ದಾವಣಗೆರೆ : ರಾಜ್ಯದಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಭದ್ರಾ ಕಾಲುವೆಗೆ ಕಾರು ಬಿದ್ದು ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ.
ಹೊಸೂರು ಬಳಿಯ ಭದ್ರಾ ಮುಖ್ಯ ಕಾಲುವೆಯಲ್ಲಿ ಕಾರು ನಾಲೆಗೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಮಲ್ಲಿಕಾರ್ಜುನ (29) ಹಾಗೂ ಸಿದ್ದೇಶ್ (38) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ದಾವಣಗೆರೆ ಮೂಲದ 6 ಜನ ಮಂಗಳೂರು ಕಡೆ ಪ್ರವಾಸಕ್ಕೆ ಹೋಗಿದ್ರು,ಪ್ರವಾಸ ಮುಗಿಸಿ ವಾಪಸ್ ಬರುವಾಗ ಚಾಲಕ ನಿದ್ರೆ ಮಂಪರಿನಲ್ಲಿದ್ದ ಪರಿಣಾಮ ನಿಯಂತ್ರಣ ತಪ್ಪಿ ಕಾರು ಭದ್ರಾ ಕಾಲುವೆಗೆ ಬಿದ್ದಿದೆ. ಈ ವೇಳೆ ಕಾರಿನಲ್ಲಿದ್ದ ಇಬ್ಬರು ಸಾವು, 6 ಮಂದಿ ಈಜಿ ದಡ ಸೇರಿದ್ದಾರೆ. ಸ್ಥಳಕ್ಕೆ ಸಂತೆಬೆನ್ನೂರು ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.








