Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ನ. 11,12ರಿಂದ ಭೂತಾನ್’ಗೆ ಪ್ರಧಾನಿ ಮೋದಿ ಭೇಟಿ, 1,020 ಮೆಗಾವ್ಯಾಟ್ ‘ಜಲವಿದ್ಯುತ್ ಸ್ಥಾವರ’ ಉದ್ಘಾಟನೆ

08/11/2025 7:14 PM

‘ವೋಟ್ ಚೋರಿ’ ಕಲ್ಪನೆಯ ಜನಕ ಯಾರು?: ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಪ್ರಶ್ನೆ

08/11/2025 7:10 PM

BREAKING : ಕಠ್ಮಂಡು ಏರ್ಪೋರ್ಟ್ ರನ್ವೇ ಲೈಟ್’ಗಳಲ್ಲಿ ತಾಂತ್ರಿಕ ದೋಷ, ವಿಮಾನಗಳ ಹಾರಾಟ ಸ್ಥಗಿತ

08/11/2025 7:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ವೋಟ್ ಚೋರಿ’ ಕಲ್ಪನೆಯ ಜನಕ ಯಾರು?: ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಪ್ರಶ್ನೆ
KARNATAKA

‘ವೋಟ್ ಚೋರಿ’ ಕಲ್ಪನೆಯ ಜನಕ ಯಾರು?: ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಪ್ರಶ್ನೆ

By kannadanewsnow0908/11/2025 7:10 PM

ಬೆಂಗಳೂರು: ವೋಟ್ ಚೋರಿ ಪರಿಕಲ್ಪನೆಯ ಜನಕ ಯಾರು ಎಂದು ಮಾಜಿ ಸಚಿವ ಮತ್ತು ಶಾಸಕ ಎಸ್.ಸುರೇಶ್ ಕುಮಾರ್ ಅವರು ಪ್ರಶ್ನಿಸಿದ್ದಾರೆ.

ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗಾಂಧೀಜಿ ಅವರ ಕೆಟ್ಟದ್ದನ್ನು ನೋಡದ, ಕೆಟ್ಟದ್ದನ್ನು ಕೇಳಿಸಿಕೊಳ್ಳದ ಹಾಗೂ ಕೆಟ್ಟದ್ದನ್ನು ಮಾತನಾಡದ ಕೋತಿಗಳ ಕುರಿತು ಪ್ರಸ್ತಾಪಿಸಿದರು. ಒಳ್ಳೆಯದನ್ನು ನೋಡುವುದಿಲ್ಲ; ಒಳ್ಳೆಯದನ್ನು ಕೇಳುವುದಿಲ್ಲ; ಒಳ್ಳೆಯದನ್ನು ಮಾತನಾಡುವುದಿಲ್ಲ- ಇದು ರಾಹುಲ್ ಗಾಂಧಿಯವರ ಕೋತಿಗಳು ಎಂದು ವಿಶ್ಲೇóಷಿಸಿದರು. ಆ ಗಾಂಧೀಜಿ ಮತ್ತು ಈ ಗಾಂಧಿಗೆ ಇರುವ ವ್ಯತ್ಯಾಸವಿದು ಎಂದು ನುಡಿದರು.

ಗೊಬೆಲ್ಸ್ ವಂಶದವರು ಭಾರತದಲ್ಲಿ ಇದ್ದರೆ ಅದು ಕಾಂಗ್ರೆಸ್ಸಿನಲ್ಲಿದ್ದಾರೆ. ಹಿಂದೆ ನಮ್ಮ ಪಕ್ಷದ ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಗಳಾಗಿದ್ದಾಗ ಶೇ 40 ಕಮಿಷನ್ ಸರಕಾರ ಎಂದು ಹೇಳುತ್ತ ಬಂದಿದ್ದರು. ಈ ಸರಕಾರ ಬಂದ ಬಳಿಕ ನಾಗಮೋಹನ್ ದಾಸ್ ಆಯೋಗವನ್ನೂ ರಚಿಸಿದರು. ಈಗ ನನಗೆ ಗೊತ್ತಿರುವಂತೆ ಆ ಆಯೋಗ ಮುಂದುವರೆಯುತ್ತಿಲ್ಲ; ಪೇ ಸಿಎಂ ಎಂದು ಪೋಸ್ಟರ್ ಅಂಟಿಸಿದರು. ಅದರ ಮುಂದುವರಿದ ಭಾಗವೇ ಮತಗಳ್ಳತನದ ಅಪಪ್ರಚಾರ ಎಂದು ವಿವರಿಸಿದರು.

ಹಿಂದೆ ಇದೇ ನಾಯಕರು ಚೌಕಿದಾರ್ ಚೋರ್ ಹೈ ಎಂದಿದ್ದರು. ಆಗ ಇಡೀ ದೇಶದಲ್ಲಿ ಮೈ ಬೀ ಚೌಕಿದಾರ್ ಎಂಬ ಆಂದೋಲನ ಮಾಡಿದ್ದೆವು. ಈ ಮತಗಳ್ಳತನದ (ವೋಟ್ ಚೋರಿ) ಪರಿಕಲ್ಪನೆಯ ಜನಕ ಯಾರು ಎಂದು ಪ್ರಶ್ನಿಸಿದರು. ಇವತ್ತು ನಮ್ಮ ಪಕ್ಷದ ಶ್ರೇಷ್ಠ ನಾಯಕ ಎಲ್.ಕೆ.ಆಡ್ವಾಣಿ ಅವರ ಜನ್ಮದಿನ. ಅವರ, ‘ನನ್ನ ದೇಶ ನನ್ನ ಜೀವನ’ ಎಂಬ ಪುಸ್ತಕವಿದೆ. ಸ್ವಾತಂತ್ರ್ಯಾನಂತರದ ಭಾರತೀಯ ರಾಜಕೀಯ ತಿಳಿದುಕೊಳ್ಳಲು ಆ ಪುಸ್ತಕ ಓದಬೇಕು. 1951ರ ಡಿಸೆಂಬರ್‍ನಿಂದ ಪ್ರಾರಂಭವಾದ 1952ರ ಮೊದಲ ಸಾರ್ವತ್ರಿಕ ಚುನಾವಣೆಯಲ್ಲೇ ಮತಗಳ್ಳತನ ಆರಂಭವಾಗಿತ್ತು ಎಂದು ಅವರು ಬರೆದಿದ್ದಾರೆ ಎಂದು ತಿಳಿಸಿದರು.

ಚಿಹ್ನೆ ಇರದ ಚುನಾವಣೆಯ ರೋಚಕ ಪ್ರಸಂಗ

ಮೊದಲನೇ ಚುನಾವಣೆಯಲ್ಲಿ ಯಾವ ರಾಜಕೀಯ ಪಕ್ಷಕ್ಕೂ ಚಿಹ್ನೆ ಇರಲಿಲ್ಲ. ಪ್ರತಿಯೊಂದು ಮತಗಟ್ಟೆಯಲ್ಲಿ ಬೇರೆ ಬೇರೆ ಪೆಟ್ಟಿಗೆಗಳನ್ನು ಇಟ್ಟು ಪ್ರತಿ ಪೆಟ್ಟಿಗೆಗೆ ಕಾಂಗ್ರೆಸ್, ಜನಸಂಘ, ಸ್ವತಂತ್ರ ಪಕ್ಷ ಮೊದಲಾದ ಹೆಸರು ಹಾಕಲಾಗುತ್ತಿತ್ತು. ಆಗ ಸಾಕ್ಷರತೆ ಪ್ರಮಾಣ ಕಡಿಮೆ ಇತ್ತು. ಮತದಾರರಿಗೆ ಒಂದು ಚೀಟಿ ಕೊಡುತ್ತಿದ್ದರು. ಅವರು ತಮ್ಮ ಆಯ್ಕೆಯ ಪಕ್ಷದ ಪೆಟ್ಟಿಗೆಯಲ್ಲಿ ಹಾಕಬೇಕಿತ್ತು. ಆಗ ಕಾಂಗ್ರೆಸ್ ಪ್ರಬಲ ಪಕ್ಷವಾಗಿತ್ತು. ಚೀಟಿಯನ್ನು ಪೆಟ್ಟಿಗೆಗೆ ಹಾಕದೇ ಹೊರಗೆ ತಂದರೆ ಒಂದು ರೂ. ಕೊಡುವುದಾಗಿ ಕಾಂಗ್ರೆಸ್ಸಿಗರು ಮತದಾರರಿಗೆ ಆಮಿಷ ಒಡ್ಡುತ್ತಿದ್ದರು. ಆಗ ಆ ಒಂದು ರೂಪಾಯಿಗೆ ದೊಡ್ಡ ಮೌಲ್ಯವಿತ್ತು. ಹತ್ತಾರು ಸೇರು ಅಕ್ಕಿ ಬರುತ್ತಿತ್ತೆಂದು ಕೇಳಲ್ಪಟ್ಟಿದ್ದೇನೆ ಎಂದರು.
25 ಚೀಟಿಗಳಾದ ಬಳಿಕ ತಮಗೆ ಬೇಕಾದ ಪೆಟ್ಟಿಗೆಯಲ್ಲಿ ಅದನ್ನು ಹಾಕಿ ಬರುತ್ತಿದ್ದರು. ಇದು ಎಲ್.ಕೆ.ಆಡ್ವಾಣಿ ಅವರು ಉಲ್ಲೇಖಿಸಿದ ರೋಚಕ ಪ್ರಸಂಗ ಎಂದು ವಿವರಿಸಿದರು. ಆ ಕಾಲದಲ್ಲೇ ಮತಗಳ್ಳತನ ಆರಂಭವಾಗಿತ್ತು ಎಂದು ತಿಳಿಸಿದರು.

1999ರಲ್ಲಿ ಬಹಳ ದೊಡ್ಡ ವೋಟ್ ಚೋರಿ

1999ರಲ್ಲಿ ಬಹಳ ದೊಡ್ಡ ವೋಟ್ ಚೋರಿ ನಡೆದಿತ್ತು. ಅಟಲ್ ಬಿಹಾರಿ ವಾಜಪೇಯಿ ಅವರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದರು. ಆಗ ಗಿರಿಧರ್ ಗೊಮ್ಯಾಂಗೊ ಎಂಬ ಒರಿಸ್ಸಾ ಮುಖ್ಯಮಂತ್ರಿ ಇದ್ದರು. ಅವರು ಸಂಸತ್ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರಲಿಲ್ಲ; ಆ ಅವಿಶ್ವಾಸ ಗೊತ್ತುವಳಿ ಸಂದರ್ಭದಲ್ಲಿ ಗಿರಿಧರ್ ಗೊಮ್ಯಾಂಗೊರನ್ನು ಕರೆಸಿ ಮತ ಪಡೆದ ಖ್ಯಾತಿ ಕಾಂಗ್ರೆಸ್ ಪಕ್ಷದ್ದು ಎಂದು ನುಡಿದರು. ವಾಜಪೇಯಿ ಅವರು ಸೋತದ್ದು ಕೇವಲ ಒಂದು ಮತದಿಂದ ಎಂದು ವಿವರ ನೀಡಿದರು.

ಕಾಂಗ್ರೆಸ್ಸಿನ ಹಿಂದಿನ ರಾಜ್ಯಾಧ್ಯಕ್ಷ ಮತ್ತು ಇವತ್ತಿನ ಗೃಹ ಸಚಿವ ಡಾ.ಪರಮೇಶ್ವರ್ ಅವರ ಹೇಳಿಕೆ ಮತಗಳ್ಳತನದ ಮಾಹಿತಿ ನೀಡಿದೆ. ವೇದಿಕೆಯಲ್ಲಿ ಭಾಷಣ ಮಾಡಿದ್ದ ಅವರು, ‘ನಿಮಗೆ ಗೊತ್ತಿಲ್ಲವೇ; ಇವಿಎಂ ಬರುವ ಮೊದಲು ನಾವೇನು ಮಾಡುತ್ತಿದ್ದೆವೆಂದು? ರೂಮಲ್ಲೇ ಕೂತು ಗುದ್ದಿ ಗುದ್ದಿ ಮತ ಪಡೆಯುತ್ತಿದ್ದೆವು’ ಎಂದು ಈ ರಾಜ್ಯದ ಗೃಹ ಸಚಿವರು ಹೇಳಿದ್ದಾರೆ. ಹಾಗಿದ್ದರೆ ಮತಗಳ್ಳತನ ಮಾಡಿದ್ದು ಯಾರು ಎಂದು ಪ್ರಶ್ನಿಸಿದರು.

ವಿಧಾನಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್, ರಾಜ್ಯ ವಕ್ತಾರ ಪ್ರಕಾಶ್ ಶೇಷರಾಘವಾಚಾರ್ ಅವರು ಉಪಸ್ಥಿತರಿದ್ದರು.

ಅದೃಷ್ಟ ಅಂದ್ರೆ ಇದಪ್ಪಾ! ಸಾಲ ಮಾಡಿ ಖರೀದಿಸಿದ ಲಾಟರಿಯಿಂದ ’11 ಕೋಟಿ’ ಗೆದ್ದ ತರಕಾರಿ ವ್ಯಾಪಾರಿ | Lottery Jackpot

ಒಂದು ಹನಿಯಿಂದ್ಲೂ ದೊಡ್ಡ ಹಾನಿ ; ‘ಮದ್ಯ’ ನಿಮ್ಮ ಮೆದುಳನ್ನ ಹೇಗೆ ಹಾನಿ ಮಾಡುತ್ತೆ ಅಂತಾ ತಿಳಿದ್ರೆ ಶಾಕ್ ಆಗ್ತೀರಾ!

Share. Facebook Twitter LinkedIn WhatsApp Email

Related Posts

ತೀರ್ಥವನ್ನು ಮೂರು ಬಾರಿ ಏಕೆ ಸ್ವೀಕರಿಸಬೇಕು? ಇಲ್ಲಿದೆ ಅದರ ಹಿಂದಿನ ರಹಸ್ಯ

08/11/2025 6:41 PM3 Mins Read

ಇದು ‘ಕರಿ ಮೆಣಸು’ ಬೆಳೆ ನಿರ್ವಹಣೆಯ ಮಹತ್ವದ ವಿಧಾನ

08/11/2025 6:39 PM5 Mins Read

ರೈತರಿಗೆ ಉಪಯುಕ್ತ ಮಾಹಿತಿ: ಈ ಸಮಗ್ರ, ಸುಸ್ಥಿತ ಕೃಷಿ ಪದ್ಧತಿ ಅನುಸರಿಸಿ, ಲಕ್ಷಾಂತರ ಆದಾಯ ಗಳಿಸಿ

08/11/2025 6:34 PM9 Mins Read
Recent News

BREAKING : ನ. 11,12ರಿಂದ ಭೂತಾನ್’ಗೆ ಪ್ರಧಾನಿ ಮೋದಿ ಭೇಟಿ, 1,020 ಮೆಗಾವ್ಯಾಟ್ ‘ಜಲವಿದ್ಯುತ್ ಸ್ಥಾವರ’ ಉದ್ಘಾಟನೆ

08/11/2025 7:14 PM

‘ವೋಟ್ ಚೋರಿ’ ಕಲ್ಪನೆಯ ಜನಕ ಯಾರು?: ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಪ್ರಶ್ನೆ

08/11/2025 7:10 PM

BREAKING : ಕಠ್ಮಂಡು ಏರ್ಪೋರ್ಟ್ ರನ್ವೇ ಲೈಟ್’ಗಳಲ್ಲಿ ತಾಂತ್ರಿಕ ದೋಷ, ವಿಮಾನಗಳ ಹಾರಾಟ ಸ್ಥಗಿತ

08/11/2025 7:01 PM

ತೀರ್ಥವನ್ನು ಮೂರು ಬಾರಿ ಏಕೆ ಸ್ವೀಕರಿಸಬೇಕು? ಇಲ್ಲಿದೆ ಅದರ ಹಿಂದಿನ ರಹಸ್ಯ

08/11/2025 6:41 PM
State News
KARNATAKA

‘ವೋಟ್ ಚೋರಿ’ ಕಲ್ಪನೆಯ ಜನಕ ಯಾರು?: ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಪ್ರಶ್ನೆ

By kannadanewsnow0908/11/2025 7:10 PM KARNATAKA 2 Mins Read

ಬೆಂಗಳೂರು: ವೋಟ್ ಚೋರಿ ಪರಿಕಲ್ಪನೆಯ ಜನಕ ಯಾರು ಎಂದು ಮಾಜಿ ಸಚಿವ ಮತ್ತು ಶಾಸಕ ಎಸ್.ಸುರೇಶ್ ಕುಮಾರ್ ಅವರು ಪ್ರಶ್ನಿಸಿದ್ದಾರೆ.…

ತೀರ್ಥವನ್ನು ಮೂರು ಬಾರಿ ಏಕೆ ಸ್ವೀಕರಿಸಬೇಕು? ಇಲ್ಲಿದೆ ಅದರ ಹಿಂದಿನ ರಹಸ್ಯ

08/11/2025 6:41 PM

ಇದು ‘ಕರಿ ಮೆಣಸು’ ಬೆಳೆ ನಿರ್ವಹಣೆಯ ಮಹತ್ವದ ವಿಧಾನ

08/11/2025 6:39 PM

ರೈತರಿಗೆ ಉಪಯುಕ್ತ ಮಾಹಿತಿ: ಈ ಸಮಗ್ರ, ಸುಸ್ಥಿತ ಕೃಷಿ ಪದ್ಧತಿ ಅನುಸರಿಸಿ, ಲಕ್ಷಾಂತರ ಆದಾಯ ಗಳಿಸಿ

08/11/2025 6:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.