Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಾಹಿತಿ ಹಕ್ಕು ಅರ್ಜಿಗಳಿಗೆ ನಿಗದಿತ ಅವಧಿಯೊಳಗೆ ಮಾಹಿತಿ ನೀಡಿ: ಆಯುಕ್ತ ರುದ್ರಣ್ಣ ಹರ್ತಿಕೋಟೆ ಸೂಚನೆ

15/11/2025 7:43 PM

ಚಾಮರಾಜನಗರ ಜಿಲ್ಲೆಯಿಂದ 614 ಮೇಲ್ಮನವಿ: ರಾಜ್ಯ ಮಾಹಿತಿ ಆಯೋಗದ ಆಯುಕ್ತರ ಮಾಹಿತಿ

15/11/2025 7:34 PM

ಮಾಹಿತಿ ಹಕ್ಕು ಕಾಯ್ದೆ ಬಗ್ಗೆ ನಿರ್ಲಕ್ಷ್ಯ ಸಲ್ಲದು: ಆಯುಕ್ತರಾದ ಡಾ.ಹರೀಶ್ ಕುಮಾರ್, ಕೆ.ಬದ್ರುದ್ದೀನ್ ಖಡಕ್ ವಾರ್ನಿಂಗ್

15/11/2025 7:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚಾಮರಾಜನಗರ ಜಿಲ್ಲೆಯಿಂದ 614 ಮೇಲ್ಮನವಿ: ರಾಜ್ಯ ಮಾಹಿತಿ ಆಯೋಗದ ಆಯುಕ್ತರ ಮಾಹಿತಿ
KARNATAKA

ಚಾಮರಾಜನಗರ ಜಿಲ್ಲೆಯಿಂದ 614 ಮೇಲ್ಮನವಿ: ರಾಜ್ಯ ಮಾಹಿತಿ ಆಯೋಗದ ಆಯುಕ್ತರ ಮಾಹಿತಿ

By kannadanewsnow0915/11/2025 7:34 PM

ಚಾಮರಾಜನಗರ : ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಆಯೋಗಕ್ಕೆ ರಾಜ್ಯದ ವಿವಿಧ ಕಡೆಗಳಿಂದ 35,009 ಹಾಗೂ ಚಾಮರಾಜನಗರ ಜಿಲ್ಲೆಯಿಂದ 614 ಮೇಲ್ಮನವಿಗಳು ಸಲ್ಲಿಕೆಯಾಗಿವೆ ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ಕೆ. ಬದ್ರುದ್ದೀನ್ ಹಾಗೂ ಡಾ. ಹರೀಶ್ ಕುಮಾರ್ ಅವರು ತಿಳಿಸಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದ ಮಾಹಿತಿ ಆಯುಕ್ತರು ಚಾಮರಾಜನಗರ ಜಿಲ್ಲೆಯಿಂದ ಸಲ್ಲಿಕೆಯಾಗಿರುವ 614 ಮೇಲ್ಮನವಿಗಳಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯುತ್ ರಾಜ್ ಇಲಾಖೆಗೆ ಸಂಬಂಧಿಸಿದಂತೆ 249, ಕಂದಾಯ ಇಲಾಖೆ 105, ಕೃಷಿ ಇಲಾಖೆ 46, ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದಂತೆ 37 ಇವೆ. ಇವುಗಳ ವಿಲೇವಾರಿಗೆ ಮಾಹಿತಿ ಆಯೋಗ ಕ್ರಮವಹಿಸಿದೆ ಎಂದರು.

ನಾವು ಆಯೋಗದ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಾಗ 55,400 ಮೇಲ್ಮನವಿಗಳು ನಮ್ಮ ಮುಂದಿದ್ದವು. ಅವುಗಳಲ್ಲಿ 20 ಸಾವಿರ ಮೇಲ್ಮನವಿಗಳನ್ನು ವಿಲೇವಾರಿ ಮಾಡಿದ್ದೇವೆ. ಉಳಿದ 35 ಸಾವಿರ ಮೇಲ್ಮನವಿಗಳ ವಿಲೇವಾರಿ ಮಾಡಲಾಗುತ್ತಿದೆ ಎಂದರು.

ಮಾಹಿತಿ ಹಕ್ಕು ಕಾಯ್ದೆ ಕುರಿತು ಅಧಿಕಾರಿಗಳಿಗೆ ಮತ್ತಷ್ಟು ಅರಿವು ಮೂಡಿಸಲು ಆಯೋಗವು ರಾಜ್ಯಾದ್ಯಂತ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳುತ್ತಿದೆ. ಇಲ್ಲಿಯ ತನಕ 16 ಜಿಲ್ಲೆಗಳಲ್ಲಿ ಕಾರ್ಯಗಾರ ನಡೆಸಲಾಗಿದೆ. ಚಾಮರಾಜನಗರ ಜಿಲ್ಲೆಯು 17 ನೇಯದ್ದಾಗಿದೆ. ಕಾಯ್ದೆ ಬಗೆಗಿನ ವ್ಯಾಪಕ ಜಾಗೃತಿ, ಸಾರ್ವಜನಿಕ ಪ್ರಾಧಿಕಾರಗಳ ಹೊಣೆಗಾರಿಕೆ, ಅಧಿಕಾರಿಗಳಿಗಿರುವ ಗೊಂದಲಗಳನ್ನು ಸರಿಪಡಿಸುವುದು ಕಾರ್ಯಾಗಾರದ ಮುಖ್ಯ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು.

ಆಡಳಿತದಲ್ಲಿ ಪಾರದರ್ಶಕತೆ, ಉತ್ತರದಾಯಿತ್ವ ತರಲು ಹಾಗೂ ಜನರು ಪ್ರಶ್ನೆ ಮಾಡಲು ಅವಕಾಶ ನೀಡಲು 20 ವರ್ಷಗಳ ಹಿಂದೆ ಮಾಹಿತಿ ಹಕ್ಕು ಕಾಯ್ದೆ ಜಾರಿಗೊಳಿಸಲಾಗಿದೆ. ಕಾಯ್ದೆಯು ಉತ್ತಮವಾಗಿದ್ದು ಸಾರ್ವಜನಿಕ ಹಿತಾಸಕ್ತಿ, ಸದುದ್ದೇಶದಿಂದ ಮಾಹಿತಿ ಕೋರಿ ಅರ್ಜಿ ಸಲ್ಲಿಸಬೇಕು. ಕಾಯ್ದೆಯನ್ನು ದುರ್ಬಳಕೆ ಮಾಡಲು ಅವಕಾಶವಿಲ್ಲ ಎಂದರು.

ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಉಪ ವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ ಅವರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಮಾಹಿತಿ ಹಕ್ಕು ಕಾಯ್ದೆ ಬಗ್ಗೆ ನಿರ್ಲಕ್ಷ್ಯ ಸಲ್ಲದು: ಆಯುಕ್ತರಾದ ಡಾ.ಹರೀಶ್ ಕುಮಾರ್, ಕೆ.ಬದ್ರುದ್ದೀನ್ ಖಡಕ್ ವಾರ್ನಿಂಗ್

Drinking Water: ನಿಂತು ನೀರು ಕುಡಿಯುವುದರಿಂದ ಮೊಣಕಾಲುಗಳಿಗೆ ಹಾನಿಯಾಗುತ್ತಾ? ವಿಜ್ಞಾನ ಹೇಳೋದೇನು ಓದಿ!

Share. Facebook Twitter LinkedIn WhatsApp Email

Related Posts

ಮಾಹಿತಿ ಹಕ್ಕು ಅರ್ಜಿಗಳಿಗೆ ನಿಗದಿತ ಅವಧಿಯೊಳಗೆ ಮಾಹಿತಿ ನೀಡಿ: ಆಯುಕ್ತ ರುದ್ರಣ್ಣ ಹರ್ತಿಕೋಟೆ ಸೂಚನೆ

15/11/2025 7:43 PM3 Mins Read

ಮಾಹಿತಿ ಹಕ್ಕು ಕಾಯ್ದೆ ಬಗ್ಗೆ ನಿರ್ಲಕ್ಷ್ಯ ಸಲ್ಲದು: ಆಯುಕ್ತರಾದ ಡಾ.ಹರೀಶ್ ಕುಮಾರ್, ಕೆ.ಬದ್ರುದ್ದೀನ್ ಖಡಕ್ ವಾರ್ನಿಂಗ್

15/11/2025 7:31 PM2 Mins Read

ಬೆಂಗಳೂರಲ್ಲಿ ಪ್ಲಾಸ್ಟಿಕ್ ವಸ್ತು ಸುಟ್ಟು ಹಾಕೋರೇ ಹುಷಾರ್: ವ್ಯಕ್ತಿಗೆ 10,000 ದಂಡ ವಿಧಿಸಿದ GBA

15/11/2025 7:25 PM1 Min Read
Recent News

ಮಾಹಿತಿ ಹಕ್ಕು ಅರ್ಜಿಗಳಿಗೆ ನಿಗದಿತ ಅವಧಿಯೊಳಗೆ ಮಾಹಿತಿ ನೀಡಿ: ಆಯುಕ್ತ ರುದ್ರಣ್ಣ ಹರ್ತಿಕೋಟೆ ಸೂಚನೆ

15/11/2025 7:43 PM

ಚಾಮರಾಜನಗರ ಜಿಲ್ಲೆಯಿಂದ 614 ಮೇಲ್ಮನವಿ: ರಾಜ್ಯ ಮಾಹಿತಿ ಆಯೋಗದ ಆಯುಕ್ತರ ಮಾಹಿತಿ

15/11/2025 7:34 PM

ಮಾಹಿತಿ ಹಕ್ಕು ಕಾಯ್ದೆ ಬಗ್ಗೆ ನಿರ್ಲಕ್ಷ್ಯ ಸಲ್ಲದು: ಆಯುಕ್ತರಾದ ಡಾ.ಹರೀಶ್ ಕುಮಾರ್, ಕೆ.ಬದ್ರುದ್ದೀನ್ ಖಡಕ್ ವಾರ್ನಿಂಗ್

15/11/2025 7:31 PM

IPL 2026 : ಯಾವ ತಂಡ ಎಷ್ಟು ಆಟಗಾರರ ಉಳಿಸಿಕೊಂಡಿದೆ.? ಯಾರಿಗೆ ಗೇಟ್ ಪಾಸ್.? ಇಲ್ಲಿದೆ, ಸಂಪೂರ್ಣ ಪಟ್ಟಿ!

15/11/2025 7:29 PM
State News
KARNATAKA

ಮಾಹಿತಿ ಹಕ್ಕು ಅರ್ಜಿಗಳಿಗೆ ನಿಗದಿತ ಅವಧಿಯೊಳಗೆ ಮಾಹಿತಿ ನೀಡಿ: ಆಯುಕ್ತ ರುದ್ರಣ್ಣ ಹರ್ತಿಕೋಟೆ ಸೂಚನೆ

By kannadanewsnow0915/11/2025 7:43 PM KARNATAKA 3 Mins Read

ಹಾಸನ: ಮಾಹಿತಿ ಹಕ್ಕು ಅಧಿನಿಯಮದ ಅಡಿಯಲ್ಲಿ ಮಾಹಿತಿ ಕೋರಿ ಬರುವ ಅರ್ಜಿಗಳಿಗೆ ನಿಗಧಿತ ಅವಧಿಯೊಳಗೆ ಮಾಹಿತಿ ನೀಡುವಂತೆ ರಾಜ್ಯ ಮಾಹಿತಿ…

ಚಾಮರಾಜನಗರ ಜಿಲ್ಲೆಯಿಂದ 614 ಮೇಲ್ಮನವಿ: ರಾಜ್ಯ ಮಾಹಿತಿ ಆಯೋಗದ ಆಯುಕ್ತರ ಮಾಹಿತಿ

15/11/2025 7:34 PM

ಮಾಹಿತಿ ಹಕ್ಕು ಕಾಯ್ದೆ ಬಗ್ಗೆ ನಿರ್ಲಕ್ಷ್ಯ ಸಲ್ಲದು: ಆಯುಕ್ತರಾದ ಡಾ.ಹರೀಶ್ ಕುಮಾರ್, ಕೆ.ಬದ್ರುದ್ದೀನ್ ಖಡಕ್ ವಾರ್ನಿಂಗ್

15/11/2025 7:31 PM

ಬೆಂಗಳೂರಲ್ಲಿ ಪ್ಲಾಸ್ಟಿಕ್ ವಸ್ತು ಸುಟ್ಟು ಹಾಕೋರೇ ಹುಷಾರ್: ವ್ಯಕ್ತಿಗೆ 10,000 ದಂಡ ವಿಧಿಸಿದ GBA

15/11/2025 7:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.