Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರಧಾನಿ ಮೋದಿಗೆ ಸ್ವೀಡನ್‌ನ ಅತ್ಯುನ್ನತ ‘ರಾಯಲ್ ಆರ್ಡರ್ ಆಫ್ ಪೋಲಾರ್ ಸ್ಟಾರ್’ ಗೌರವ; ಇದು 31ನೇ ಜಾಗತಿಕ ಪ್ರಶಸ್ತಿ!

GOOD NEWS : ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್: ಭಾರತದಲ್ಲಿ ಮೊದಲ ಬಾರಿಗೆ 7 ನಿಮಿಷಗಳಲ್ಲಿ `ಕ್ಯಾನ್ಸರ್’ ಗುಣಪಡಿಸುವ ಇಂಜೆಕ್ಷನ್ ಬಿಡುಗಡೆ

ಕ್ಯಾನ್ಸರ್ ಚಿಕಿತ್ಸೆಯಲ್ಲಿ ಹೊಸ ಕ್ರಾಂತಿ: ಭಾರತದಲ್ಲಿ ಬಿಡುಗಡೆಯಾಯಿತು ಕೇವಲ ‘7 ನಿಮಿಷದ’ ಇಂಜೆಕ್ಷನ್ !

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಪಂಚಭೂತಗಳಲ್ಲಿ `ಸಾಲುಮರದ ತಿಮ್ಮಕ್ಕ’ ಲೀನ : ಕರುನಾಡಿನ` ವೃಕ್ಷಮಾತೆ’  ಇನ್ನೂ ನೆನಪು ಮಾತ್ರ.!
KARNATAKA

BREAKING : ಪಂಚಭೂತಗಳಲ್ಲಿ `ಸಾಲುಮರದ ತಿಮ್ಮಕ್ಕ’ ಲೀನ : ಕರುನಾಡಿನ` ವೃಕ್ಷಮಾತೆ’  ಇನ್ನೂ ನೆನಪು ಮಾತ್ರ.!

By kannadanewsnow57

ಬೆಂಗಳೂರು: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ, ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ  ಇಂದು ಪಂಚಭೂತಗಳಲ್ಲಿ ಲೀನವಾದರು. ಜ್ಞಾನಭಾರತಿ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೇರವೇರಿದೆ.

ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ (114)ಅವರು ತೀವ್ರ ಅನಾರೋಗ್ಯದಿಂದ ಶುಕ್ರವಾರ ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾಲುಮರದ ತಿಮ್ಮಕ್ಕ ಚಿಕಿತ್ಸೆ ಪಡೆಯುತ್ತಿದ್ದರು.

8,000 ಕ್ಕೂ ಅಧಿಕ ಸಸಿಗಳನ್ನು ನೆಟ್ಟು ಪೋಷಿಸಿ ಬೆಳೆಸಿದ್ದಾರೆ. ಪರಿಸರದ ಉಳಿವಿಗೆ ಅವರ ನೀಡಿರುವ ಮಹತ್ತರ ಕೊಡುಗೆಯನ್ನು ಗೌರವಿಸಿ ಭಾರತ ಸರ್ಕಾರ 2019ರಲ್ಲಿ ಅವರಿಗೆ ಪದ್ಮಶ್ರೀ ಪ್ರಶಸ್ತಿಯಿಂದ ಪುರಸ್ಕರಿಸಿದೆ. ಪತಿ ಚಿಕ್ಕರಂಗಯ್ಯ ಕೂಡ ಸಸಿನೆಡುವಲ್ಲಿ ತಿಮ್ಮಕ್ಕನಿಗೆ ನೆರವಾಗುತ್ತಿದ್ದರು. ದಂಪತಿಗೆ ಸಂತಾನ ಭಾಗ್ಯವಿರಲಿಲ್ಲ. ಆ ಕೊರತೆ, ದುಃಖ ಮತ್ತು ನೋವನ್ನು ಸಸಿ ನೆಟ್ಟು ಪೋಷಿಸುವ ಮೂಲಕ ನೀಗಿಸಿಕೊಳ್ಳುತ್ತಿದ್ದರು.

ಹೀಗಿದೆ ನಾಡಿನ ಜನತೆಗೆ ಸಾಲು ಮರದ ತಿಮ್ಮಕ್ಕ ಕೊಟ್ಟ ಕೊನೆಯ ಸಂದೇಶ

“ ನನ್ನ ಸಂದೇಶ “

ಪ್ರೀತಿಯ ನನ್ನ ನಾಡಿನ ಜನತೆಗೆ ನಿಮ್ಮ ಪ್ರೀತಿಯ ಅಜ್ಜಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಮಾಡುವ ನಮಸ್ಕಾರಗಳು. ಈ ಜಗತ್ತಿನಲ್ಲಿ ಯಾವುದು ಶಾಶ್ವತವಲ್ಲ, ಇರುವಷ್ಟು ದಿನ ಯಾರಿಗೂ ತೊಂದರೆ, ಹಿಂಸೆಯಾಗದಂತೆ ಪ್ರೀತಿ ಬದುಕಿ, ಬಡವ, ಶ್ರೀಮಂತ, ಭಿಕ್ಷುಕ. ಅಸಹಾಯಕ ಎನ್ನದೆ ಎಲ್ಲರೂ ಒಂದೇ ತರಹ ಬದುಕಿ. ಎಲ್ಲರನ್ನು ಗೌರವಿಸಿ, ಪ್ರೀತಿಸಿ, ದೇಶವನ್ನು ಪ್ರೀತಿಸಿ, ದೇಶ ಚೆನ್ನಾಗಿದ್ದರೆ ಎಲ್ಲರೂ ಚಂದ.

ಚಿಕ್ಕವರಾಗಲಿ, ದೊಡ್ಡವರಾಗಲಿ, ಬಡವರಾಗಲಿ, ಶ್ರೀಮಂತರಾಗಲಿ, ಗಿಡ ನೆಟ್ಟು ಮರಗಳನ್ನಾಗಿ ಬೆಳೆಸಿ, ಗೋ ಕಟ್ಟಿಗಳನ್ನು ಕಟ್ಟಿಸಿ, ಕೆರೆ ಕಟ್ಟಿಸಿ, ಮೂಕ ಪ್ರಾಣಿಗಳಿಗೆ ನೀರಿನ ವ್ಯವಸ್ಥೆ ಮಾಡಿಸಿ, ಹಣ್ಣು ಬಿಡುವ ಮರಗಳನ್ನು ಬೆಳೆಸಿ, ಹಕ್ಕಿಪಕ್ಷಿಗಳ ಆಧಾರವಾಗಲಿ, ದೇಶದಲ್ಲಿರುವ ಎಲ್ಲರಿಗೂ ಒಳ್ಳೆಯದಾಗಲಿ, ದೇಶ ಚೆನ್ನಾಗಿರಲಿ ಬಡವನನ್ನು ಕಂಡು ಬಿನ್ನ ಭೇಧ ಮಾಡಬೇಡಿ. ಮನುಷ್ಯರೆಲ್ಲ ಒಂದೇ, ಹಸಿದವರಿಗೆ ಅನ್ನ ಕೊಡಿ. ನಾನು ಮಾಡಿದ ಗಿಡ ನೆಡುವ ಉಳಿಸುವ ಕಾರ್ಯವನ್ನು ನಿರಂತರವಾಗಿ ಮುಂದುವರಿಸಿ, ಮತ್ತು ನನ್ನ ಮಗನಾದ ಉಮೇಶ ದೇಶದಲ್ಲೆಲ್ಲ ಗಿಡ ನೆಡುವ ಮತ್ತು ನಡೆಸುವ ಕಾರ್ಯ ಮಾಡುತ್ತಾ ಸಾಗು.

ಮತ್ತೊಮ್ಮೆ ಎಲ್ಲರಿಗೂ ದೇವರು ಒಳ್ಳೆಯದಾಗಲಿ, ಎಲ್ಲರಿಗೂ ಸತಿಪತಿ ಭಾಗ್ಯ ಇರಲಿ, ಮಕ್ಕಳ ಭಾಗ್ಯವಿರಲಿ, ನಿಮ್ಮ ಮನೆ ಚೆನ್ನಾಗಿರಲಿ, ದೇಶ ಚೆನ್ನಾಗಿರಲಿ, ಮಕ್ಕಳಿಗೆಲ್ಲ ಒಳ್ಳೆಯ ವಿದ್ಯೆ ಬರಲಿ, ಎಲ್ಲರೂ ಗಿಡ ಮರಗಳನ್ನು ಬೆಳೆಸಿ.

ನನ್ನ ಪತಿ ದೇವರ ಆಶೀರ್ವಾದ ಮತ್ತು ನನ್ನ ಆಶೀರ್ವಾದ ನನ್ನ ಮಗನ ಮೇಲಿರಲಿ, ಎಲ್ಲರಿಗೂ ಒಳ್ಳೆಯದಾಗಲಿ.

BREAKING: Among the five elements `Salamarada Thimmakka' is a lost one: Karunadu's `Vrikshamaata' is still just a memory!
Share. Facebook Twitter LinkedIn WhatsApp Email

Related Posts

BIG NEWS : `CM’ ಹುದ್ದೆಯಲ್ಲಿ 8 ವರ್ಷ ಪೂರೈಸಿದ ಸಿದ್ದರಾಮಯ್ಯ : ಕರ್ನಾಟಕದ ಇತಿಹಾಸದಲ್ಲಿ ಗರಿಷ್ಠ ಸಾಧನೆಗೈದ ಹಿರಿಮೆ | CM Siddaramaiah

2 Mins Read

Bhagyalakshmi Bond : `ಭಾಗ್ಯಲಕ್ಷ್ಮಿ ಬಾಂಡ್’ ಹಣ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Mins Read

ರಾಜ್ಯದ ಪಿಯು ಕಾಲೇಜುಗಳಲ್ಲಿ ಈ ವರ್ಷದಿಂದಲೇ ‘ಘಟಕ ಆಧಾರಿತ ಮೌಲ್ಯಮಾಪನ’ (LBA) ಜಾರಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ | Lesson Based Assessment

2 Mins Read
Recent News

ಪ್ರಧಾನಿ ಮೋದಿಗೆ ಸ್ವೀಡನ್‌ನ ಅತ್ಯುನ್ನತ ‘ರಾಯಲ್ ಆರ್ಡರ್ ಆಫ್ ಪೋಲಾರ್ ಸ್ಟಾರ್’ ಗೌರವ; ಇದು 31ನೇ ಜಾಗತಿಕ ಪ್ರಶಸ್ತಿ!

GOOD NEWS : ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್: ಭಾರತದಲ್ಲಿ ಮೊದಲ ಬಾರಿಗೆ 7 ನಿಮಿಷಗಳಲ್ಲಿ `ಕ್ಯಾನ್ಸರ್’ ಗುಣಪಡಿಸುವ ಇಂಜೆಕ್ಷನ್ ಬಿಡುಗಡೆ

ಕ್ಯಾನ್ಸರ್ ಚಿಕಿತ್ಸೆಯಲ್ಲಿ ಹೊಸ ಕ್ರಾಂತಿ: ಭಾರತದಲ್ಲಿ ಬಿಡುಗಡೆಯಾಯಿತು ಕೇವಲ ‘7 ನಿಮಿಷದ’ ಇಂಜೆಕ್ಷನ್ !

BIG NEWS : `CM’ ಹುದ್ದೆಯಲ್ಲಿ 8 ವರ್ಷ ಪೂರೈಸಿದ ಸಿದ್ದರಾಮಯ್ಯ : ಕರ್ನಾಟಕದ ಇತಿಹಾಸದಲ್ಲಿ ಗರಿಷ್ಠ ಸಾಧನೆಗೈದ ಹಿರಿಮೆ | CM Siddaramaiah

State News
KARNATAKA

BIG NEWS : `CM’ ಹುದ್ದೆಯಲ್ಲಿ 8 ವರ್ಷ ಪೂರೈಸಿದ ಸಿದ್ದರಾಮಯ್ಯ : ಕರ್ನಾಟಕದ ಇತಿಹಾಸದಲ್ಲಿ ಗರಿಷ್ಠ ಸಾಧನೆಗೈದ ಹಿರಿಮೆ | CM Siddaramaiah

By kannadanewsnow57 KARNATAKA 2 Mins Read

ಬೆಂಗಳೂರು: ಕರ್ನಾಟಕದ ರಾಜಕೀಯ ಇತಿಹಾಸದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೊಂದು ಅಭೂತಪೂರ್ವ ಮೈಲಿಗಲ್ಲು ನೆಟ್ಟಿದ್ದಾರೆ. ಮುಖ್ಯಮಂತ್ರಿ ಹುದ್ದೆಯಲ್ಲಿ ಸುದೀರ್ಘ 8…

Bhagyalakshmi Bond : `ಭಾಗ್ಯಲಕ್ಷ್ಮಿ ಬಾಂಡ್’ ಹಣ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ರಾಜ್ಯದ ಪಿಯು ಕಾಲೇಜುಗಳಲ್ಲಿ ಈ ವರ್ಷದಿಂದಲೇ ‘ಘಟಕ ಆಧಾರಿತ ಮೌಲ್ಯಮಾಪನ’ (LBA) ಜಾರಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ | Lesson Based Assessment

Women Alert : `ಪೀರಿಯಡ್ಸ್’ ಮುಂದೂಡುವ ಮಾತ್ರೆ ನುಂಗುವ ಮಹಿಳೆಯರು ತಪ್ಪದೇ ಇದನ್ನೊಮ್ಮೆ ಓದಲೇಬೇಕು.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.