷ್ಯಾದ ಮಸೀದಿಯಲ್ಲಿ ಭೀಕರ ಸ್ಫೋಟ: 54 ಜನರಿಗೆ ಗಾಯ | Blast at Indonesian

07/11/2025 3:14 PM
State News
KARNATAKA

ರಾಜ್ಯದಲ್ಲಿ ಇರೋದು ತೆರಿಗೆ ಭಯೋತ್ಪಾದಕ ಸರ್ಕಾರ: ಜೆಡಿಎಸ್ ಮಾಜಿ MLC ಹೆಚ್.ಎಂ ರಮೇಶ್ ಗೌಡ ಕಿಡಿ

By kannadanewsnow0907/11/2025 3:37 PM KARNATAKA 2 Mins Read

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳನ್ನು ನೀಡಿದ ನೆಪ ಇಟ್ಟುಕೊಂಡು ರಾಜ್ಯದಲ್ಲಿ ತೆರಿಗೆ ಭಯೋತ್ಪಾದನೆ ಸೃಷ್ಟಿ ಮಾಡುತ್ತಿದೆ ಎಂದು…

ಇಂದಿನಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ, ಚಾರಣ ಬಂದ್: ಸಚಿವ ಈಶ್ವರ್ ಖಂಡ್ರೆ

07/11/2025 3:18 PM

ಬ್ರಾಹ್ಮಣರ ಸಮಸ್ಯೆ ಪರಿಹರಿಸಲು ನಾವೆಲ್ಲ ಒಗ್ಗಟ್ಟಾಗಿ ಪ್ರಯತ್ನಿಸೋಣ: ಸಚಿವ ದಿನೇಶ್ ಗುಂಡೂರಾವ್

07/11/2025 3:16 PM

ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲಾಗದ ಸಿಎಂ ಸಿದ್ಧರಾಮಯ್ಯ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ: HDK

07/11/2025 3:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.