ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಪಕ್ಷ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೆರಿದಂತೆ ಬಿಜೆಪಿ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕುಮಾರ ಕೃಪ ಗೆಸ್ಟ್ ಹೌಸ್ ಬಳಿ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ. ಬಿಜೆಪಿ ನಾಯಕರನ್ನು ವಶಕ್ಕೆ ಪಡೆದು ಎರಡು ಬಿಎಂಟಿಸಿ ಬಸ್ಗಳಲ್ಲಿ ಕರೆದುಕೊಂಡು ಹೋಗಲಾಗಿದೆ.
ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸ ಹಾಗೂ ಗೃಹಕಚೇರಿ ಕೃಷ್ಣಬಳಿ ಪೊಲೀಸರ ಬಿಗಿ ಭದ್ರತೆ ನಿಯೋಜನೆಗೊಳಿಸಲಾಗಿದ್ದು, ಒಂದು ಕೆ ಎಸ್ ಆರ್ ಪಿ ತುಕಡಿ ಸೇರಿದಂತೆ 80ಕ್ಕೂ ಹೆಚ್ಚು ಪೋಲಿಸರಿಂದ ಭದ್ರತೆ ಒದಗಿಸಲಾಗಿದೆ.








