ನವದೆಹಲಿ: ಕಾರು ಸ್ಪೋಟ ಭಯೋತ್ಪಾದಕರ ಕೃತ್ಯವೆಂದು ಕೇಂದ್ರ ಸರ್ಕಾರ ಸ್ಪಷ್ಟ ಪಡಿಸಿದೆ. ಅಲ್ಲದೇ ಇದೊಂದು ಉಗ್ರರ ಹೇಯ ಕೃತ್ಯವೆಂದು ಖಂಡಿಸಿದೆ.
ಇಂದು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಮಹತ್ವದ ಕೇಂದ್ರ ಭದ್ರತಾ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ದೆಹಲಿಯ ಕಾರು ಸ್ಪೋಟ ಭಯೋತ್ಪಾದಕರ ಕೃತ್ಯವೆಂದು ಕೇಂದ್ರ ಸರ್ಕಾರ ಸ್ಪಷ್ಟ ಪಡಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು, ನವೆಂಬರ್.10ರಂದು ನಡೆದ ಸ್ಪೋಟ ಉಗ್ರರ ಹೇಯ ಕೃತ್ಯವಾಗಿದೆ. ಉಗ್ರರು ನಡೆಸಿದ ಹೇಯ ಕೃತ್ಯವೆಂಬುದಾಗಿ ಹೇಳಿದರು.
ನವೆಂಬರ್ 10 ರಂದು ನಡೆದ ದೆಹಲಿ ಭಯೋತ್ಪಾದಕ ಘಟನೆಯನ್ನು ಖಂಡಿಸಿ ಕೇಂದ್ರ ಸಚಿವ ಸಂಪುಟ ಇಂದು ನಿರ್ಣಯವನ್ನು ಅಂಗೀಕರಿಸಿತು ಮತ್ತು ಬಲಿಪಶುಗಳಿಗೆ ಗೌರವ ಸಲ್ಲಿಸಿತು
ನವೆಂಬರ್ 10 ರಂದು ಕೆಂಪು ಕೋಟೆ ಬಳಿ ಕಾರು ಸ್ಫೋಟದ ಮೂಲಕ ದೇಶ ವಿರೋಧಿ ಶಕ್ತಿಗಳು ನಡೆಸಿದ ಘೋರ ಭಯೋತ್ಪಾದಕ ಘಟನೆಯನ್ನು ದೇಶ ಕಂಡಿದೆ… ಘಟನೆಯ ತನಿಖೆಯನ್ನು ಅತ್ಯಂತ ತುರ್ತಾಗಿ ಮತ್ತು ವೃತ್ತಿಪರತೆಯಿಂದ ಮುಂದುವರಿಸಬೇಕೆಂದು ಸಚಿವ ಸಂಪುಟ ನಿರ್ದೇಶಿಸುತ್ತದೆ, ಇದರಿಂದಾಗಿ ಅಪರಾಧಿಗಳು, ಅವರ ಸಹಯೋಗಿಗಳು ಮತ್ತು ಅವರ ಪ್ರಾಯೋಜಕರನ್ನು ಗುರುತಿಸಿ ವಿಳಂಬವಿಲ್ಲದೆ ನ್ಯಾಯದ ಕಟಕಟೆಗೆ ತರಲಾಗುತ್ತದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ನಿರ್ಣಯವನ್ನು ಓದಿದರು.
#WATCH | Union Cabinet today passed a resolution condemning the November 10 Delhi terror incident and paid its respects to the victims
"The country has witnessed a heinous terrorist incident perpetrated by anti-national forces through a car explosion near Red Fort on 10th… pic.twitter.com/Rs31CldHzH
— ANI (@ANI) November 12, 2025







