ಶಿವಮೊಗ್ಗ: ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ದಿನಾಂಕ 11-11-2025ರ ನಾಳೆ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಪವರ್ ಕಟ್ ಆಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ.
ಈ ಕುರಿತಂತೆ ಸಾಗರ ತಾಲ್ಲೂಕು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 11-11-2025ರ ನಾಳೆ ಬಿಹೆಚ್ ರಸ್ತೆ ಅಗಲೀಕರಣ ಕಾಮಗಾರಿ ಸಲುವಾಗಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕೆಲಸವನ್ನು ನಡೆಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ತಿಳಿಸಿದ್ದಾರೆ.
ನಾಳೆ ಸಾಗರದ ಈ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ಕರೆಂಟ್ ಇರಲ್ಲ
ಸಾಗರ ಪಟ್ಟಣ ವ್ಯಾಪ್ತಿಯ ಎಫ್-1 ಸಾಗರ ಟೌನ್ ಫೀಡರ್ ಮಾರ್ಗದಿಂದ ವಿದ್ಯುತ್ ಸಂಪರ್ಕ ಪಡೆದಿರುವಂತ ನೆಹರು ನಗರ, ಅರಳೀಕೊಪ್ಪ, ಜನ್ನತ್ ಗಲ್ಲಿ, ಸಿಗಂದೂರು ಮಾರ್ಕೆಟ್ ರಸ್ತೆ, ಬಿಹೆಚ್ ರಸ್ತೆ, ಅಶೋಕ ರಸ್ತೆ, ಕೃಷ್ಣ ಗ್ಯಾರೇಜ್, ಎಲ್ಐಸಿ ಆಫೀಸ್ ಹತ್ತಿರ ವ್ಯಾಪ್ತಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ.
ವರದಿ: ವಸಂತ ಬಿ ಈಶ್ವರಗೆರೆ.., ಸಂಪಾದಕರು
ರೈಲ್ವೆ ಕಾಮಗಾರಿ ಹಿನ್ನಲೆ: ಚೆನ್ನೈ, ಬೆಂಗಳೂರು ಎಕ್ಸ್ ಪ್ರೆಸ್ ಸೇರಿ 5 ರೈಲುಗಳ ಸಂಚಾರದಲ್ಲಿ ವ್ಯತ್ಯಯ
ಜೈಲಿನಲ್ಲಿ ಉಗ್ರರಿಗೆ ರಾಜಾತಿಥ್ಯ, ಇದು ಕಾಂಗ್ರೆಸ್ ಪ್ರಾಯೋಜಿತ ಕೃತ್ಯ: ಆರ್.ಅಶೋಕ್








