Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ರಾಜ್ಯದಲ್ಲಿ `ಬೆಚ್ಚಿ ಬೀಳಿಸೋ ಕೃತ್ಯ’ : ಆಸ್ತಿಗಾಗಿ ಸಾಕುಮಗಳಿಂದ ತಾಯಿಯ ಬರ್ಬರ ಹತ್ಯೆ.!

12/11/2025 6:30 AM
vidhana soudha

BIG NEWS : ರಾಜ್ಯದಲ್ಲಿ `ಬಾಲ್ಯವಿವಾಹ’ ಮಾಡಲು ಪ್ರಯತ್ನಿಸಿದರೂ ಅಪರಾಧ : ಸರ್ಕಾರದಿಂದ ಮಹತ್ವದ ತಿದ್ದುಪಡಿ

12/11/2025 6:19 AM

GOOD NEWS : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ವಿದ್ಯಾರ್ಥಿ ವೇತನ’ಕ್ಕಾಗಿ ಅರ್ಜಿ ಆಹ್ವಾನ

12/11/2025 6:18 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ `ಬಾಲ್ಯವಿವಾಹ’ ಮಾಡಲು ಪ್ರಯತ್ನಿಸಿದರೂ ಅಪರಾಧ : ಸರ್ಕಾರದಿಂದ ಮಹತ್ವದ ತಿದ್ದುಪಡಿ
KARNATAKA

BIG NEWS : ರಾಜ್ಯದಲ್ಲಿ `ಬಾಲ್ಯವಿವಾಹ’ ಮಾಡಲು ಪ್ರಯತ್ನಿಸಿದರೂ ಅಪರಾಧ : ಸರ್ಕಾರದಿಂದ ಮಹತ್ವದ ತಿದ್ದುಪಡಿ

By kannadanewsnow5712/11/2025 6:19 AM
vidhana soudha
vidhana soudha

ಹಿಂದೂ, ಮುಸ್ಲಿಂ ಮತ್ತು ಕ್ರೈಸ್ತ ಸೇರಿದಂತೆ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ ಆಗಿರುತ್ತದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ.ಇಟ್ನಾಳ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೊಪ್ಪಳ ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬಳ್ಳಾರಿ ರೀಡ್ಸ್ ಸಂಸ್ಥೆ ಹಾಗೂ ಬೆಳಗಾವಿ ಸ್ಪಂದನಾ ಸೊಸೈಟಿ ಇವರುಗಳ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಜಿಲ್ಲಾಡಳಿತ ಭವನದ ಅಡಿಟೋರಿಯಂ ಸಭಾಂಗಣದಲ್ಲಿ ಆಯೋಜಿಸಿದ್ದ “ಬಾಲ್ಯವಿವಾಹ ನಿಷೇಧ ಕಾಯ್ದೆ-2006, ಕರ್ನಾಟಕ ತಿದ್ದುಪಡಿ-2016 ಹಾಗೂ ಹದಿಹರೆಯದ ಮಕ್ಕಳ ಸಬಲೀಕರಣ ಕುರಿತು ವಿವಿಧ ಭಾಗೀದಾರರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಈಗಾಗಲೇ ಬಾಲ್ಯವಿವಾಹವನ್ನು ಮಾಡಿಸಿದ ಪಾಸ್ಟರ್(ಪಾದ್ರಿ)ರವರಿಗೆ ಶಿಕ್ಷೆಯಾಗಿದೆ. ಕಲ್ಯಾಣ ಮಂಟಪಗಳ ಮಾಲೀಕರು, ಸಾಮೂಹಿಕ ವಿವಾಹ ಆಯೋಜಕರ ವಿರುದ್ಧವೂ ಸಹ ಪ್ರಕರಣಗಳು ದಾಖಲಾಗಿವೆ. ಹಾಗಾಗಿ ತಾವುಗಳು ಬಾಲ್ಯವಿವಾಹದಲ್ಲಿ ಭಾಗವಹಿಸಬೇಡಿ ಮತ್ತು ತಮ್ಮ ವ್ಯಾಪ್ತಿಯಲ್ಲಿ ಬಾಲ್ಯವಿವಾಹಗಳಿಗೆ ಅವಕಾಶ ನೀಡಬೇಡಿ ಎಂದು ತಿಳಿಸಿದರು.

ಬಾಲ್ಯ ವಿವಾಹ ಒಂದು ಶಿಕ್ಷಾರ್ಹ ಅಪರಾಧ, ಅದು ಯಾರ ಗಮನಕ್ಕೆ ಬರುತ್ತದೆಯೊ ಅವರು ಅದನ್ನು ತಡೆಗಟ್ಟುವುದು ಆದ್ಯ ಕರ್ತವ್ಯ ಆಗಿದೆ. ತಪ್ಪಿದಲ್ಲಿ ಸರ್ಕಾರವು ಬಾಲ್ಯವಿವಾಹವನ್ನು ನೆರವೇರಿಸಿದ, ಪ್ರೋತ್ಸಾಹಿಸಿದ ಮತ್ತು ಪಾಲ್ಗೊಂಡವರಿಗೂ ಸಹ 1 ರಿಂದ 2 ವರ್ಷಗಳವರೆಗೆ ಜೈಲು ಶಿಕ್ಷೆ ಜೊತೆಗೆ 1ಲಕ್ಷ ರೂ.ದಂಡವನ್ನು ವಿಧಿಸಬಹುದಾಗಿದೆ ಮತ್ತು ಮುಂದುವರೆದು ಬಾಲ್ಯವಿವಾಹ ಮಾಡಲು ಪ್ರಯತ್ನಿಸಿದರು ಸಹ ಅಪರಾಧವೆಂದು ಕರ್ನಾಟಕ ಸರಕಾರವು ತಿದ್ದುಪಡಿಯನ್ನು ತಂದಿದ್ದು, ರಾಷ್ಟಪತಿಗಳ ಅನುಮೋದನೆಗಾಗಿ ಸಲ್ಲಿಸಲಾಗಿದೆ ಎಂದರು.

ಕೊಪ್ಪಳ ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಹಿಂದೂ, ಮುಸ್ಲಿಂ ಮತ್ತು ಕ್ರೆöÊಸ್ತ ಈ ಯಾವುದೇ ಧಾರ್ಮಿಕ ಮಂದಿರಗಳಿಗೆ ಬರುವ ಸಾರ್ವಜನಿಕರಿಗೆ ಬಾಲ್ಯವಿವಾಹ ನಿಷೇಧ ಕಾಯ್ದೆಯ ಕುರಿತು ಜಾಗೃತಿಯನ್ನು ಮೂಡಿಸಿ ಬಾಲ್ಯವಿವಾಹ ಮುಕ್ತ ಕೊಪ್ಪಳ ಜಿಲ್ಲೆಯನ್ನಾಗಿಸಲು ಜಿಲ್ಲಾಡಳಿತದೊಂದಿಗೆ ಎಲ್ಲರೂ ಕೈ ಜೋಡಿಸಿ ಎಂದು ಕರೆ ನೀಡಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ದರಗದ ಅವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಮಕ್ಕಳ ಬಾಲ್ಯವು ಅತ್ಯಮೂಲ್ಯವಾದದ್ದು, 18 ವರ್ಷದೊಳಗಿನ ಮಕ್ಕಳಲ್ಲಿ ದೈಹಿಕ, ಮಾನಸಿಕ, ಸಾಮಾಜಿಕ, ಬೌದ್ಧಿಕ ಹಾಗೂ ಶಾರೀರಿಕ ಬೆಳವಣಿಗೆಯು ತೀವ್ರವಾಗಿರುತ್ತದೆ. ಈ ಸಂದರ್ಭದಲ್ಲಿ ಮಕ್ಕಳು ಅವರ ಹಕ್ಕುಗಳನ್ನು ಅನುಭವಿಸುವಂತಹ ವಾತಾವರಣ ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿರುತ್ತದೆ. ಅಪ್ರಾಪ್ತ ವಯಸ್ಸಿನಲ್ಲಿ ಮಕ್ಕಳಿಗೆ ವಿವಾಹವನ್ನು ಮಾಡಿದರೆ ಅವರ ಬೆಳವಣಿಗೆ ಮೇಲೆ ವ್ಯತಿರಿಕ್ತವಾದ ಪರಿಣಾಮ ಬೀರುತ್ತದೆ. ಅಲ್ಲದೇ ಮಕ್ಕಳ ಮೇಲೆ ದೈಹಿಕ, ಮಾನಸಿಕ ಹಾಗೂ ಲೈಂಗಿಕ ಹಲ್ಲೆಗಳು ಘಟಿಸುತ್ತವೆ. ಸದ್ಯ ಜಾರಿಯಲ್ಲಿರುವ ಕಾನೂನಿನ್ವಯ ಅಪ್ರಾಪ್ತ ವಯಸ್ಸಿನ ಪತ್ನಿಯೊಂದಿಗಿನ ಲೈಂಗಿಕ ಸಂಪರ್ಕವು ಸಹ ಅತ್ಯಾಚಾರವಾಗಿರುತ್ತದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-2012ರ ಅಡಿಯಲ್ಲಿ ದಾಖಲಾಗಿರುವ ಪ್ರಕರಣಗಳನ್ನು ವಿಶ್ಲೇಷಿಸಲಾಗಿ ಈ ರೀತಿಯ ಪ್ರಕರಣಗಳೇ ಅಧಿಕವಾಗಿವೆ. ಆದ್ದರಿಂದ ಬಾಲ್ಯ ವಿವಾಹಗಳಲ್ಲಿ ಭಾಗವಹಿಸಬೇಡಿ, ಬಾಲ್ಯವಿವಾಹಗಳಿಗೆ ಅವಕಾಶವನ್ನು ನೀಡಬೇಡಿ ಮತ್ತು ಕಾಯ್ದೆಯ ಕುರಿತು ಸಮುದಾಯದಲ್ಲಿ ಜಾಗೃತಿಯನ್ನು ಮೂಡಿಸಿ ಎಂದು ಹೇಳಿದರು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆಯ ಪ್ರಾದೇಶಿಕ ಸಂಯೋಜಕ ಡಾ.ಕೆ. ರಾಘವೇಂದ್ರ ಭಟ್ ಅವರು ಬಾಲ್ಯವಿವಾಹ ನಿಷೇಧ ಕಾಯ್ದೆ-2006 ಕರ್ನಾಟಕ ತಿದ್ದುಪಡಿ-2016ರ ಕುರಿತು ಹಾಗೂ ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆಯ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕ ಹರೀಶ ಜೋಗಿ ಅವರು ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆಯ ಕುರಿತು ತರಬೇತಿಯನ್ನು ನೀಡಿದರು.

ಪೋಸ್ಟರ್ ಬಿಡುಗಡೆ :

ಇದೇ ವೇಳೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗಣ್ಯರು ಬಾಲ್ಯ ವಿವಾಹ ಕಾನೂನು ಪ್ರಕಾರ ಅಪರಾಧ, ಗಮನಿಸಿ ಎಂಬ ಪೋಸ್ಟರ್ ಹಾಗೂ 2025 ರ ನವೆಂಬರ್ ನಿಂದ 2026 ರ ಜನವರಿ ವರೆಗೆ ಹಮ್ಮಿಕೊಂಡಿರುವ ಬಾಲ್ಯ ವಿವಾಹ ಮುಕ್ತ ಭಾರತ ಎಂಬ ನೂರು ದಿನಗಳ ಅಭಿಯಾನದ ಬ್ಯಾನರ್ ಬಿಡುಗಡೆ ಮಾಡಿದರು.

ಕಾರ್ಯಕ್ರಮದಲ್ಲಿ ಕೊಪ್ಪಳ ಡಿವೈ.ಎಸ್ಪಿ ಮುತ್ತಣ್ಣ ಸವರಗೋಳ, ಕೊಪ್ಪಳ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಿ.ವೈ. ಶೆಟ್ಟೆಪ್ಪನವರ್, ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಮಹಾಂತಸ್ವಾಮಿ ಪೂಜಾರ, ಬೆಳಗಾವಿ ಸ್ಪಂದನ ಸೊಸೈಟಿ ಕಾರ್ಯದರ್ಶಿ ಸುಶೀಲಾ ವಿ. ಮತ್ತು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಮೂಹಿಕ ವಿವಾಹ ಆಯೋಜಕರು, ಪೂಜಾರಿಗಳು, ಮೌಲ್ವಿಗಳು, ಪಾದ್ರಿಗಳು, ಡೇಕೊರೇರ್ಸ್, ಛಾಯಾಚಿತ್ರಗಾರರು, ಮುದ್ರಣಕಾರರು, ಕಲ್ಯಾಣ ಮಂಟಪಗಳ ಮಾಲೀಕರುಗಳು ಹಾಗೂ ವಿವಿಧ ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

BIG NEWS: Attempting to perform 'child marriage' in the state is a crime: Government makes significant amendment
Share. Facebook Twitter LinkedIn WhatsApp Email

Related Posts

SHOCKING : ರಾಜ್ಯದಲ್ಲಿ `ಬೆಚ್ಚಿ ಬೀಳಿಸೋ ಕೃತ್ಯ’ : ಆಸ್ತಿಗಾಗಿ ಸಾಕುಮಗಳಿಂದ ತಾಯಿಯ ಬರ್ಬರ ಹತ್ಯೆ.!

12/11/2025 6:30 AM1 Min Read

GOOD NEWS : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ವಿದ್ಯಾರ್ಥಿ ವೇತನ’ಕ್ಕಾಗಿ ಅರ್ಜಿ ಆಹ್ವಾನ

12/11/2025 6:18 AM2 Mins Read

GOOD NEWS: ‘ಗೃಹಲಕ್ಷ್ಮೀ ಸಂಘ’ ನೋಂದಣಿ: ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ಗೆ ಪ್ರಮಾಣಪತ್ರ ಹಸ್ತಾಂತರ

12/11/2025 6:16 AM2 Mins Read
Recent News

SHOCKING : ರಾಜ್ಯದಲ್ಲಿ `ಬೆಚ್ಚಿ ಬೀಳಿಸೋ ಕೃತ್ಯ’ : ಆಸ್ತಿಗಾಗಿ ಸಾಕುಮಗಳಿಂದ ತಾಯಿಯ ಬರ್ಬರ ಹತ್ಯೆ.!

12/11/2025 6:30 AM
vidhana soudha

BIG NEWS : ರಾಜ್ಯದಲ್ಲಿ `ಬಾಲ್ಯವಿವಾಹ’ ಮಾಡಲು ಪ್ರಯತ್ನಿಸಿದರೂ ಅಪರಾಧ : ಸರ್ಕಾರದಿಂದ ಮಹತ್ವದ ತಿದ್ದುಪಡಿ

12/11/2025 6:19 AM

GOOD NEWS : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ವಿದ್ಯಾರ್ಥಿ ವೇತನ’ಕ್ಕಾಗಿ ಅರ್ಜಿ ಆಹ್ವಾನ

12/11/2025 6:18 AM

GOOD NEWS: ‘ಗೃಹಲಕ್ಷ್ಮೀ ಸಂಘ’ ನೋಂದಣಿ: ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ಗೆ ಪ್ರಮಾಣಪತ್ರ ಹಸ್ತಾಂತರ

12/11/2025 6:16 AM
State News
KARNATAKA

SHOCKING : ರಾಜ್ಯದಲ್ಲಿ `ಬೆಚ್ಚಿ ಬೀಳಿಸೋ ಕೃತ್ಯ’ : ಆಸ್ತಿಗಾಗಿ ಸಾಕುಮಗಳಿಂದ ತಾಯಿಯ ಬರ್ಬರ ಹತ್ಯೆ.!

By kannadanewsnow5712/11/2025 6:30 AM KARNATAKA 1 Min Read

ಚಿಕ್ಕಮಗಳೂರು : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ನಡೆದಿದ್ದು, ಆಸ್ತಿಗಾಗಿ ಸಾಕು ಮಗಳೇ ತಾಯಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ…

vidhana soudha

BIG NEWS : ರಾಜ್ಯದಲ್ಲಿ `ಬಾಲ್ಯವಿವಾಹ’ ಮಾಡಲು ಪ್ರಯತ್ನಿಸಿದರೂ ಅಪರಾಧ : ಸರ್ಕಾರದಿಂದ ಮಹತ್ವದ ತಿದ್ದುಪಡಿ

12/11/2025 6:19 AM

GOOD NEWS : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ವಿದ್ಯಾರ್ಥಿ ವೇತನ’ಕ್ಕಾಗಿ ಅರ್ಜಿ ಆಹ್ವಾನ

12/11/2025 6:18 AM

GOOD NEWS: ‘ಗೃಹಲಕ್ಷ್ಮೀ ಸಂಘ’ ನೋಂದಣಿ: ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ಗೆ ಪ್ರಮಾಣಪತ್ರ ಹಸ್ತಾಂತರ

12/11/2025 6:16 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.