Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಸೊರಬದಲ್ಲಿ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ; ಮೂವರಿಗೆ ಗಂಭೀರ ಗಾಯ

BREAKING : VCK ಡಿಮ್ಯಾಂಡ್ ಗಳಿಗೆ ವಿಜಯ್ ಒಪ್ಪಿಗೆ : ಮತ್ತೊಂದೆಡೆ VCK ಮುಖ್ಯಸ್ಥನಿಗೆ CM ಹುದ್ದೆ ಆಫರ್ ನೀಡಿದ AIADMK!

BIG NEWS : ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ : ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಹೇಳಿಕೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೀನದಲಿತರ ಬಗ್ಗೆ ಕಾಳಜಿ ಹೊಂದಿದ್ದವರು ಸಿಎಂ ಸಿದ್ದರಾಮಯ್ಯ ಮಾತ್ರ: ಸಚಿವ ಶಿವರಾಜ್ ತಂಗಡಗಿ
KARNATAKA

ದೀನದಲಿತರ ಬಗ್ಗೆ ಕಾಳಜಿ ಹೊಂದಿದ್ದವರು ಸಿಎಂ ಸಿದ್ದರಾಮಯ್ಯ ಮಾತ್ರ: ಸಚಿವ ಶಿವರಾಜ್ ತಂಗಡಗಿ

By kannadanewsnow09

ಬೆಂಗಳೂರು: ಅಂದು‌ ಸಂತ ಶ್ರೇಷ್ಠ ಕನಕದಾಸರಂತೆ ಇಂದು ದೀನದಲಿತರ ಬಗ್ಗೆ ಅಪಾರ ಕಾಳಜಿ‌ ಹೊಂದಿದ್ದವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಕಾಣುತ್ತಿದ್ದೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್.ಎಸ್.ತಂಗಡಗಿ ಅಭಿಪ್ರಾಯಪಟ್ಟರು.

ಸಂತ ಶ್ರೇಷ್ಠ ಕನಕದಾಸರ ಜಯಂತಿ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ತಿಮ್ಮಪ್ಪ ನಾಯಕನೆಂಬ ಹೆಸರಿನಿಂದ ಬೆಳೆದ ಕನಕದಾಸರಿಗೆ ಸಮಾಜದ ಕಡುಬಡವರನ್ನು, ದೀನದಲಿತರನ್ನು ಕಂಡರೆ ಅಪಾರ ವಾತ್ಸಲ್ಯ. ಅದರಂತೆ ಸಿದ್ದರಾಮಯ್ಯ ಅವರು ಕೂಡ ದೀನದಲಿತರ ಬಗ್ಗೆ ಅಪಾರವಾದ ವಾತ್ಸಲ್ಯ ಹೊಂದಿದ್ದಾರೆ ಎಂದು ಹೇಳಿದರು‌.

ಎಲ್ಲರೂ ಭಾಷಣಕ್ಕೆ ಮಾತ್ರ ಸೀಮಿತವಾಗುತ್ತಾರೆ. ಆದರೆ ನಮ್ಮ ಮುಖ್ಯಮಂತ್ರಿಗಳು ದೇಶದ ಇತಿಹಾಸದಲ್ಲೇ ರಾಜ್ಯ ಬಜೆಟ್ ನ ಒಟ್ಟು ಗಾತ್ರದಲ್ಲಿ ಶೇ.24.1ರಷ್ಟು ಅನುದಾನವನ್ನು ದೀನದಲಿತರಿಗೆ ಮೀಸಲಿಟ್ಟಿದ್ದಾರೆ. ಇದು ಕಾರ್ಯ ಮಾಡಲು ಸಿದ್ದರಾಮಯ್ಯ ಅವರಿಂದ ಮಾತ್ರ ಸಾಧ್ಯ. ಇದು ಆ ಸಮುದಾಯದವರ ಬಗ್ಗೆ ಅವರು ಹೊಂದಿರುವ ಕಾಳಜಿ ಮತ್ತು ವಾತ್ಸಲ್ಯವನ್ನು ತೋರುತ್ತದೆ ಎಂದರು.

ಸಿಎಂರಿಂದ ಅಹಿಂದ ಗಟ್ಟಿ: ಸಿದ್ದರಾಮಯ್ಯ ಅವರು ಅಹಿಂದವನ್ನು ಹುಟ್ಟು ಹಾಕಿದಾಗ ಕಾಲೇಜು ವ್ಯಾಸಂಗ ಮಾಡುತ್ತಿದ್ದ ನಾನು ಅಚ್ಚರಿಪಟ್ಟಿದೆ. ಅಂದು ನೀರು ಹಾಕಿ‌ ಬೆಳೆಸಿದ್ದಕ್ಕೆ ಇಂದು ಅಹಿಂದ ಸಮಾಜ ಗಟ್ಟಿಯಾಗಿದೆ ಎಂದು ತಿಳಿಸಿದರು.

ಸರ್ಕಾರದಿಂದ ಕೈಗೊಳ್ಳಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೇವಲ ಹಿಂದುಳಿದ ಸಮುದಾಯವರಿಗೆ ಮಾತ್ರವಲ್ಲ, ಪ್ರತಿಯೊಂದು ಸಮುದಾಯದ ವಾಸ್ತವ ಸ್ಥಿತಿ ತಿಳಿಯಲು ಸಮೀಕ್ಷೆ ಬಡೆಸಲಾಗಿದೆ. ಸಮೀಕ್ಷೆ ನಡೆಸುವ ವೇಳೆ ಅನಗತ್ಯವಾಗಿ ಹಲವು ವಿರೋಧಗಳು ವ್ಯಕ್ತವಾದವು. ಸಮಾಜದಲ್ಲಿ ಪ್ರಭಾವಿಗಳು ಎನಿಸಿಕೊಂಡವರು ನಾವು ದಲಿತರಲ್ಲ, ಹಿಂದುಳಿದವರಲ್ಲ ಹೀಗಾಗಿ ನಾವು ಸಮೀಕ್ಷೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಹೇಳಿಕೆ ನೀಡಿದರು. ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂತಹ ಯಾವ ಹೇಳಿಕೆಗೂ ಸೊಪ್ಪು ಹಾಕಲಿಲ್ಲ ಎಂದು ಸಮೀಕ್ಷೆಗೆ ವಿರೋಧ ವ್ಯಕ್ತಪಡಿಸಿದವರ ವಿರುದ್ಧ ಹರಿಹಾಯ್ದರು.

ಜನರನ್ನು ತಪ್ಪು ದಾರಿ ಎಳೆಯಬಾರದು:

ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನವಾಗಬಾರದು. ಸರ್ಕಾರ ನಡೆಸಿರುವ ಸಮೀಕ್ಷೆ ಸಮಾಜದ ಪ್ರತಿಯೊಂದು ಸಮುದಾಯದವರ ಬಗ್ಗೆ ತಿಳಿಯಲು. ಇಂದು ಎಲ್ಲಾ ಸಮಾಜದವರ ಬಗ್ಗೆ ಕಳಕಳಿ ಹೊಂದಿದ್ದ ಮುಖ್ಯಮಂತ್ರಿ ಯಾರಾದರೂ ಇದ್ದರೆ ಸಿದ್ದರಾಮಯ್ಯ ಅವರು ಮಾತ್ರ ಎಂದು ಶ್ಲಾಘನೀಯ ವ್ಯಕ್ತಪಡಿಸಿದರು.‌

ಇನ್ನು ಕನಕದಾಸರು ಒಂದು ಸಮುದಾಯಕ್ಕೆ ಸೀಮಿಯವಾದವರಲ್ಲ. ಜಾತಿ ಪದ್ಧತಿ‌ ಮತ್ತು ಮೌಢ್ಯತೆ ವಿರುದ್ಧ ಧ್ವನಿ ಎತ್ತಿದ್ದ ಮಹನೀಯರು. ಸರ್ವರಿಗೂ ಅತ್ಯಂತ ಸುಲಭವಾದ ರೀತಿಯಲ್ಲಿ ಜೀವನದ ತತ್ವಗಳನ್ನು‌ ಆಡುಭಾಷೆಯಲ್ಲಿ ಸಾರಿದ ದಾಸಪಂಥದ ಪ್ರಮುಖ ಹರಿದಾಸರಲ್ಲಿ ಕನಕದಾಸರು ಹೆಸರು ಅವಿಸ್ಮರಣೀಯ‌ ಎಂದರು.

ನೀವು ಪ್ರತಿದಿನ ಸೇವಿಸಬೇಕಾದ ‘ಟಾಪ್ ಕ್ಯಾನ್ಸರ್ ವಿರೋಧಿ’ ಆಹಾರಗಳಿವು | Anti-Cancer Foods

ಒಂದು ಹನಿಯಿಂದ್ಲೂ ದೊಡ್ಡ ಹಾನಿ ; ‘ಮದ್ಯ’ ನಿಮ್ಮ ಮೆದುಳನ್ನ ಹೇಗೆ ಹಾನಿ ಮಾಡುತ್ತೆ ಅಂತಾ ತಿಳಿದ್ರೆ ಶಾಕ್ ಆಗ್ತೀರಾ!

Share. Facebook Twitter LinkedIn WhatsApp Email

Related Posts

BREAKING: ಸೊರಬದಲ್ಲಿ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ; ಮೂವರಿಗೆ ಗಂಭೀರ ಗಾಯ

1 Min Read

BIG NEWS : ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ : ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಹೇಳಿಕೆ

1 Min Read

BREAKING : ಮಲಗಿದ್ದ ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ : ಒಂದೇ ವಾರದಲ್ಲಿ 4 ಕೊಲೆಗೆ ಬೆಚ್ಚಿ ಬಿದ್ದ ಮಂಡ್ಯ!

1 Min Read
Recent News

BREAKING: ಸೊರಬದಲ್ಲಿ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ; ಮೂವರಿಗೆ ಗಂಭೀರ ಗಾಯ

BREAKING : VCK ಡಿಮ್ಯಾಂಡ್ ಗಳಿಗೆ ವಿಜಯ್ ಒಪ್ಪಿಗೆ : ಮತ್ತೊಂದೆಡೆ VCK ಮುಖ್ಯಸ್ಥನಿಗೆ CM ಹುದ್ದೆ ಆಫರ್ ನೀಡಿದ AIADMK!

BIG NEWS : ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ : ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಹೇಳಿಕೆ

BREAKING : ಮಲಗಿದ್ದ ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ : ಒಂದೇ ವಾರದಲ್ಲಿ 4 ಕೊಲೆಗೆ ಬೆಚ್ಚಿ ಬಿದ್ದ ಮಂಡ್ಯ!

State News
KARNATAKA

BREAKING: ಸೊರಬದಲ್ಲಿ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ; ಮೂವರಿಗೆ ಗಂಭೀರ ಗಾಯ

By kannadanewsnow09 KARNATAKA 1 Min Read

ಶಿವಮೊಗ್ಗ: ಮದುವೆ ದಿಬ್ಬಣ ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸೊರಬ ತಾಲೂಕಿನ ಕುಪ್ಪಗಡ್ಡೆ ಗ್ರಾಮದ…

BIG NEWS : ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ : ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಹೇಳಿಕೆ

BREAKING : ಮಲಗಿದ್ದ ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ : ಒಂದೇ ವಾರದಲ್ಲಿ 4 ಕೊಲೆಗೆ ಬೆಚ್ಚಿ ಬಿದ್ದ ಮಂಡ್ಯ!

BREAKING : ಬೆಂಗಳೂರಿನ ಹೋಟೆಲ್‌ನಲ್ಲಿ ಭೀಕರ ಅಗ್ನಿ‌ ಅವಘಡ : ಓರ್ವ ಸಾವು, ನಾಲ್ವರಿಗೆ ಗಂಭೀರ ಗಾಯ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.