ನವದೆಹಲಿ: ರಾಜ್ಯ ಸಂಪುಟ ಪುನಾರಚನೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿದೆ. ಹೀಗಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಳಿಯಲ್ಲಿ ಚರ್ಚೆ ಮಾಡುವುದಕ್ಕೆ ತೆರಳುತ್ತಿರುವುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಈ ಮೂಲಕ ರಾಜ್ಯ ಸಂಪುಟ ಪುನಾರಚನೆ ಫಿಕ್ಸ್ ಎಂಬುದಾಗಿ ಘೋಷಿಸಿದ್ದಾರೆ.
ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಗೂ ಮುನ್ನಾ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ತೀರ್ಮಾನಿಸಿದೆ. ಹೀಗಾಗಿ ಖರ್ಗೆ ಜೊತೆ ಮಾತನಾಡಲು ಹೋಗುತ್ತಿದ್ದೇನೆ ಎಂದರು.
ನಾಲ್ಕೈದು ತಿಂಗಳ ಹಿಂದೆಯೇ ಸಂಪುಟ ಪುನಾರಚನೆಗೆ ಹೇಳಿದ್ದರು. ನಮ್ಮಲ್ಲಿ 142 ಶಾಸಕರುಗಳು ಆಕಾಂಕ್ಷಿಗಳಾಗಿದ್ದಾರೆ. ಆ ಬಗ್ಗೆ ಎಲ್ಲ ಚರ್ಚಿಸೋದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಳಿಯಲ್ಲಿ ತೆರಳುತ್ತಿರುವುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
ಶಿವಮೊಗ್ಗ: ಅಲ್ಪಸಂಖ್ಯಾತ ಬಂಧುಗಳು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು- ಶಾಸಕ ಗೋಪಾಲಕೃಷ್ಣ ಬೇಳೂರು








