Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚಾಮರಾಜನಗರ ಜಿಲ್ಲೆಯಿಂದ 614 ಮೇಲ್ಮನವಿ: ರಾಜ್ಯ ಮಾಹಿತಿ ಆಯೋಗದ ಆಯುಕ್ತರ ಮಾಹಿತಿ

15/11/2025 7:34 PM

ಮಾಹಿತಿ ಹಕ್ಕು ಕಾಯ್ದೆ ಬಗ್ಗೆ ನಿರ್ಲಕ್ಷ್ಯ ಸಲ್ಲದು: ಆಯುಕ್ತರಾದ ಡಾ.ಹರೀಶ್ ಕುಮಾರ್, ಕೆ.ಬದ್ರುದ್ದೀನ್ ಖಡಕ್ ವಾರ್ನಿಂಗ್

15/11/2025 7:31 PM

IPL 2026 : ಯಾವ ತಂಡ ಎಷ್ಟು ಆಟಗಾರರ ಉಳಿಸಿಕೊಂಡಿದೆ.? ಯಾರಿಗೆ ಗೇಟ್ ಪಾಸ್.? ಇಲ್ಲಿದೆ, ಸಂಪೂರ್ಣ ಪಟ್ಟಿ!

15/11/2025 7:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಾಹಿತಿ ಹಕ್ಕು ಕಾಯ್ದೆ ಬಗ್ಗೆ ನಿರ್ಲಕ್ಷ್ಯ ಸಲ್ಲದು: ಆಯುಕ್ತರಾದ ಡಾ.ಹರೀಶ್ ಕುಮಾರ್, ಕೆ.ಬದ್ರುದ್ದೀನ್ ಖಡಕ್ ವಾರ್ನಿಂಗ್
KARNATAKA

ಮಾಹಿತಿ ಹಕ್ಕು ಕಾಯ್ದೆ ಬಗ್ಗೆ ನಿರ್ಲಕ್ಷ್ಯ ಸಲ್ಲದು: ಆಯುಕ್ತರಾದ ಡಾ.ಹರೀಶ್ ಕುಮಾರ್, ಕೆ.ಬದ್ರುದ್ದೀನ್ ಖಡಕ್ ವಾರ್ನಿಂಗ್

By kannadanewsnow0915/11/2025 7:31 PM

ಚಾಮರಾಜನಗರ : ಉನ್ನತ ಅಧಿಕಾರಸ್ಥರಿಂದ ಹಿಡಿದು ಗ್ರಾಮ ಪಂಚಾಯಿತಿ ವರೆಗಿನ ಎಲ್ಲ ಸಾರ್ವಜನಿಕ ಪ್ರಾಧಿಕಾರಗಳು ಮಾಹಿತಿ ಹಕ್ಕು ಕಾಯ್ದೆ ವ್ಯಾಪ್ತಿಗೆ ಬರಲಿವೆ. ಹೀಗಾಗಿ ಮಾಹಿತಿ ಹಕ್ಕಿನಡಿ ಕೇಳಲಾಗುವ ಯಾವುದೇ ಅರ್ಜಿಯನ್ನು ನಿರ್ಲಕ್ಷ್ಯ ಮಾಡದೆ ಕಾಲಮಿತಿಯೊಳಗೆ ವಿಲೇವಾರಿ ಮಾಡುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ ಎಂದು ಮಾಹಿತಿ ಆಯುಕ್ತರಾದ ಡಾ. ಹರೀಶ್ ಕುಮಾರ್ ಹಾಗೂ ಕೆ. ಬದ್ರುದ್ದೀನ್ ಅವರು ತಿಳಿಸಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ ಮಾಹಿತಿ ಹಕ್ಕು ಕಾಯ್ದೆ ಕುರಿತು ಕಾರ್ಯಾಗಾರ ಹಾಗೂ ಸಂವಾದವನ್ನುದ್ದೇಶಿಸಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ತನ್ನದೇ ಆದ ಕರ್ತವ್ಯಗಳನ್ನು ನಿರ್ವಹಿಸಲಿದೆ. ಕಾರ್ಯಕ್ರಮಗಳು, ಯೋಜನೆಗಳನ್ನು ಪರಿಣಾಮಕಾರಿಯಾಗಿ ತಲುಪಿಸುವ ಶಾಶ್ವತ ಕಾರ್ಯಾಂಗವೆಂದರೆ ನೌಕರ ಶಾಹಿಗಳು. ಅಧಿಕಾರಿ ನೌಕರರಿಗೆ ಗುರುತರ ಜವಾಬ್ದಾರಿಯಿದೆ. ಜನರು ಮಾಹಿತಿ ಹಕ್ಕಿನಡಿ ಕೇಳುವ ಮಾಹಿತಿಯನ್ನು ಉದಾಸೀನ ಮಾಡದೇ ನೀಡಬೇಕು ಎಂದರು.

ಆಡಳಿತದಲ್ಲಿ ಪಾರದರ್ಶಕತೆ, ಉತ್ತರದಾಯಿತ್ವ ಉದ್ದೇಶದೊಂದಿಗೆ ಮಾಹಿತಿ ಹಕ್ಕು ಕಾಯ್ದೆ ಜಾರಿಗೆ ಬಂದಿದೆ. ಸರಳ, ಸಂಕೀರ್ಣ, ಬಲಿಷ್ಠ ಮಾಹಿತಿ ಹಕ್ಕು ಕಾಯ್ದೆಯನ್ನು 2005ರಲ್ಲಿ ಜಾರಿಗೆ ತರಲಾಯಿತು. ವ್ಯವಸ್ಥೆಯ ಲೋಪದೋಷಗಳನ್ನು ಕೇಳುವ ಹಕ್ಕು ಪ್ರಜೆಗಳಿಗಿದೆ. ಸ್ವಾತಂತ್ರ್ಯದ ಹಕ್ಕಿನಷ್ಟೇ ಮಹತ್ವ ಮಾಹಿತಿ ಹಕ್ಕಿಗೂ ಇದೆ. ನೀತಿ ನಿರೂಪಣೆ ಅನುಷ್ಠಾನ ಮಾಡುವ ಅಧಿಕಾರಿಗಳು ಅತ್ಯಂತ ಜವಾಬ್ದಾರಿಯುತವಾಗಿ ಮಾಹಿತಿ ಹಕ್ಕಿನ ಅರ್ಜಿಗಳನ್ನು ವಿಲೇವಾರಿ ಮಾಡಬೇಕು ಎಂದು ತಿಳಿಸಿದರು.

ಮಾಹಿತಿ ಹಕ್ಕಿನಡಿ ಸಲ್ಲಿಕೆಯಾಗುವ ಅರ್ಜಿಗಳ ಬಗ್ಗೆ ಅನಗತ್ಯ ಆತಂಕ ಬೇಡ. ಕಾಯ್ದೆ ಬಗ್ಗೆ ಅಧಿಕಾರಿಗಳು ಸ್ಪಷ್ಟವಾಗಿ ತಿಳಿದುಕೊಂಡರೆ ಅರ್ಜಿಯಲ್ಲಿ ಕೋರುವ ಮಾಹಿತಿಯನ್ನು ಸಮರ್ಪಕವಾಗಿ ನೀಡಬಹುದು. ಮಾಹಿತಿ ಹಕ್ಕು ಅಧಿನಿಯಮದ ಅಧ್ಯಾಯಗಳು, ಕಲಂಗಳನ್ನು ಓದಿ ಮನನ ಮಾಡಿಕೊಂಡಿರಬೇಕು. ಮಾಹಿತಿ ಆಯೋಗ, ನ್ಯಾಯಾಲಯಗಳು ನೀಡಿರುವ ಆದೇಶ ತೀರ್ಪುಗಳ ಬಗ್ಗೆ ತಿಳಿದುಕೊಂಡಿರಬೇಕು. ಇದರಿಂದ ಮಾಹಿತಿ ದಾಖಲೆಗಳನ್ನು ನೀಡುವಲ್ಲಿ ಸಹಕಾರಿಯಾಗಲಿದೆ ಎಂದರು.

ಮಾಹಿತಿ ಹಕ್ಕು ಕಾಯ್ದೆ ಅಧಿಕಾರಿಗಳಿಗೆ ಸ್ವಾತಂತ್ರ್ಯ ರಕ್ಷಣೆ ಕೂಡ ಕೊಡಲಿದೆ. ಮಾಹಿತಿ ಕೋರಿ ಸಲ್ಲಿಸಿದ ಅರ್ಜಿದಾರರಿಗೆ ಮಾಹಿತಿ ನೀಡಬೇಕು ಅಥವಾ ಸೂಕ್ತ ಹಿಂಬರಹ ಕೊಡಬೇಕು. 30 ದಿನಗಳೊಳಗೆ ಕೇಳಲಾದ ಮಾಹಿತಿ ಒದಗಿಸಬೇಕಿದೆ. ಸ್ವೀಕರಿಸಿದ ಅರ್ಜಿಯು ಇಲಾಖೆಯ ವ್ಯಾಪ್ತಿಗೆ ಒಳಪಡದಿದ್ದರೆ ಸಂಬಂಧಪಟ್ಟವರಿಗೆ 5 ದಿನಗಳೊಳಗೆ ವರ್ಗಾಯಿಸಬೇಕು. ಈ ಯಾವ ಪ್ರಕ್ರಿಯೆಯನ್ನು ಅನುಸರಿಸದೇ ವಿಳಂಬ ನಿರ್ಲಕ್ಷ್ಯ ಮಾಡಿದ್ದಲ್ಲಿ ದಂಡನೆ, ಶಿಸ್ತು ಕ್ರಮಕ್ಕೆ ಒಳಗಾಗಬೇಕಾಗುತ್ತದೆ ಎಂದು ಮಾಹಿತಿ ಆಯುಕ್ತರು ತಿಳಿಸಿದರು.

ಜನರ ಕೆಲಸಗಳು ಮುಕ್ತ ಹಾಗೂ ತ್ವರಿತವಾಗಿ ಆಗಲೆಂದು ಸಕಾಲ, ಮಾಹಿತಿ ಹಕ್ಕು ಕಾಯ್ದೆ, ಲೋಕಾಯುಕ್ತದಂತಹ ವ್ಯವಸ್ಥೆಗಳು ಸಕ್ರಿಯವಾಗಿವೆ. ಜನರ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳು ಉತ್ಸಾಹದಿಂದ ಮುಂದಾಗಬೇಕು. ಕಾನೂನಿನ ವ್ಯಾಪ್ತಿಯಲ್ಲಿ ಬಗೆಹರಿಸಬಹುದಾದ ಸಾರ್ವಜನಿಕರ ದೂರುಗಳಿಗೆ ಆದ್ಯತೆ ಕೊಡಬೇಕು. ಕಡತಗಳ ನಿರ್ವಹಣೆ ಸಮರ್ಪಕವಾಗಿ ಇರಬೇಕು. ವಿಳಂಬ ಧೋರಣೆ ತೋರಬಾರದು ಎಂದು ಮಾಹಿತಿ ಆಯುಕ್ತರಾದ ಡಾ. ಹರೀಶ್ ಕುಮಾರ್ ಹಾಗೂ ಕೆ. ಬದ್ರುದ್ದೀನ್ ಅವರು ಹೇಳಿದರು.

ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಮಾತನಾಡಿ ಮಾಹಿತಿ ಹಕ್ಕು ಕಾಯ್ದೆಯಡಿ ಕೋರಲಾಗುವ ಅರ್ಜಿಗಳಿಗೆ ಸಕಾಲದಲ್ಲಿ ಅಧಿಕಾರಿಗಳು ದಾಖಲೆ, ಮಾಹಿತಿಯನ್ನ ನೀಡಬೇಕು. ಮಾಹಿತಿ ಹಕ್ಕು ಕಾರ್ಯಾಗಾರಗಳಲ್ಲಿ ಸಲಹೆ ಮಾರ್ಗದರ್ಶನ ಪಡೆದು ಅರ್ಜಿ ವಿಲೇವಾರಿಯಲ್ಲಿ ಸಮರ್ಪಕ ಕ್ರಮಗಳಿಗೆ ಮುಂದಾಗಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಅಧಿಕಾರಿಗಳೊಂದಿಗೆ ನಡೆದ ಕಾರ್ಯಾಗಾರ ಹಾಗೂ ಸಂವಾದದ ಬಳಿಕ ಮಾಹಿತಿ ಆಯುಕ್ತರು ಸಾರ್ವಜನಿಕರೊಂದಿಗೆ ಮಾಹಿತಿ ಹಕ್ಕು ಕಾಯ್ದೆ ಕುರಿತು ಸಂವಾದ ಹಾಗೂ ಚರ್ಚೆ ನಡೆಸಿದರು.

ನ.18ರಿಂದ PG ವೈದ್ಯಕೀಯಕ್ಕೆ ಆಪ್ಷನ್ ದಾಖಲು ಆರಂಭ: ಕೆಇಎ ಮಾಹಿತಿ

Drinking Water: ನಿಂತು ನೀರು ಕುಡಿಯುವುದರಿಂದ ಮೊಣಕಾಲುಗಳಿಗೆ ಹಾನಿಯಾಗುತ್ತಾ? ವಿಜ್ಞಾನ ಹೇಳೋದೇನು ಓದಿ!

Share. Facebook Twitter LinkedIn WhatsApp Email

Related Posts

ಚಾಮರಾಜನಗರ ಜಿಲ್ಲೆಯಿಂದ 614 ಮೇಲ್ಮನವಿ: ರಾಜ್ಯ ಮಾಹಿತಿ ಆಯೋಗದ ಆಯುಕ್ತರ ಮಾಹಿತಿ

15/11/2025 7:34 PM1 Min Read

ಬೆಂಗಳೂರಲ್ಲಿ ಪ್ಲಾಸ್ಟಿಕ್ ವಸ್ತು ಸುಟ್ಟು ಹಾಕೋರೇ ಹುಷಾರ್: ವ್ಯಕ್ತಿಗೆ 10,000 ದಂಡ ವಿಧಿಸಿದ GBA

15/11/2025 7:25 PM1 Min Read

ನ.18ರಿಂದ PG ವೈದ್ಯಕೀಯಕ್ಕೆ ಆಪ್ಷನ್ ದಾಖಲು ಆರಂಭ: ಕೆಇಎ ಮಾಹಿತಿ

15/11/2025 7:17 PM1 Min Read
Recent News

ಚಾಮರಾಜನಗರ ಜಿಲ್ಲೆಯಿಂದ 614 ಮೇಲ್ಮನವಿ: ರಾಜ್ಯ ಮಾಹಿತಿ ಆಯೋಗದ ಆಯುಕ್ತರ ಮಾಹಿತಿ

15/11/2025 7:34 PM

ಮಾಹಿತಿ ಹಕ್ಕು ಕಾಯ್ದೆ ಬಗ್ಗೆ ನಿರ್ಲಕ್ಷ್ಯ ಸಲ್ಲದು: ಆಯುಕ್ತರಾದ ಡಾ.ಹರೀಶ್ ಕುಮಾರ್, ಕೆ.ಬದ್ರುದ್ದೀನ್ ಖಡಕ್ ವಾರ್ನಿಂಗ್

15/11/2025 7:31 PM

IPL 2026 : ಯಾವ ತಂಡ ಎಷ್ಟು ಆಟಗಾರರ ಉಳಿಸಿಕೊಂಡಿದೆ.? ಯಾರಿಗೆ ಗೇಟ್ ಪಾಸ್.? ಇಲ್ಲಿದೆ, ಸಂಪೂರ್ಣ ಪಟ್ಟಿ!

15/11/2025 7:29 PM

ಬೆಂಗಳೂರಲ್ಲಿ ಪ್ಲಾಸ್ಟಿಕ್ ವಸ್ತು ಸುಟ್ಟು ಹಾಕೋರೇ ಹುಷಾರ್: ವ್ಯಕ್ತಿಗೆ 10,000 ದಂಡ ವಿಧಿಸಿದ GBA

15/11/2025 7:25 PM
State News
KARNATAKA

ಚಾಮರಾಜನಗರ ಜಿಲ್ಲೆಯಿಂದ 614 ಮೇಲ್ಮನವಿ: ರಾಜ್ಯ ಮಾಹಿತಿ ಆಯೋಗದ ಆಯುಕ್ತರ ಮಾಹಿತಿ

By kannadanewsnow0915/11/2025 7:34 PM KARNATAKA 1 Min Read

ಚಾಮರಾಜನಗರ : ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಆಯೋಗಕ್ಕೆ ರಾಜ್ಯದ ವಿವಿಧ ಕಡೆಗಳಿಂದ 35,009 ಹಾಗೂ ಚಾಮರಾಜನಗರ ಜಿಲ್ಲೆಯಿಂದ 614…

ಮಾಹಿತಿ ಹಕ್ಕು ಕಾಯ್ದೆ ಬಗ್ಗೆ ನಿರ್ಲಕ್ಷ್ಯ ಸಲ್ಲದು: ಆಯುಕ್ತರಾದ ಡಾ.ಹರೀಶ್ ಕುಮಾರ್, ಕೆ.ಬದ್ರುದ್ದೀನ್ ಖಡಕ್ ವಾರ್ನಿಂಗ್

15/11/2025 7:31 PM

ಬೆಂಗಳೂರಲ್ಲಿ ಪ್ಲಾಸ್ಟಿಕ್ ವಸ್ತು ಸುಟ್ಟು ಹಾಕೋರೇ ಹುಷಾರ್: ವ್ಯಕ್ತಿಗೆ 10,000 ದಂಡ ವಿಧಿಸಿದ GBA

15/11/2025 7:25 PM

ನ.18ರಿಂದ PG ವೈದ್ಯಕೀಯಕ್ಕೆ ಆಪ್ಷನ್ ದಾಖಲು ಆರಂಭ: ಕೆಇಎ ಮಾಹಿತಿ

15/11/2025 7:17 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.