ಬೆಂಗಳೂರು : ಬೆಂಗಳೂರು ದರೋಡೆ ಪ್ರಕರಣದಲ್ಲಿ ತನಿಖೆಯಲ್ಲಿ ಭಾಗಿಯಾದ ಸಿಬ್ಬಂದಿಗಳಿಗೆ 5 ಲಕ್ಷ ರೂಪಾಯಿ ಬಹುಮಾನ ನೀಡಿ ಅಭಿನಂದಿಸಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೀಮಂತ ಕುಮಾರ್ ಸಿಂಗ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸೋಮವಾರ ಅವರನ್ನು ಅಭಿನಂದಿಸುತ್ತೇವೆ. ಈ ಒಂದು ಪ್ರಕರಣಭೇದಿಸಿದ ಎಲ್ಲಾ ಸಿಬ್ಬಂದಿಗಳಿಗೆ 5 ಲಕ್ಷ ಬಹುಮಾನ ನೀಡಲಾಗುತ್ತದೆ ಎಂದು ಘೋಷಿಸಿದರು.
ಘಟನೆ ನಡೆದ ದಿನ ಹಣ ತೆಗೆದುಕೊಂಡು ಹೋದ ವಾಹನ ಹಿಡಿಯಲಿಕ್ಕೆ ಆಗ್ಲಿಲ್ಲ. ಅನೇಕ ವಾಹನ ಬಳಸಿದ್ದಾರೆ. ವಾಹನಗಳ ನಂಬರ್ ಪದೇ ಪದೇ ಬದಲಿಸಿದ್ದಾರೆ.ಸಿಸಿಟಿವಿ ಇಲ್ಲದ ಕಡೆಯಲ್ಲಿ ಆರೋಪಿಗಳು ಓಡಾಡಿದ್ದಾರೆ. ವಾಹನವನ್ನು ಸಿಸಿಟಿವಿ ಇಲ್ಲದ ಜಾಗದಲ್ಲಿ ತೆಗೆದುಕೊಂಡು ಹೋಗಿದ್ದಾರೆ. ಕೇರಳ, ತಮಿಳುನಾಡು, ಆಂಧ್ರ, ತೆಲಂಗಾಣ, ಗೋವಾದಲ್ಲಿ ಆರೋಪಿಗಳನ್ನು ಹುಡುಕಾಟ ನಡೆಸಿದ್ದಾರೆ. ಇನ್ನೂ ಹಣ ರಿಕವರಿ ಆಗಬೇಕು. 200 ಸ್ಟಾಪ್ ಬಳಕೆ ಮಾಡಲಾಗಿದೆ. 30 ಕ್ಕೂ ಹೆಚ್ಚು ಮಂದಿಯನ್ನ ವಿಚಾರಣೆ ಮಾಡಲಾಗಿದೆ. ಮೂವರು ಬಂಧಿಸಲಾಗಿದೆ ಎಂದು ವಿವರಿಸಿದ್ದಾರೆ.
ಸಿಸಿಟಿವಿ ಇಲ್ಲದ ಕಡೆಯಲ್ಲಿ ಆರೋಪಿಗಳು ಓಡಾಡಿದ್ದಾರೆ. ವಾಹನವನ್ನು ಸಿಸಿಟಿವಿ ಇಲ್ಲದ ಜಾಗದಲ್ಲಿ ತೆಗೆದುಕೊಂಡು ಹೋಗಿದ್ದಾರೆ. ಕೇರಳ, ತಮಿಳುನಾಡು, ಆಂಧ್ರ, ತೆಲಂಗಾಣ, ಗೋವಾದಲ್ಲಿ ಆರೋಪಿಗಳನ್ನು ಹುಡುಕಾಟ ನಡೆಸಿದ್ದಾರೆ. ಇನ್ನೂ ಹಣ ರಿಕವರಿ ಆಗಬೇಕು. 200 ಸ್ಟಾಪ್ ಬಳಕೆ ಮಾಡಲಾಗಿದೆ. 30 ಕ್ಕೂ ಹೆಚ್ಚು ಮಂದಿಯನ್ನ ವಿಚಾರಣೆ ಮಾಡಲಾಗಿದೆ. ಮೂವರು ಬಂಧಿಸಲಾಗಿದೆ ಎಂದು ವಿವರಿಸಿದ್ದಾರೆ.
ಗೋವಿಂದಪುರ ಪೇದೆ ಸೇರಿ ಮೂವರ ಬಂಧನವಾಗಿದೆ. ಮಾಜಿ ನೌಕರ, ಪೊಲೀಸ್ ಕಾನ್ಸ್ಟೇಬಲ್ ಬಂಧನ ಮಾಡಲಾಗಿದೆ. ಗೋಪಿ, ಜೋವಿಯಾರ್, ಅಣ್ಣಪ್ಪನಾಯ್ಕ್ ಬಂಧಿತ ಆರೋಪಿಗಳು. ಕ್ಲೂ ಇಲ್ಲದೆ ಆರೋಪಿಗಳು ಕೆಲಸ ಮಾಡಿದ್ದಾರೆ. ತಾಂತ್ರಿಕ ಮಾಹಿತಿ ಹಾಗೂ ಸ್ಥಳೀಯರಿಂದ ಮಾಹಿತಿ ಪಡೆದು ಬಂಧನ ಮಾಡಲಾಗಿದೆ. 6 ರಿಂದ ಏಂಟು ಮಂದಿ ಸೇರಿ ಕೃತ್ಯ ಎಸಗಿದ್ದಾರೆ. ಒಂದು ಇನ್ನೋವಾ ಗಾಡಿ ಚಿತ್ತೂರಿನಲ್ಲಿ ಸಿಕ್ಕಿತ್ತು. ಬೆಂಗಳೂರಿನ ಹೊರ ಭಾಗದಲ್ಲಿ ಹಣ ರಿಕವರಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.








