ಹಾಸನ : ಹಾಸನದಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನಿರುಪಾಲಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹುಂಡಿಗನಾಳ ಎಂಬ ಗ್ರಾಮದಲ್ಲಿ ನಡೆದಿದೆ. ಮೃತರನ್ನು ವಿಜಯಕುಮಾರ್ (12) ಹಾಗು ಸುಜನ್ (13) ಎಂದು ತಿಳಿದುಬಂದಿದೆ.
ಗ್ರಾಮದ ಕೆರೆಯಲ್ಲಿ ವಿಜಯಕುಮಾರ್ ಸುಜನ್ ಸೇರಿದಂತೆ ಐವರು ಈಜಲು ತೆರಳಿದರು ಈ ವೇಳೆ ವಿಜಯಕುಮಾರ್ ಮತ್ತು ಸುಜನ್ ಕೆರೆಯಲ್ಲಿ ನಿರುಪಾಲಾಗಿ ಮುಳುಗಿ ಸಾವನ್ನಪ್ಪಿದ್ದಾರೆ. ಜಾವಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಅಗ್ನಿಶಾಮಕ ಸಿಬ್ಬಂದಿಗಳು ಬಾಲಕರ ಮೃತ ದೇಹ ಹೊರ ತೆಗೆದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.








