ರಾಮನಗರ : ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ರಾಮನಗರದ ಬಿಡದಿ ಬಳಿ ಕದಂಬ ಹೋಟೆಲ್ ನಲ್ಲಿ ತಡರಾತ್ರಿ ಈ ಒಂದು ಕೊಲೆ ನಡೆದಿದೆ.
ಚನ್ನಪಟ್ಟಣ ತಾಲೂಕಿನ ಕೊಂಡಾಪುರ ಗ್ರಾಮದ ನಿವಾಸಿ ನಿಶಾಂತ್ (25) ಕೊಲೆಯಾದ ಯುವಕ. ನಿಶಾಂತ್ ಕಳೆದ ಎರಡೂವರೆ ತಿಂಗಳಿನಿಂದ ಕದಂಬ ಹೋಟೆಲ್ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದು, ಹಳೆ ದ್ವೇಷಕ್ಕೆ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ತಡರಾತ್ರಿ ಹೋಟೆಲ್ ನಲ್ಲಿ ಮಲಗಿದ್ದ ನಿಶಾಂತ್ ನ ಕಿವಿ ಭಾಗಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಿರೋ ದುಷ್ಕರ್ಮಿಗಳು ಹೋಟೆಲ್ನ ಸಿಸಿಟಿವಿ ಕ್ಯಾಮೆರಾದ ಡಿವಿಆರ್ ಕೂಡಾ ತೆಗೆದುಕೊಂಡು ಹೋಗಿದ್ದಾರೆ. ಸ್ಥಳಕ್ಕೆ ಬಿಡದಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆರಳಚ್ಚು ತಜ್ಞರು ಹಾಗೂ ಶ್ವಾನದಳದಿಂದಲೂ ಪರಿಶೀಲನೆ ಮಾಡಲಾಗಿದೆ. ಪ್ರಕರಣದ ತನಿಖೆ ಕೈಗೊಂಡಿರುವ ಬಿಡದಿ ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.






