Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರದಿಂದ `ಕ್ರೀಡಾಪಟುಗಳಿಗೆ ಗುಡ್ ನ್ಯೂಸ್’ : ಪ್ರೋತ್ಸಾಹಧನ ಹಾಗೂ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ.!

12/11/2025 7:50 AM

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಮೃತರ ಹೆಸರಲ್ಲಿನ ಜಮೀನು ವಾರಸುದಾರರಿಗೆ ಬದಲಿಸಲು `ಇ-ಪೌತಿ ಖಾತೆ’.!

12/11/2025 7:45 AM

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು ತಪ್ಪದೆ ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ.!

12/11/2025 7:28 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಮೃತರ ಹೆಸರಲ್ಲಿನ ಜಮೀನು ವಾರಸುದಾರರಿಗೆ ಬದಲಿಸಲು `ಇ-ಪೌತಿ ಖಾತೆ’.!
KARNATAKA

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಮೃತರ ಹೆಸರಲ್ಲಿನ ಜಮೀನು ವಾರಸುದಾರರಿಗೆ ಬದಲಿಸಲು `ಇ-ಪೌತಿ ಖಾತೆ’.!

By kannadanewsnow5712/11/2025 7:45 AM

ಮಡಿಕೇರಿ : ರಾಜ್ಯದಲ್ಲಿ 42 ಲಕ್ಷ ಜಮೀನು ಮೃತರ ಹೆಸರಿನಲ್ಲಿದ್ದು, ಇದನ್ನು ಸಹ ಪಟ್ಟಿ ಮಾಡಲಾಗಿದೆ. ಈ ಪೌತಿ ಖಾತೆ ಆಂದೋಲನಡಿ ರೈತರ ಮನೆ ಬಾಗಿಲಿಗೆ ಹೋಗಿ ಕುಟುಂಬದವರ ಹೆಸರಿಗೆ ಖಾತೆ ಮಾಡುವ ಕಾರ್ಯ ಕೈಗೊಳ್ಳಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಕುಶಾಲನಗರದ ಪಾಲಿಟೆಕ್ನಿಕ್ ಕಾಲೇಜು ಬಳಿ 8.60 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗುವ ‘ಪ್ರಜಾಸೌಧ’ ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ರಾಜ್ಯಾದ್ಯಾದಂತ ದರಖಾಸ್ ಪೋಡಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಸರ್ಕಾರದಿಂದ ಮಂಜೂರಾದ ಜಮೀನನ್ನು ಅನುಬಂಧ-1 ರಡಿ ಸರ್ವೆ ಮಾಡಲಾಗುತ್ತಿದೆ. ಮನೆ ಮನೆಗೆ ತೆರಳಿ ಮಾಹಿತಿ ಪಡೆದು ಸರಿಪಡಿಸುವ ಕಾರ್ಯ ನಡೆಯುತ್ತಿದೆ ಎಂದು ಸಚಿವರು ಹೇಳಿದರು.

ಕೊಡಗು ಜಿಲ್ಲೆಯಲ್ಲಿ 2344 ದರಖಾಸ್ ಪೋಡಿ ಅಭಿಯಾನಡಿ ಪ್ರಕರಣಗಳನ್ನು ತೆಗೆದುಕೊಳ್ಳಲಾಗಿದ್ದು, ಇದರಲ್ಲಿ 1500 ಕ್ಕೂ ಹೆಚ್ಚು ಕಡತ ವಿಲೇವಾರಿ ಮಾಡಲಾಗಿದೆ ಎಂದು ಸಚಿವರು ಹೇಳಿದರು.

ಭೂ ಸುರಕ್ಷತೆ ಯೋಜನೆಯಡಿ ಕಡತಗಳು ಕಾಣೆಯಾಗದಂತೆ ಕ್ರಮವಹಿಸಲಾಗಿದೆ. ಮೂಲ ಕಡತಗಳನ್ನು ಸ್ಕ್ಯಾನಿಂಗ್ ಮಾಡುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದರು.

ಭೂಮಿಗೆ ಸಂಬಂಧಿಸಿದಂತೆ ಎಲ್ಲಾ ದಾಖಲೆಗಳನ್ನು ಸಂಗ್ರಹಿಸಿ ಕಡತ ಕಾಣೆಯಾಗುವುದನ್ನು ತಪ್ಪಿಸಲು ಕ್ರಮವಹಿಸಲಾಗಿದೆ ಎಂದು ಸಚಿವರು ಹೇಳಿದರು. ರಾಜ್ಯದಲ್ಲಿ ಭೂಮಿಗೆ ಸಂಬಂಧಪಟ್ಟಂತೆ 50 ಕೋಟಿ ಪುಟಗಳನ್ನು ಸ್ಕ್ಯಾನಿಂಗ್ ಮಾಡಲಾಗಿದೆ. ಇನ್ನೂ 50 ಕೋಟಿ ಪುಟ ಸ್ಕ್ಯಾನಿಂಗ್ ಮಾಡಲು ಬಾಕಿ ಇದೆ. ಎಲ್ಲಾ ದಾಖಲೆಗಳು ಆನ್ಲೈನ್ ಮೂಲಕ ಮೊಬೈಲ್ನಲ್ಲಿಯೇ ದೊರೆಯಲಿದೆ ಎಂದರು.

ರಾಜ್ಯದಲ್ಲಿರುವ ಗ್ರಾಮ ಲೆಕ್ಕಿಗರು ಹಾಗೂ ಕಂದಾಯ ನಿರೀಕ್ಷಕರಿಗೆ ಲ್ಯಾಪ್ಟಾಪ್ ವಿತರಿಸುವ ಕಾರ್ಯ ನಡೆದಿದ್ದು, ಕಾಗದ ರಹಿತವಾಗಿ ಇ-ಕಚೇರಿ ಮೂಲಕ ಸೌಲಭ್ಯಗಳನ್ನು ಒದಗಿಸಲು ಮುಂದಾಗಲಾಗಿದೆ ಎಂದು ಸಚಿವರು ಹೇಳಿದರು.ಇಲಾಖೆಯಲ್ಲಿ ಸಾರ್ವಜನಿಕರನ್ನು ಶತಾಯಿಸಬಾರದು. ಉತ್ತರಾಧಾಯಿತ್ವ ಹೊಂದಿರಬೇಕು. ಆ ನಿಟ್ಟಿನಲ್ಲಿ ಕಂದಾಯ ಇಲಾಖೆಯನ್ನು ಅಪ್ಡೇಟ್ ಮಾಡಲಾಗುತ್ತಿದೆ ಎಂದರು.

ತಹಶೀಲ್ದಾರರು ಮತ್ತು ಉಪ ವಿಭಾಗಾಧಿಕಾರಿ ಕೋರ್ಟ್ಗಳಲ್ಲಿ ವರ್ಷಾನುಗಟ್ಟಲೆ ಕಡತ ಬಾಕಿ ಇರುವುದನ್ನು ಗಮನಿಸಿ ಕಡತ ವಿಲೇವಾರಿಗೆ ಚುರುಕುಗೊಳಿಸಲಾಗಿದೆ ಎಂದರು.ತಹಶೀಲ್ದಾರರ ನ್ಯಾಯಾಲಯದಲ್ಲಿ ಇದ್ದ 10,774 ಪ್ರಕರಣಗಳಲ್ಲಿ 510 ಪ್ರಕರಣಗಳು ಮಾತ್ರ ಬಾಕಿ ಇದೆ ಎಂದು ಸಚಿವರು ತಿಳಿಸಿದರು.

ಹಾಗೆಯೇ ಉಪ ವಿಭಾಗಾಧಿಕಾರಿ ಕೋರ್ಟ್ನಲ್ಲಿ ನ್ಯಾಯಾಲಯದಲ್ಲಿ 6 ತಿಂಗಳಿಂದ ಕಡತಗಳನ್ನು ವಿಲೇವಾರಿ ಮಾಡಬೇಕಿದ್ದು, ಹಿಂದ 59,335 ಅರ್ಜಿಗಳು ವಿಲೇವಾರಿಗೆ ಬಾಕಿ ಇತ್ತು. ಈಗ 12,249 ಅರ್ಜಿಗಳು ಮಾತ್ರ ವಿಲೇವಾರಿಗೆ ಬಾಕಿ ಇದೆ ಎಂದು ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು.

ಕಳೆದ 5 ವರ್ಷದಲ್ಲಿ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ 32,787 ಪ್ರಕರಣಗಳು ಇದ್ದವು, ಈಗ 3,974 ಅರ್ಜಿಗಳು ಮಾತ್ರ ಬಾಕಿ ಇದೆ. ಮೂರು ತಿಂಗಳಲ್ಲಿ ವಿಲೇವಾರಿ ಮಾಡಬೇಕಿದೆ ಎಂದು ಸಚಿವರು ಹೇಳಿದರು.

ಭೂಕುಸಿತ ತಡೆಯುವ ಸಂಬಂಧ ಕಾಮಕಾರಿ ಕೈಗೊಳ್ಳಲು 50 ಕೋಟಿ ರೂ. ಬಿಡುಗಡೆಯಾಗಿದ್ದು, ಇನ್ನೂ 10 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದರು.
ಜಿಲ್ಲೆಯ 5 ತಾಲ್ಲೂಕಿಗೆ ತಹಶೀಲ್ದಾರ್ ನೇಮಕ ಮಾಡಲಾಗಿದೆ. ಗ್ರಾಮ ಆಡಳಿತ, ಸರ್ವೇ ಅವರನ್ನು ನೇಮಿಸಲಾಗಿದೆ. ಕೊಡಗು ಜಿಲ್ಲೆಗೆ ಶಕ್ತಿ ತುಂಬುವ ಕೆಲಸ ಮಾಡಲಾಗಿದೆ ಎಂದರು.

ಪ್ರಜಾಸೌಧ ತಾಲ್ಲೂಕು ಆಡಳಿತ ಭವನದಲ್ಲಿ ತಹಶೀಲ್ದಾರ್ ಕಚೇರಿ, ಭೂ ದಾಖಲೆಗಳ ಕಚೇರಿ, ಉಪ ನೋಂದಾಣಾಧಿಕಾರಿ ಕಚೇರಿ, ಖಜಾನೆ, ಹೀಗೆ ಹಲವು ಇಲಾಖೆಗಳು ಇರಲಿವೆ ಎಂದು ಹೇಳಿದರು.

ಕೊಡಗು ಜಿಲ್ಲೆಯ ಇಬ್ಬರು ಶಾಸಕದ್ವಯರು ಕ್ರೀಯಾಶೀಲವಾಗಿ ಜಿಲ್ಲೆಗೆ ಆಗಬೇಕಿರುವ ಕೆಲಸ ಸಂಬಂಧ ಗಮನ ಸೆಳೆದು ಕೆಲಸ ಮಾಡಿಸುತ್ತಾರೆ ಎಂದು ಕೃಷ್ಣಬೈರೇಗೌಡ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

GOOD NEWS: Good news for the farmers of the state: `e-Pauti Account' to transfer land in the name of the deceased to the heirs!
Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ `ಕ್ರೀಡಾಪಟುಗಳಿಗೆ ಗುಡ್ ನ್ಯೂಸ್’ : ಪ್ರೋತ್ಸಾಹಧನ ಹಾಗೂ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ.!

12/11/2025 7:50 AM1 Min Read

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು ತಪ್ಪದೆ ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ.!

12/11/2025 7:28 AM2 Mins Read

BIG NEWS : ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 310 ಪ್ರಾಂಶುಪಾಲರ ಹುದ್ದೆಗಳ ನೇರ ನೇಮಕಾತಿ : ಸರ್ಕಾರದಿಂದ ಮಹತ್ವದ ಆದೇಶ

12/11/2025 6:57 AM2 Mins Read
Recent News

ರಾಜ್ಯ ಸರ್ಕಾರದಿಂದ `ಕ್ರೀಡಾಪಟುಗಳಿಗೆ ಗುಡ್ ನ್ಯೂಸ್’ : ಪ್ರೋತ್ಸಾಹಧನ ಹಾಗೂ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ.!

12/11/2025 7:50 AM

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಮೃತರ ಹೆಸರಲ್ಲಿನ ಜಮೀನು ವಾರಸುದಾರರಿಗೆ ಬದಲಿಸಲು `ಇ-ಪೌತಿ ಖಾತೆ’.!

12/11/2025 7:45 AM

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು ತಪ್ಪದೆ ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ.!

12/11/2025 7:28 AM

BREAKING : ಬಾಲಿವುಡ್ ನಟ ಗೋವಿಂದ್ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು | Govinda Hospitalised

12/11/2025 7:27 AM
State News
KARNATAKA

ರಾಜ್ಯ ಸರ್ಕಾರದಿಂದ `ಕ್ರೀಡಾಪಟುಗಳಿಗೆ ಗುಡ್ ನ್ಯೂಸ್’ : ಪ್ರೋತ್ಸಾಹಧನ ಹಾಗೂ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ.!

By kannadanewsnow5712/11/2025 7:50 AM KARNATAKA 1 Min Read

ಬೆಂಗಳೂರು : ರಾಜ್ಯ ಸರ್ಕಾರವು ಕ್ರೀಡಾಪಟುಗಳಿಗೆ ಸಿಹಿಸುದ್ದಿ ನೀಡಿದ್ದು, ರಾಜ್ಯದ ಕ್ರೀಡಾಪಟುಗಳಿಂದ ಪ್ರೋತ್ಸಾಹಧನ ಹಾಗೂ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2025ರ…

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಮೃತರ ಹೆಸರಲ್ಲಿನ ಜಮೀನು ವಾರಸುದಾರರಿಗೆ ಬದಲಿಸಲು `ಇ-ಪೌತಿ ಖಾತೆ’.!

12/11/2025 7:45 AM

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು ತಪ್ಪದೆ ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ.!

12/11/2025 7:28 AM

BIG NEWS : ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 310 ಪ್ರಾಂಶುಪಾಲರ ಹುದ್ದೆಗಳ ನೇರ ನೇಮಕಾತಿ : ಸರ್ಕಾರದಿಂದ ಮಹತ್ವದ ಆದೇಶ

12/11/2025 6:57 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.