Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಿಜೆಪಿ ‘ಸುಳ್ಳು ಫ್ಲೆಕ್ಸ್’ಗಳನ್ನು ಹಾಕಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ; ಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ

10/01/2026 10:01 PM

ಸಾಗರದ ಮಾರಿಕಾಂಬ ಜಾತ್ರೆ ಅಂಗವಾಗಿ ಹೆಲಿ ಟೂರಿಸಂ, ಗಣಪತಿ ಕೆರೆಯಲ್ಲಿ ಬೋಟಿಂಗ್ ವ್ಯವಸ್ಥೆ: ಶಾಸಕ ಗೋಪಾಲಕೃಷ್ಣ ಬೇಳೂರು

10/01/2026 9:40 PM

BREAKING: ಜೆಡಿಎಸ್ ಸ್ಥಳೀಯ ನಾಯಕಿಯ ಪುತ್ರನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ

10/01/2026 9:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮತ ಕಳ್ಳತನ‌ದ ಬಗ್ಗೆ ಮೊದಲು ಪತ್ತೆ ಹಚ್ಚಿದ್ದೇ ಕರ್ನಾಟಕದಲ್ಲಿ: ಡಿಸಿಎಂ ಡಿ.ಕೆ.ಶಿವಕುಮಾರ್
KARNATAKA

ಮತ ಕಳ್ಳತನ‌ದ ಬಗ್ಗೆ ಮೊದಲು ಪತ್ತೆ ಹಚ್ಚಿದ್ದೇ ಕರ್ನಾಟಕದಲ್ಲಿ: ಡಿಸಿಎಂ ಡಿ.ಕೆ.ಶಿವಕುಮಾರ್

By kannadanewsnow0910/11/2025 6:24 PM

ನವದೆಹಲಿ: “ಚುನಾವಣೆಗಳಲ್ಲಿ ಮತ ಕಳ್ಳತನ‌ ನಡೆಯುತ್ತಿರುವ ಬಗ್ಗೆ ಮೊದಲು ಪತ್ತೆ ಹಚ್ಚಿದ್ದೇ ಕರ್ನಾಟಕದಲ್ಲಿ. ಈಗ ಮಹಾರಾಷ್ಟ್ರ, ಹರಿಯಾಣ, ಬಿಹಾರದಲ್ಲಿ ನಡೆಸಿರುವ ಅಕ್ರಮಗಳು ಬೆಳಕಿಗೆ ಬಂದಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ದೆಹಲಿಯಲ್ಲಿ ಎಐಸಿಸಿ ನೂತನ ಕಟ್ಟಡ ಇಂದಿರಾ ಭವನದ ಆವರಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

“ನಮ್ಮ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಾಂಕೇತಿಕವಾಗಿ ಸಹಿ ಸಂಗ್ರಹ ಅಭಿಯಾನದ ದಾಖಲೆಗಳನ್ನು ಹಸ್ತಾಂತರಿಸಿದ್ದೇವೆ. 100 ವರ್ಷಗಳ ಹಿಂದೆ ಮಹಾತ್ಮ ಗಾಂಧೀಜಿ ಅವರು ನಿಭಾಯಿಸಿದ್ದ ಜವಾಬ್ದಾರಿಯನ್ನು ಈಗ ನಮ್ಮ ರಾಜ್ಯದ ಮಲ್ಲಿಕಾರ್ಜುನ ಖರ್ಗೆ ಅವರು ನಿಭಾಯಿಸುತ್ತಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಮತದಾನದ ಹಕ್ಕು ರಕ್ಷಣೆ ಹೋರಾಟ ಮಾಡಿದ್ದೇವೆ. ಒಬ್ಬರಿಗೆ ಒಂದು ಮತ ಎಂದು ನಾವು ಹೋರಾಟ ಮಾಡುತ್ತಿದ್ದೇವೆ. ಮತ ಕಳ್ಳತನವನ್ನು ಮೊದಲು ಪಚ್ಚೆ ಹಚ್ಚಿದ್ದೇ ನಮ್ಮ ರಾಜ್ಯದಲ್ಲಿ. ಎಐಸಿಸಿ ಸಂಶೋಧನಾ ವಿಭಾಗ, ನಮ್ಮ ಅಭ್ಯರ್ಥಿಯಾಗಿದ್ದ ಮನ್ಸೂರ್ ಅಲಿ ಖಾನ್, ಕೆಪಿಸಿಸಿ ತಂಡ ಸೇರಿ ಈ ಮತ ಕಳ್ಳತನ ಪತ್ತೆ ಮಾಡಿ ಎಐಸಿಸಿಗೆ ಮಾಹಿತಿ ನೀಡಿದೆವು” ಎಂದು ವಿವರಿಸಿದರು.

“ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿಗೆ ಆಗಮಿಸಿ ಫ್ರೀಡಂ ಪಾರ್ಕ್ ನಿಂದ ಈ ಹೋರಾಟ ಆರಂಭಿಸಲಾಯಿತು. ನಂತರ ಮಹಾರಾಷ್ಟ್ರ, ಹರಿಯಾಣ ಚುನಾವಣಾ ಅಕ್ರಮ ಬಯಲಾಗಿ ಈ ಹೋರಾಟ ಬಿಹಾರದವರೆಗೂ ಹಬ್ಬಿತು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ ಅವರ ನಿರ್ದೇಶನದ ಮೇರೆಗೆ ಈ ಅಭಿಯಾನ ಪೂರ್ಣಗೊಳಿಸಿದ್ದೇವೆ” ಎಂದರು.

“ನಮ್ಮ ಕಾರ್ಯಕರ್ತರು, ಬ್ಲಾಕ್, ಜಿಲ್ಲಾಧ್ಯಕ್ಷರು ಹಾಗೂ ಪಕ್ಷದ ವಿವಿಧ ಘಟಕಗಳ ಪರಿಶ್ರಮದಿಂದ ಸಂಗ್ರಹಿಸಲಾದ ಸಹಿಗಳನ್ನು ಸಲ್ಲಿಕೆ ಮಾಡಿದ್ದೇವೆ. ನಾವು ನಮ್ಮ ಕರ್ತವ್ಯ ಮಾಡಿದ್ದು, ಮೊನ್ನೆಯಷ್ಟೇ ನಾನು ಹಾಗೂ ಸಿಎಂ ಈ ವಿಚಾರವಾಗಿ ಮಾಧ್ಯಮಗೋಷ್ಠಿ ನಡೆಸಿದ್ದೇವೆ. ನಮ್ಮ ಕಾರ್ಯಕರ್ತರು ಈ ಅಭಿಯಾನವನ್ನು ಇನ್ನೂ ಮುಂದುವರಿಸುತ್ತಿದ್ದು, ನಂತರ ಸಂಗ್ರಹಿಸುವ ಸಹಿ ದಾಖಲೆಗಳನ್ನು ಮುಂದಿನ ದಿನಗಳಲ್ಲಿ ಸಲ್ಲಿಕೆ ಮಾಡುತ್ತೇವೆ” ಎಂದರು.

“ಮತಕಳ್ಳತನ ಖಂಡಿತವಾಗಿ ಆಗಿದೆ. ಬಿಹಾರದಲ್ಲಿ ಎಸ್ಐಆರ್ ನಡೆದಾಗ ನ್ಯಾಯಾಲಯ ಮಧ್ಯಪ್ರವೇಶ ಮಾಡಿ ಏಕೆ ಸೂಚನೆ ನೀಡಿತು? ರಾಹುಲ್ ಗಾಂಧಿ ಅವರು ಇದರ ಬಗ್ಗೆ ಮೊದಲ ಪತ್ರಿಕಾಗೋಷ್ಠಿ ನಡೆಸಿದ ನಂತರ ಮಾಧ್ಯಮಗಳು ಬೆಂಗಳೂರಿಗೆ ಬಂದು ಉಲ್ಲೇಖಿತ ಮನೆಗಳ ಸಂಖ್ಯೆ ಸೇರಿದಂತೆ ಯಾವ, ಯಾವ ಕಡೆ ಅಕ್ರಮ ನಡೆದಿದೆ ಎಂದು ಫ್ಯಾಕ್ಟ್ ಚೆಕ್ ಮಾಡಿದವು. ಯಾವ ಸರ್ಕಾರವೂ ಅದರ ವೈಫಲ್ಯ ಒಪ್ಪಿಕೊಳ್ಳುವುದಿಲ್ಲ. ವಿರೋಧ ಪಕ್ಷದ ಕೆಲಸವೇ ವೈಫಲ್ಯಗಳನ್ನು ಕಂಡುಹಿಡಿದು ತಿಳಿಸುವುದು” ಎಂದರು.

ಕುಮಾರಸ್ವಾಮಿ ಅವರೂ ಭಯೋತ್ಪಾದಕರ ಒಂದು ಭಾಗವೇ?

ವಿಧಾನಸೌಧದಲ್ಲಿ ಭಯೋತ್ಪಾದಕರಿದ್ದಾರೆ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಅವರೂ ಸಹ ಭಯೋತ್ಪಾದಕರ ಭಾಗವಾಗಿದ್ದಾರೆಯೇ? ಅವರೂ ಸಹ ವಿಧಾನಸೌಧದಲ್ಲಿ ಕುಳಿತಿರಲಿಲ್ಲವೇ? ಅವರಿಗೂ ಹಾಗೂ ಅವರ ಪಕ್ಷದವರಿಗೂ, ಅವರ ಆಡಳಿತಕ್ಕೂ ಇದು ಅನ್ವಯಿಸುತ್ತದೆ” ಎಂದು ತಿರುಗೇಟು ನೀಡಿದರು.

ಸಂವಿಧಾನಿಕ ಸಂಸ್ಥೆಗಳ ದುರುಪಯೋಗ

“ಚುನಾವಣಾ ಆಯೋಗವು ಬಿಹಾರದ ಮತದಾರರಿಗೆ ಸರಿಯಾದ ನ್ಯಾಯ ಒದಗಿಸಿಲ್ಲ. ಬಿಜೆಪಿ ಸಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ‌ ಮಾಡಿಕೊಂಡಿದೆ. ಯಾವುದು ಕಾಡದಿದ್ದರೂ ಆತ್ಮಸಾಕ್ಷಿ ಎನ್ನುವುದು ಇದ್ದೇ ಇರುತ್ತದೆ. ಅದು ಅಂತಿಮವಾಗಿ ಕೆಲಸ ಮಾಡಲಿದೆ” ಎಂದು ಹೇಳಿದರು.

ಮುಖ್ಯಮಂತ್ರಿ ಹುದ್ದೆ ಬದಲಾವಣೆ ಬಗೆಗಿನ ಊಹಾಪೋಹಗಳ ಬಗ್ಗೆ ಕೇಳಿದಾಗ, “ನಾನು ರಾಜಕೀಯ ವಿಚಾರಗಳನ್ನು ಮಾತನಾಡುವುದಿಲ್ಲ. ನಾನು ಪ್ರಜಾಪ್ರಭುತ್ವ, ಮತದಾನದ ಹಕ್ಕು, ಸಂವಿಧಾನವನ್ನು ಉಳಿಸುವ ವಿಚಾರವಾಗಿ ಮಾತನಾಡುತ್ತೇನೆ” ಎಂದು ಉತ್ತರಿಸಿದರು.

BIG NEWS : `ಜಾತಿ ಗಣತಿ’ ಸಮೀಕ್ಷೆದಾರರು, ಮೇಲ್ವಿಚಾರಕರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ `ಗೌರವಧನ’ ಬಿಡುಗಡೆ

ಮತ ಕಳ್ಳತನ ವಿರುದ್ಧ ಸಹಿ ಸಂಗ್ರಹ ಅಭಿಯಾನ; ರಾಜ್ಯದ 1,12,41,000 ಸಹಿಗಳನ್ನು ಎಐಸಿಸಿಗೆ ಹಸ್ತಾಂತರಿಸಿದ ಡಿಕೆಶಿ

Share. Facebook Twitter LinkedIn WhatsApp Email

Related Posts

ಬಿಜೆಪಿ ‘ಸುಳ್ಳು ಫ್ಲೆಕ್ಸ್’ಗಳನ್ನು ಹಾಕಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ; ಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ

10/01/2026 10:01 PM2 Mins Read

ಸಾಗರದ ಮಾರಿಕಾಂಬ ಜಾತ್ರೆ ಅಂಗವಾಗಿ ಹೆಲಿ ಟೂರಿಸಂ, ಗಣಪತಿ ಕೆರೆಯಲ್ಲಿ ಬೋಟಿಂಗ್ ವ್ಯವಸ್ಥೆ: ಶಾಸಕ ಗೋಪಾಲಕೃಷ್ಣ ಬೇಳೂರು

10/01/2026 9:40 PM1 Min Read

BREAKING: ಜೆಡಿಎಸ್ ಸ್ಥಳೀಯ ನಾಯಕಿಯ ಪುತ್ರನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ

10/01/2026 9:27 PM1 Min Read
Recent News

ಬಿಜೆಪಿ ‘ಸುಳ್ಳು ಫ್ಲೆಕ್ಸ್’ಗಳನ್ನು ಹಾಕಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ; ಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ

10/01/2026 10:01 PM

ಸಾಗರದ ಮಾರಿಕಾಂಬ ಜಾತ್ರೆ ಅಂಗವಾಗಿ ಹೆಲಿ ಟೂರಿಸಂ, ಗಣಪತಿ ಕೆರೆಯಲ್ಲಿ ಬೋಟಿಂಗ್ ವ್ಯವಸ್ಥೆ: ಶಾಸಕ ಗೋಪಾಲಕೃಷ್ಣ ಬೇಳೂರು

10/01/2026 9:40 PM

BREAKING: ಜೆಡಿಎಸ್ ಸ್ಥಳೀಯ ನಾಯಕಿಯ ಪುತ್ರನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ

10/01/2026 9:27 PM

BREAKING: ದ್ವಿತೀಯ PUC ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್: FIR ದಾಖಲು

10/01/2026 9:12 PM
State News
KARNATAKA

ಬಿಜೆಪಿ ‘ಸುಳ್ಳು ಫ್ಲೆಕ್ಸ್’ಗಳನ್ನು ಹಾಕಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ; ಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ

By kannadanewsnow0910/01/2026 10:01 PM KARNATAKA 2 Mins Read

ಶಿವಮೊಗ್ಗ : ಕಳೆದ ಎರಡೂ ಮುಕ್ಕಾಲು ವರ್ಷದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ವಿವಿಧ ಯೋಜನೆಯಡಿ ತಾಲ್ಲೂಕಿನ ಅಭಿವೃದ್ದಿಗೆ 667.42 ಕೋಟಿ…

ಸಾಗರದ ಮಾರಿಕಾಂಬ ಜಾತ್ರೆ ಅಂಗವಾಗಿ ಹೆಲಿ ಟೂರಿಸಂ, ಗಣಪತಿ ಕೆರೆಯಲ್ಲಿ ಬೋಟಿಂಗ್ ವ್ಯವಸ್ಥೆ: ಶಾಸಕ ಗೋಪಾಲಕೃಷ್ಣ ಬೇಳೂರು

10/01/2026 9:40 PM

BREAKING: ಜೆಡಿಎಸ್ ಸ್ಥಳೀಯ ನಾಯಕಿಯ ಪುತ್ರನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ

10/01/2026 9:27 PM

BREAKING: ದ್ವಿತೀಯ PUC ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್: FIR ದಾಖಲು

10/01/2026 9:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.